ಬಿಜೆಪಿಯ ಮಂಗಳೂರು ಮುಖ್ಯ ವಕ್ತಾರರಾಗಿ ಗಣೇಶ್ ಕಾರ್ಣಿಕ್, ಬೆಂಗಳೂರು ವಕ್ತಾರರಾಗಿ ನಟ ಜಗ್ಗೇಶ್ ನೇಮಕ-ಕಹಳೆ ನ್ಯೂಸ್
ಬೆಂಗಳೂರು : ಕರ್ನಾಟಕದ ಭಾರತೀಯ ಜನತಾ ಪಕ್ಷ(ಬಿಜೆಪಿ) ಘಟಕ ಹೊಸ ವಕ್ತಾರರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದು ಮಂಗಳೂರು ವಿಭಾಗದ ಮುಖ್ಯ ವಕ್ತಾರರಾಗಿ ಕ್ಯಾ. ಗಣೇಶ್ ಕಾರ್ಣಿಕ್ ಅವರು ಮತ್ತು ಬೆಂಗಳೂರು ವಿಭಾಗದ ವಕ್ತಾರರಾಗಿ ನಟ ಜಗ್ಗೇಶ್ ಅವರು ನೇಮಕಗೊಂಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ನವರಸ ನಾಯಕ ಜಗ್ಗೇಶ್ ಅವರು, ''ನನಗೆ ರಾಜ್ಯ ಭಾಜಪ ವಕ್ತಾರನಾಗಿ ನೇಮಸಿದ ಪಕ್ಷದ ಹಿರಿಯರಿಗೆ ಧನ್ಯವಾದ. ಕಾಯವಾಚಮನ ಶುದ್ಧಾತ್ಮನಾಗಿ ಕಾಯಕಮಾಡುವೆ'' ಎಂದು ತಿಳಿಸಿದ್ದಾರೆ....







