Friday, June 19, 2026

ರಾಷ್ಟ್ರೀಯ

ಬೆಂಗಳೂರುರಾಜ್ಯಸುದ್ದಿ

ಶಿಡ್ಲಘಟ್ಟ ಕೇಸ್‌ನಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ಕ್ರಮ ಆಗದಿದ್ದರೆ ಬೀದಿಗಿಳಿದು ಹೋರಾಟ: ನಿಖಿಲ್ ಕುಮಾರಸ್ವಾಮಿ – ಕಹಳೆ ನ್ಯೂಸ್

ಬೆಂಗಳೂರು: ಶಿಡ್ಲಘಟ್ಟದಲ್ಲಿ ಕಾಂಗ್ರೆಸ್ ಮುಖಂಡನಿಂದ ಮಹಿಳಾ ಅಧಿಕಾರಿಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕ್ರಮ ತೆಗೆದುಕೊಳ್ಳದೇ ಹೋದ್ರೆ ಬೀದಿಗಳಿದು ಹೋರಾಟ ಮಾಡೋದಾಗಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ. ಜೆಪಿ ಭವನದಲ್ಲಿ ಮಾತನಾಡಿದ ಅವರು, ಶಿಡ್ಲಘಟ್ಟದಲ್ಲಿ ಪೌರಾಯುಕ್ತೆ ಮೇಲೆ ತುಚ್ಚವಾಗಿ ಕಾಂಗ್ರೆಸ್ ಮುಖಂಡ ಮಾತಾಡಿದ್ದಾರೆ. ರಾಜ್ಯ ಸರ್ಕಾರ ದ್ವೇಷ ಭಾಷಣ ಬಿಲ್ ತಂತು. ದ್ವೇಷ ಭಾಷಣ ಬಿಲ್ ಕಾಂಗ್ರೆಸ್‌ ನವರಿಗೆ ಅನ್ವಯ ಆಗೊಲ್ಲ. ವಿಪಕ್ಷಗಳು, ಮಾಧ್ಯಮಗಳಿಗೆ...
ಬೆಂಗಳೂರುರಾಜ್ಯಸುದ್ದಿ

ಪತಿ-ಪತ್ನಿ ಜಗಳ; ಬೆಂಕಿ ಹಚ್ಚಿ 4 ವರ್ಷದ ಮಗಳ ಕೊಂದು ತಾಯಿ ಆತ್ಮಹತ್ಯೆ -ಕಹಳೆ ನ್ಯೂಸ್

ಬೆಂಗಳೂರು: ಪತಿ-ಪತ್ನಿ ನಡುವೆ ಜಗಳವಾಗಿದ್ದು, ಬೆಂಕಿ ಹಚ್ಚಿ ನಾಲ್ಕು ವರ್ಷದ ಮಗಳನ್ನು ಕೊಂದು ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ತಾಯಿ ಸೀತಾ (29), ಮಗಳು ಸೃಷ್ಟಿ (4) ಮೃತ ದುರ್ದೈವಿಗಳು. ಸಂಜಯನಗರ ಕೃಷ್ಣಪ್ಪ ಲೇಔಟ್‌ನಲ್ಲಿ ತಾಯಿ ಮತ್ತು ಮಗಳು ಸಾವಿಗೀಡಾಗಿದ್ದಾರೆ. ನಿನ್ನೆ ಸಂಜೆ 7:30 ಸುಮಾರಿಗೆ ಘಟನೆ ನಡೆದಿದೆ. ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ....
ಬೆಂಗಳೂರುರಾಜ್ಯಸುದ್ದಿ

ಕಾರಿನ ಸೈಲೆನ್ಸರ್ ಮಾಡಿಫೈ ಮಾಡಿಸಿದ್ದ ವ್ಯಕ್ತಿಗೆ 1.11 ಲಕ್ಷ ರೂ. ದಂಡ – ಕಹಳೆ ನ್ಯೂಸ್

ಬೆಂಗಳೂರು: ಕಾರಿನ ಸೈಲೆನ್ಸರ್ ಆಲ್ಟರ್ ಮಾಡಿ ಸಾರ್ವಜನಿಕವಾಗಿ ಸ್ಥಳಗಳಲ್ಲಿ ಶಬ್ದ ಮಾಡುತ್ತಿದ್ದ ವ್ಯಕ್ತಿಗೆ ಟ್ರಾಫಿಕ್‌ ಪೊಲೀಸರು ಬರೋಬ್ಬರಿ 1.11 ಲಕ್ಷ ರೂ. ದಂಡ ವಿಧಿಸಿದ್ದಾರೆ. ಬೆಂಗಳೂರಿನ ಹೆಣ್ಣೂರು ನಿವಾಸಿಯಾಗಿರೋ ವ್ಯಕ್ತಿಯೊಬ್ಬರು, ಕಾರಿನ ಸೈಲೆನ್ಸರ್ ಆಲ್ಟರ್ ಮಾಡಿಸಿದ್ದರು. ಜೊತೆಗೆ ಕಾರಿನ ಮೇಲೆ ಸ್ಟಿಕ್ಕರ್ ಮಾಡಿಸಿದ್ದರು. ಹಾಗೇ ಆಲ್ಟರ್ ಮಾಡಿಸಿದ ಕಾರಿನಲ್ಲಿ ಸಾರ್ವಜನಿಕವಾಗಿ ಕರ್ಕಶವಾಗಿ ಶಬ್ದ ಮಾಡಿ ತೊಂದರೆ ಕೊಡುತ್ತಿದ್ದರು. ಅಲ್ಲದೇ ಆ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದರು. ಇದನ್ನು ಗಮನಿಸಿದ...
ಬೆಂಗಳೂರುರಾಜ್ಯಸುದ್ದಿ

ಹುಡುಗರ ಡ್ರೆಸ್‌ ಧರಿಸಿ ಕಳ್ಳತನ – ಬೆಂಗಳೂರಿನಲ್ಲಿ ಇಬ್ಬರು ಹುಡುಗಿಯರು ಅರೆಸ್ಟ್‌ – ಕಹಳೆ ನ್ಯೂಸ್

ಬೆಂಗಳೂರು: ನಗರದಲ್ಲಿ ಹುಡುಗರ ರೀತಿ ಡ್ರೆಸ್ ಮಾಡಿಕೊಂಡು ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಹುಡುಗಿಯರನ್ನು ಪೊಲೀಸರು ಬಂಧಿಸಿದ್ದಾರೆ. ಜ.13 ರಂದು ಸಂಪಿಗೇಹಳ್ಳಿಯ ಸಂಗಮೇಶ್ ಅವರ ಮನೆಯಲ್ಲಿ ಕಳ್ಳತನ ನಡೆದಿತ್ತು. ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದಾಗ ಪೊಲೀಸರು ಸಿಸಿಟಿವಿ ಪರಿಶೀಲಿಸಿದಾಗ ಇಬ್ಬರು ಹುಡುಗರು ನಡೆದುಕೊಂಡು ಹೋಗುವುದು ಪತ್ತೆಯಾಗಿತ್ತು. ಸಿಸಿಟಿವಿ ಬೆನ್ನತ್ತಿ ಆರೋಪಿಗಳನ್ನು ವಶಕ್ಕೆ ಪಡೆದ ವೇಳೆ ಅದು ಹುಡುಗರಲ್ಲ, ಹುಡುಗಿಯರು ಎನ್ನುವುದು ಪತ್ತೆಯಾಗಿದೆ. ಕಳ್ಳತನ ಎಸಗಿದ ಶಾಲು ಮತ್ತು ನೀಲು ಅವರನ್ನು ಬಂಧಿಸಿದ್ದಾರೆ....
ಬೆಂಗಳೂರುರಾಜ್ಯಸುದ್ದಿ

ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮದಲ್ಲಿ ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ – ಕಹಳೆ ನ್ಯೂಸ್

ಬೆಂಗಳೂರು: ಸಂಕ್ರಾಂತಿ ಹಬ್ಬದ ದಿನ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್‌ ಯಾವುದೇ ಅನಾಹುತ ಸಂಭವಿಸಿಲ್ಲ. ಮಕರ ಸಂಕ್ರಾಂತಿ ಸಂಭ್ರಮದ ನಡುವೆ ಚಿಕ್ಪೇಟೆಯಲ್ಲಿರುವ ಬಳೇಪೇಟೆಯಲ್ಲಿ ದೇವಸ್ಥಾನದ ಮುಂದೆ ಹಚ್ಚಿದ ಪಟಾಕಿ ಕಿಡಿಯಿಂದ ಅಗ್ನಿ ಅವಘಡ ಸಂಭವಿಸಿದ್ದು ಕೆಲಕಾಲ ಆತಂಕ ಮನೆ ಮಾಡಿತ್ತು. ಹಬ್ಬದ ಹಿನ್ನೆಲೆಯಲ್ಲಿ ದೇವಾಲಯದಲ್ಲಿ ವಿಶೇಷ ಪೂಜೆ ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ದೇವಾಲಯದ ಮುಂದೆ ಆಯೋಜಕರು ಹುಲ್ಲು, ಹೂವು...
ಉತ್ತರ ಪ್ರದೇಶರಾಜ್ಯಸುದ್ದಿ

ಸಿಎಂ ಯೋಗಿ ಆದಿತ್ಯನಾಥ್ ಬಳಿ ಕ್ಯೂಟ್ ಆಗಿ ಮಗು ಏನು ಬೇಡಿಕೆ ಇಟ್ಟಿತು ನೋಡಿ – ಕಹಳೆ ನ್ಯೂಸ್

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಲ್ಲಿ ಮಗುವೊಂದು ಮುಗ್ಧವಾಗಿ ಚಿಪ್ಸ್ ಬೇಕೆಂದು ಕೇಳುತ್ತಿರುವ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ವೀಡಿಯೊದಲ್ಲಿ, ಯೋಗಿ ಆದಿತ್ಯನಾಥ್ ಅವರು ಮಗುವಿನ ಪಕ್ಕದಲ್ಲಿ ಕುಳಿತುಕೊಂಡು, ಏನು ಬೇಕು ಎಂದು ನಿಧಾನವಾಗಿ ಕೇಳುತ್ತಾರೆ, ಮಗು ನಾಚಿಕೆಯಿಂದ ಮುಗ್ಧವಾಗಿ ಚಿಪ್ಸ್ ಬೇಕೆಂದು ಕೇಳುತ್ತದೆ, ಆಗ ಸಿಎಂ ಸೇರಿದಂತೆ ಅಲ್ಲಿದ್ದವರೆಲ್ಲರೂ ನಗುತ್ತಾರೆ. ವೈರಲ್ ಆಗುತ್ತಿರುವ ವಿಡಿಯೊ ಕ್ಲಿಪ್ ನಲ್ಲಿ, ಯುಪಿ ಸಿಎಂ ಯೋಗಿ ಆದಿತ್ಯನಾಥ್, "ಔರ್...
ಬೆಂಗಳೂರುರಾಜ್ಯಸುದ್ದಿ

ವಿಸ್ಮಯದಂತೆ ದಕ್ಷಿಣ ಕಾಶಿ ಶಿವಗಂಗೆ ಬೆಟ್ಟದ ತುದಿಯಲ್ಲಿ ತೀರ್ಥ ಉದ್ಭವ – ಕಹಳೆ ನ್ಯೂಸ್

ನೆಲಮಂಗಲ: ಮಕರ ಸಂಕ್ರಾಂತಿ ದಿನದಂದು ನೆಲಮಂಗಲದ ಪ್ರಸಿದ್ಧ ಶಿವಗಂಗೆ ಬೆಟ್ಟದ ತುತ್ತತುದಿಯಲ್ಲಿ ಗಂಗಾ ತೀರ್ಥ ಉದ್ಭವವಾಗಿ ಜನರು ಪುನೀತರಾಗಿದ್ದಾರೆ. ನೆಲಮಂಗಲ ತಾಲೂಕಿನ ದಕ್ಷಿಣ ಕಾಶಿ ಶಿವಗಂಗೆ ಬೆಟ್ಟದ ತುದಿಯ ಕಂಬದ ಕೆಳಗೆ ಇಂದು ಮಧ್ಯಾಹ್ನದ ವೇಳೆ ಮಕರ ಲಗ್ನದಲ್ಲಿ ಗಂಗಾ ತೀರ್ಥ ಉದ್ಭವವಾಗಿದೆ.   ಭೂಮಿಯಿಂದ ಸುಮಾರು 4,559 ಅಡಿ ಎತ್ತರವಿರುವ ಶಿವಗಂಗೆ ಬೆಟ್ಟದಲ್ಲಿ ವಿಸ್ಮಯ ರೀತಿಯಲ್ಲಿ ಪ್ರತಿ ವರ್ಷವೂ ನಡೆಯುವ ಕೌತುಕ ಇದಾಗಿದೆ. ಇಲ್ಲಿ ನೆಲೆಸಿರುವ ಶ್ರೀ ಗಂಗಾಧರೇಶ್ವರ...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ ಮದ್ವೆಯಾಗೋದಾಗಿ ನಂಬಿಸಿ ಲವ್ ಸೆಕ್ಸ್ ದೋಖಾ : ಡೆತ್ ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆಗೆ ಯತ್ನ -ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನಲ್ಲಿ ಮದುವೆಯಾಗುವುದಾಗಿ ನಂಬಿಸಿ ಯುವಕನೊಬ್ಬ ಯುವತಿಯ ಜೊತೆಗೆ ದೈಹಿಕ ಸಂಪರ್ಕ ಬೆಳೆಸಿ ಕೈಕೊಟ್ಟಿದ್ದಾನೆ. ಈ ಹಿನ್ನೆಲೆ ಡೆತ್ ನೋಟ್ ಬರೆದಿಟ್ಟು 26 ವರ್ಷದ ಯುವತಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ರಾಮನಗರ ಮಹಿಳಾ ಪೊಲೀಸ್ ಠಾಣೆ ಬಳಿ ಈ ಒಂದು ಘಟನೆ ಸಂಭವಿಸಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ಮಹಿಳಾ ಪೊಲೀಸ್ ಠಾಣೆ ಬಳಿ ಮಾತ್ರೆ ಸೇವಿಸಿ ಪವಿತ್ರ ಬಾಯಿ (26) ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕನಕಪುರ ತಾಲೂಕಿನ ಗಟ್ಟಿಗುಂದ...
1 38 39 40 41 42 347
Page 40 of 347