Wednesday, March 11, 2026

ರಾಷ್ಟ್ರೀಯ

ಬೆಂಗಳೂರುರಾಜ್ಯಸುದ್ದಿ

ತಂದೆ-ತಾಯಿ ಬೇರೆಯಾಗಿದ್ದಕ್ಕೆ ಮನನೊಂದು ಬಾಲಕಿ ಆತ್ಮಹತ್ಯೆ – ಕಹಳೆ ನ್ಯೂಸ್

ಬೆಂಗಳೂರು: ತಂದೆ-ತಾಯಿ ಬೇರೆಯಾಗಿದ್ದಕ್ಕೆ ಮನನೊಂದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಲೇಖನಾ (17) ಆತ್ಮಹತ್ಯೆಗೆ ಶರಣಾದ ಬಾಲಕಿ. ಲೇಖನಾ 10ನೇ ತರಗತಿ ಅನುತ್ತೀರ್ಣ ಆಗಿ ಮನೆಯಲ್ಲಿಯೇ ಇದ್ದಳು. ತಂದೆ-ತಾಯಿ ಕೌಟುಂಬಿಕ ಕಲಹದಿಂದ ಇತ್ತೀಚಿಗೆ ದೂರವಾಗಿದ್ದರು. ತಂದೆ ಬೇರೆ ಕಡೆ ವಾಸವಿದ್ದರೆ, ಲೇಖನಾ ತಾಯಿ ಜೊತೆಗೆ ವಾಸವಿದ್ದರು. ನನಗೆ ತಂದೆ-ತಾಯಿ ಪ್ರೀತಿ ಸಿಗುತ್ತಿಲ್ಲ. ನಾನು ಒಂಟಿ ಎಂಬ ಭಾವನೆ ಕಾಡುತ್ತಿದೆ. ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್...
ದೆಹಲಿರಾಜ್ಯಸುದ್ದಿ

2026ರ ಹೊಸ ವರ್ಷ ಎಲ್ಲರಿಗೂ ಆರೋಗ್ಯ, ಸಮೃದ್ಧಿ ತರಲಿ: ಜನತೆಗೆ ಪ್ರಧಾನಿ ಮೋದಿ ಶುಭಾಶ – ಕಹಳೆ ನ್ಯೂಸ್

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು , ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ದೇಶದ ಜನತೆಗೆ ಹೊಸ ವರ್ಷದ ಶುಭಾಶಯ ತಿಳಿಸಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಮೋದಿ, ಎಲ್ಲರಿಗೂ 2026ರ ಹೊಸ ವರ್ಷದ ಶುಭಾಶಯಗಳು. ​ಈ ವರ್ಷವು ಎಲ್ಲರಿಗೂ ಆರೋಗ್ಯ ಮತ್ತು ಸಮೃದ್ಧಿ ತರಲಿ. ನಿಮ್ಮ ಪ್ರಯತ್ನಗಳಲ್ಲಿ ಯಶಸ್ಸು ಸಿಗಲಿ ಮತ್ತು ನಿಮ್ಮ ಎಲ್ಲಾ ಕಾರ್ಯಗಳು ಸುಗಮವಾಗಿ ನೆರವೇರಲಿ ಎಂದು ಹಾರೈಸುತ್ತೇನೆ. ನಮ್ಮ ಸಮಾಜದಲ್ಲಿ ಶಾಂತಿ ಮತ್ತು ಸಂತೋಷ...
ಬೆಂಗಳೂರುರಾಜ್ಯಸುದ್ದಿ

ಕರ್ನಾಟಕ ಮಾಹಿತಿ ಆಯೋಗಕ್ಕೆ ಶ್ರೀಲಂಕಾ ಪತ್ರಕರ್ತರ ನಿಯೋಗ ಭೇಟಿ-ಕಹಳೆ ನ್ಯೂಸ್

ಬೆಂಗಳೂರು: ಶ್ರೀಲಂಕಾ ಪತ್ರಕರ್ತರ  ನಿಯೋಗ ಕರ್ನಾಟಕ ಮಾಹಿತಿ ಆಯೋಗಕ್ಕೆ ಭೇಟಿ ನೀಡಿ ರಾಜ್ಯ ಮಾಹಿತಿ ಆಯುಕ್ತರೊಂದಿಗೆ ಸಂವಾದ ನಡೆಸಿತು. ಕರ್ನಾಟಕ ಪ್ರವಾಸದಲ್ಲಿರುವ ನಿಯೋಗ, ಮಾಹಿತಿ ಆಯೋಗಕ್ಕೆ ಸೌಹಾರ್ದಯುತವಾಗಿ ಭೇಟಿ ಹಲವು ವಿಷಯಗಳ ಮೇಲೆ ಚರ್ಚೆ ನಡೆಸಿತು. ಕರ್ನಾಟಕದಲ್ಲಿ ಮಾಹಿತಿ ಆಯೋಗ ಕಳೆದ ಎರಡು ದಶಕಗಳಲ್ಲಿ ಹೇಗೆ ಕ್ರೀಯಾಶೀಲವಾಗಿ ಕೆಲಸ ಮಾಡುತ್ತಿದೆ ಎನ್ನುವುದನ್ನು ಪ್ರಭಾರಿ ಮುಖ್ಯ ಮಾಹಿತಿ ಆಯುಕ್ತ ಕೆ.ರಾಮನ್, ಆಯುಕ್ತರಾದ ಬದ್ರುದ್ದೀನ್ ಕೆ, ರಾಜಶೇಖರ್, ರುದ್ರಣ್ಣ ಹರ್ತಿಕೋಟೆ, ಡಾ ಮಮತಾ...
ದೆಹಲಿರಾಜ್ಯಸುದ್ದಿ

ಮೋದಿ ಜಿ, ನನಗೂ ಆಧಾರ್ ಕಾರ್ಡ್​ ಬೇಕು, ಭಾರತದಿಂದ ಹೊರಡುವಾಗ ಭಾವುಕನಾದ ವಿದೇಶಿ ಪ್ರವಾಸಿಗ – ಕಹಳೆ ನ್ಯೂಸ್

ನವದೆಹಲಿ, ಡಿಸೆಂಬರ್ 31: ಭಾರತಕ್ಕೆ ಭೇಟಿ ನೀಡಿದ ಅಮೆರಿಕದ ಪ್ರವಾಸಿಗ  ನೊಬ್ಬ ಇಲ್ಲಿಂದ ಹೊರಡುವ ಸಮಯದಲ್ಲಿ ಭಾವುಕನಾಗಿ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಮೋದಿ ಜಿ ನನಗೂ ಆಧಾರ್ ಕಾರ್ಡ್​ ಬೇಕು ಎಂದು ಮನವಿ ಮಾಡಿದ್ದಾರೆ. ಈ ಭಾವನಾತ್ಮಕ ವಿಡಿಯೋವನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.  ಭಾರತದಿಂದ ಹೊರಡುವ ಮೊದಲು, ಅವರು ದ್ವಿಚಕ್ರ ವಾಹನದ ಹಿಂಭಾಗದಲ್ಲಿ ಕುಳಿತು ಈ ವೀಡಿಯೊವನ್ನು ರೆಕಾರ್ಡ್ ಮಾಡಿದ್ದಾರೆ. ಅವರು ಈ ವೀಡಿಯೊದಲ್ಲಿ ಭಾರತವನ್ನು ಕಳೆದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ. ಈ ವೈವಿಧ್ಯಮಯ...
ರಾಜ್ಯರಾಷ್ಟ್ರೀಯಸುದ್ದಿ

BJPಗೆ ಒಂದು ಅವಕಾಶ ಕೊಡಿ, ಬಂಗಾಳದಲ್ಲಿ ಭ್ರಷ್ಟಾಚಾರ, ಒಳನುಸುಳುವಿಕೆ ಕೊನೆಗೊಳಿಸುತ್ತೇವೆ: ಅಮಿತ್ ಶಾ ಮನವಿ – ಕಹಳೆ ನ್ಯೂಸ್

ಕೋಲ್ಕತಾ: ಆಡಳಿತ ನಡೆಸಲು ಭಾರತೀಯ ಜನತಾ ಪಕ್ಷಕ್ಕೆ ಒಂದು ಅವಕಾಶ ಕೊಡಿ, ಭಯ, ಭ್ರಷ್ಟಾಚಾರ ಮತ್ತು ದುರಾಳಿತವನ್ನು ಉತ್ತಮ ಆಡಳಿತದೊಂದಿಗೆ ಬದಲಾಯಿಸುತ್ತೇವೆಂದು ಪಶ್ಚಿಮ ಬಂಗಾಳದ ಜನತೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಮನವಿ ಮಾಡಿದ್ದಾರೆ. ಕೋಲ್ಕತ್ತಾದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಶ್ಚಿಮ ಬಂಗಾಳದಲ್ಲಿ ಇಂದಿನ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಸೇರಿದಂತೆ ಇದುವರೆಗೆ ಆಡಳಿತ ನಡೆಸಿದ ಎಲ್ಲಾ ಪಕ್ಷಗಳಿಗೆ ಪರ್ಯಾಯವಾಗಿ ಬಿಜೆಪಿ ಹೊರಹೊಮ್ಮಿದೆ. ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ...
ಬೆಂಗಳೂರುರಾಜ್ಯ

ಹೊಸ ವರ್ಷಾಚರಣೆ: ನಂದಿ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧ, ಚಾರಣಕ್ಕೂ ಬ್ರೇಕ್‌-ಕಹಳೆ ನ್ಯೂಸ್

ಚಿಕ್ಕಬಳ್ಳಾಪುರ: ಬೆಂಗಳೂರಿಗರ ಸ್ವರ್ಗ ಎಂದು ಖ್ಯಾತಿ ಗಳಿಸಿರುವ ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ನಂದಿ ಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಸಾರ್ವಜನಿಕರಿಗೆ ನಿರ್ಬಂಧ ಹೇರಲಾಗಿದೆ. ಹೊಸ ವರ್ಷದ ಹಿನ್ನೆಲೆ ಸಂಭ್ರಮಾಚರಣೆಗಾಗಿ ಕೆಲವರು ಡಿಸೆಂಬರ್‌ 31ರಂದು ನಂದಿ ಗಿರಿಧಾಮದತ್ತ ಬರಲು ಪ್ಲ್ಯಾನ್‌ ಮಾಡಿಕೊಳ್ಳುತ್ತಾರೆ. ಆದರೆ ಪ್ರತಿ ವರ್ಷದಂತೆ ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಅಹಿತಕರ ಘಟನೆಗಳು ನಡೆದಂತೆ ಎಚ್ಚರಿಕೆ ವಹಿಸಲು ಚಿಕ್ಕಬಳ್ಳಾಪುರ ಜಿಲ್ಲಾಡಳಿತವು ಹೊಸ ವರ್ಷಾಚರಣೆಗೆ ಬ್ರೇಕ್ ಹಾಕಿದೆ. ನಂದಿ ಬೆಟ್ಟಕ್ಕೆ...
ದೆಹಲಿರಾಜ್ಯಸುದ್ದಿ

 ವರ್ಷದ ಕೊನೆಯ ‘ಮನ್ ಕಿ ಬಾತ್’ನಲ್ಲಿ 2025ರ ಭಾರತದ ಸಾಧನೆ, ಹೆಮ್ಮೆಯ ಕ್ಷಣಗಳ ಸ್ಮರಿಸಿದ ಪ್ರಧಾನಿ ಮೋದಿ -ಕಹಳೆ ನ್ಯೂಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಭಾನುವಾರ ತಮ್ಮ 129 ನೇ ಮನ್ ಕಿ ಬಾತ್ ಆವೃತ್ತಿಯನ್ನು ಉದ್ದೇಶಿಸಿ ಮಾತನಾಡುತ್ತಾ 2025 ರಲ್ಲಿ ಭಾರತದ ಹೆಮ್ಮೆಯ ಕ್ಷಣಗಳನ್ನು ನೆನಪಿಸಿಕೊಂಡರು. ಆಪರೇಷನ್ ಸಿಂಧೂರ್ ಸಮಯದಲ್ಲಿ ಭಾರತವು ಬಲವಾದ ಪ್ರಭಾವ ಬೀರಿತು. ಇದು ದೇಶದ ಭದ್ರತೆಗೆ ಬದ್ಧತೆಯ ಪ್ರದರ್ಶನವಾಗಿ ಕಾರ್ಯನಿರ್ವಹಿಸಿತು. ಪಾಕಿಸ್ತಾನದ ದುಸ್ಸಾಹಸದ ವಿರುದ್ಧದ ಕಾರ್ಯಾಚರಣೆಯು ಭಾರತ ಭದ್ರತೆಯ ಬಗ್ಗೆ ರಾಜಿ ಮಾಡಿಕೊಳ್ಳುವುದಿಲ್ಲ ಎಂಬ ಸಂದೇಶವನ್ನು ಜಗತ್ತಿಗೆ ನೀಡಿದೆ ಎಂದು ಅವರು ಹೇಳಿದ್ದಾರೆ. ಈ ವರ್ಷ,...
ಜಿಲ್ಲೆರಾಜ್ಯರಾಷ್ಟ್ರೀಯಸುದ್ದಿ

ಚಿತ್ರದುರ್ಗ ಬಸ್‌ ಅಗ್ನಿ ದುರಂತ ಪ್ರಕರಣ: ಪ್ರಯಾಣಿಕರ ಲಗೇಜ್‌ ಕುರಿತು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಆದೇಶ – ಕಹಳೆ ನ್ಯೂಸ್

ಚಿತ್ರದುರ್ಗದ ಬಳಿ ಸಂಭವಿಸಿದ ಖಾಸಗಿ ಬಸ್‌ ಅಗ್ನಿ ದುರಂತ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಈ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ರಾಶಿ ರಾಶಿ ಆಯಿಲ್‌ ಬಾಟಲಿಗಳ ಬಾಕ್ಸ್‌ಗಳು ಇದ್ದ ಕಾರಣ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ಶಂಕೆ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ ಪ್ರಯಾಣಿಕರ ಲಗೇಜ್‌ ವಿಚಾರವಾಗಿ ಮಹತ್ವದ ಆದೇಶ ಹೊರಡಿಸಿದೆ. ಅದರಲ್ಲೂ ಕರ್ನೂಲ್‌ನಲ್ಲಿ ಖಾಸಗಿ ಬಸ್‌ನ ಬೆಂಕಿ ದುರಂತದ ಬಳಿಕ ರಾಜ್ಯದಲ್ಲಿಯೂ ಬಸ್ಸುಗಳಲ್ಲಿ ಪ್ರಯಾಣಿಕರ ಲಗೇಜ್,...
1 16 17 18 19 20 318
Page 18 of 318