Saturday, June 13, 2026

ಸುದ್ದಿ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಾವಳಪಡೂರು: ನೂತನ ಹಿಂದೂ ರುದ್ರಭೂಮಿ ಲೋಕಾರ್ಪಣೆ – ಕಹಳೆ ನ್ಯೂಸ್

ಬಂಟ್ವಾಳ : ತಾಲೂಕಿನ ಕಾವಳಪಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾವಳಪಡೂರು ಗ್ರಾಮದ ಹಂಚಿಕಟ್ಟೆ ಎಂಬಲ್ಲಿ ಗ್ರಾಮ ಪಂಚಾಯತ್ ಹಾಗೂ ಹಿಂದೂ ರುದ್ರಭೂಮಿ ನಿರ್ಮಾಣ ಸಮಿತಿ ಮತ್ತು ದಾನಿಗಳ ವತಿಯಿಂದ ಸುಮಾರು 15 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಹಿಂದೂ ರುದ್ರಭೂಮಿಯ ಲೋಕಾರ್ಪಣೆ ಕಾರ್ಯಕ್ರಮ  ನಡೆಯಿತು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ನೂತನ ಹಿಂದೂ ರುದ್ರಭೂಮಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿ, ರುದ್ರಭೂಮಿ ನಿರ್ಮಾಣ ಕಾರ್ಯ ಶ್ಲಾಘನೀಯ .ಇದಕ್ಕೆ ಕೈಜೋಡಿಸಿದ...
ಸುದ್ದಿ

ಕಿಡ್ನ್ಯಾಪ್ & ರೇಪ್ ಕೇಸಲ್ಲಿ ಭಾರತೀಯ ಮೂಲದ ವ್ಯಕ್ತಿಗೆ‌ ಲಂಡನ್‌ನಲ್ಲಿ 34 ವರ್ಷ ಜೈಲು ಶಿಕ್ಷೆ – ಕಹಳೆ ನ್ಯೂಸ್

ಲಂಡನ್: ಮಹಿಳೆಯೊಬ್ಬರನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದ ಪ್ರಕರಣದಲ್ಲಿ ಭಾರತೀಯ ಮೂಲದ ವ್ಯಕ್ತಿಗೆ ಲಂಡನ್ ನ್ಯಾಯಾಲಯ 34 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.ಭಾರತೀಯ ಮೂಲದ ಗಗನ್‌ದೀಪ್ ಸಿಂಗ್ (34) ಶಿಕ್ಷೆಗೆ ಗುರಿಯಾದ ವ್ಯಕ್ತಿ. ಐಸಲ್‌ವರ್ತ್ ಕ್ರೌನ್ ಕೋರ್ಟ್ನಲ್ಲಿ ಪ್ರಕರಣದ ವಿಚಾರಣೆ ನಡೆದು ಶಿಕ್ಷೆ ವಿಧಿಸಲಾಗಿದೆ. ಕಳೆದ ಫೆಬ್ರವರಿ ತಿಂಗಳಿನಲ್ಲೇ ಈ ಪ್ರಕರಣದಲ್ಲಿ ಈತ ಆರೋಪಿ ಎಂದು ಸಾಬೀತಾಗಿತ್ತು. ಇದೀಗ ಕೋರ್ಟ್ 34 ವರ್ಷಗಳ ಜೈಲು ಶಿಕ್ಷೆ ನೀಡಿದ್ದು, ಇದರಲ್ಲಿ 28 ವರ್ಷಗಳ ಕಾಲ...
ಸುದ್ದಿ

6 ತಿಂಗಳ ಮಗುವಿನೊಂದಿಗೆ 6ನೇ ಮಹಡಿಯಿಂದ ಜಿಗಿದ ಮಹಿಳಾ ಟೆಕ್ಕಿ ಸಾವು : ಕಂದಮ್ಮ ಪಾರು – ಕಹಳೆ ನ್ಯೂಸ್

ಹೈದರಾಬಾದ್: ಮಹಿಳಾ ಟೆಕ್ಕಿಯೊಬ್ಬರು ತನ್ನ 6 ತಿಂಗಳ ಮಗುವಿನೊಂದಿಗೆ ಅಪಾರ್ಟ್‌ಮೆಂಟ್‌ನ 6ನೇ ಮಹಡಿಯಿಂದ ಜಿಗಿದ ಪರಿಣಾಮ ಸ್ಥಳದಲ್ಲೇ ತಾಯಿ ಮೃತಪಟ್ಟಿದ್ದು, ಮಗು ಅದೃಷ್ಟವಶಾತ್ ಬದುಕುಳಿದಿರುವ ಘಟನೆ ಹೈದರಾಬಾದ್‌ನ ಮಿಯಾಪುರ್  ಪ್ರದೇಶದ ಮಯೂರಿ ನಗರದಲ್ಲಿ  ನಡೆದಿದೆ. ಮೃತ ಮಹಿಳೆಯನ್ನು ಇಶಾ ಸಾಹು (37) ಎಂದು ಗುರುತಿಸಲಾಗಿದೆ. ಇಶಾ ತಮ್ಮ ಆರು ತಿಂಗಳ ಮಗುವನ್ನು ತೋಳಲ್ಲಿ ಹಿಡಿದುಕೊಂಡು ಅಪಾರ್ಟ್‌ಮೆಂಟ್‌ನ ಆರನೇ ಮಹಡಿಯಿಂದ ಜಿಗಿದಿದ್ದಾರೆ. ಕೆಳಗೆ ಬೀಳುವ ವೇಳೆ ಮಗು ಅವರ ಕೈಯಿಂದ ಜಾರಿಬಿದ್ದ...
ಬೆಂಗಳೂರುರಾಜ್ಯಸುದ್ದಿ

ದಿನಕ್ಕೆ ಒಂದು ವಾಹನಕ್ಕೆ 200 ಲೀಟರ್‌ ಮಾತ್ರ: ಡೀಸೆಲ್‌ ಮಾರಾಟ ಮಿತಿಗೊಳಿಸಿದ ಕೇಂದ್ರ- ಕಹಳೆ ನ್ಯೂಸ್

ನವದೆಹಲಿ: ಡೀಸೆಲ್‌ (Diesel) ಮಾರಾಟಕ್ಕೆ ಕೇಂದ್ರ ಸರ್ಕಾರ ಮಿತಿ ಹೇರಿದೆ. ಪೆಟ್ರೋಲ್‌ ಬಂಕ್‌ಗಳಲ್ಲಿ ಒಂದು ವಾಹನಕ್ಕೆ ದಿನಕ್ಕೆ 200 ಲೀಟರ್‌ ಡೀಸೆಲ್‌ ಖರೀದಿಗೆ ಮಿತಿ ನಿಗದಿಪಡಿಸಲಾಗಿದೆ. ಇಂಧನ ಅಕ್ರಮ ದಾಸ್ತಾನು ಮತ್ತು ಕಾಳಸಂತೆಯಲ್ಲಿ ಮಾರಾಟವನ್ನು ತಡೆಯಲು ಈ ಕ್ರಮಕೈಗೊಳ್ಳಲಾಗಿದೆ ಎಂದು ಕೇಂದ್ರ ತಿಳಿಸಿದೆ. ವಾಣಿಜ್ಯ, ಕೈಗಾರಿಕಾ ಮತ್ತು ಸಾಂಸ್ಥಿಕ ಗ್ರಾಹಕರು ಇನ್ಮುಂದೆ ರಿಟೇಲ್‌ ಬಂಕ್‌ಗಳಲ್ಲಿ ಡೀಸೆಲ್‌ ಖರೀದಿಸುವಂತಿಲ್ಲ. ವಾಣಿಜ್ಯ ಉದ್ದೇಶಕ್ಕೆ ನಿಗದಿಪಡಿಸಿದ ಮಾರಾಟ ಕೇಂದ್ರಗಳಿಂದಲೇ ಇಂಧನ ಖರೀದಿಸಬೇಕು ಎಂದು ಸೂಚಿಸಿದೆ....
ಸಿನಿಮಾಸುದ್ದಿ

ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ಕತ್ರಿನಾ ಕೈಫ್‌ – ಕಹಳೆ ನ್ಯೂಸ್

ಬಾಲಿವುಡ್ ನಟ ವಿಕ್ಕಿ ಕೌಶಲ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಂತರ ಚಿತ್ರರಂಗದಿಂದ ಸುದೀರ್ಘ ವಿರಾಮ ಪಡೆದುಕೊಂಡಿದ್ದ ಸ್ಟಾರ್ ನಟಿ ಕತ್ರಿನಾ ಕೈಫ್  ಮತ್ತೆ ಬಣ್ಣ ಹಚ್ಚಲು ರೆಡಿಯಾಗಿದ್ದಾರೆ. ಆ ಮೂಲಕ ತಾವು ಚಿತ್ರರಂಗ ತೊರೆದಿಲ್ಲ ಎಂಬ ಸಿಹಿ ಸುದ್ದಿಯನ್ನು ಅಭಿಮಾನಿಗಳಿಗೆ ನೀಡಿದ್ದಾರೆ. ಮದುವೆಯ ನಂತರ ಕತ್ರಿನಾ ಕೈಫ್ ಯಾವುದೇ ಹೊಸ ಸಿನಿಮಾಗಳನ್ನು ಒಪ್ಪಿಕೊಳ್ಳದ ಹಿನ್ನೆಲೆಯಲ್ಲಿ ಅವರು ಚಿತ್ರರಂಗಕ್ಕೆ ಗುಡ್‌ಬೈ ಹೇಳಲಿದ್ದಾರೆ ಎಂಬ ವದಂತಿಗಳು ಹರಿದಾಡಿದ್ದವು. ನಟಿ ಅನುಷ್ಕಾ ಶರ್ಮಾ ...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರು – ಚೆನ್ನೈ ಎಕ್ಸ್‌ಪ್ರೆಸ್‌ ವೇಯಲ್ಲಿ ಡಿವೈಡರ್‌ಗೆ ಕಾರು ಡಿಕ್ಕಿ; ಯುವತಿ ದುರ್ಮರಣ- ಕಹಳೆ ನ್ಯೂಸ್

ಬೆಂಗಳೂರು: ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಯುವತಿ ಸಾವನ್ನಪ್ಪಿರುವ ಘಟನೆ ಬೆಂಗಳೂರು- ಚೆನ್ನೈ ಎಕ್ಸ್‌ಪ್ರೆಸ್‌ ವೇಯಲ್ಲಿ  ನಡೆದಿದೆ. ಹೊಸಕೋಟೆ ಸಮೀಪದ ದೊಡ್ಡ ಹುಲ್ಲೂರು ಬಳಿ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬೆಂಜ್ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಕಾರು ಚಾಲಕನ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿ ಚಾಲನೆಯೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಅಪಘಾತದ ಬಳಿಕ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ....
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಮಂಜುನಾಥನ ಭಕ್ತರಿಗೆ ಗುಡ್ ನ್ಯೂಸ್ : ಇಂದಿನಿಂದ ಧರ್ಮಸ್ಥಳಕ್ಕೆ ಹೊಸ ಪ್ಯಾಕೇಜ್ ಪರಿಚಯಿಸಿದ KSTDC- ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕದಲ್ಲಿ ಅತೀ ಹೆಚ್ಚು ಶಿವ ಭಕ್ತರು ಭೇಟಿ ನೀಡುವ ದೇವಾಲಯ ಅಂದರೆ ಅದು ಧರ್ಮಸ್ಥಳ. ಬೆಂಗಳೂರು ಸೇರಿದಂತೆ ಪ್ರತಿನಿತ್ಯ ಸಾವಿರಾರು ಭಕ್ತರು ಧರ್ಮಸ್ಥಳ  ಮಂಜುನಾಥನ ದರ್ಶನಕ್ಕಾಗಿ ಹೋಗುತ್ತಾರೆ. ಜೊತೆಗೆ ಅಲ್ಲಿ ಗಂಟೆಗಟ್ಟಲೆ ಕ್ಯೂನಲ್ಲಿ ನಿಂತು ದರ್ಶನ ಮಾಡಿಕೊಂಡು ಬರುತ್ತಾರೆ. ಇದೀಗ ರಾಜಧಾನಿಯಿಂದ ಧರ್ಮಸ್ಥಳಕ್ಕೆ ತೆರಳುವ ಭಕ್ತಾದಿಗಳಿಗೆ ಕೆಎಸ್‌ಟಿಡಿಸಿ ಗುಡ್ ನ್ಯೂಸ್ ನೀಡಿದೆ. ಇನ್ಮುಂದೆ ರಾಜಧಾನಿಗರು ಶೀಘ್ರದಲ್ಲೇ ಮಂಜುನಾಥನ ದರ್ಶನ ಮಾಡಬಹುದಾಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಕೇವಲ ಧಾರ್ಮಿಕ ಸ್ಥಳ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಸಿಲ್ವರ್ ಝೋನ್ ಒಲಿಂಪಿಯಾಡ್ ಪರೀಕ್ಷೆ  ಫಲಿತಾಂಶ :  ಅಂಬಿಕಾ  ವಿದ್ಯಾಲಯ ಸಿಬಿಎಸ್‌ಇ ವಿದ್ಯಾರ್ಥಿಗಳಿಗೆ ಭರಪೂರ ಪದಕಗಳು – ಕಹಳೆ ನ್ಯೂಸ್

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ 567 ವಿದ್ಯಾರ್ಥಿಗಳು  2025-26ನೇ ಸಾಲಿನ ಸಿಲ್ವರ್ ಝೋನ್ ಒಲಿಂಪಿಯಾಡ್ ಪರೀಕ್ಷೆಗೆ ಬರೆದಿದ್ದು,  ಅದರಲ್ಲಿ 82 ಮಂದಿ ವಿದ್ಯಾರ್ಥಿಗಳು ಚಿನ್ನದ ಪದಕ ಮತ್ತು ಪ್ರಶಸ್ತಿ  ಪತ್ರ, 66 ವಿದ್ಯಾರ್ಥಿಗಳು ಬೆಳ್ಳಿ ಪದಕ ಮತ್ತು ಪ್ರಶಸ್ತಿ ಪತ್ರ, 52 ವಿದ್ಯಾರ್ಥಿಗಳು ಕಂಚಿನ ಪದಕ ಮತ್ತು ಪ್ರಶಸ್ತಿವನ್ನು ಪಡೆದುಕೊಂಡಿರುತ್ತಾರೆ. ಪರೀಕ್ಷೆಗೆ ಸಂಬಂಧಿಸಿದಂತೆ  ಗಣಿತ ವಿಷಯದಲ್ಲಿ 2ನೇ  ತರಗತಿಯ ವಾತ್ಸಲ್ಯ ಹಾಗೂ...
1 2 3 4 3,391
Page 2 of 3391