ರಾಷ್ಟ್ರಪತಿ ಭಾಷಣದಲ್ಲಿಯೂ ರಾಜಕೀಯ ಮಾಡಿದ ರಾಜ್ಯ ಸರ್ಕಾರ | ಟಿಪ್ಪು ಹೆಸರು ಬಳಸಿಕೊಂಡ ಸಿದ್ದು ಸರ್ಕಾರ..?
ಬೆಂಗಳೂರು : ವಿಧಾನಸೌಧದ ವಜ್ರಮಹೋತ್ಸವದ ಭಾಷಣ ಕಾಂಗ್ರೆಸ್ ಸಂಭ್ರಮಕ್ಕೆ ಕಾರಣವಾದರೆ, ಬಿಜೆಪಿಯವರ ತೀವ್ರ ಮುಜುಗರಕ್ಕೆ ಕಾರಣವಾಯ್ತು. ಮೊದಲ ಬಾರಿಗೆ ವಿಶೇಷ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಬ್ರಿಟಿಷರ ವಿರುದ್ಧ ಹೋರಾಡಿ ಟಿಪ್ಪು ಸುಲ್ತಾನ್ ವೀರ ಮರಣವನ್ನಪ್ಪಿದ ಎಂದು ರಾಷ್ಟ್ರಪತಿ ಭಾಷಣದಲ್ಲಿ ಉಲ್ಲೇಖಿಸಿದರು. ಭಾಷಣದಲ್ಲಿ ಟಿಪ್ಪುಸುಲ್ತಾನ್ ಬಗ್ಗೆ ಉಲ್ಲೇಖಿಸಿದ ರಾಷ್ಟ್ರಪತಿಗಳು, ಟಿಪ್ಪು ಕ್ಷಿಪಣಿ ತಂತ್ರಜ್ಞಾನದ ಜನಕ ಎಂದು ಹಾಡಿಹೊಗಳಿದರು. ಇದಕ್ಕೆ ಕಾಂಗ್ರೆಸ್ ಶಾಸಕರು ಮೇಜುಕುಟ್ಟಿ ಸ್ವಾಗತಿಸಿದರೆ, ಬಿಜೆಪಿ...







