Sunday, June 14, 2026

ಸುದ್ದಿ

ಬೆಂಗಳೂರುರಾಜ್ಯಸುದ್ದಿ

ಆಪ್ತರ ಜೊತೆ ಇಂದು ಸಿದ್ದರಾಮಯ್ಯ ಸಭೆ! -ಕಹಳೆ ನ್ಯೂಸ್

ಬೆಂಗಳೂರು: ದೆಹಲಿಯಿಂದ ರಾಜಧಾನಿಗೆ ಮರಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡೆ ಹಾಗೂ ರಾಜ್ಯ ರಾಜಕೀಯ ವಲಯದಲ್ಲಿನ ಬೆಳವಣಿಗೆಗಳು ತೀವ್ರ ಕುತೂಹಲ ಕೆರಳಿಸಿವೆ. ದೆಹಲಿಯಿಂದ ವಿಶೇಷ ವಿಮಾನದಲ್ಲಿ ವಾಪಸ್ ಆದ ಬೆನ್ನಲ್ಲೇ ಮುಖ್ಯಮಂತ್ರಿಗಳ ಸರ್ಕಾರಿ ನಿವಾಸ ‘ಕಾವೇರಿ’ಯಲ್ಲಿ ತಡರಾತ್ರಿ ಸಣ್ಣ ಸಭೆ ನಡೆದಿದೆ. ಮಧ್ಯರಾತ್ರಿ 12 ಗಂಟೆಗೆ ಹೆಚ್‌ಎಎಲ್ ವಿಮಾನ ನಿಲ್ದಾಣಕ್ಕೆ  ಆಗಮಿಸಿದ ಸಿದ್ದರಾಮಯ್ಯನವರನ್ನು ಸಚಿವರಾದ ಕೃಷ್ಣಬೈರೇಗೌಡ ಹಾಗೂ ದಿನೇಶ್ ಗುಂಡೂರಾವ್ ಅವರು ಬರಮಾಡಿಕೊಂಡರು. ನಂತರ ಮುಖ್ಯಮಂತ್ರಿಗಳ ಕಾರಿನಲ್ಲೇ ಸಚಿವ ಜಮೀರ್...
ರಾಜ್ಯಸುದ್ದಿ

ಡಿಕೆಶಿ ಹೇಳಿಕೆಗೆ ವಿರೋಧ : ಮೋದಿಗೆ ಪತ್ರ ಬರೆದು ಮೇಕೆದಾಟು DPR ತಿರಸ್ಕರಿಸುವಂತೆ ವಿಜಯ್‌ ಒತ್ತಾಯ -ಕಹಳೆ ನ್ಯೂಸ್

ಚೆನ್ನೈ: ಕಾವೇರಿ ನದಿಗೆ ಅಡ್ಡಲಾಗಿ ಕರ್ನಾಟಕ ಸರ್ಕಾರದ  ಮಹತ್ವಾಕಾಂಕ್ಷೆಯ ಮೇಕೆದಾಟು ಜಲಾಶಯ ಯೋಜನೆಯ ಭೂಮಿ ಪೂಜೆ ಘೋಷಣೆಗೆ ತಮಿಳುನಾಡು  ಸರ್ಕಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಈ ಯೋಜನೆಗೆ ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದು ಎಂದು ಒತ್ತಾಯಿಸಿ ತಮಿಳುನಾಡಿನ ಮುಖ್ಯಮಂತ್ರಿ ಜೋಸೆಫ್ ವಿಜಯ್  ಅವರು ಪ್ರಧಾನಿ ನರೇಂದ್ರ ಮೋದಿ  ಅವರಿಗೆ ಸುದೀರ್ಘ ಪತ್ರ ಬರೆದಿದ್ದಾರೆ. ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಸಾರ್ವಜನಿಕ ಹೇಳಿಕೆಗಳು ಹಾಗೂ ಭೂಮಿ ಪೂಜೆಯ  ಘೋಷಣೆಯು, ಜೀವನೋಪಾಯಕ್ಕಾಗಿ ಕಾವೇರಿ...
ಸುದ್ದಿ

ಜೋಕ್ ಮಾಡಿ ನಕ್ಕಿದ್ದ ಮೂವರು ಐಪಿಎಸ್ ಅಧಿಕಾರಿಗಳ ಸಸ್ಪೆಂಡ್ ಮಾಡಿದ ಮುಖ್ಯಮಂತ್ರಿ ವಿಜಯ್..!!-ಕಹಳೆ ನ್ಯೂಸ್

ತಮಿಳುನಾಡಿನಲ್ಲಿ ಇತ್ತೀಚೆಗೆ ನಡೆದ ಹತ್ತು ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಆದರೆ, ಇಂತಹ ಅತ್ಯಂತ ಸೂಕ್ಷ್ಮ ಹಾಗೂ ದಾರುಣ ಘಟನೆಯ ತನಿಖೆ ನಡೆಸುವಾಗ ಜವಾಬ್ದಾರಿಯುತ ಸ್ಥಾನದಲ್ಲಿದ್ದ ಮೂವರು ಐಪಿಎಸ್ (IPS) ಅಧಿಕಾರಿಗಳು ನಡೆದುಕೊಂಡ ರೀತಿ ಈಗ ತೀವ್ರ ವಿವಾದಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ವಿಜಯ್ ಅವರು ಆ ಮೂವರನ್ನೂ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಿ ಆದೇಶಿಸಿದ್ದಾರೆ. ಅಸಲಿಗೆ ನಡೆದಿದ್ದೇನು?...
ಸುದ್ದಿ

ಎಸ್.ಡಿ.ಎಂ. ಸಂಸ್ಥೆಗಳ ಸಾಧನೆಗಳ ಅನಾವರಣ: Institutions of Legacy’ ಕಾಫಿ ಟೇಬಲ್ ಪುಸ್ತಕ ಬಿಡುಗಡೆ ಹೆಗ್ಗಡೆಯವರಿಂದ ಲೋಕಾರ್ಪಣೆ-ಕಹಳೆ ನ್ಯೂಸ್

ಧರ್ಮಸ್ಥಳ -ಕಹಳೆ ನ್ಯೂಸ್: ಶ್ರೀ ಕ್ಷೇತ್ರ ಧರ್ಮಸ್ಥಳದ ಎಸ್‌ಡಿಎಂ ಸಂಸ್ಥೆಗಳ ಶೈಕ್ಷಣಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಪಯಣವನ್ನು ದಾಖಲಿಸುವ Institutions of Legacy ಕಾಫಿ ಟೇಬಲ್ ಪುಸ್ತಕವು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬಿಡುಗಡೆಗೊಂಡಿತು. Academic Insights ಸಂಸ್ಥೆಯ ವತಿಯಿಂದ ಪ್ರಕಟಿತ ಈ ಕೃತಿಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರು ಲೋಕಾರ್ಪಣೆಗೊಳಿಸಿದರು.   ಪುಸ್ತಕವನ್ನು ಬಿಡುಗಡೆಗೊಳಿಸಿ ಮಾತನಾಡಿದ ಡಾ. ಹೆಗ್ಗಡೆಯವರು, ಶ್ರೀ ರತ್ನವರ್ಮ ಹೆಗ್ಗಡೆಯವರ ದೂರದೃಷ್ಟಿಯ ನಾಯಕತ್ವದಲ್ಲಿ ಆರಂಭವಾದ...
ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವೀರಕಂಭ ಒಕ್ಕೂಟ ಅಧ್ಯಕ್ಷರಾಗಿ ಸುನಿಲ್ ನಾಯ್ಕ ಆಯ್ಕೆ-ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ)ವಿಟ್ಲ ಇದರ ಕಲ್ಲಡ್ಕ ವಲಯದ ವೀರಕಂಭ ಒಕ್ಕೂಟದ ನೂತನ ಅಧ್ಯಕ್ಷರಾಗಿ ಸುನಿಲ್ ನಾಯ್ಕ ಆಯ್ಕೆಯಾಗಿದ್ದಾರೆ. ವೀರಕಂಭ ಮಜಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಒಕ್ಕೂಟದ ಸಭೆಯಲ್ಲಿ ಈ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಪ್ರೇಮ ಕಾಣೆ ಕೋಡಿ, ಕಾರ್ಯದರ್ಶಿಯಾಗಿ ಅಖಿಲ ಮೈರಾ, ಜೊತೆ ಕಾರ್ಯದರ್ಶಿಯಾಗಿ ಸುರೇಶ್ ಮಜಿ, ಕೋಶಾಧಿಕಾರಿಯಾಗಿ ನೋಣಯ್ಯ ಎಂ ಆರ್ ಮಜಿ ರವರನ್ನು ಆಯ್ಕೆ...
ಸುದ್ದಿ

ʻಕಾಂತಾರʼ ದೈವಕ್ಕೆ ಅಪಮಾನ : ಚಾಮುಂಡಿ ತಾಯಿ ಎದುರು ತಲೆಬಾಗಿ ರಣವೀರ್‌ ಸಿಂಗ್‌ ಕ್ಷಮೆಯಾಚನೆ-ಕಹಳೆ ನ್ಯೂಸ್

ʻಕಾಂತಾರʼ ಚಾವುಂಡಿ ದೈವದ ಪಾತ್ರಕ್ಕೆ ಅಪಮಾನ ಮಾಡಿದ್ದ ಬಾಲಿವುಡ್‌ ನಟ ರಣವೀರ್ ಸಿಂಗ್ ಇದೀಗ ಮೈಸೂರಿನ  ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿ, ತಾಯಿಯೆದುರು ಕ್ಷಮೆಯಾಚಿಸಿದ್ದಾರೆ. ರಣವೀರ್‌ ಸಿಂಗ್‌ ಯಾರಿಗೂ ತಿಳಿಯದಂತೆ ಮೈಸೂರು ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿ ಪೂಜೆ ಸಲ್ಲಿಸಿ, ಕ್ಷಮೆಯಾಚಿಸಿದ್ದಾರೆ. ಈ ಪ್ರಕರಣ ಸಂಬಂಧ ಹೈಕೋರ್ಟ್ ವಿಚಾರಣೆ ನಡೆಸುತ್ತಿದ್ದಾಗ, ರಣವೀರ್ ಸಿಂಗ್ ಸ್ವತಃ ಎಕ್ಸ್‌ನಲ್ಲಿ ಕ್ಷಮೆ ಕೇಳಿದ್ದರು. ಜೊತೆಗೆ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ, ಕ್ಷಮೆ ಕೇಳುವುದಾಗಿ ತಿಳಿಸಿದ್ದರು....
ಸುದ್ದಿ

ಜನರಿಗೆ ಮತ್ತೆ ಶಾಕ್‌ ಶಾಕ್‌ : ಪೆಟ್ರೋಲ್‌, ಡೀಸೆಲ್‌ ಬಳಿಕ ಸಿಎನ್‌ಜಿ ದರ 2 ರೂ. ಏರಿಕೆ-ಕಹಳೆ ನ್ಯೂಸ್

ನವದೆಹಲಿ: ಪೆಟ್ರೋಲ್‌, ಡೀಸೆಲ್‌  ಬಳಿಕ ಇದೀಗ ದೆಹಲಿಯಲ್ಲಿ ಸಿಎನ್‌ಜಿ ದರವನ್ನು ಪ್ರತಿ ಕೆಜಿಗೆ 2 ರೂ.ಗಳಷ್ಟು ಏರಿಕೆ ಮಾಡಲಾಗಿದೆ. ದೆಹಲಿಯಲ್ಲಿ  ಇಂದು ಬೆಳಗ್ಗೆ 6 ಗಂಟೆಯಿಂದ ಜಾರಿಗೆ ಬರುವಂತೆ ಸಂಕುಚಿತ ನೈಸರ್ಗಿಕ ಅನಿಲ ಬೆಲೆಯನ್ನು 2 ರೂ. ಗಳಷ್ಟು ಹೆಚ್ಚಿಸಲಾಗಿದೆ. ಹೊಸ ಬೆಲೆಯ ಅನ್ವಯ ದೆಹಲಿಯಲ್ಲಿ ಪ್ರತಿ ಕೆಜಿ ಸಿಎನ್‌ಜಿ ಬೆಲೆ 8.09 ರೂ.ಗಳಿಗೆ ತಲುಪಿದೆ. ಜಾಗತಿಕ ಮತ್ತು ತೈಲ ಬಿಕ್ಕಟ್ಟಿನಿಂದ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ನಡುವೆಯೇ ಸಿಎನ್‌ಜಿ...
ಸುದ್ದಿ

ಪ್ರಪೋಸಲ್ ನಿರಾಕರಿಸಿದ್ದಕ್ಕೆ ಯುವತಿಯ ಮನೆ ಮೇಲೆ ಪ್ರೇಮಿಯಿಂದ ಬಾಂಬ್ ದಾಳಿ -ಕಹಳೆ ನ್ಯೂಸ್

ಕೊಯಮತ್ತೂರು: ಪ್ರೀತಿಯನ್ನು ನಿರಾಕರಿಸಿದಳು ಎಂಬ ಕಾರಣಕ್ಕೆ ಯುವತಿಯೊಬ್ಬಳ ಮನೆಗೆ ಯುವಕನೊಬ್ಬ ಪೆಟ್ರೋಲ್ ಬಾಂಬ್ ಎಸೆದಿರುವ ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ. ಘಟನೆಯ ಸಂಪೂರ್ಣ ದೃಶ್ಯಗಳು ಅಲ್ಲಿನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ತೊಂಡಾಮುತ್ತೂರು ಎಂಬ ಪ್ರದೇಶದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ವರದಿಗಳ ಪ್ರಕಾರ, ಆರೋಪಿ ಯುವಕ ಅದೇ ಭಾಗದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಆದರೆ ಯುವತಿ ಆತನ ಪ್ರೀತಿಯನ್ನು ನಿರಾಕರಿಸಿದ್ದಾಳೆ....
1 23 24 25 26 27 3,391
Page 25 of 3391