ಬಹಿರಂಗ ಸಭೆಯಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಕಣ್ಣೀರು | ರಮಾನಾಥ ರೈ ವಿರುದ್ಧ ಸಿಡಿದೆದ್ದ ಬಿಲ್ಲವರು
ಮಂಗಳೂರು: ಸಚಿವ ರಮಾನಾಥ ರೈ ತನ್ನ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎನ್ನಲಾದ ವಿಚಾರದ ಬಗ್ಗೆ ತಿಳಿದು ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ತೀರಾ ಗದ್ಗದಿತರಾಗಿ ಕಣ್ಣೀರಿಟ್ಟ ಪ್ರಸಂಗ ನಡೆದಿದೆ. ಬಂಟ್ವಾಳದಲ್ಲಿ ನಡೆದ ಬಿಲ್ಲವ ಸಂಘದ ಕಾರ್ಯಕ್ರಮದಲ್ಲಿ ಜನಾರ್ದನ ಪೂಜಾರಿ ಮತ್ತು ಅವರ ಆಪ್ತ ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ್ ಪಾಲ್ಗೊಂಡಿದ್ದರು. ಹರಿಕೃಷ್ಣ ಬಂಟ್ವಾಳ್ ವೇದಿಕೆಯಲ್ಲಿ ಮಾತನಾಡುತ್ತಾ, ಸಚಿವ ರಮಾನಾಥ ರೈ ನಡೆಯ ಬಗ್ಗೆ...







