Friday, March 20, 2026

ಸುದ್ದಿ

ಬೆಂಗಳೂರುರಾಜ್ಯಸುದ್ದಿ

ಬ್ರೆಡ್‌ನಲ್ಲಿಟ್ಟು ಮುಂಬೈನಿಂದ ಬೆಂಗಳೂರಿಗೆ ಡ್ರಗ್ಸ್ ಸಾಗಿಸುತ್ತಿದ್ದ ನೈಜೀರಿಯಾ ಮಹಿಳೆ ಬಂಧನ – ಕಹಳೆ ನ್ಯೂಸ್

ಬೆಂಗಳೂರು :  ಬ್ರೆಡ್‌ ಒಳಗೆ ಮಾದಕ ವಸ್ತುವನ್ನು ಪ್ಯಾಕ್‌ಮಾಡಿ ಯಾರಿಗೂ ಅನುಮಾನ ಬಾರದಂತೆ ಮುಂಬೈನಿಂದ ಸಾಗಣೆ ಮಾಡಿಕೊಂಡು ಖಾಸಗಿ ಟ್ರಾವೆಲ್ಸ್ ಬಸ್‌‍ನಲ್ಲಿ ನಗರಕ್ಕೆ ಬಂದಿದ್ದ ನೈಜೀರಿಯಾ ದೇಶದ ಮಹಿಳೆಯನ್ನು ಸಿಸಿಬಿ ಪೊಲೀಸರು ಬಂಧಿಸಿ 1.20 ಕೋಟಿ ರೂ. ಮೌಲ್ಯದ ಕೊಕೇನ್‌ ವಶಪಡಿಸಿಕೊಂಡಿದ್ದಾರೆ. ನೈಜೀರಿಯಾದ ಓಲಜೈಡ್‌ ಎಸ್ತರ್‌ ಇಯಾನುವೊಲುವಾ (29) ಬಂಧಿತ ಮಹಿಳೆ. 2024 ರಲ್ಲಿ ದೆಹಲಿಯ ಯೂನಿವರ್ಸಿಟಿಯೊಂದರಲ್ಲಿ ವ್ಯಾಸಂಗ ಮಾಡುವುದಾಗಿ ವಿದ್ಯಾರ್ಥಿ ವೀಸಾ ಪಡೆದು ದೆಹಲಿಗೆ ಬಂದಿರುವ ಈ ಮಹಿಳೆ,...
ಸುದ್ದಿ

ಉರುವಾಲು ಗ್ರಾಮ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ-ಸಮಾಲೋಚನಾ ಸಭೆ – ಕಹಳೆ ನ್ಯೂಸ್

ಉರುವಾಲು: (ಡಿ. 23)ಉರುವಾಲು ಗ್ರಾಮ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ-ಸಮಾಲೋಚನಾ ಸಭೆಯು ಡಿ. 23 ರಂದು ನಡೆಸಲಾಯಿತು. ಕಾರ್ಯಕ್ರಮದ ರೂಪುರೇಷೆ ವಿವಿಧ ಜವಾಬ್ದಾರಿ, ಅಭಿವೃದ್ಧಿ ಕಾರ್ಯದ ಬಗ್ಗೆ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಯೋಗೀಶ್ ಪೂಜಾರಿ ಕಡ್ತಿಲ, ಪವಿತ್ರ ಪಾಣಿ ಹರೀಶ್ ತಾಳಿoಜ,ಜಾತ್ರೋತ್ಸವ ಸಮಿತಿ ಅಧ್ಯಕ್ಷರಾದ ಜಗದೀಶ್ ಗೌಡ ಅಣವು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೇಲ್ವಿಚಾರಕರಾದ ಶಿಲ್ಪಾ, ಸಹ...
ಬೆಂಗಳೂರುರಾಜ್ಯಸುದ್ದಿ

21 ದಿನದೊಳಗೆ ಉಚಿತವಾಗಿ ಜನನ-ಮರಣ ಪ್ರಮಾಣ ಪತ್ರ ನೀಡಿ : ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ಸರ್ಕಾರ ಆದೇಶ.!- ಕಹಳೆ ನ್ಯೂಸ್

ಬೆಂಗಳೂರು : 21 ದಿನದೊಳಗೆ ಉಚಿತವಾಗಿ ಜನನ-ಮರಣ ಪ್ರಮಾಣ ಪತ್ರ ನೀಡುವುದು ಕಡ್ಡಾಯ ಎಂದು ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ಸರ್ಕಾರ ಆದೇಶ ಹೊರಡಿಸಿದೆ.ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಸಂಭವಿಸುವ ಜನನ ಹಾಗೂ ಮರಣ ಘಟನೆಗಳನ್ನು 21 ದಿನಗಳೊಳಗಾಗಿ ಕಡ್ಡಾಯವಾಗಿ ನೋಂದಣಿ ಮಾಡಿ ಉಚಿತ ಪ್ರಮಾಣ ಪತ್ರವನ್ನು ನೀಡುವ ಕುರಿತು ಸರ್ಕಾರ ಆದೇಶಿಸಿದೆ. 2025ನೇ ಸಾಲಿನಲ್ಲಿ ರಾಜ್ಯದಲ್ಲಿ (ದಿನಾಂಕ: 28/11/2025 ರವರೆಗೆ) ನೋಂದಣಿಯಾಗಿರುವ ಜನನ ಮತ್ತು ಮರಣ ಘಟನೆಗಳ ಶೇಕಡವಾರು ವಿವರಗಳು...
ದೆಹಲಿರಾಜ್ಯರಾಷ್ಟ್ರೀಯಸುದ್ದಿ

 ದೆಹಲಿಯಲ್ಲಿ ಹಿಂದೂಪರ ಸಂಘಟನೆಗಳಿಂದ ತೀವ್ರಗೊಂಡ ಪ್ರತಿಭಟನೆ: ಬಾಂಗ್ಲಾ ರಾಯಭಾರ ಕಚೇರಿಗೆ ನುಗ್ಗಲು ಯತ್ನ-ಕಹಳೆ ನ್ಯೂಸ್

ನವದೆಹಲಿ: ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ ತೀವ್ರಗೊಂಡಿದೆ. ನವದೆಹಲಿಯಲ್ಲಿರುವ ಬಾಂಗ್ಲಾ ರಾಯಭಾರ ಕಚೇರಿ ಎದುರು ಹಿಂದೂಪರ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ಬಾಂಗ್ಲಾದಲ್ಲಿ ಹಿಂದೂ ಯುವಕ ದೀಪು ಚಂದ್ರದಾಸ್ ಹತ್ಯೆ ಖಂಡಿಸಿ ಪ್ರತಿಭಟನೆ ತೀವ್ರಗೊಂಡಿಇದೆ. ದೆಹಲಿಯಲ್ಲಿರುವ ಬಾಂಗ್ಲಾ ರಾಯಭಾರ ಕಚೇರಿಗೆ ನುಗ್ಗಲು ಪ್ರತಿಭಟನಾಕಾರರು ಯತ್ನಿಸಿದ್ದಾರೆ. ಬ್ಯಾರಿಕೇಡ್ ಗಳನ್ನು ತಳ್ಳಿ ಕಚೇರಿಯತ್ತ ಮುನ್ನುಗ್ಗಿದ ಪ್ರತಿಭಟನಾಕಾರರನ್ನು ಪೊಲೀಸರು ತಡೆದಿದ್ದು, ಈ ವೇಳೆ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಟ್ಲ ಕಲ್ಲಕಟ್ಟ ಶ್ರೀ ಮಂಜುನಾಥ ಸಂಕೀರ್ಣದಲ್ಲಿ “ರಕ್ಷಾ ಕ್ಲಿನಿಕ್” ನ ಎರಡನೇ ಶಾಖೆ ಶುಭಾರಂಭ – ಕಹಳೆ ನ್ಯೂಸ್

ವಿಟ್ಲ: ಆರೋಗ್ಯಕರ ಸಮಾಜ ನಿರ್ಮಿಸಲು ಕ್ಲಿನಿಕ್ ಸಹಕಾರಿಯಾಗಿದೆ. ಬೆಳೆಯುತ್ತಿರುವ ವಿಟ್ಲಕ್ಕೆ ಅಗತ್ಯವಾಗಿ ಬೇಕಾದ ಕ್ಲಿನಿಕ್ ಶುಭಾರಂಭಗೊಂಡಿದೆ. ಇಂದಿನ ಜೀವನಶೈಲಿಯ ರೋಗವನ್ನು ಕಂಡು ಹಿಡಿಯುವ ವ್ಯವಸ್ಥೆ ಇಲ್ಲಿದೆ ಎಂದು ಎಂದು ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಹೇಳಿದರು. ಕಲ್ಲಕಟ್ಟ ಶ್ರೀ ಮಂಜುನಾಥ ಸಂಕೀರ್ಣದಲ್ಲಿ ರಕ್ಷಾ ಕ್ಲಿನಿಕ್ ನ ಎರಡನೇ ಶಾಖೆಯ ಉದ್ಘಾಟನೆ ನಡೆಸಿ ಆಶೀರ್ವಚನ ನೀಡಿದರು. ಪಟ್ಟಣ ಪಂಚಾಯಿತಿ ಅಧ್ಯಕ್ಷ ಕರುಣಾಕರ ನಾಯ್ತೊಟ್ಟು, ಸ್ಥಾಯೀ ಸಮಿತಿ ಅಧ್ಯಕ್ಷ ಅಶೋಕ್...
ಸುದ್ದಿ

ಭೀಕರ ಬಸ್ ಅಪಘಾತದಲ್ಲಿ 16 ಮಂದಿ ಪ್ರಯಾಣಿಕರು ಸಾವು : ಭಯಾನಕ ವಿಡಿಯೋ ವೈರಲ್ – ಕಹಳೆ ನ್ಯೂಸ್

ಜಕಾರ್ತಾ: ಇಂಡೋನೇಷ್ಯಾದ ಪ್ರಮುಖ ದ್ವೀಪವಾದ ಜಾವಾದಲ್ಲಿ ಸೋಮವಾರ ಮುಂಜಾನೆ ನಡೆದ ಬಸ್ ಅಪಘಾತದಲ್ಲಿ ಕನಿಷ್ಠ 16 ಜನರು ಸಾವನ್ನಪ್ಪಿದ್ದಾರೆ. ಸೆಮರಾಂಗ್ ನಗರದ ಕ್ರಾಪ್ಯಕ್ ಟೋಲ್ ಪ್ಲಾಜಾ ಬಳಿ ಈ ಘಟನೆ ನಡೆದಿದೆ. ಪ್ರಾಚೀನ ನಗರವಾದ ಯೋಗ್ಯಕರ್ತಾದಿಂದ ರಾಜಧಾನಿ ಜಕಾರ್ತಾಗೆ ಪ್ರಯಾಣಿಸುತ್ತಿದ್ದ ಬಸ್ ಅಪಘಾತಕ್ಕೀಡಾಯಿತು. ವೇಗವಾಗಿ ಬಂದ ಬಸ್ ನಿಯಂತ್ರಣ ತಪ್ಪಿ ತಿರುವಿನಲ್ಲಿ ಕಾಂಕ್ರೀಟ್ ಗೋಡೆಗೆ ಡಿಕ್ಕಿ ಹೊಡೆದು ಉರುಳಿತು. ಆ ಪ್ರದೇಶವು ಪ್ರಯಾಣಿಕರ ಕಿರುಚಾಟದಿಂದ ಪ್ರತಿಧ್ವನಿಸಿತು. ಸುಮಾರು 40 ನಿಮಿಷಗಳ...
ಬಳ್ಳಾರಿರಾಜ್ಯಸುದ್ದಿ

ಬಳ್ಳಾರಿ ಕಾರಾಗೃಹದ ಮೇಲೆ ಪೊಲೀಸರ ದಾಳಿ : 10 ಮೊಬೈಲ್ ಫೋನ್ ಗಳು ಪತ್ತೆ – ಕಹಳೆ ನ್ಯೂಸ್

ಬಳ್ಳಾರಿ: ಬಳ್ಳಾರಿ ಕಾರಾಗೃಹದ ಮೇಲೆ ಪೊಲೀಸರು ದಾಳಿ ನಡೆಸಿ, ಕಾರ್ಯಾಚರಣೆ ನಡೆಸಿದ್ದು, ಈ ವೇಳೆ 10 ಮೊಬೈಲ್ ಫೋನ್ ಗಳು ಪತ್ತೆಯಾಗಿವೆ. 10 ಕೀಪ್ಯಾಡ್ ಮೊಬೈಲ್ ಗಳು, 3 ಚಾರ್ಜರ್ ಗಳು, ಕೇಬಲ್ ಗಳು ಪತ್ತೆಯಾಗಿವೆ. ಮೊಬೈಲ್, ಚಾರ್ಜರ್ ಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ನಡೆಸಿದ್ದಾರೆ. ಈ ಬಗ್ಗೆ ಬ್ರೂಸ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ತೋಟತ್ತಾಡಿ ಸರಕಾರಿ ಶಾಲೆಯ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ವ್ಯಾಪಕ ಖಂಡನೆ – ಕಹಳೆ ನ್ಯೂಸ್

ತೋಟತ್ತಾಡಿ ಸರಕಾರಿ ದ್ವಿ-ಭಾಷ ಮಾಧ್ಯಮಗಳ ಉನ್ನತಿಕರಿಸಿದ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಮತ್ತು ಗ್ರಂಥಾಲಯ ಕೊಠಡಿಯ ಉದ್ಘಾಟನೆಯ ಸಮಾರಂಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿ ಕೊಠಡಿ ಉದ್ಘಾಟನೆಯನ್ನು ನಡೆಸಿದ್ದರು ಇದು ಸರಕಾರಿ ಕಾರ್ಯಕ್ರಮಗಳ ಶಿಷ್ಟಾಚಾರವಾಗಿದ್ದು ಒಬ್ಬ ರಾಜಕೀಯ ಪಕ್ಷದವರಾಗಿದ್ದು ಉದ್ಘಾಟಿಸಿದ್ದನ್ನು ಸಾರ್ವಜನಿಕರು ವ್ಯಾಪಕ ಖಂಡಿಸಿದ್ದು. ಅದಲ್ಲದೆ ಭಾರತೀಯ ಜನತಾ ಪಾರ್ಟಿ ಕಾರ್ಯಕರ್ತರು ಮುಂದಿನ ದಿನಗಳಲ್ಲಿ ಬಿಜೆಪಿ ಸರ್ಕಾರ ಆಡಳಿತ ಬಂದಾಗ ಸರಕಾರಿ ಕಾರ್ಯಕ್ರಮವನ್ನು ಬಿಜೆಪಿ ಕಾರ್ಯಕರ್ತರೇ ನೆರವೇರಿಸುತ್ತೇವೆಂದು ಬಹಿರಂಗ...
1 112 113 114 115 116 3,299
Page 114 of 3299