Saturday, June 13, 2026

ದೆಹಲಿ

ದೆಹಲಿರಾಜ್ಯಸುದ್ದಿ

ಭಾರತದ ಮುಂದಿನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ನೇಮಕ -ಕಹಳೆ ನ್ಯೂಸ್

ನವದೆಹಲಿ: ಭಾರತದ ಮುಂದಿನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್  ಅವರನ್ನ ಕೇಂದ್ರ ಸರ್ಕಾರ ನೇಮಕ ಮಾಡಿದೆ. ಧೀರಜ್‌ ಸೇಠ್‌ ಅವರು ಜೂನ್‌ 30 ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಸೇನೆಯ ಹಾಲಿ ಮುಖ್ಯಸ್ಥರಾದ ಜನರಲ್ ಉಪೇಂದ್ರ ದ್ವಿವೇದಿ  ಅವರ ನಿವೃತ್ತಿಯ ಬಳಿಕ ಲೆಫ್ಟಿನೆಂಟ್‌ ಜನರಲ್‌ ಧೀರಜ್‌ ಸೇಠ್‌ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಶನಿವಾರ ಕೇಂದ್ರ ಸರ್ಕಾರ ಹೇಳಿದೆ. ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ಪ್ರಸ್ತುತ ಸೇನಾ ಸಿಬ್ಬಂದಿಯ ಉಪ...
ದೆಹಲಿರಾಜ್ಯಸುದ್ದಿ

ಡಿಕೆಶಿಯಿಂದ ಮೋದಿ ಭೇಟಿ – ರಾಜ್ಯದ ಕೆಲಸಗಳಿಗೆ ಸಹಕಾರ ಕೇಳಿದ ಸಿಎಂ -ಕಹಳೆ ನ್ಯೂಸ್

ನವದೆಹಲಿ: ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್  ಅವರು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ  ಅವರನ್ನು ಭೇಟಿಯಾಗಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಡಿ.ಕೆ. ಶಿವಕುಮಾರ್ ಅವರು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿರುವುದು ಇದೇ ಮೊದಲು. ಆಯೋಗದ ಮಹತ್ವದ ಸಭೆಯು ಮುಗಿದ ಬಳಿಕ ರಾಷ್ಟ್ರಪತಿ ಭವನದಲ್ಲಿ ಈ ಉನ್ನತ ಮಟ್ಟದ ಭೇಟಿ ನಡೆದಿದೆ. ಮೊದಲ ಭೇಟಿಯಲ್ಲೇ ಪ್ರಧಾನಿ ಅವರಿಗೆ ಜಗದ್ಗುರು ಬಸವಣ್ಣನವರ ಭವ್ಯವಾದ ಪುತ್ಥಳಿಯನ್ನು ನೀಡಿ ಮುಖ್ಯಮಂತ್ರಿಗಳು ಗೌರವಿಸಿದರು. ಈ...
ದೆಹಲಿರಾಜ್ಯಸುದ್ದಿ

ಹಾರ್ಮುಜ್‌ ಬಳಿ ಹಡಗಿನ ಮೇಲೆ ಯುಎಸ್‌ ದಾಳಿ; ಮೂವರು ಭಾರತೀಯರು ಸಾವು -ಕಹಳೆ ನ್ಯೂಸ್

ನವದೆಹಲಿ: ಹಾರ್ಮುಜ್ ಜಲಸಂಧಿಯ ಬಳಿ ವಾಣಿಜ್ಯ ಹಡಗಿನ ಮೇಲೆ ದಾಳಿ ನಡೆದಿದ್ದು, ಮೂವರು ಭಾರತೀಯ ನಾವಿಕರು (Indian Sailors) ಸಾವನ್ನಪ್ಪಿದ್ದಾರೆ. ಒಮಾನ್‌ ಕರಾವಳಿಯಲ್ಲಿ ನಿನ್ನೆ 24 ಭಾರತೀಯ ನಾವಿಕರಿದ್ದ ಹಡಗಿನ ಮೇಲೆ‌ ದಾಳಿ ನಡೆದಿತ್ತು. ಇದರಲ್ಲಿ 21 ನಾವಿಕರನ್ನು ರಕ್ಷಣೆ ಮಾಡಿದ್ದರು. ಮೂವರು ನಾಪತ್ತೆಯಾಗಿದ್ದರು. ಈ ಮೂವರಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿದೆ ಎಂದು ಕೇಂದ್ರ ಸಚಿವ ಸರ್ಬಾನಂದ ಸೋನೋವಾಲ್ ಮಾಹಿತಿ ನೀಡಿದ್ದಾರೆ. ಟ್ಯಾಂಕರ್ ಇರಾನ್‌ನಿಂದ ತೈಲವನ್ನು ಸಾಗಿಸುತ್ತಿತ್ತು. ಸೂಚನೆಗಳನ್ನು ಪಾಲಿಸದ...
ದೆಹಲಿರಾಜ್ಯಸುದ್ದಿ

5000 ಕೋಟಿ ರೂ. ನಕಲಿ ಔಷಧ ಕೇಸ್ ಮುಚ್ಚಿ ಹಾಕಲು 3 ಕೋಟಿ ಲಂಚ : ಸಿಬಿಐ ಬಲೆಗೆ ಬಿದ್ದ ದೆಹಲಿ ಪೊಲೀಸ್ ಇನ್ಸ್‌ಪೆಕ್ಟರ್ -ಕಹಳೆ ನ್ಯೂಸ್

ನವದೆಹಲಿ: ಇತ್ತೀಚೆಗೆ ನಡೆದ 5. 000 ಕೋಟಿ ರೂ. ಮೌಲ್ಯದ ನಕಲಿ ಔಷಧ ಜಾಲ ಪ್ರಕರಣದ ತನಿಖೆ ವೇಳೆ ಅಚ್ಚರಿಯ ಸಂಗತಿ ಬೆಳಕಿಗೆ ಬಂದಿದೆ. ಪ್ರಕರಣ ಮುಚ್ಚಿಹಾಕಲು ಪೊಲೀಸರು ಆರೋಪಿಯಿಂದ ಕೋಟ್ಯಂತರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಸಿಬಿಐ ತಿಳಿಸಿದೆ. ಈ ಆರೋಪದ ಮೇಲೆ ದೆಹಲಿ ಪೊಲೀಸ್ ಕ್ರೈಂ ಬ್ರ‍್ಯಾಂಚ್ ಇನ್ಸ್ಪೆಕ್ಟರ್ ಪ್ರದೀಪ್ ಕುಮಾರ್ ಸಿಂಗ್ ಮತ್ತು ರಾಜ್‌ಕುಮಾರ್ ಬಂಧಿಸಲಾಗಿದೆ. ಈ ಇಬ್ಬರು ಆರೋಪಿಗಳು ಪುದುಚೇರಿ ಮೂಲದ ನಕಲಿ ಔಷಧ...
ದೆಹಲಿರಾಜ್ಯಸುದ್ದಿ

ಗೃಹಬಳಕೆಯ LPG ಸಿಲಿಂಡರ್ ದುಬಾರಿ; 7.6,2026 ಆದಿತ್ಯವಾರ ನಿಂದಲೇ ಹೊಸ ದರ ಜಾರಿ -ಕಹಳೆ ನ್ಯೂಸ್

ನವದೆಹಲಿ : ಜಾಗತಿಕ ಮಾರುಕಟ್ಟೆಯಲ್ಲಿನ ತಲ್ಲಣಗಳ ಎಫೆಕ್ಟ್ ಈಗ ನೇರವಾಗಿ ದೇಶದ ಗೃಹಿಣಿಯರ ಅಡುಗೆಮನೆಗೆ ತಟ್ಟಿದೆ. ಗೃಹಬಳಕೆಯ 14.2 ಕೆ.ಜಿ ತೂಕದ ಎಲ್‌ಪಿಜಿ  ಸಿಲಿಂಡರ್ ದರವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪ್ರತಿ ಸಿಲಿಂಡರ್‌ಗೆ 29 ರೂಪಾಯಿ ಹೆಚ್ಚಳ ಮಾಡಲಾಗಿದೆ. ಕಳೆದ ಮೂರು ತಿಂಗಳ ಅವಧಿಯಲ್ಲಿ ಗೃಹಬಳಕೆಯ ಅಡುಗೆ ಅನಿಲ ದರ ದುಬಾರಿಯಾಗುತ್ತಿರುವುದು ಇದು ಎರಡನೇ ಬಾರಿಯಾಗಿದ್ದು, ಜನಸಾಮಾನ್ಯರ ಜೇಬಿಗೆ ಕತ್ತರಿ ಬಿದ್ದಂತಾಗಿದೆ. ಈ ದಿಢೀರ್ ಬೆಲೆ ಏರಿಕೆಯಿಂದಾಗಿ ದೇಶದ ರಾಜಧಾನಿ...
ದೆಹಲಿರಾಜ್ಯಸುದ್ದಿ

ಇಂದು INDIA ಕೂಟದ ಹೈವೋಲ್ಟೇಜ್ ಸಭೆ – 23 ರಾಜಕೀಯ ಪಕ್ಷದ ಪ್ರತಿನಿಧಿಗಳು ಭಾಗಿ – ಕಹಳೆ ನ್ಯೂಸ್

ನವದೆಹಲಿ: ಬಿಜೆಪಿ  ನೇತೃತ್ವದ ಸರ್ಕಾರ ಎದುರಿಸಲು ಹಾಗೂ ವಿಪಕ್ಷಗಳ ಏಕತೆ ಬಲಪಡಿಸಿ ಜಂಟಿ ಕಾರ್ಯತಂತ್ರ ರೂಪಿಸಲು ಇಂದು (ಜೂನ್ 08) ಇಂಡಿಯಾ ಮೈತ್ರಿ ಕೂಟ ಮಹತ್ವದ ಸಭೆ  ನಡೆಸಲಿದೆ. ಸಭೆಯಲ್ಲಿ ಒಟ್ಟು 23 ರಾಜಕೀಯ ಪಕ್ಷದ  ಪ್ರತಿನಿಧಿಗಳು ಭಾಗಿಯಾಗಲಿದ್ದು, ತಮಿಳುನಾಡಿನ ಚುನಾವಣೆಯ ಬಳಿಕ ಕಾಂಗ್ರೆಸ್ ಜೊತೆ ಮೈತ್ರಿ ಮುರಿದುಕೊಂಡಿರುವ ಸ್ಟಾಲಿನ್ ನೇತೃತ್ವದ ಡಿಎಂಕೆ ಹಾಗೂ ಆಪ್ ಸಭೆಯಿಂದ ಹೊರಗುಳಿಯುವ ಸಾಧ್ಯತೆಯಿದೆ. ಸಭೆಯಲ್ಲಿ ಒಟ್ಟು 23 ಪಕ್ಷಗಳು ಭಾಗವಹಿಸುವುದು ಖಚಿತವಾತವಾಗಿದೆ ಎಂದು...
ದೆಹಲಿರಾಜ್ಯಸುದ್ದಿ

ಹಠಾತ್ ಬಿರುಗಾಳಿ ಸಹಿತ ಮಳೆ : ದೆಹಲಿ ಏರ್‌ಪೋರ್ಟ್‌ನಲ್ಲಿ 3 ಏರ್ ಇಂಡಿಯಾ ವಿಮಾನಗಳು ಜಖಂ -ಕಹಳೆ ನ್ಯೂಸ್

ನವದೆಹಲಿ: ಹಠಾತ್ ಬಿರುಗಾಳಿ ಸಹಿತ ಭಾರೀ ಮಳೆಗೆ ದೆಹಲಿಯ  ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ  ಮೂರು ಏರ್ ಇಂಡಿಯಾ ವಿಮಾನಗಳು ಜಖಂಗೊಂಡಿವೆ. ಬಿರುಗಾಳಿಗೆ ಸಿಕ್ಕಿ ರನ್‌ವೇನಲ್ಲಿದ್ದ ಏಣಿಗಳು ಮತ್ತು ಇತರ ತಾಂತ್ರಿಕ ಉಪಕರಣಗಳು ವಿಮಾನಗಳಿಗೆ ಡಿಕ್ಕಿಯಾದ ಪರಿಣಾಮ ಏರ್ ಇಂಡಿಯಾ ಸಂಸ್ಥೆಯ ಮೂರು ವಿಮಾನಗಳು ಜಖಂಗೊಂಡಿವೆ. ಭಾನುವಾರ (ಜೂ.7) ಸಂಜೆ 4:40ರ ಸುಮಾರಿಗೆ ವಿಮಾನ ನಿಲ್ದಾಣದ ಟರ್ಮಿನಲ್ 2ರ ಬಳಿ ಘಟನೆ ನಡೆದಿದೆ. ಏಕಾಏಕಿ ಬೀಸಿದ ಬಿರುಗಾಳಿಯ ರಭಸಕ್ಕೆ...
ದೆಹಲಿರಾಜ್ಯಸುದ್ದಿ

ದೆಹಲಿ ರೆಸ್ಟೋರೆಂಟ್‌ನಲ್ಲಿ ಅಗ್ನಿ ದುರಂತ : ಮತ್ತೊಬ್ಬ ಆರೋಪಿ ಬಂಧನ -ಕಹಳೆ ನ್ಯೂಸ್

ನವದೆಹಲಿ: ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ರೆಸ್ಟೋರೆಂಟ್‌ನಲ್ಲಿ ಸಂಭವಿಸಿದ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನ ಪೊಲೀಸರು  ಬಂಧಿಸಿದ್ದಾರೆ. ಹೋಟೆಲ್‌ನಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ದಿಲ್ಶಾದ್ ಗಾರ್ಡನ್ ನಿವಾಸಿ ಕೇಶವ್ ನೇಗಿ (65) ಬಂಧಿತ ಆರೋಪಿ. ಈ ಅಗ್ನಿ ದುರಂತಕ್ಕೆ ಹೋಟೆಲ್‌ನ ಅಡುಗೆಯವರ ನಿರ್ಲಕ್ಷ್ಯವೇ ಮುಖ್ಯ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಆದ್ದರಿಂದ ಅಡುಗೆ ಕೆಲಸಗಾರನನ್ನ ಬಂಧಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಏನಾಗಿತ್ತು ಆ ದಿನ? ಇದೇ ತಿಂಗಳ...
1 2 3 57
Page 1 of 57