ಬೆಂಗಳೂರು ಏರ್ ಪೋರ್ಟ್ ನಲ್ಲಿ ಕೋಟ್ಯಂತರ ರೂಪಾಯಿ ಚಿನ್ನ, ವಜ್ರಾಭರಣ ಕಳ್ಳತನ: ಸಿಬ್ಬಂದಿಯಿಂದಲೇ ಕೃತ್ಯ ಶಂಕೆ-ಕಹಳೆ ನ್ಯೂಸ್
ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೋಟ್ಯಂತರ ರೂಪಾಯಿ ಚಿನ್ನಾಭರಣ, ವಜ್ರಾಭರಣಗಳು ಕಳ್ಳತನವಾಗಿರುವ ಘಟನೆ ನಡೆದಿದೆ.ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಬೆಂಗಳೂರಿನಿಂದ ದುಬೈಗೆ ತೆರಳುತ್ತಿದ್ದ ಮಹಿಳೆಯ ಬ್ಯಾಗ್ ನಲ್ಲಿದ್ದ ಚಿನ್ನಾಭರಣ, ವಜ್ರ ಕಳ್ಳತನವಾಗಿದೆ. ಮಹಿಳೆ ಚೆಕ್ ಇನ್ ನಲ್ಲಿ ಚಿನ್ನ ತೋರಿಸಿ ಬ್ಯಾಗ್ ಗೆ ಟ್ಯಾಗ್ ಮಾಡಿದ್ದರು. ಲಗೇಜ್ ಬ್ಯಾಗ್ ನಲ್ಲಿಟ್ಟಿದ್ದ ಚಿನ್ನ ದುಬೈಗೆ ಹೋಗುವಷ್ಟರಲ್ಲಿ ಮಾಯವಾಗಿದೆ. ಏರ್...







