Recent Posts

Monday, June 8, 2026

ಸುದ್ದಿ

ಸುದ್ದಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಕಟಪಾಡಿ ಎಸ್.ವಿ.ಎಸ್. ವಿದ್ಯಾವರ್ಧಕ ಸಂಘ ಉಡುಪಿ ಸಾಮಾಜಿಕ ಅರಣ್ಯ ವಿಭಾಗದ ವತಿಯಿಂದ ವಿಶ್ವ ಪರಿಸರ ದಿನಾಚರಣೆ – ಕಹಳೆ ನ್ಯೂಸ್

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಕಟಪಾಡಿ ಎಸ್.ವಿ.ಎಸ್. ವಿದ್ಯಾವರ್ಧಕ ಸಂಘ ಉಡುಪಿ ಸಾಮಾಜಿಕ ಅರಣ್ಯ ವಿಭಾಗದ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಎಸ್.ವಿ.ಎಸ್‌. ವಿದ್ಯಾಸಂಸ್ಥೆಯ ಆವರಣದಲ್ಲಿ ಅರಣ್ಯ ಇಲಾಖೆ ಯಿಂದ ರ್ ಫ್ ಓ ಅನುಷಾ ಭಟ್ ವದ ಗಿಸಿರುವ 200 ಗಿಡಗಳನ್ನು ಶುಕ್ರವಾರ ನಾಟಿ ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಉಡುಪಿ ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಕೆ. ಸತ್ಯೇಂದ್ರ ಪೈ, ಕಾಡು...
ಜಿಲ್ಲೆದಕ್ಷಿಣ ಕನ್ನಡಶಿಕ್ಷಣಸುದ್ದಿಸುಳ್ಯ

ನೆಹರು ಸ್ಮಾರಕ ಕಾಲೇಜಿನ ಎನ್‌ಸಿಸಿ ಅಧಿಕಾರಿ ಸೀತಾರಾಮ ಎಂ.ಡಿ. ಅವರಿಗೆ ಕ್ಯಾಪ್ಟನ್ ಹುದ್ದೆಗೆ ಬಡ್ತಿ – ಕಹಳೆ ನ್ಯೂಸ್

ಸುಳ್ಯ : ಸುಳ್ಯದ ನೆಹರು ಸ್ಮಾರಕ ಕಾಲೇಜಿನ ಎನ್‌ಸಿಸಿ ಅಧಿಕಾರಿ ಲೆಫ್ಟಿನೆಂಟ್ ಸೀತಾರಾಮ ಎಂ.ಡಿ. ಅವರು ಕ್ಯಾಪ್ಟನ್ ಹುದ್ದೆಗೆ ಬಡ್ತಿ ಹೊಂದಿದ್ದು, ಈ ಸಂಬಂಧದ ಪಿಪ್ಪಿಂಗ್ ಸಮಾರಂಭವು ಜೂನ್ 5, 2026ರಂದು ಮಡಿಕೇರಿಯ 19 ಕರ್ನಾಟಕ ಬೆಟಾಲಿಯನ್ ಎನ್‌ಸಿಸಿ ಕೇಂದ್ರದಲ್ಲಿ ಗೌರವಯುತವಾಗಿ ನಡೆಯಿತು. ಕಳೆದ ಸುಮಾರು ಹನ್ನೊಂದು ವರ್ಷಗಳಿಂದ ನೆಹರು ಸ್ಮಾರಕ ಕಾಲೇಜಿನಲ್ಲಿ ಎನ್‌ಸಿಸಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಸೀತಾರಾಮ ಎಂ.ಡಿ. ಅವರು ತಮ್ಮ ಕರ್ತವ್ಯನಿಷ್ಠೆ, ಶಿಸ್ತುಬದ್ಧತೆ, ನಾಯಕತ್ವ ಗುಣಗಳು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಬಲರಾಮ ಆಚಾರ್ಯ ಅವರ 70ನೇ ಹುಟ್ಟುಹಬ್ಬ ವಿಶೇಷ ಸಂಭ್ರಮದಿಂದ ಆಚರಣೆ -ಕಹಳೆ ನ್ಯೂಸ್

ಪುತ್ತೂರು: ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಹಾಗೂ ಜಿ.ಎಲ್. ಸಮೂಹ ಸಂಸ್ಥೆಗಳ ಮಾಲಕರಾದ ಬಲರಾಮ ಆಚಾರ್ಯ ಅವರ 70ನೇ ಹುಟ್ಟುಹಬ್ಬವನ್ನು ಸಂಸ್ಥೆಯಲ್ಲಿ ವಿಶೇಷ ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ರಾಜಿ ಬಲರಾಮ ಆಚಾರ್ಯ, ಲಕ್ಷ್ಮೀಕಾಂತ್ ಬಿ ಆಚಾರ್ಯ, ವೇದಾ ಲಕ್ಷ್ಮೀಕಾಂತ್ ಆಚಾರ್ಯ, ಸುಧಾನ್ವ ಬಿ ಆಚಾರ್ಯ, ಮೇಘಾ ಸುಧಾನ್ವ ಆಚಾರ್ಯ, ನಂದಿತಾ ಆಚಾರ್ಯ ಹಾಗೂ ವಿಜೇಶ್ ಉಪಸ್ಥಿತರಿದ್ದರು. ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್, ಹೋಟೆಲ್ ರಾಮ, ಜಿ.ಎಲ್. ಪ್ರಾಪರ್ಟೀಸ್...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಪ್ರತ್ಯೇಕ 2 ಪ್ರಕರಣಗಳಲ್ಲಿ ಡ್ರಗ್ ಸರಬರಾಜು ಮಾಡುತ್ತಿದ್ದ ಆರೋಪಿಗಳ ಸೆರೆ-ಕಹಳೆ ನ್ಯೂಸ್

ಮಂಗಳೂರು ನಗರದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕವಸ್ತು ಎಂಡಿಎಂಎ (MDMA) ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ನಗರ ಅಪರಾಧ ವಿಭಾಗ (CCB) ಪೊಲೀಸರು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಬಂಧಿಸಿದ್ದು, ಅವರಿಂದ ಒಟ್ಟು 164 ಗ್ರಾಂ ಎಂಡಿಎಂಎ ಮಾದಕವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಮಾದಕವಸ್ತುವಿನ ಒಟ್ಟು ಮೌಲ್ಯ ಸುಮಾರು ₹16,40,000 ಎಂದು ಅಂದಾಜಿಸಲಾಗಿದೆ. ಬೆಂಗಳೂರು ನಗರದಿಂದ ಎಂಡಿಎಂಎ ಮಾದಕವಸ್ತುವನ್ನು ಖರೀದಿಸಿ ಮಂಗಳೂರು ನಗರಕ್ಕೆ ತಂದು ಹೊಯಿಗೆ ಬಜಾರ್ ಪರಿಸರದಲ್ಲಿರುವ ಮನೆಯಿಂದ...
ದೆಹಲಿರಾಜ್ಯಸುದ್ದಿ

ದೆಹಲಿ ರೆಸ್ಟೋರೆಂಟ್‌ನಲ್ಲಿ ಅಗ್ನಿ ದುರಂತ : ಮತ್ತೊಬ್ಬ ಆರೋಪಿ ಬಂಧನ -ಕಹಳೆ ನ್ಯೂಸ್

ನವದೆಹಲಿ: ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ರೆಸ್ಟೋರೆಂಟ್‌ನಲ್ಲಿ ಸಂಭವಿಸಿದ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನ ಪೊಲೀಸರು  ಬಂಧಿಸಿದ್ದಾರೆ. ಹೋಟೆಲ್‌ನಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ದಿಲ್ಶಾದ್ ಗಾರ್ಡನ್ ನಿವಾಸಿ ಕೇಶವ್ ನೇಗಿ (65) ಬಂಧಿತ ಆರೋಪಿ. ಈ ಅಗ್ನಿ ದುರಂತಕ್ಕೆ ಹೋಟೆಲ್‌ನ ಅಡುಗೆಯವರ ನಿರ್ಲಕ್ಷ್ಯವೇ ಮುಖ್ಯ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಆದ್ದರಿಂದ ಅಡುಗೆ ಕೆಲಸಗಾರನನ್ನ ಬಂಧಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಏನಾಗಿತ್ತು ಆ ದಿನ? ಇದೇ ತಿಂಗಳ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ಬಂದರಿನಲ್ಲಿ ಲಂಗರು ಹಾಕಿದ ಬೋಟ್‌ಗಳು: ಊರಿನತ್ತ ಕಾರ್ಮಿಕರು -ಕಹಳೆ ನ್ಯೂಸ್

ಮಂಗಳೂರು : ಹರಾಜಿನ ಕೂಗು, ಬೋಟ್ ಗಳ ಎಂಜಿನ್‌ಗಳ ಸದ್ದು, ಟೆಂಪೋ - ಲಾರಿಗಳ ಓಡಾಟ ಹಾಗೂ ಕಾರ್ಮಿಕರ ಗದ್ದಲಗಳಿಂದ ಗಿಜಿಗುಡುತ್ತಿದ್ದ ಮಂಗಳೂರಿನ ಮೀನುಗಾರಿಕ ದಕ್ಕೆ ಇದೀಗ ಸ್ತಬ್ಧವಾಗಿದೆ. ವಾರ್ಷಿಕ ಮೀನುಗಾರಿಕೆ ಋತು ಅಂತ್ಯಗೊಂಡಿರುವ ಹಿನ್ನೆಲೆಯಲ್ಲಿ ಬಂದರಿನ ಬಹುತೇಕ ಚಟುವಟಿಕೆಗಳು ಸ್ಥಗಿತಗೊಂಡಿದ್ದು, ಬಂದರು ಪ್ರದೇಶದಲ್ಲಿ ನೀರವ ಮೌನವಿದೆ. ರಾಜ್ಯದಲ್ಲಿ ಜೂ. 1ರಿಂದ ಜು.31ರ ವರೆಗೆ ಎರಡು ತಿಂಗಳ ಕಾಲ ಯಾಂತ್ರೀಕೃತ ಹಾಗೂ ಟ್ರಾಲ್ ಬೋಟ್ ಗಳ ಮೀನುಗಾರಿಕೆಗೆ ನಿಷೇಧ ಜಾರಿಯಲ್ಲಿದೆ....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಜಯಕರ್ನಾಟಕ ಜನಪರ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ವಿತರಣೆ ಮತ್ತು ನೆಡುವ ಕಾರ್ಯಕ್ರಮ -ಕಹಳೆ ನ್ಯೂಸ್

ವಿಟ್ಲ: ಜಯಕರ್ನಾಟಕ ಜನಪರ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಸಂಸ್ಥಾಪಕ ಅಧ್ಯಕ್ಷರಾದ ಬಿ. ಗುಣರಂಜನ್ ಶೆಟ್ಟಿಯವರ ಮಾರ್ಗದರ್ಶನದಲ್ಲಿ ದಿನಾಂಕ 05-06-2026ರ, ಶುಕ್ರವಾರದಂದು ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ, ಪ್ರಕೃತಿಯನ್ನು ಉಳಿಸಿ, ಮುಂದಿನ ಪೀಳಿಗೆಗೆ ಮಾದರಿಯಾಗುವ ಉದ್ದೇಶದಿಂದ ಗಿಡ ವಿತರಣೆ ಮತ್ತು ನೆಡುವ ಕಾರ್ಯಕ್ರಮ ಜಿಲ್ಲೆಯ ವಿವಿಧ ಭಾಗಗಳಲ್ಲಿ ನಡೆಯಿತು. ವಿಟ್ಲ ಸಮುದಾಯ ಅರೋಗ್ಯ ಕೇಂದ್ರದ ಮೆಡಿಕಲ್ ಆಫೀಸರ್ ಡಾ. ಶಮನ್ ಜೆ ಶೆಟ್ಟಿಯವರಿಗೆ ಗಿಡ ನೀಡಲಾಯಿತು. ವಿಟ್ಲ ಪೊಲೀಸ್...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೃಟಿಕಲ್ ಫಂಡ್ ಸಹಾಯಧನ ಹಸ್ತಾಂತರ -ಕಹಳೆ ನ್ಯೂಸ್

ವಿಟ್ಟ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ ) ವಿಟ್ಲ ಇದರ ಮಾಣಿ ವಲಯದ ಅನಂತಾಡಿ ಕಾರ್ಯಕ್ಷೇತ್ರ ದ ಮಹಾಲಿಂಗೇಶ್ವರ ತಂಡದ ಪೂವಪ್ಪ ಮಡಿವಾಳ ರವರಿಗೆ ಅನಾರೋಗ್ಯದಿಂದ ಬಳಲುತ್ತಿದ್ದು ಇವರಿಗೆ ಯೋಜನೆ ವತಿಯಿಂದ ಮಂಜೂರಾದ ರೂ 25000/_ ಕೃಟಿಕಲ್ ಫಂಡ್ ಮೊತ್ತವನ್ನು ಗ್ರಾಮಾಭಿವೃದ್ಧಿ ಯೋಜನೆಯ ದಕ್ಷಿಣ ಕನ್ನಡ ಜಿಲ್ಲೆ - 2 ರ ಜಿಲ್ಲಾ ನಿರ್ದೇಶಕರದ ಬಾಬು ನಾಯ್ಕ್ ವಿತರಿಸಿದರು. ಈ ಸಂದರ್ಭದಲ್ಲಿ ವಿಟ್ಲ...
1 2 3 4 5 3,384
Page 3 of 3384