Thursday, March 12, 2026

ಸುದ್ದಿ

ಸುದ್ದಿ

ಸಾರಿಗೆ ನೌಕರರು ಸರ್ಕಾರದ ಪರಿಸ್ಥಿತಿ ಅರ್ಥಮಾಡಿಕೊಳ್ಳಿ: ಮುಷ್ಕರ ಕೈಬಿಡುವಂತೆ ಡಿಕೆಶಿ ಮನವಿ – ಕಹಳೆ ನ್ಯೂಸ್

ಬೆಂಗಳೂರು: ಸರ್ಕಾರದ ಪರಿಸ್ಥಿತಿಯನ್ನೂ ಸಾರಿಗೆಯವರು ಅರ್ಥ ಮಾಡಿಕೊಳ್ಳಬೇಕು. ದಯವಿಟ್ಟು ಸಾರಿಗೆ ನೌಕರರೆಲ್ಲ ಸಹಕಾರ ಮಾಡಬೇಕು ಎಂದು ಮುಷ್ಕರ ಕೈಬಿಡುವಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ. ಅಸ್ಸಾಂ ವಿಧಾನಸಭಾ ಚುನಾವಣಾ ವೀಕ್ಷಕರಾಗಿ ಬೆಂಗಳೂರಿನಿಂದ ಅಸ್ಸಾಂಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ ಅಷ್ಟು ಕೊಟ್ಟಿದ್ದಾರಲ್ಲ ಅದಕ್ಕೆ ಅವ್ರು ಖುಷಿ ಪಡಬೇಕು. ಸರ್ಕಾರದ ಪರಿಸ್ಥಿತಿಯನ್ನೂ ಸಾರಿಗೆಯವರು ಅರ್ಥ ಮಾಡಿಕೊಳ್ಳಬೇಕು ಎಂದು ತಿಳಿಸಿದರು. ಬೆಂಗಳೂರಲ್ಲಿ ಕಸದ ಸಮಸ್ಯೆ ವಿಚಾರವಾಗಿ ಮಾತನಾಡಿ, ಯಾರು ಕಸ...
ಸುದ್ದಿ

ಸೌತ್ ಕೆನರಾ ಫೋಟೋಗ್ರಾಫರ್ಸ್ ಕುಂದಾಪುರ-ಬೈಂದೂರು ವಲಯದ ಪದಪ್ರದಾನ ಸಮಾರಂಭ -ಕಹಳೆ ನ್ಯೂಸ್

ಉಡುಪಿ  : ಸೌತ್ ಕೆನರಾ ಫೊಟೋಗ್ರಾಫರ್ಸ್ ಆಸೋಸಿಯೇಶನ್(ರಿ.) ದ.ಕ.-ಉಡುಪಿ ಜಿಲ್ಲೆ, ಕುಂದಾಪುರ-ಬೈಂದೂರು ವಲಯದ 2025-27 ನೇ ಸಾಲಿನ ಪದಪ್ರದಾನ ಸಮಾರಂಭ ವಂಡ್ಸೆಯ ಶ್ರಿಯಾ ಕನ್ವೆನ್ಷನ್ ಹಾಲ್ ಇಲ್ಲಿ ಫೆ.17 ರಂದು ನಡೆಯಿತು. ವಂಡಾರು ಶ್ರೀಕೃಷ್ಣಪ್ರಸಾದ್ ಕ್ಯಾಶ್ಯೂಸ್ನ ಮಾಲಕರಾದ ಸಂಪತ್ ಕುಮಾರ್ ಶೆಟ್ಟಿ ಕಾರ್ಯಕ್ರಮವನ್ನು ದೀಪ ಬೆಳಗಿಸುವೂದರ ಮೂಲಕ ಉದ್ಘಾಟಿಸಿ ಮಾತನಾಡಿ ಛಾಯಾಗ್ರಾಹಕರು ಇಲ್ಲದೆ ಇದ್ದರೆ ನಮ್ಮ ಯಾವುದೇ ನೆನಪುಗಳನ್ನು ಸ್ಮರಿಸಿಕೊಳ್ಳಲು ಸಾಧ್ಯವಿಲ್ಲ, ಜೀವನದ ಯಾವುದೇ ಸಿಹಿ ಘಟನೆಗಳನ್ನು ನೀವು ತೆಗೆದಿರುವ...
ಸುದ್ದಿ

ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದ ಸಾವು – ಕಹಳೆ ನ್ಯೂಸ್

ಹಾಸನ: ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಹನುಮಂತಪುರ ಬಳಿಯ ಕಾರ್ಖಾನೆಯಲ್ಲಿ ನಡೆದಿದೆ. ಪುನೀತ್ (27) ಮೃತ ಯುವಕ. ಪುನೀತ್ ಕಳೆದ 6 ತಿಂಗಳಿನಿಂದ ಕಾರ್ಖಾನೆಯಲ್ಲಿ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದ. ಬುಧವಾರ ಎಂದಿನಂತೆಯೇ ಸಮವಸ್ತ್ರ ಧರಿಸಿ ಕೆಲಸಕ್ಕೆ ತೆರಳಿದ್ದ. ರಾತ್ರಿ ಪುನೀತ್ ಮೃತದೇಹವನ್ನು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ತಂದು ಪೊಲೀಸರು ಪೋಷಕರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಶವಾಗಾರದ ಬಳಿ ನೂರಾರು ಮಂದಿ ಜಮಾಯಿಸಿದ್ದಾರೆ....
ಸುದ್ದಿ

ಟೆಕ್ಕಿ ಮಾಜಿ ಪತ್ನಿಯ ಮನೆಗೆ ನುಗ್ಗಿ ಇರಿದು ಕೊಂದ ವ್ಯಕ್ತಿ – ಕಹಳೆ ನ್ಯೂಸ್

ಹೈದರಾಬಾದ್: ವ್ಯಕ್ತಿಯೊಬ್ಬ ಟೆಕ್ಕಿಯಾಗಿದ್ದ ತನ್ನ ಮಾಜಿ ಪತ್ನಿಯ ಮನೆಗೆ ನುಗ್ಗಿ ಆಕೆಗೆ ಚಾಕುವಿನಿಂದ ಇರಿದು ಕೊಂದಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ತನ್ನ ತಾಯಿಯ ಸಾವಿಗೆ 29 ವರ್ಷದ ಐಟಿ ಕಂಪನಿ ಉದ್ಯೋಗಿಯಾಗಿದ್ದ ಆ ಮಹಿಳೆಯೇ ಕಾರಣ ಎಂದು ವ್ಯಕ್ತಿ ಆರೋಪಿಸಿದ್ದಾನೆ. ಮಹಿಳೆಯ ಎರಡನೇ ಪತಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದು, ಆಕೆ ಮೂರು ತಿಂಗಳ ಗರ್ಭಿಣಿ ಎಂದು ಪೊಲೀಸರಿಗೆ ತಿಳಿಸಿದ್ದಾರೆ. 30 ರ ಹರೆಯದ ಕೊಲೆ ಆರೋಪಿ 2022 ರಲ್ಲಿ...
ಸುದ್ದಿ

ಪುತ್ತೂರಿನಲ್ಲಿ ರತ್ನಶ್ರೀ ಕ್ಯಾಟರರ್ಸ್ ಹೊಸ ಕಚೇರಿ ಉದ್ಘಾಟನೆ – 25 ವರ್ಷದ ಸಾಧನೆಗೆ ಸಂಭ್ರಮ -ಕಹಳೆ ನ್ಯೂಸ್

ಪುತ್ತೂರು : ಪುತ್ತೂರಿನ ತೆಂಕಿಲದಲ್ಲಿ ಪ್ರಸಿದ್ದ ಸಂಸ್ಥೆಯಾಗಿರುವ ರತ್ನಶ್ರೀ ಕ್ಯಾಟರರ್ಸ್ & ಅರೇಂಜರ್ಸ್‌ ತನ್ನ 25 ವರ್ಷಗಳ ಯಶಸ್ವಿ ಪಯಣವನ್ನು ಸಂಭ್ರಮಿಸುತ್ತಿದ್ದು, ಹೊಸ ಕಚೇರಿ ಉದ್ಘಾಟನೆಗೆ ಸಜ್ಜಾಗಿದೆ. ಗುಣಮಟ್ಟದ ಸೇವೆ, ನಂಬಿಕೆ ಮತ್ತು ವ್ಯವಸ್ಥಿತ ಕಾರ್ಯಪದ್ಧತಿಯಿಂದ ಗ್ರಾಹಕರ ಮನ ಗೆದ್ದಿರುವ ಈ ಸಂಸ್ಥೆ, ಇದೀಗ ತನ್ನ ವ್ಯವಹಾರವನ್ನು ವಿಸ್ತರಿಸುವ ನಿಟ್ಟಿನಲ್ಲಿ ಹೊಸ ಕಚೇರಿಯನ್ನು ಆರಂಭಿಸುತ್ತಿದೆ. ಹೊಸ ಕಚೇರಿ ಉದ್ಘಾಟನಾ ಕಾರ್ಯಕ್ರಮವು ಫೆ. 20 ರಂದು ಬೆಳಿಗ್ಗೆ 9.00 ಗಂಟೆಗೆ ನಡೆಯಲಿದೆ....
ಸುದ್ದಿ

ರಾಡ್‌ನಿಂದ ಪತ್ನಿಯ ಹತ್ಯೆಗೈದು ಮನೆಯಲ್ಲೇ ಹೂತುಹಾಕಿದ್ದ ಹಂತಕ ಪತಿ : 24 ದಿನಗಳ ಬಳಿಕ ಘಟನೆ ಬೆಳಕಿಗೆ – ಕಹಳೆ ನ್ಯೂಸ್

ವಿಜಯಪುರ: ಸಾಲದ ವಿಷಯಕ್ಕೆ ದಂಪತಿ ಮಧ್ಯೆ ನಡೆದ ಜಗಳ ತಾರಕಕ್ಕೇರಿ ರಾಡ್‌ನಿಂದ ಹೊಡೆದು ಪತ್ನಿಯನ್ನು ಹತ್ಯೆಗೈದು ಮನೆಯಲ್ಲೇ ಶವ ಹೂತುಹಾಕಿದ್ದ ಭಯಾನಕ ಘಟನೆ 24 ದಿನಗಳ ಬಳಿಕ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿಯಲ್ಲಿ ಬೆಳಕಿಗೆ ಬಂದಿದೆ. ಹಂತಕ ಪತಿಯನ್ನು ಪ್ರಭು ರತ್ನಾಕರ್ (46) ಹಾಗೂ ಮೃತ ಪತ್ನಿಯನ್ನು ಸರೋಜಿನಿ ರತ್ನಾಕರ (45) ಎಂದು ಗುರುತಿಸಲಾಗಿದೆ. ಈ ಸಂಬಂಧ ಸರೋಜಿನಿ ತಾಯಿ ಕಮಲವ್ವ ಅವರು ದೇವರಹಿಪ್ಪರಗಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ...
ಸುದ್ದಿ

ವ್ಯಾಲೆಂಟೈನ್ಸ್ ಡೇ ಸೆಲಬ್ರೇಟ್‌ ಮಾಡಿ ಗರ್ಭಿಣಿ ಪತ್ನಿ ಕೊಂದ ಪತಿ – ದರೋಡೆಯಂತೆ ನಾಟಕ, ವಿಚಾರಣೆ ವೇಳೆ ಸತ್ಯ ಬಯಲು – ಕಹಳೆ ನ್ಯೂಸ್

ಗುರುಗ್ರಾಮ: ವ್ಯಾಲೆಂಟೈನ್ಸ್ ಡೇ ಆಚರಣೆ ಮಾಡಿದ ಕೆಲವೇ ಗಂಟೆಗಳ ನಂತರ ಗರ್ಭಿಣಿಯಾಗಿದ್ದ ತನ್ನ ಹೆಂಡತಿಯನ್ನು ಕೊಂದು, ದರೋಡೆಯಂತೆ ನಾಟಕ ಮಾಡಿದ ಆರೋಪದ ಮೇಲೆ ಚಾರ್ಟರ್ಡ್ ಅಕೌಂಟೆಂಟ್ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಹರಿಯಾಣದ ಝಜ್ಜರ್ ಜಿಲ್ಲೆಯ ಬಡ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪೀಡಿತೆ ಮೇಹಕ್ (27 ವರ್ಷ), ಗುರುಗ್ರಾಮ್‌ನಲ್ಲಿ ಖಾಸಗಿ ಬ್ಯಾಂಕ್‌ನಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು. ಅವರು ಎರಡು ತಿಂಗಳ ಗರ್ಭಿಣಿಯಾಗಿದ್ದರು. ಆರೋಪಿ ಅಂಶುಲ್ ಧವನ್...
ಸುದ್ದಿ

ಭಾರತಕ್ಕೆ ಭೇಟಿ ನೀಡುವಂತೆ ಬಾಂಗ್ಲಾದೇಶ ಪ್ರಧಾನಿಗೆ ಮೋದಿ ಆಹ್ವಾನ – ಕಹಳೆ ನ್ಯೂಸ್

ನವದೆಹಲಿ: ಬಾಂಗ್ಲಾದೇಶದ ಪ್ರಧಾನಿ ತಾರಿಕ್‌ ರೆಹಮಾನ್‌ ಅವರಿಗೆ ಕುಟುಂಬ ಸಮೇತ ಭಾರತಕ್ಕೆ ಭೇಟಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಆಹ್ವಾನ ನೀಡಿದ್ದಾರೆ. ರೆಹಮಾನ್ ಅವರಿಗೆ ಬರೆದ ಪತ್ರದಲ್ಲಿ, ಪ್ರಧಾನಿ ಮೋದಿ ಅವರು ಎರಡೂ ರಾಷ್ಟ್ರಗಳ ನಡುವಿನ ಬಹುಮುಖಿ ದ್ವಿಪಕ್ಷೀಯ ಸಂಬಂಧವನ್ನು ಮತ್ತಷ್ಟು ಬಲಪಡಿಸಲು ಬಿಎನ್‌ಪಿ ನಾಯಕರೊಂದಿಗೆ ನಿಕಟವಾಗಿ ಕೆಲಸ ಮಾಡುವ ಬಯಕೆಯನ್ನು ವ್ಯಕ್ತಪಡಿಸಿದ್ದಾರೆ. ಎರಡು ಆಪ್ತ ನೆರೆಹೊರೆಯವರಾದ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಸಾಂಸ್ಕೃತಿಕ ಸಂಬಂಧಗಳು, ಶಾಂತಿ ಮತ್ತು ಸಮೃದ್ಧಿಯ...
1 24 25 26 27 28 3,288
Page 26 of 3288