Saturday, April 25, 2026

ಸುದ್ದಿ

ಜಿಲ್ಲೆಸುದ್ದಿ

ಕೆರೆಯಲ್ಲಿ ಹೂಳೆತ್ತುವಾಗ ಪುರಾತನ ಕಾಲದ ಬಸವಣ್ಣ ಮೂರ್ತಿ ಪತ್ತೆ!-ಕಹಳೆ ನ್ಯೂಸ್

ಹಾವೇರಿ: ಕೆರೆಯಲ್ಲಿ ಹೂಳು ತೆಗೆಯುತ್ತಿದ್ದ  ವೇಳೆ ಪುರಾತನ ಕಾಲದ ಬಸವಣ್ಣ ಮೂರ್ತಿ ಪತ್ತೆಯಾದ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರು ತಾಲ್ಲೂಕಿನ ದೂದಿಹಳ್ಳಿ ನಡೆದಿದೆ. ಗ್ರಾಮದ ಬಳಿ ಇರೋ ಬಾಳೆ ಕೆರೆಯಲ್ಲಿ ಹೂಳು ತೆಗೆಯುತ್ತಿದ್ದ ವೇಳೆ ಬಸವಣ್ಣ ಮೂರ್ತಿ (Basavanna Statue) ಪತ್ತೆಯಾಗಿದೆ. ಸುಮಾರು 3 ಅಡಿ ಎತ್ತರದ ಬಸವಣ್ಣ ಮೂರ್ತಿ ಪತ್ತೆಯಾಗಿದ್ದು, ಬಸವಣ್ಣನ ಮೂರ್ತಿಗೆ ಪೂಜೆ ಸಲ್ಲಿಸಿದ್ದಾರೆ. ಗ್ರಾಮದ ದೇವಸ್ಥಾನ ಬಳಿ ಪ್ರತಿಷ್ಠಾನ ಮಾಡಿ ಪೂಜೆ ಮಾಡಲು ನಿರ್ಧಾರ ಮಾಡಿದ್ದಾರೆ....
ಸುದ್ದಿ

ಮುಳ್ಳುಹಂದಿ ಬೇಟೆಯಾಡಲು ಹೋಗಿ ಚಿರತೆ ಸಾವು -ಕಹಳೆ ನ್ಯೂಸ್

ಚಾಮರಾಜನಗರ: ಮುಳ್ಳುಹಂದಿ  ಬೇಟೆಯಾಡಲು ಹೋಗಿ ಚಿರತೆ  ಸಾವನ್ನಪ್ಪಿರುವ ಘಟನೆ ಗುಂಡ್ಲುಪೇಟೆ  ತಾಲೂಕಿನ ಬೊಮ್ಮನಹಳ್ಳಿ ಬಳಿ ನಡೆದಿದೆ. ಮುಳ್ಳುಹಂದಿ ಬೇಟೆಗೆ ಚಿರತೆ ಮುಂದಾಗಿದೆ. ಈ ವೇಳೆ, ಚಿರತೆ ಕಾಲು ಹಾಗೂ ಬಾಯಿಯ ಭಾಗಕ್ಕೆ ಮುಳ್ಳು ಚುಚ್ಚಿಕೊಂಡಿದೆ. ಮುಳ್ಳುಹಂದಿ ಜೊತೆ ಕಾದಾಡಿ ಚಿರತೆ ಮೃತಪಟ್ಟಿದೆ. ಸ್ಥಳಕ್ಕೆ ಅರಣ್ಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪಶುವೈದ್ಯರು ಮರಣೋತ್ತರ ಪರೀಕ್ಷೆ ನಡೆಸಲಿದ್ದಾರೆ....
ಸುದ್ದಿ

ಇರಾನ್‌ಗೆ ನೂತನ ಏರ್‌ ಡಿಫೆನ್ಸ್‌ ಸಿಸ್ಟಮ್‌ ಪೂರೈಕೆಗೆ ಚೀನಾ ಸಿದ್ಧತೆ : ಅಮೆರಿಕ ಕಳವಳ -ಕಹಳೆ ನ್ಯೂಸ್

ವಾಷಿಂಗ್ಟನ್‌: ಮುಂದಿನ ಕೆಲವು ದಿನಗಳಲ್ಲಿ ಚೀನಾ ಇರಾನ್‌ಗೆ ನೂತನ ವಾಯು ರಕ್ಷಣಾ ವ್ಯವಸ್ಥೆಗಳನ್ನು ತಲುಪಿಸಲು ಸಿದ್ಧತೆ ನಡೆಸುತ್ತಿದೆ ಎಂದು ಅಮೆರಿಕದ ಗುಪ್ತಚರ ಇಲಾಖೆ ಹೇಳಿದೆ. ಈ ಬಗ್ಗೆ ಅಮೆರಿಕ ಗುಪ್ತಚರ ಸಂಸ್ಥೆ ಕಳವಳ ವ್ಯಕ್ತಪಡಿಸಿದೆ. ಚೀನಾ ತನ್ನ ಮೂಲವನ್ನು ಮರೆಮಾಚಲು ಬೇರೆ ದೇಶಗಳ ಮೂಲಕ ಈ ಶಸ್ತ್ರಾಸ್ತ್ರ ಸಾಗಣಿಕೆಗೆ ಮುಂದಾಗಿರುವ ಸಾಧ್ಯತೆ ಇದೆ. MANPAD ಗಳು ಎಂದು ಕರೆಯಲ್ಪಡುವ ಭುಜದ ಮೇಲೆ ಹೊತ್ತು ಹಾರಿಸುವ ವಾಯು ವಿರೋಧಿ ಕ್ಷಿಪಣಿ ವ್ಯವಸ್ಥೆಗಳನ್ನು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ವೀರಕಂಭ ಮಜಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಸಮುದಾಯದತ್ತ ಕಾರ್ಯಕ್ರಮ -ಕಹಳೆ ನ್ಯೂಸ್

ಕಲ್ಲಡ್ಕ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಭ ಇಲ್ಲಿ ಸಮುದಾಯ ದತ್ತ ಕಾರ್ಯಕ್ರಮ ಏಪ್ರಿಲ್ 10 ಶುಕ್ರವಾರ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಕೊರಗಪ್ಪ ನಾಯ್ಕ ಸಿಂಗೇರಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪೋಷಕರೊಂದಿಗೆ ಮುಕ್ತವಾಗಿ ಚರ್ಚಿಸಿ ಶಾಲೆಯ ಶೈಕ್ಷಣಿಕ ಬೆಳವಣಿಗೆ ಪೋಷಕರ ಮತ್ತು ಶಿಕ್ಷಕರ ನಡುವಿನ ಸಂಬಂಧವು ಹೆಚ್ಚು ಪರಿಣಾಮವನ್ನು ಉಂಟುಮಾಡುತ್ತದೆ, ಆದುದರಿಂದ ಪೋಷಕರು ಶಾಲೆಯೊಂದಿಗೆ ನಿಕಟ ಸಂಪರ್ಕದಲ್ಲಿರಬೇಕು ತಿಳಿಸಿ ಸರಕಾರವು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಯಾವುದೇ ಕೋಚಿಂಗ್ ಇಲ್ಲದೆ ರಾಜ್ಯಕ್ಕೆ ಆರನೇ ಸ್ಥಾನ ಪಡೆದ ಶ್ರೀಜಾ – ಕಹಳೆ ನ್ಯೂಸ್

ಬಂಟ್ವಾಳ : ತನ್ನ ಅಜ್ಜಿ ಮನೆಯಿಂದಲೇ ಪ್ರಾಥಮಿಕ ಶಿಕ್ಷಣ ಪಡೆಯುತ್ತಿರುವ ಬಂಟ್ವಾಳ ತಾಲೂಕಿನ ಅಜಿಲ ಮೊಗೇರು ದೆಚ್ಚಾರ್ ಸದಾನಂದ ವನಿತ ದಂಪತಿಗಳ ಮಗಳಾದ ಶ್ರೀಜಾ ತನ್ನ ಅಜ್ಜಿ ಮನೆಯಾದ ನರಿಕೊಂಬು ಗ್ರಾಮದ ಅಬೆರೊಟ್ಟು ಗಂಗಯ್ಯ ಪೂಜಾರಿಯವರ ಮನೆಯಿಂದಲೇ ಪ್ರಾಥಮಿಕ ಶಿಕ್ಷಣವನ್ನು ಪಡೆಯುತ್ತಿದ್ದು ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ 594 ಅಂಕ ಪಡೆದು ರಾಜ್ಯಕ್ಕೆ ಆರನೇ ಸ್ಥಾನ ಪಡೆದಿರುತ್ತಾರೆ. ಎಸ್ ಎಸ್ ಎಲ್ ಸಿ ಶಿಕ್ಷಣವನ್ನು ಸರಕಾರಿ ಪ್ರೌಢಶಾಲೆ ಬೊಂಡಾಲದಲ್ಲಿ ಪಡೆದು...
ಕುಂದಾಪುರಜಿಲ್ಲೆಸುದ್ದಿ

ಶೇ.98.7% ಪಡೆದು ರಾಜ್ಯಕ್ಕೆ 9ನೇ ರ್ಯಾಂಕ್ ಪಡೆದ ಯಡಾಡಿ ಮತ್ಯಾಡಿಯ ಸುಜ್ಞಾನ ಪಿಯು ಕಾಲೇಜಿನ ವಿದ್ಯಾರ್ಥಿನಿ ಸ್ಪಂದನಾ ಆರ್. ಶೆಟ್ಟಿಗೆ 50,000 ರೂ. ನಗದು ಬಹುಮಾನ ನೀಡಿ ಪ್ರೋತ್ಸಾಹಿಸಿದ ಸುಜ್ಞಾನ ಎಜ್ಯುಕೇಶನಲ್ ಟ್ರಸ್ಟ್ – ಕಹಳೆ ನ್ಯೂಸ್

ಕುಂದಾಪುರ: 2025-2026ನೇ ಸಾಲಿನ ಪದವಿಪೂರ್ವ ಕಾಲೇಜಿನ ಫಲಿತಾಂಶ ಏಪ್ರಿಲ್‌ 09,2026ರಂದು ಪ್ರಕಟವಾಗಿದ್ದು, ಈ ಫಲಿತಾಂಶದಲ್ಲಿ ಕುಂದಾಪುರ ಸುಜ್ಞಾನ ಪಿಯು ಕಾಲೇಜಿನ ಪ್ರಥಮ ಬ್ಯಾಚ್‌ನ ವಿದ್ಯಾರ್ಥಿಗಳು ಅಮೋಘ ಸಾಧನೆ ಗೈದಿದ್ದಾರೆ. ಕೇವಲ 11 ವಿದ್ಯಾರ್ಥಿಗಳಿಂದ 2024-2025ರಲ್ಲಿ ಆರಂಭವಾದ ಸುಜ್ಞಾನ ಪಿಯು ಕಾಲೇಜು ದ್ವಿತೀಯ ಪಿಯುಸಿಗೆ ಬೇರೆ ಕಾಲೇಜುಗಳಿಂದ ಸುಮಾರು 100 ವಿದ್ಯಾರ್ಥಿಗಳು ದಾಖಲಾತಿ ಪಡೆದು ಒಟ್ಟು 125 ವಿದ್ಯಾರ್ಥಿಗಳು ಈ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಉತ್ತಮ ಅಂಕ ಗಳಿಸಿ...
ಸುದ್ದಿ

10 ದಿನ ಚಂದ್ರನ ಸುತ್ತಿ ಸುರಕ್ಷಿತವಾಗಿ ಭೂಮಿಗೆ ಬಂದಿಳಿದ ಆರ್ಟೆಮಿಸ್‌ 2 ಗಗನಯಾತ್ರಿಗಳು -ಕಹಳೆ ನ್ಯೂಸ್

ವಾಷಿಂಗ್ಟನ್: ಐತಿಹಾಸಿಕ 10 ದಿನಗಳ ಚಂದ್ರಯಾನದ ನಂತರ ನಾಸಾದ (NASA) ಆರ್ಟೆಮಿಸ್ II (Artemis 2) ಗಗನಯಾತ್ರಿಗಳು ಭೂಮಿಗೆ ಮರಳಿದ್ದಾರೆ. ಆರ್ಟೆಮಿಸ್ II ರ ಗಗನಯಾತ್ರಿಗಳು ಪೆಸಿಫಿಕ್‌ ಸಾಗರದಲ್ಲಿ ಸುರಕ್ಷಿತವಾಗಿ ಇಳಿದರು. ಸುಮಾರು 50 ವರ್ಷಗಳ ಬಳಿಕ ಚಂದ್ರನತ್ತ ಪ್ರಯಾಣ ಮಾಡಿ, 10 ದಿನಗಳ ಸುತ್ತಾಟ ನಡೆಸಿ ಭೂಮಿಗೆ ವಾಪಸ್‌ ಆಗುವ ನಾಸಾ ಯೋಜನೆ ‘ಆರ್ಟಿಮಿಸ್‌ 2’ ಯಶಸ್ವಿಯಾಗಿದೆ. ನಾಲ್ವರು ಗಗನಯಾತ್ರಿಗಳನ್ನು ಹೊತ್ತು ಸಾಗಿದ್ದ ಓರಿಯನ್‌ ನೌಕೆ ಕ್ಯಾಲಿಫೋರ್ನಿಯಾದ ಸ್ಯಾನ್...
ಸುದ್ದಿ

ವೃಂದಾವನದ ಯಮುನಾ ನದಿಯಲ್ಲಿ ಪ್ರವಾಸಿ ಬೋಟ್‌ ಮಗುಚಿ 10 ಮಂದಿ ಸಾವು – ಕಹಳೆ ನ್ಯೂಸ್

ಲಕ್ನೋ: ವೃಂದಾವನದ ಯಮುನಾದಲ್ಲಿ ಪಂಜಾಬ್‌ನಿಂದ ಬಂದ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್‌ ಮಗುಚಿ 10 ಮಂದಿ ಸಾವನ್ನಪ್ಪಿದ್ದು, 22 ಜನರು ಗಾಯಗೊಂಡಿದ್ದಾರೆ. ಇನ್ನೂ ಐವರು ನಾಪತ್ತೆಯಾಗಿದ್ದಾರೆ. ಕೇಸಿ ಘಾಟ್ ಬಳಿ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಬೋಟ್‌ ಆಳವಾದ ನೀರಿಗೆ ಹೋಗಿ ತೇಲುವ ಪಾಂಟೂನ್‌ಗೆ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ನೀರಿನ ಮಟ್ಟ ಏರಿಕೆಯಿಂದಾಗಿ ಇತ್ತೀಚೆಗೆ ಈ ಪ್ರದೇಶದಲ್ಲಿ ಒಂದು ಪಾಂಟೂನ್ ಸೇತುವೆಯನ್ನು ತೆರವುಗೊಳಿಸಲಾಗಿತ್ತು. ಕೆಲವು ಪಾಂಟೂನ್ ಡ್ರಮ್‌ಗಳು ನದಿಯಲ್ಲಿ ಉಳಿದಿವೆ ಎಂದು...
1 12 13 14 15 16 3,335
Page 14 of 3335