Wednesday, March 18, 2026

ರಾಷ್ಟ್ರೀಯ

ಕ್ರೈಮ್ಬೆಂಗಳೂರುರಾಜ್ಯಸುದ್ದಿ

IAS ಆಕಾಂಕ್ಷಿ ಅಂತಾ ಬಿಲ್ಡಪ್‌; ಬೆತ್ತಲೆ ವೀಡಿಯೋ ಇಟ್ಕೊಂಡು ಯುವಕನಿಗೆ 40 ಲಕ್ಷ ಪಂಗನಾಮ – ಖತರ್ನಾಕ್‌ ಲೇಡಿ ಅರೆಸ್ಟ್‌..! – ಕಹಳೆ ನ್ಯೂಸ್

ಬೆಂಗಳೂರು: ಐಎಎಸ್‌ ಆಕಾಂಕ್ಷಿ ಎಂದು ಹೇಳಿಕೊಂಡು ಫೇಸ್‌ಬುಕ್‌ನಲ್ಲಿ ಯುವಕನನ್ನು ಪರಿಚಯ ಮಾಡಿಕೊಂಡು, ಆತನಿಂದ ಬೆತ್ತಲೆ ವೀಡಿಯೋ ಬಳಸಿಕೊಂಡು ಬ್ಲ್ಯಾಕ್‌ಮೇಲ್‌ ಮಾಡಿ 40 ಲಕ್ಷ ರೂ. ಪಡೆದು ವಂಚಿಸಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ವಿಜಯಪುರ (Vijayapura) ಜಿಲ್ಲೆಯ ಸಿಂದಗಿ ತಾಲೂಕಿನ ಬಗಲೂರು ಗ್ರಾಮ ಪರಮೇಶ್ವರ್ ಹಿಪ್ಪರಗಿ ಎಂಬ ಯುವಕನಿಗೆ ಫೇಸ್‌ಬುಕ್‌ನಲ್ಲಿ ಪರಿಚಯವಾಗಿದ್ದ ಮಹಿಳೆಯೊಬ್ಬಳು 40 ಲಕ್ಷ ಪಡೆದು ವಂಚಿಸಿದ್ದಳು. ಈ ಸಂಬಂಧ ʼ ಟಿವಿʼಯಲ್ಲಿ ಸರಣಿ ವರದಿಗಳು ಬಿತ್ತರವಾದ ನಂತರ ಎಚ್ಚೆತ್ತ ವಿಜಯಪುರ...
ಕ್ರೈಮ್ರಾಷ್ಟ್ರೀಯಸುದ್ದಿ

ಹಾಸ್ಟೆಲ್​ನಲ್ಲಿ ಫೋನ್​ ಮಾಡಿ ಸಿಕ್ಕಿಬಿದ್ದ ವಿದ್ಯಾರ್ಥಿನಿಯನ್ನು ಬೆದರಿಸಿ ನಿರಂತರ ಅತ್ಯಾಚಾರ : ವಿದ್ಯಾರ್ಥಿನಿ ಬೆತ್ತಲೆ ಫೋಟೋ ಮತ್ತು ವಿಡಿಯೋಗಳನ್ನು ರೆಕಾರ್ಡ್ ; MLA ಪಿಎ ಸೇರಿ ಮೂವರ ಬಂಧನ – ಕಹಳೆ ನ್ಯೂಸ್

ಹೈದರಾಬಾದ್​: ತೆಲಂಗಾಣದ ವಾರಂಗಲ್ (ಪೂರ್ವ) ಶಾಸಕ ನರೇಂದ್ರ ನನ್ನಪುನೇನಿ ಅವರ ಆಪ್ತ ಸಹಾಯಕ ವೇಮುಲ ಶಿವಕುಮಾರ್​ ಎಂಬುವರನ್ನು ಹನಮಕೊಂಡ ಪೊಲೀಸರು ಅತ್ಯಾಚಾರ ಪ್ರಕರಣದಡಿಯಲ್ಲಿ ಬಂಧಿಸಿದ್ದಾರೆ. ಶಿವಕುಮಾರ್​ ಜೊತೆಗೆ ಖಾಸಗಿ ಹಾಸ್ಟೆಲ್​ನ ಮ್ಯಾನೇಜರ್ ವೇಮುಲ​ ಶೋಭಾ ಮತ್ತು ಆಕೆಯ ಸೋದರ ಸಂಬಂಧಿ ವೇಮುಲಾ ವಿಜಯ್​ ಕುಮಾರ್​ ಎಂಬುವರನ್ನು ಬಂಧಿಸಲಾಗಿದೆ. ಮೂವರ ವಿರುದ್ಧ ಅತ್ಯಾಚಾರ ಪ್ರಕರಣ ಮಾತ್ರವಲ್ಲದೆ, ಎಸ್​​ಟಿ ಮತ್ತು ಎಸ್ಸಿ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಸಿದ್ದಿಪೇಟೆ ಜಿಲ್ಲೆಯ ವಿದ್ಯಾರ್ಥಿನಿಯೊಬ್ಬಳು ಹನಮಕೊಂಡದ ಕಾಲೇಜಿನಲ್ಲಿ...
ಬೆಂಗಳೂರುರಾಜ್ಯಸುದ್ದಿ

ಪೈಲ್ಸ್‌ ಸಮಸ್ಯೆಯಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು – ಕಹಳೆ ನ್ಯೂಸ್

ಬೆಂಗಳೂರು: ಪೈಲ್ಸ್‌ ಸಮಸ್ಯೆಯಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಶಸ್ತ್ರಚಿಕಿತ್ಸೆಗಾಗಿ ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಭೇದಿಯಿಂದಾಗಿ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಪೈಲ್ಸ್‌ ಇರುವ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ವೈದ್ಯರು ಸಲಹೆ ನೀಡಿದ್ದಾರೆ. ನಗರದ ಹೆಚ್‌ಎಎಲ್‌ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಳಗ್ಗೆ 11 ಗಂಟೆ ಸಮಾರಿಗೆ ಸಿದ್ದರಾಮಯ್ಯಗೆ ಪೈಲ್ಸ್ ಆಪರೇಷನ್ ಮಾಡಲಾಗುವುದು. ಸಂಜೆ ಡಿಸ್ಚಾರ್ಜ್ ಆಗಿ ಮನೆಯಲ್ಲೇ ನಾಲ್ಕು ದಿನ ವಿಶ್ರಾಂತಿ ಪಡೆಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ....
ಬೆಂಗಳೂರುರಾಜ್ಯಸುದ್ದಿ

ಲವ್ ಜಿಹಾದ್ ; ಎಂಗೇಜ್ಮೆಂಟ್ ಆಗಿದ್ದ ಹಿಂದೂ ಯುವತಿಯನ್ನು ರಾತ್ರೋ ರಾತ್ರಿ ಹೈದ್ರಾಬಾದ್​ಗೆ ಹೊತ್ತೊಯ್ದ ಮುಸ್ಲಿಂ ಯುವಕ ; ಮಗಳ ಬ್ರೈನ್ ವಾಷ್ ಮಾಡಲಾಗಿದೆ ಎಂದ ಪೋಷಕರು..! – ಕಹಳೆ ನ್ಯೂಸ್

ರಾಯಚೂರು: ದಿನದಿಂದ ದಿನಕ್ಕೆ ಲವ್ ಜಿಹಾದ್ ಪ್ರಕರಣಗಳು ಒಂದೊಂದಾಗೇ ಬೆಳಕಿಗೆ ಬರುತ್ತಿವೆ. ಇದೀಗ ಬಳ್ಳಾರಿಯ ಮೂಲದ ಯುವಕನ ಜತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿಯೊಬ್ಬಳು, ಅನ್ಯಕೋಮಿನ ಯುವಕನ ಜತೆಗೆ ಪರಾರಿಯಾಗಿರುವ ಘಟನೆ ನಡೆದಿದೆ. ಈ ಬಗ್ಗೆ ಯುವತಿಯ ಪೋಷಕರಾದ ಬಾಳಪ್ಪ ಹಾಗೂ ನಾಗಮ್ಮ ದಂಪತಿ ನೇತಾಜಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಸಿದ್ದಾರೆ. ಯುವತಿಗೆ ಅದಾಗಲೇ ನಿಶ್ಚಿತಾರ್ಥವಾಗಿತ್ತು. ಮನೆಮಂದಿಯೆಲ್ಲಾ ಮದುವೆಯ ಸಿದ್ಧತೆಯಲ್ಲಿದ್ದರು. ಆದರೆ ಯುವತಿ ಮಾತ್ರ, ಇನ್ನೇನು ತನ್ನ ಮದುವೆಗೆ ಒಂದು ತಿಂಗಳು...
ಕ್ರೈಮ್ರಾಷ್ಟ್ರೀಯಸುದ್ದಿ

15 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನ ಮುಸ್ಲಿಂ ಹುಡುಗಿಯರು ತನ್ನಿಷ್ಟದ ಹುಡುಗನೊಂದಿಗೆ ಮದುವೆಯಾಗಬಹುದು ; ಜಾರ್ಖಂಡ್ ಹೈಕೋರ್ಟ್ ತೀರ್ಪು – ಕಹಳೆ ನ್ಯೂಸ್

ರಾಂಚಿ(ಡಿ.01): ಮುಸ್ಲಿಂ (Muslim) ವೈಯಕ್ತಿಕ ಕಾನೂನನ್ನು ಉಲ್ಲೇಖಿಸಿ, ಜಾರ್ಖಂಡ್ ಹೈಕೋರ್ಟ್ (Jharkhand High Court) ತನ್ನ ತೀರ್ಪಿನಲ್ಲಿ 15 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನ ಮುಸ್ಲಿಂ ಹುಡುಗಿಯರು ತಮ್ಮ ಪೋಷಕರ ಹಸ್ತಕ್ಷೇಪವಿಲ್ಲದೆ ಅವರು ಬಯಸಿದ ವ್ಯಕ್ತಿಯನ್ನು ಮದುವೆಯಾಗಲು ಸ್ವಾತಂತ್ರ್ಯವನ್ನು ಹೊಂದಿದ್ದಾರೆ ಎಂದು ಹೇಳಿದೆ. ತನ್ನ ಸಮುದಾಯದ 15 ವರ್ಷದ ಹುಡುಗಿಯನ್ನು ಮದುವೆಯಾದ ಮುಸ್ಲಿಂ ಯುವಕನ ವಿರುದ್ಧ ದಾಖಲಾಗಿರುವ ಎಫ್‌ಐಆರ್ (FIR) ಆಧಾರದ ಮೇಲೆ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಪಡಿಸುವ ಸಂದರ್ಭದಲ್ಲಿ...
ಉಡುಪಿಬೆಂಗಳೂರುಸುದ್ದಿ

ಮುಸ್ಲಿಂ ಕಾಲೇಜು ವಿವಾದ ಬೆನ್ನಲ್ಲೇ ಮತ್ತೊಂದು ವಿವಾದ ; ಕೇಸರಿ ಕಾಲೇಜು ಬೇಕೆಂದು ಹಿಂದು ಸಂಘಟನೆಗಳ ಪಟ್ಟು – ಕಹಳೆ ನ್ಯೂಸ್

ಬೆಂಗಳೂರು: ಮುಸ್ಲಿಂ ಕಾಲೇಜು ವಿವಾದ ಬೆನ್ನಲ್ಲೇ ಮತ್ತೊಂದು ವಿವಾದ ಶುರುವಾಗಿದ್ದು, ನಮಗೆ ಕೇಸರಿ ಕಾಲೇಜು ಬೇಕು ಅಂತಾ ಹಿಂದು ಸಂಘಟನೆಗಳು ಪಟ್ಟು ಹಿಡಿದಿವೆ. ಮಾನ್ಯ ಮುಖ್ಯಮಂತ್ರಿಗಳೇ ನಿಮಗೆ ಬುದ್ಧಿ ಇದೇನ್ರೀ? ಯಾರ ವೋಟು ಪಡೆಯಲು ಈ ರೀತಿ ನಿಲುವುಗಳನ್ನು ತೆಗೆದುಕೊಳ್ಳುತ್ತಿದ್ದೀರಿ. ನಮ್ಮದು ಹಿಂದುತ್ವದ ಪಕ್ಷ, ಹಿಂದೂತ್ವಕ್ಕಾಗಿ ನಮ್ಮ ಉಸಿರು ಎಂದು ಹೇಳಿಕೊಂಡು ಬಂದಿರುವ ಭಾರತೀಯ ಜನತಾ ಪಕ್ಷದ ಮುಖ್ಯಮಂತ್ರಿಗಳಾಗಿ ಈ ರೀತಿ ನಿಲುವುಗಳನ್ನು ತೆಗೆದುಕೊಂಡರೆ ಅವರನ್ನು ನೀವೇ ಬೆಳೆಸಿದ ಹಾಗೆ ಆಗುತ್ತದೆ...
ಬೆಂಗಳೂರುರಾಜ್ಯಸುದ್ದಿ

PFI ಬ್ಯಾನ್ – ಕೇಂದ್ರದ ಆದೇಶ ಪ್ರಶ್ನಿಸಿದ್ದ ಅರ್ಜಿ ವಜಾ ; ಕೇಂದ್ರ ಸರ್ಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್ –  ಕಹಳೆ ನ್ಯೂಸ್

ಬೆಂಗಳೂರು: ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (UAPA) ಅಡಿಯಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಸಂಘಟನೆಯ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ (Karnataka HighCourt) ವಜಾಗೊಳಿಸಿದೆ. ಅರ್ಜಿವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದ್ದ ಹೈಕೋರ್ಟ್ ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠ ಇಂದು ತೀರ್ಪು ಪ್ರಕಟಿಸಿದೆ. ಕರ್ನಾಟಕದ ಪಿಎಫ್‌ಐ (PFI) ಅಧ್ಯಕ್ಷ ನಾಸಿರ್ ಅಲಿ ನಿಷೇಧವನ್ನು ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಸಿದ್ದರು. ಕೇಂದ್ರ ಸರ್ಕಾರ (Central Government) ಕಾನೂನುಬಾಹಿರ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಹನುಮಂತನ ಜನ್ಮಸ್ಥಳ ಅಂಜನಾದ್ರಿಯಲ್ಲಿ ಅನ್ಯಮತೀಯರ ವ್ಯಾಪಾರ – ವಹಿವಾಟು ನಿಷೇಧಕ್ಕೆ ಹಿಂದೂ ಜಾಗರಣ ವೇದಿಕೆ ಆಗ್ರಹ..! – ಕಹಳೆ ನ್ಯೂಸ್

ಕೊಪ್ಪಳ: ಹನುಮಂತನ ಜನ್ಮಸ್ಥಳವಾದ ಕೊಪ್ಪಳ ಜಿಲ್ಲೆಯ ಪ್ರಸಿದ್ಧ ಅಂಜನಾದ್ರಿ ಬೆಟ್ಟದಲ್ಲಿ ಹಿಂದೂಯೇತರ ವ್ಯಾಪಾರಿಗಳು ವ್ಯಾಪಾರ ನಡೆಸುವುದನ್ನು ನಿಷೇಧಿಸಬೇಕು ಎಂದು ಹಿಂದೂ ಜಾಗರಣ ವೇದಿಕೆ ಒತ್ತಾಯಿಸಿದೆ. ಈ ಬಗ್ಗೆ ಹಿಂದೂಪರ ಸಂಘಟನೆಗಳು ಈಗಾಗಲೇ ಹಲವು ಬಾರಿ ಮನವಿಗಳನ್ನು ಮಾಡಿವೆ. ಆದರೆ, ಆಡಳಿತ ಮಂಡಳಿಗಳು ಮಾತ್ರ ಈ ಬಗ್ಗೆ ಯಾವುದೇ ನಿರ್ಣಯ ಕೈಗೊಂಡಿಲ್ಲ ಎಂದು ತಿಳಿದುಬಂದಿದೆ. ಹಿಂದೂಯೇತರ ವ್ಯಾಪಾರಿಗಳ ನಿಷೇಧಿಸುವಂತೆ ದೇವಾಲಯದ ಬಳಿ ಭಿತ್ತಿಪತ್ರಗಳು ಕಂಡು ಬಂದಿವೆ. ಕಳೆದ ವರ್ಷ ಕೂಡ ಇದೇ...
1 238 239 240 241 242 320
Page 240 of 320