Thursday, March 19, 2026

ಸುದ್ದಿ

ಸುದ್ದಿ

ಮಂಗಳೂರು ಐಸ್ ಕ್ರೀಮ್ ಪರ್ಬ 2026 – Season 3 -ಕಹಳೆ ನ್ಯೂಸ್

ಮಂಗಳೂರಿನ ಪಾಂಡೇಶ್ವರದಲ್ಲಿರುವ ಫಿಝಾ ಬೈ ನೆಕ್ಸಸ್ ಮಾಲ್  ಮತ್ತು ಮಂಗಳೂರಿನ ಪ್ರಸಿದ್ಧ ತಿಂಡಿ (Try Tinidi) Instagram ಪೇಜ್ ಸಹ ಭಾಗಿತ್ವದಲ್ಲಿ ಇದೇ ಬರುವ ಜನವರಿ 16, 17 ಮತ್ತು 18, 2026 ರಂದು 3 ದಿನಗಳ ಐಸ್ ಕ್ರೀಮ್ ಪರ್ಬವನ್ನು ಆಯೋಜಿಸಲಾಗಿದೆ. 3ನೇ ಅವ್ರತ್ತಿಯ ಐಸ್ ಕ್ರೀಮ್ ಪರ್ಬ ಇದಾಗಿದ್ದು ಮೂರೂ ದಿನ ಕೂಡ ಬೆಳಗ್ಗೆ 11 ರಿಂದ ರಾತ್ರಿ 9 ರವರೆಗೆ ನಡೆಯಲಿದೆ. ಮಂಗಳೂರನ್ನು ಐಸ್ ಕ್ರೀಮ್...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಕಾವ್ಯಶ್ರೀ ಅಜೀರು ಆಯ್ಕೆ , ಉಮೇಶ್ ಮಿಜಾರ್ ಗೆ ಕಲಾಭೂಷಣ ಪ್ರಶಸ್ತಿ-ಕಹಳೆ ನ್ಯೂಸ್

ಕಾರ್ಕಳ ಹಿರ್ಗಾನ ಶ್ರೀ ಕುಂದೇಶ್ವರ ಕ್ಷೇತ್ರದ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಶ್ರೀ ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಯಕ್ಷರಂಗದ ಅಗ್ರಮಾನ್ಯ ಮಹಿಳಾ ಭಾಗವತ ರಾದ ಕಾವ್ಯಶ್ರೀ ಅಜೇರು ಆಯ್ಕೆಯಾಗಿದ್ದಾರೆ. ಶ್ರೀಕುಂದೇಶ್ವರ ದೇಗುಲದ ಧರ್ಮದರ್ಶಿಯಾಗಿ, ಯಕ್ಷಗಾನ ಮೇಳ ಸಂಘಟಕ, ಕಲಾವಿದ, ಅರ್ಥಧಾರಿಯಾಗಿದ್ದ ದಿ.ರಾಘವೇಂದ್ರ ಭಟ್ ಸ್ಮರಣಾರ್ಥ, ಕ್ಷೇತ್ರದ ವತಿಯಿಂದ ಪ್ರಶಸ್ತಿ ನೀಡಲಾಗುತ್ತಿದೆ. ಜ.23ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಆಯ್ಕೆ ಸಮಿತಿ ಸಂಚಾಲಕ ಜಿತೇಂದ್ರ ಕುಂದೇಶ್ವರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಶ್ರೀ ಕುಂದೇಶ್ವರ ಕ್ಷೇತ್ರದಲ್ಲಿ...
ದೆಹಲಿರಾಜ್ಯಸುದ್ದಿ

ದೆಹಲಿಯಲ್ಲಿ ಪೊಂಗಲ್​ ಹಬ್ಬದಲ್ಲಿ ಭಾಗಿಯಾಗಿ ತಮಿಳರಿಗೆ ಶುಭಕೋರಿದ ಪ್ರಧಾನಿ ಮೋದಿ -ಕಹಳೆ ನ್ಯೂಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ದೆಹಲಿಯಲ್ಲಿರುವ ಕೇಂದ್ರ ಸಚಿವ ಎಲ್.ಮುರುಗನ್ ಅವರ ನಿವಾಸದಲ್ಲಿ ನಡೆದ ಪೊಂಗಲ್ ಹಬ್ಬದಲ್ಲಿ ಭಾಗಿಯಾಗಿ ತಮಿಳುನಾಡು ಮತ್ತು ವಿದೇಶದಲ್ಲಿರುವ ತಮಿಳರಿಗೆ ಪೊಂಗಲ್ ಶುಭಾಶಯ ಕೋರಿದ್ದಾರೆ. ಎಲ್​.ಮುರುಗನ್ ಅವರ ನಿವಾಸದ ಪೊಂಗಲ್ ಆಚರಣೆಯಲ್ಲಿ ಅತಿಥಿಯಾಗಿ ಭಾಗಿಯಾದ ಪ್ರಧಾನಿ ಸ್ವತಃ ತಾವೇ ವಿಶೇಷ ಪೂಜೆ ಮಾಡಿ, ಪೊಂಗಲ್ ತಯಾರಿಸಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಕಿಶನ್ ರೆಡ್ಡಿ, ರಾಮಮೋಹನ್ ನಾಯ್ಡು ಮತ್ತು ತೆಲಂಗಾಣದ ಮಾಜಿ ರಾಜ್ಯಪಾಲ ತಮಿಳಿಸೈ...
ಜಿಲ್ಲೆಸುದ್ದಿ

ಬೀದಿನಾಯಿ ಕಚ್ಚಿ ಗಂಭೀರ ಗಾಯಗೊಂಡಿದ್ದ ಬಾಲಕಿ ಸಾವು -ಕಹಳೆ ನ್ಯೂಸ್

ಬಾಗಲಕೋಟೆ : ಬಾಗಲಕೋಟೆಯಲ್ಲಿ ಬೀದಿ ನಾಯಿ ದಾಳಿಗೆ ಬಾಲಕಿ ಒಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾಳೆ. ನಾಯಿ ಕಚ್ಚಿ ಗಾಯಗೊಂಡಿದ್ದ 10 ವರ್ಷದ ಬಾಲಕಿ ಅಲೈನಾ ಲೋಕಾಪುರ ಸಾವನಪ್ಪಿದ್ದಾಳೆ. ಕಳೆದ ಡಿಸೆಂಬರ್ 27ರಂದು ಬಾಗಲಕೋಟೆ ನಗರದ ನವನಗರದಲ್ಲಿ ಅಲೈನ ಮೇಲೆ ಬೀದಿ ನಾಯಿ ದಾಳಿ ನಡೆಸಿತ್ತು. ಕಣ್ಣು ಮೂಗು ಮತ್ತು ಮುಖಕ್ಕೆ ಗಂಭೀರವಾಗಿ ಗಾಯಗಳಾಗಿತ್ತು. ತಕ್ಷಣ ಆಕೆಯನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಲೈನ್ ಹಾಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿ...
ಬೆಂಗಳೂರುರಾಜ್ಯಸುದ್ದಿ

ಲಾಲ್‌ಬಾಗ್ ಫ್ಲವರ್ ಶೋಗೆ ಲಕ್ಷಾಂತರ ಸಂಖ್ಯೆಯಲ್ಲಿ ಜನ ಸೇರುವ ಸಾಧ್ಯತೆ : ಗಾಜಿನ ಮನೆ ಸುತ್ತ ಹೈ ಅಲರ್ಟ್- ಕಹಳೆ ನ್ಯೂಸ್

ಬೆಂಗಳೂರು: ಆರ್‌ಸಿಬಿ ಕಾಲ್ತುಳಿತ ದುರಂತದ ಎಫೆಕ್ಟ್ ಸದ್ಯ ಬೆಂಗಳೂರು ಪ್ರಸಿದ್ಧ ಲಾಲ್‌ಬಾಗ್ ಫ್ಲವರ್ ಶೋಗೂ ತಟ್ಟಿದೆ. ಈ ಬಾರಿಯೂ ಫ್ಲವರ್ ಶೋಗೆ ಲಕ್ಷಾಂತರ ಜನ ಸೇರುವ ಸಾಧ್ಯತೆ ಹಿನ್ನೆಲೆ, ಪೊಲೀಸ್ ಇಲಾಖೆ ಮತ್ತು ತೋಟಗಾರಿಗೆ ಇಲಾಖೆ ಭಾರೀ ಕಟ್ಟೆಚ್ಚರ ವಹಿಸಿದೆ. ಗಣರಾಜ್ಯೋತ್ಸವ ಹಿನ್ನೆಲೆ 219ನೇ ಫಲಪುಷ್ಪ ಪ್ರದರ್ಶನ ಚಾಲನೆಗೆ ಕ್ಷಣಗಣನೆ ಆರಂಭವಾಗಿದೆ. ಕಳೆದ ವರ್ಷದಂತೆ ಈ ಭಾರಿಯೂ ಲಕ್ಷಾಂತರ ಸಂಖ್ಯೆಯಲ್ಲಿ ಜನ ಸೇರುವ ಸಾಧ್ಯತೆ ಇದ್ದು, ಆರ್‌ಸಿಬಿ ಕಾಲ್ತುಳಿತದ ದುರಂತದ...
ಸುದ್ದಿ

1 ಡಾಲರ್‌ 10.92 ಲಕ್ಷ ರಿಯಲ್‌ಗೆ ಸಮ : ದಾಖಲೆಯ ಕನಿಷ್ಠ ಮಟ್ಟಕ್ಕೆ ಕುಸಿದ ಇರಾನ್‌ ಕರೆನ್ಸಿ- ಕಹಳೆ ನ್ಯೂಸ್

ಟೆಹರಾನ್‌: ದೇಶದಲ್ಲಿ ನಡೆಯುತ್ತಿರುವ ಭಾರೀ ಪ್ರತಿಭಟನೆ ಮತ್ತು ಅಮೆರಿಕದ ಸುಂಕ ಸಮರದಿಂದ ಇರಾನ್‌ ಕರೆನ್ಸಿ ರಿಯಲ್‌ ಮೌಲ್ಯ ಭಾರೀ ಕುಸಿತಗೊಂಡಿದೆ. ಈಗ ಒಂದು ಅಮೆರಿಕನ್‌ ಡಾಲರ್‌ 10,92,500 ರಿಯಲ್‌ಗೆ ಸಮವಾಗಿದೆ. ಇರಾನ್‌ ವಾರ್ಷಿಕ ಹಣದುಬ್ಬರ ದರವು ಡಿಸೆಂಬರ್‌ನಲ್ಲಿ ಶೇ. 42.2 ಕ್ಕೆ ಏರಿದೆ. ಹಣದುಬ್ಬರ ಏರಿಕೆಯಾಗಿದ್ದರೂ ಈ ವಿಚಾರವನ್ನು ಸರ್ಕಾರ ಬಹಿರಂಗ ಪಡಿಸದೇ ಮುಚ್ಚಿಟ್ಟಿತ್ತು. ಇದರಿಂದ ವಸ್ತುಗಳ ಬೆಲೆಗಳು ಮತ್ತಷ್ಟು ಏರಿಕೆಯಾಗಿವೆ. ಇಸ್ರೇಲ್‌ ವಿರುದ್ಧ ಹೋರಾಟದಲ್ಲಿ ಹಮಾಸ್‌ಗೆ ಬೆಂಬಲ ನೀಡಿದ್ದಕ್ಕೆ...
ಸುದ್ದಿ

ಸಂಕ್ರಾಂತಿ ದಿನವೇ ಚಿನ್ನ ಪ್ರಿಯರಿಗೆ ಬಿಗ್‌ ಶಾಕ್‌…! ಗಗನಕ್ಕೇರಿದ ಚಿನ್ನದ ಬೆಲೆ- ಕಹಳೆ ನ್ಯೂಸ್

ಚಿನ್ನದ ಮೇಲಿನ ಹೂಡಿಕೆ (Gold Investment) ಸೇಫ್‌ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಆದ್ರೆ ಇತ್ತೀಚೆಗೆ ಬೆಲೆ ಏರಿಕೆಯಿಂದ ಚಿನ್ನದ ಮೇಲೆ ಹೂಡಿಕೆ ಮಾಡುವುದೇ ಬೇಡವೆಂಬಂತಾಗಿದೆ. ದಿನ ಹೋದಂತೆ ಚಿನ್ನದ ಬೆಲೆ, ಬೆಳ್ಳಿ ಬೆಲೆ ಭಾರೀ ಏರಿಕೆಯಾಗುತ್ತಿದೆ (Silver Price Hike). ಇಂದೂ ಕೂಡಾಭಾರತದಲ್ಲಿ ಚಿನ್ನದ ಬೆಲೆಭಾರೀ ಹೆಚ್ಚಳವಾಗಿದೆ. ಹಾಗಿದ್ರೆ ಎಷ್ಟಿದೆ ಅನ್ನೋದರ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ. ಭಾರತದಲ್ಲಿ 24K ಚಿನ್ನದ ಬೆಲೆ ಎಷ್ಟಿದೆ? 24K ಚಿನ್ನದ ಬೆಲೆ...
ಸುದ್ದಿ

ಗ್ರಾಮ ಪಂಚಾಯತ್ ಸ್ವಂತ ನಿಧಿಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕಲ್ಯಾಣಕ್ಕೆ ಮೀಸಲಿಟ್ಟಿರುವ ಶೇ.25 ಅನುದಾನ ಬಳಕೆಯ ಮಾರ್ಗಸೂಚಿಗಳನ್ನು ಪರಿಷ್ಕರಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಿದ ವಿಧಾನ ಪರಿಷತ್ ಸದಸ್ಯರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು- ಕಹಳೆ ನ್ಯೂಸ್

  ಗ್ರಾಮ ಪಂಚಾಯತ್ ಸ್ವಂತ ನಿಧಿಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕಲ್ಯಾಣಕ್ಕೆ ಮೀಸಲಿಟ್ಟಿರುವ ಶೇ.25 ಅನುದಾನ ಬಳಕೆಯ ಮಾರ್ಗಸೂಚಿಗಳನ್ನು ಪರಿಷ್ಕರಿಸುವಂತೆ ಹಾಗೂ 15ನೇ ಹಣಕಾಸು ಆಯೋಗದ ಅನುದಾನವನ್ನು ತ್ವರಿತವಾಗಿ ಬಿಡುಗಡೆಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ(ಪಂಚಾಯತ್ ರಾಜ್) ಕಾರ್ಯದರ್ಶಿಗಳಿಗೆ ವಿಧಾನ ಪರಿಷತ್ ಸದಸ್ಯರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ಮನವಿ ಸಲ್ಲಿಸಿದ್ದಾರೆ. ಗ್ರಾಮ ಪಂಚಾಯತ್‌ಗಳ ಸ್ವಂತ ನಿಧಿಯಲ್ಲಿ ಶೇ.25 ಅನುದಾನವನ್ನು ಪರಿಶಿಷ್ಟ ಜಾತಿ ಮತ್ತು...
1 79 80 81 82 83 3,297
Page 81 of 3297