2 ಲಕ್ಷ ಲಂಚಕ್ಕೆ ಬೇಡಿಕೆ ಆರೋಪ : ಬೆಂಗಳೂರಲ್ಲಿ ತಹಸೀಲ್ದಾರ್ ಸೇರಿ ಮೂವರನ್ನು ಬಂಧಿಸಿದ ಲೋಕಾಯುಕ್ತ ಪೊಲೀಸರು-ಕಹಳೆ ನ್ಯೂಸ್
ಬೆಂಗಳೂರು : ಜಮೀನು ಮಾಲೀಕರ ಹೆಸರನ್ನು ಪಹಣಿಯಲ್ಲಿ ಸೇರಿಸಲು 2 ಲಕ್ಷ ಲಂಚ ಪಡೆಯುತ್ತಿದ್ದ ಯಲಹಂಕ ತಾಲ್ಲೂಕಿನ ವಿಶೇಷ ತಹಶೀಲ್ದಾರ್ ಮುನಿಶಾಮಿ ರೆಡ್ಡಿ ಸೇರಿ ಮೂವರನ್ನು ಲೋಕಾಯುಕ್ತ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮಧ್ಯವರ್ತಿಗಳಾದ ಸರ್ಕಾರಿ ಪದವಿ ಕಾಲೇಜಿನ ಅತಿಥಿ ಉಪನ್ಯಾಸಕ ನಾಗರಾಜು ಮತ್ತು ಸಂದೀಪ್ ಹಾಗೂ ಮುನಿಶಾಮಿ ರೆಡ್ಡಿ ಬಂಧಿತ ಆರೋಪಿಗಳು. ಜಮೀನಿನ ದಾಖಲೆಗೆ ಮಾಲೀಕರ ಹೆಸರು ಸೇರಿಸುವಂತೆ ವಕೀಲ ಮಹೇಶ್ ಅವರು ಅರ್ಜಿ ಸಲ್ಲಿಸಿದ್ದರು. ಕೆಲಸ ಮಾಡಿಕೊಡಲು ವಿಶೇಷ...







