ಬೆಂಗಳೂರಿಗೆ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ಚೊಚ್ಚಲ ಭೇಟಿ :ಇಂದು ನಾಯಕರೊಂದಿಗೆ ಸಭೆ -ಕಹಳೆ ನ್ಯೂಸ್
ಬೆಂಗಳೂರು: ಪಶ್ಚಿಮ ಬಂಗಾಳದಲ್ಲಿ ಜಯಭೇರಿ ಬಾರಿಸಿದ ಬೆನ್ನಲ್ಲೇ, ಭಾರತೀಯ ಜನತಾ ಪಕ್ಷದ ಹೈಕಮಾಂಡ್ ಈಗ ದಕ್ಷಿಣ ಭಾರತದ ಹೆಬ್ಬಾಗಿಲಾದ ಕರ್ನಾಟಕದತ್ತ ತನ್ನ ಸಂಪೂರ್ಣ ಚಿತ್ತ ನೆಟ್ಟಿದೆ. ಮುಂಬರುವ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಈಗಿನಿಂದಲೇ ಸನ್ನದ್ಧಗೊಳಿಸಲು ಖುದ್ದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ನಿತಿನ್ ನಬಿನ್ ಅವರು ಶನಿವಾರ ತಡರಾತ್ರಿ ಸಿಲಿಕಾನ್ ಸಿಟಿ ಬೆಂಗಳೂರಿಗೆ ಚೊಚ್ಚಲ ಭೇಟಿ ನೀಡಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನಿತಿನ್ ನಬಿನ್ ಅವರನ್ನು ರಾಜ್ಯ...






