Saturday, June 13, 2026

ಸುದ್ದಿ

ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆ ಪ್ರೌಢಶಾಲಾ ವಿಭಾಗದ ಶಾಲಾ ಮಂತ್ರಿ ಮಂಡಲ ರಚನೆ -ಕಹಳೆ ನ್ಯೂಸ್

ಪಟ್ಟೆ ಬಡಗನ್ನೂರು: ಪ್ರತಿಭಾ ಪ್ರೌಢಶಾಲೆ ಪಟ್ಟೆ ಇದರ 2026-27 ಶೈಕ್ಷಣಿಕ ವರ್ಷದ ಶಾಲಾ ಮಂತ್ರಿ ಮಂಡಲವನ್ನು ರಚಿಸಲಾಯಿತು. ಶಾಲಾ ಮುಖ್ಯಮಂತ್ರಿ ಯಾಗಿ 10ನೇ ತರಗತಿಯ ನಿಶಾಂತ್, ಉಪಮುಖ್ಯಮಂತ್ರಿಯಾಗಿ 9ನೇ ತರಗತಿಯ ಸೂರಜ್ ಪಿ.ಎಸ್ ಆಯ್ಕೆಯಾಗಿರುತ್ತಾರೆ. ಶಾಲಾ ವಿರೋಧ ಪಕ್ಷದ ನಾಯಕನಾಗಿ 9ನೇ ತರಗತಿಯ ವರುಣ್ ಕುಮಾರ್, ಗೃಹ ಮಂತ್ರಿಯಾಗಿ 9ನೇ ತರಗತಿಯ ಚರಣ್, 8ನೇ ತರಗತಿಯ ಭುವನ್ , ಸಾಂಸ್ಕೃತಿಕ ಮಂತ್ರಿಯಾಗಿ 9ನೇ ತರಗತಿಯ ಅಹನ, 8ನೇ ತರಗತಿಯ ಶ್ರೀಕಲಾ,...
ರಾಜ್ಯಸುದ್ದಿ

ಸಂಬಳವನ್ನು ತವರಿಗೆ ಕಳುಹಿಸುತ್ತಿದ್ದ ಹೆಂಡತಿ : 2 ಲಕ್ಷ ಸುಪಾರಿ ಕೊಟ್ಟು ಪತ್ನಿಯ ಹತ್ಯೆಗೈದ ಪತಿ – ಕಹಳೆ ನ್ಯೂಸ್

ಹೈದರಾಬಾದ್: ತಾನು ದುಡಿದ ಹಣವನ್ನು  ಪತ್ನಿ ತವರು ಮನೆಗೆ ಕಳುಹಿಸುತ್ತಿದ್ದಾಳೆ ಎಂದು ಕೋಪಗೊಂಡ ಪತಿ ಸುಪಾರಿ ಕೊಟ್ಟು ಹೆಂಡತಿಯನ್ನು  ಕೊಲೆ ಮಾಡಿಸಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಪತ್ನಿ ತನ್ನ ಆದಾಯವನ್ನು ತವರು ಮನೆಗೆ ಕಳುಹಿಸುತ್ತಿದ್ದಾಳೆ ಎಂಬ ಅಸಮಾಧಾನದಿಂದ ಪತಿ ಬಿಹಾರದಿಂದ ಸುಪಾರಿ ಹಂತಕರನ್ನು ಕರೆಸಿ ಕೊಲೆ ಮಾಡಿಸಿರುವುದಾಗಿ ತನಿಖೆಯಲ್ಲಿ ಬಹಿರಂಗವಾಗಿದೆ. ಬಿಹಾರ ಮೂಲದ ಅನಿಲ್ ಕುಮಾರ್ ಸಾಹ್ (38) ಮೇ 31ರಂದು ಪೊಲೀಸರಿಗೆ ದೂರು ನೀಡಿ, ತನ್ನ ಪತ್ನಿ ಮೀನಾ...
ಮಡಿಕೇರಿಸುದ್ದಿ

ಸಿನಿಮೀಯ ಶೈಲಿಯಲ್ಲಿ 40 ಅಡಿ ಕಂದಕಕ್ಕೆ ಉರುಳಿದ ಕಾರು : ಚಾಲಕ ಪಾರು -ಕಹಳೆ ನ್ಯೂಸ್

ಮಡಿಕೇರಿ: ಸಿನಿಮೀಯ ಶೈಲಿಯಲ್ಲಿ 40 ಅಡಿ ಆಳದ ಕಂದಕಕ್ಕೆ ಕಾರು (Car) ಉರುಳಿ ಬಿದ್ದ ಘಟನೆ ಮಡಿಕೇರಿ-ಮೂರ್ನಾಡು ರಸ್ತೆಯಲ್ಲಿ ನಡೆದಿದೆ. ಆಲ್ವೇಸ್ ಸರ್ವಿಸ್ ಸ್ಟೇಷನ್ ಸಮೀಪ ಘಟನೆ ನಡೆದಿದ್ದು, ಮೂರ್ನಾಡು ಕಡೆಯಿಂದ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಕಂದಕಕ್ಕೆ ಉರುಳಿ ಬಿದ್ದಿದೆ. ಅಪಘಾತದಿಂದ ವಾಹನಕ್ಕೆ ಭಾರೀ ಹಾನಿಯಾಗಿದೆ. ಕಾರಿನ ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಮಡಿಕೇರಿ ನಗರದ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ...
ದೆಹಲಿರಾಜ್ಯಸುದ್ದಿ

ಹಾರ್ಮುಜ್‌ ಬಳಿ ಹಡಗಿನ ಮೇಲೆ ಯುಎಸ್‌ ದಾಳಿ; ಮೂವರು ಭಾರತೀಯರು ಸಾವು -ಕಹಳೆ ನ್ಯೂಸ್

ನವದೆಹಲಿ: ಹಾರ್ಮುಜ್ ಜಲಸಂಧಿಯ ಬಳಿ ವಾಣಿಜ್ಯ ಹಡಗಿನ ಮೇಲೆ ದಾಳಿ ನಡೆದಿದ್ದು, ಮೂವರು ಭಾರತೀಯ ನಾವಿಕರು (Indian Sailors) ಸಾವನ್ನಪ್ಪಿದ್ದಾರೆ. ಒಮಾನ್‌ ಕರಾವಳಿಯಲ್ಲಿ ನಿನ್ನೆ 24 ಭಾರತೀಯ ನಾವಿಕರಿದ್ದ ಹಡಗಿನ ಮೇಲೆ‌ ದಾಳಿ ನಡೆದಿತ್ತು. ಇದರಲ್ಲಿ 21 ನಾವಿಕರನ್ನು ರಕ್ಷಣೆ ಮಾಡಿದ್ದರು. ಮೂವರು ನಾಪತ್ತೆಯಾಗಿದ್ದರು. ಈ ಮೂವರಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿದೆ ಎಂದು ಕೇಂದ್ರ ಸಚಿವ ಸರ್ಬಾನಂದ ಸೋನೋವಾಲ್ ಮಾಹಿತಿ ನೀಡಿದ್ದಾರೆ. ಟ್ಯಾಂಕರ್ ಇರಾನ್‌ನಿಂದ ತೈಲವನ್ನು ಸಾಗಿಸುತ್ತಿತ್ತು. ಸೂಚನೆಗಳನ್ನು ಪಾಲಿಸದ...
ಉಡುಪಿಜಿಲ್ಲೆಸಂತಾಪಸುದ್ದಿ

ತಾಯಿ ಮಡಿಲಲ್ಲಿದ್ದ ಕಂದಮ್ಮನ ಮೇಲೆ ಬಿದ್ದ ತೆಂಗಿನಕಾಯಿ : ಮಗು ದುರಂತ ಸಾವು – ಕಹಳೆ ನ್ಯೂಸ್

ಉಡುಪಿ: ತಾಯಿಯ ಮಡಿಲಲ್ಲಿದ್ದ ಕಂದಮ್ಮನ ಮೇಲೆ ತೆಂಗಿನಕಾಯಿ ಬಿದ್ದು, ಮಗು ದುರಂತ ಸಾವು ಕಂಡಿರುವ ಘಟನೆ ಉಡುಪಿಯಲ್ಲಿ (Udupi) ನಡೆದಿದೆ. ಒಂದೂವರೆ ವರ್ಷದ ದಕ್ಷ ಮೃತ ಮಗು. ಬ್ರಹ್ಮಾವರ ತಾಲೂಕು ಚಾಂತಾರು ಹೆರಂಜಾಲು ಗ್ರಾಮದಲ್ಲಿ ಘಟನೆ ನಡೆದಿದೆ. ಕಂದಮ್ಮನ ಅಕಾಲಿಕ ಮರಣಕ್ಕೆ ಗ್ರಾಮ ಕಂಬನಿ ಮಿಡಿದಿದೆ. ಪ್ರಶಾಂತ್ ಮತ್ತು ಸುಚಿತ್ರಾ ದಂಪತಿ ಎರಡನೇ ಪುತ್ರ ದಕ್ಷ. ಮಗುವನ್ನು ಮಡಿಲಲ್ಲಿ ಮಲಗಿಸಿಕೊಂಡು ತಾಯಿ ತೆಂಗಿನಮರದ ಕೆಳಗೆ ಕುಳಿತಿದ್ದರು. ಈ ವೇಳೆ, ಅಚಾನಕ್ ಆಗಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಮರಣದಂಡನೆ ಪ್ರಕರಣಗಳ ಪರಿಶೀಲನೆಗೆ ವಿಶೇಷ ಸಮಿತಿ ರಚಿಸಿದ ಹೈಕೋರ್ಟ್ : ಡಾ. ಅರುಣ್‌ಶ್ಯಾಮ್‌ ನೇಮಕ – ಕಹಳೆ ನ್ಯೂಸ್

ಪುತ್ತೂರು: ಮರಣದಂಡನೆ ವಿಧಿಸಲಾದ ಪ್ರಕರಣಗಳ ದೃಢೀಕರಣ ಮತ್ತು ಮೇಲ್ಮನವಿ ವಿಚಾರಣೆ ವೇಳೆ ಕಾನೂನು ನೆರವು ಒದಗಿಸಲು ಸುಪ್ರೀಂಕೋರ್ಟ್ ನಿರ್ದೇಶನದಂತೆ ಹೈಕೋರ್ಟ್ ಕಾನೂನು ಸೇವೆಗಳ ಪ್ರಾಧಿಕಾರ ಹಿರಿಯ ವಕೀಲ ಡಾ. ಅರುಣ್‌ಶ್ಯಾಮ್ ಪುತ್ತೂರು ನೇತೃತ್ವದಲ್ಲಿ ವಕೀಲರ ವಿಶೇಷ ಸಮಿತಿ ರಚಿಸಿದೆ. ಸುಪ್ರೀಂಕೋರ್ಟ್ ಮಾನದಂಡಗಳಂತೆ ರಚಿತವಾದ ಸಮಿತಿಯಲ್ಲಿ ಪದಾಂಕಿತ ಹಿರಿಯ ವಕೀಲರಾದ ಅರುಣ್ ಶ್ಯಾಮ್ ಅವರ ಜೊತೆ ನ್ಯಾಯವಾದಿಗಳಾದ ವೆಂಕಟೇಶ್ ಪಿ. ದಳವಾಯಿ ಮತ್ತು ಡಿ. ನಾಗರಾಜ ರೆಡ್ಡಿ ಅವರು ಕಾರ್ಯ ನಿರ್ವಹಿಸಲಿದ್ದಾರೆ....
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು : ರೌಡಿಶೀಟರ್‌ ಕಾಲಿಗೆ ಗುಂಡೇಟು -ಕಹಳೆ ನ್ಯೂಸ್

ಬೆಂಗಳೂರು: ಬೆಳ್ಳಂಬೆಳಗ್ಗೆ ನಗರದಲ್ಲಿ ಗುಂಡಿನ ಸದ್ದು ಕೇಳಿಬಂದಿದೆ. ರೌಡಿಶೀಟರ್‌ ಕಾಲಿಗೆ ಪೊಲೀಸರು ಗುಂಡೇಟು ನೀಡಿದ್ದಾರೆ. ಜೀವ (19) ಗುಂಡೇಟು ತಿಂದ ಆರೋಪಿ. ಸಿಂಗೇನಾ ಅಗ್ರಹಾರದ ತೋಪಿನಲ್ಲಿ ಹೆಬ್ಬಗೋಡಿ ಪೊಲೀಸರು ಫೈರಿಂಗ್‌ ಮಾಡಿದ್ದಾರೆ. ಗಾಯಗೊಂಡಿರುವ ಆರೋಪಿಯನ್ನು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿದ್ದಾರೆ. ಹೆಬ್ಬಗೋಡಿಯ ತಿರುಪಾಳ್ಯದಲ್ಲಿ ರೌಡಿಶೀಟರ್‌ ಜೀವ ವಾಸವಾಗಿದ್ದಾನೆ. ಕೊಲೆ, ಸುಲಿಗೆ, ದರೋಡೆ ಪ್ರಕರಣಗಳ ಪ್ರಮುಖ ಆರೋಪಿಯಾಗಿದ್ದಾನೆ. ಸಬ್‌ ಇನ್‌ಸ್ಪೆಕ್ಟರ್‌ ಅಯ್ಯಪ್ಪ ಅವರು ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ. ಕಳೆದ ವಾರ ಹೆಬ್ಬಗೋಡಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ: ಮೂವರು ಆರೋಪಿಗಳ ಬಂಧನ -ಕಹಳೆ ನ್ಯೂಸ್

ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ (MDMA) ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಜನನ್ ಜಗನ್ನಾಥ್ (29) ಮತ್ತು ಪರೀಕ್ಷಿತ್ (33) ಎಂದು ಗುರುತಿಸಲಾಗಿದೆ. ಗೂಡ್ ಶೆಡ್ಡೆ ಪ್ರದೇಶದಲ್ಲಿ ಸಾರ್ವಜನಿಕರಿಗೆ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ದಾಳಿ ನಡೆಸಿದರು. ಕಾರ್ಯಾಚರಣೆಯಲ್ಲಿ ಆರೋಪಿಗಳಿಂದ...
1 2 3 4 5 6 3,391
Page 4 of 3391