Sunday, September 6, 2026

ಸುದ್ದಿ

ಸುದ್ದಿ

ನೆಹರು ಮೆಮೋರಿಯಲ್ ಕಾಲೇಜು ಸುಳ್ಯದಲ್ಲಿ ಒಂದು ವಾರದ ಉದ್ಯೋಗ ಕೌಶಲ್ಯ ತರಬೇತಿ ಸಂಪನ್ನ – ಕಹಳೆ ನ್ಯೂಸ್

ಸುಳ್ಯ : ನೆಹರು ಮೆಮೋರಿಯಲ್ ಕಾಲೇಜು ಸುಳ್ಯದಲ್ಲಿ ವಿದ್ಯಾರ್ಥಿನಿಯರಿಗಾಗಿ ಮಹೀಂದ್ರಾ & ಮಹೀಂದ್ರಾ ಸಂಸ್ಥೆಯ ಉಪಕ್ರಮವಾದ ನಾಂದಿ ಫೌಂಡೇಶನ್‌ನ ಮಹೀಂದ್ರಾ ಪ್ರೈಡ್ ಕ್ಲಾಸ್‌ರೂಮ್ (MPC) ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಒಂದು ವಾರದ ಉದ್ಯೋಗ ಕೌಶಲ್ಯ ತರಬೇತಿ ಕಾರ್ಯಕ್ರಮ ಇಂದು ಯಶಸ್ವಿಯಾಗಿ ಸಂಪನ್ನಗೊಂಡಿತು. ಆಗಸ್ಟ್ 31 ರಿಂದ ಸೆಪ್ಟೆಂಬರ್ 5 ರವರೆಗೆ ಎರಡು ಬ್ಯಾಚ್‌ಗಳಲ್ಲಿ ನಡೆದ ಈ ತರಬೇತಿಯ ಪ್ರಯೋಜನವನ್ನು ಬಿಸಿಎ, ಬಿಎಸ್ಸಿ, ಬಿಕಾಂ, ಬಿಬಿಎ ಮತ್ತು ಬಿಎ ವಿಭಾಗಗಳ 95 ವಿದ್ಯಾರ್ಥಿನಿಯರು...
ಸುದ್ದಿ

ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ 2026-27ನೇ ಸಾಲಿನ ‘ಜಾಗೃತಿ’ ವಾರ್ಷಿಕ ಸಂಚಿಕೆ ಬಿಡುಗಡೆ – ಕಹಳೆ ನ್ಯೂಸ್

ಪುತ್ತೂರು.ಸೆ,3: ಇಲ್ಲಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ, (ಸ್ವಾಯತ್ತ) ಇದರ ಜಾಗೃತಿ ಸಮಿತಿ, ಸೌರಭ ಪ್ರಸಾರಾಂಗ ಹಾಗೂ ಐಕ್ಯೂಎಸಿ ಘಟಕದ ಜಂಟಿ ಆಶ್ರಯದಲ್ಲಿ 2026-27ನೇ ಸಾಲಿನ ‘ಜಾಗೃತಿ’ ವಾರ್ಷಿಕ ಸಂಚಿಕೆಯ ಬಿಡುಗಡೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜು ಆಡಳಿತ ಮಂಡಳಿ ಸಂಚಾಲಕ ಮುರಳಿ ಕೃಷ್ಣ .ಕೆ. ಎನ್ ಮಾತನಾಡಿ, ಕಥೆ, ಕವನ, ಲೇಖನ ಮುಂತಾದ ವಿವಿಧ ಬರಹ ಪ್ರಕಾರಗಳನ್ನು ದಾಖಲಿಸಲು ಈ ವಾರ್ಷಿಕ ಸಂಚಿಕೆಯು ಬಹುದೊಡ್ಡ...
ಸುದ್ದಿ

ಅಕ್ಷಯ ಪದವಿ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಆಹ್ವಾನಂ 2026 ಫ್ರೆಶರ್ಸ್ ಡೇ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ಅಕ್ಷಯ ಪದವಿ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಆಹ್ವಾನಂ 2026 ಫ್ರೆಶರ್ಸ್ ಡೇ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಜಯಂತ್ ನಡುಬೈಲು ರವರು, ವಿದ್ಯಾಭ್ಯಾಸದೊಂದಿಗೆ ಉತ್ತಮ ಕೌಶಲ್ಯಗಳನ್ನು ಬೆಳೆಸಿಕೊಳ್ಳುವುದಲ್ಲದೇ, ಸಮಯ ಪಾಲನೆ, ಶಿಸ್ತು ಹಾಗೂ ನಿರಂತರ ಪ್ರಯತ್ನಗಳೇ ಯಶಸ್ಸಿನ ಮೆಟ್ಟಿಲುಗಳು ಮತ್ತು ವಿದ್ಯಾರ್ಥಿ ಜೀವನವು ಭವಿಷ್ಯ ರೂಪಿಸುವ ಉತ್ತಮ ಹಂತವಾಗಿದ್ದು, ಈ ಅವಧಿಯನ್ನು ಕೌಶಲ್ಯಾಧರಿತ ಶಿಕ್ಷಣದೊಂದಿಗೆ,...
ಸುದ್ದಿ

ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನಲ್ಲಿ ಫಿಲೋ- ನೆಕ್ಸಾ 2026: ವಿಜ್ಞಾನ ಮತ್ತು ಪ್ರತಿಭೆಯ ಅನಾವರಣ – ಕಹಳೆ ನ್ಯೂಸ್

ಪುತ್ತೂರು : ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ವಿಜ್ಞಾನ ವೇದಿಕೆ ಆಯೋಜಿಸಿದ್ದ ಫಿಲೋ- ನೆಕ್ಸಾ 2026 ವಿಜ್ಞಾನೋತ್ಸವವು ವಿವಿಧ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳ ಉತ್ಸಾಹಭರಿತ ಭಾಗವಹಿಸುವಿಕೆಯೊಂದಿಗೆ ನಡೆಯಿತು. ವಿದ್ಯಾರ್ಥಿಗಳು ತಮ್ಮ ವೈಜ್ಞಾನಿಕ ಜ್ಞಾನ, ಸೃಜನಶೀಲತೆ, ಸಂವಹನ ಕೌಶಲ ಹಾಗೂ ತಂಡದ ಕಾರ್ಯಕ್ಷಮತೆಯನ್ನು ಪ್ರದರ್ಶಿಸಿದರು. ಕಾಲೇಜಿನ ಪ್ರಾಂಶುಪಾಲ ವಂ. ಡಾ. ಆ್ಯಂಟನಿ ಪ್ರಕಾಶ್ ಮೊಂತೇರೊ ಅಧ್ಯಕ್ಷತೆ ವಹಿಸಿ, ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯವನ್ನು ಗುರುತಿಸಿಕೊಂಡು ಲಭಿಸುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಸಾಧನೆಯತ್ತ ಮುನ್ನಡೆಯಬೇಕು....
ಸುದ್ದಿ

ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ ಮ್ಯಾನೇಜ್‌ಮೆಂಟ್ ಅಸೋಸಿಯೇಷನ್ ಉದ್ಘಾಟನೆ – ಕಹಳೆ ನ್ಯೂಸ್

ಪುತ್ತೂರು : ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ವ್ಯವಹಾರ ಆಡಳಿತ ಮತ್ತು ವೃತ್ತಿಪರ ಅಧ್ಯಯನ ವಿಭಾಗದ ಮ್ಯಾನೇಜ್‌ಮೆಂಟ್ ಅಸೋಸಿಯೇಷನ್‌ನ 2026–27ನೇ ಸಾಲಿನ ಚಟುವಟಿಕೆಗಳಿಗೆ ಎಸ್‌ಜೆಎಂ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು. ಕಾರ್ಯಕ್ರಮದ ಬಳಿಕ ‘ಸ್ಟಾರ್ಟ್‌ಅಪ್‌ಗಳು ಮತ್ತು ಉದ್ಯಮಗಳಲ್ಲಿ ಪ್ರತಿಭಾ ನಿರ್ವಹಣೆ’ ವಿಷಯದ ಕುರಿತು ಕಾರ್ಯಾಗಾರ ನಡೆಯಿತು. ಕಾಲೇಜಿನ ಪ್ರಾಂಶುಪಾಲ ವಂ. ಡಾ. ಆ್ಯಂಟನಿ ಪ್ರಕಾಶ್ ಮೊಂತೇರೊ ಅಧ್ಯಕ್ಷತೆ ವಹಿಸಿ, ವಿದ್ಯಾರ್ಥಿಗಳು ಅಸೋಸಿಯೇಷನ್‌ನ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ನಾಯಕತ್ವ ಗುಣ, ಉಪಕ್ರಮಶೀಲತೆ...
ಸುದ್ದಿ

ಉಡುಪಿ ವಲಯ ಮಟ್ಟದ ಶಿಕ್ಷಕರ ದಿನಾಚರಣೆ ಸಂಭ್ರಮ : ನಿವೃತ್ತ ಶಿಕ್ಷಕರು, ದಾನಿಗಳಿಗೆ ಗೌರವ : ಅಗಲಿದ ಶಿಕ್ಷಕರಿಗೆ ಭಾವಪೂರ್ಣ ಶ್ರದ್ಧಾಂಜಲಿ – ಕಹಳೆ ನ್ಯೂಸ್

ಉಡುಪಿ: ಬದಲಾಗುತ್ತಿರುವ ತಂತ್ರಜ್ಞಾನದ ಕಾಲಘಟ್ಟಕ್ಕೆ ಶಿಕ್ಷಕರು ತಮ್ಮನ್ನು ತಾವು ರೂಪಿಸಿಕೊಂಡು, ಒತ್ತಡದ ನಡುವೆಯೂ ಶಾಂತ ಮನಸ್ಸಿನಿಂದ ಕಾರ್ಯನಿರ್ವಹಿಸಿದಾಗ ಮಾತ್ರ ಪರಿಣಾಮಕಾರಿ ಬೋಧನೆ ಸಾಧ್ಯ. ಶಿಕ್ಷಕರು ವ್ಯವಧಾನ, ಸಹನೆ ಹಾಗೂ ಎಲ್ಲರೊಂದಿಗೆ ಬೆರೆಯುವ ಗುಣವನ್ನು ಬೆಳೆಸಿಕೊಂಡು ಉತ್ತಮ ಸಮಾಜ ನಿರ್ಮಾಣದ ರೂವಾರಿಗಳಾಗಬೇಕು ಎಂದು ಪ್ರಧಾನ ಉಪನ್ಯಾಸಕ ಡಾ. ವಿರೂಪಾಕ್ಷ ದೇವರಮನೆ ಕರೆ ನೀಡಿದರು. ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ ವತಿಯಿಂದ 2026–27ನೇ ಸಾಲಿನ ಉಡುಪಿ ವಲಯ ಮಟ್ಟದ ಶಿಕ್ಷಕರ ದಿನಾಚರಣೆ...
ಸುದ್ದಿ

ಉಚಿತ ಆಂಬ್ಯುಲೆನ್ಸ್ ಸೇವೆ ಲೋಕಾರ್ಪಣೆ: ಶಿರ್ವ ಮತ್ತು ಸುತ್ತಮುತ್ತಲಿನ ಸಾರ್ವಜನಿಕರ ಉಚಿತ ಬಳಕೆಗೆ ನೂತನ ವಾಹನ ಸಮರ್ಪಣೆ

​ಶಿರ್ವ: ಶ್ರೀ ಕೆ. ಮನೋಹರ ಶೆಟ್ಟಿ ಮಂದಾರ ಅವರ ನೇತೃತ್ವದಲ್ಲಿ ಹಾಗೂ ಶಿರ್ವದ ಸಮಸ್ತ ನಾಗರಿಕರ ಅಭೂತಪೂರ್ವ ಸಹಕಾರದೊಂದಿಗೆ ನೂತನವಾಗಿ ಖರೀದಿಸಲಾದ ಉಚಿತ ಆಂಬ್ಯುಲೆನ್ಸ್ ವಾಹನದ ಲೋಕಾರ್ಪಣೆ ಕಾರ್ಯಕ್ರಮವು ಕೊಲ್ಲಬೆಟ್ಟು ಸಂಘಮಿತ್ರ ರವೀಂದ್ರ ಶೆಟ್ಟಿ ಅವರ ನಿವಾಸದಲ್ಲಿ ಯಶಸ್ವಿಯಾಗಿ ಜರುಗಿತು. ​ಶಿರ್ವ ಹಾಗೂ ಅದರ ಆಸುಪಾಸಿನ ಗ್ರಾಮಗಳ ಸಾರ್ವಜನಿಕರ ತುರ್ತು ಆರೋಗ್ಯ ಸೇವೆ ಮತ್ತು ಉಚಿತ ಉದ್ಯೋಗಕ್ಕಾಗಿ ಈ ಆಂಬ್ಯುಲೆನ್ಸ್ ವಾಹನವನ್ನು ಮುಕ್ತಗೊಳಿಸಲಾಗಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಸಕರಾದ ಗುರ್ಮೆ...
ಸುದ್ದಿ

ಮರ್ದಾಳದ ಕುಂಡಡ್ಕ ಫಾಲ್ಸ್ ಗೆ ಸಂಬಂಧಿಸಿದ ಹಿಂದೂ ಪರ ಸಂಘಟನೆಯ ಕಾರ್ಯಕರ್ತರ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆ ; ಹಿರಿಯ ನ್ಯಾಯವಾದಿ ಡಾ. ಅರುಣ್ ಶ್ಯಾಮ್ ವಾದ – ಕಹಳೆ ನ್ಯೂಸ್

ಕಡಬ ಬಂಟ್ರ ಗ್ರಾಮದ ಮರ್ದಾಳ ಕುಂಡಡ್ಕ ಫಾಲ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತಡೆ ನೀಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚಿಗೆ ಹಲವಾರು ಅನುಮಾನಗಳು ವ್ಯಕ್ತವಾಗಿದ್ದವು, ಅದರಲ್ಲೂ ದಲಿತ ದೌರ್ಜನ್ಯ ಕಾಯ್ದೆಯ ದುರುಪಯೋಗಗೊಂಡ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಅಸಮಾನದನಕ್ಕೆ ಕಾರಣವಾಗಿದೆ, ಅದರಲ್ಲೂ ದಲಿತ ಸಮುದಾಯಕ್ಕೆ ಸೇರಿದ ಹಿಂದೂಪರ ಸಂಘಟನೆಯಲ್ಲಿ ತೊಡಗಿಕೊಂಡಿದ್ದ ಓರ್ವ ದಲಿತನ ವಿರುದ್ಧವೇ ಈ...
1 2 3 4 3,531
Page 2 of 3531