ಪುತ್ತೂರು : ಹಿಂದೂ ಮುಖಂಡ ಮುರಳಿಕೃಷ್ಣ ಹಸಂತಡ್ಕ ಅವರ ತಾಯಿ ಸುಮತಿ ಆರ್ ಭಟ್ ಹಸಂತಡ್ಕ ಅವರು ಅಲ್ಪಕಾಲದ ಅನಾರೋಗ್ಯದಿಂದಾಗಿ ಇಂದು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ....
ಪಾಟ್ನಾ: ಇಲ್ಲಿನ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ಕೆಲಕಾಲ ಆತಂಕದ ಪರಿಸ್ಥಿತಿ ನಿರ್ಮಾಣವಾಗಿತ್ತು. ಇಮೇಲ್ನಲ್ಲಿ ನ್ಯಾಯಾಲಯದ ಆವರಣದಲ್ಲಿ ಆರ್ಡಿಎಕ್ಸ್ ಆಧಾರಿತ ಸ್ಫೋಟಕಗಳನ್ನು ಇರಿಸಲಾಗಿದೆ ಎಂದು ಉಲ್ಲೇಖಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆದರಿಕೆ ಮೇಲ್ ಸ್ವೀಕರಿಸಿದ ತಕ್ಷಣ ನ್ಯಾಯಾಲಯದಲ್ಲಿ ವಕೀಲರು, ಸಿಬ್ಬಂದಿ, ನ್ಯಾಯಾಧೀಶರು ಮತ್ತು ಕಕ್ಷಿದಾರರನ್ನು ಸುರಕ್ಷಿತವಾಗಿ ಹೊರಗೆ ಕಳುಹಿಸಲಾಯಿತು. ಸ್ಥಳಕ್ಕೆ ಪಿರ್ಬಹೋರ್ ಪೊಲೀಸ್ ಠಾಣೆಯ ಸಿಬ್ಬಂದಿ, ಬಾಂಬ್ ಡಿಸ್ಪೋಸಲ್ ಸ್ಕ್ವಾಡ್ ಮತ್ತು ಡಾಕ್ ಸ್ಕ್ವಾಡ್ ತಲುಪಿ ಸಂಪೂರ್ಣ ತಪಾಸಣೆ...
ತೀರ್ಥಹಳ್ಳಿ : ಅತಿಶಯ ಶ್ರೀ ಕ್ಷೇತ್ರ ಹೊಂಬುಜ ಜೈನ ಮಠದ ಶಾಖಾ ಕ್ಷೇತ್ರ ಅಚಾರ್ಯ ಶ್ರೀ ಕುಂದ ಕುಂದಾಚಾರ್ಯ ತಪೋಭೂಮಿ ಶ್ರೀ ಕ್ಷೇತ್ರ ಕುಂದಾದ್ರಿ ಯಲ್ಲಿ ಭಗವಾನ್ ಶ್ರೀ 1008 ಪಾರ್ಶ್ವನಾಥ ಸ್ವಾಮಿ ಹಾಗೂ ಜಗನ್ಮಾತೆ ಶ್ರೀ ಪದ್ಮಾವತಿ ಅಮ್ಮನವರ ವಾರ್ಷಿಕ ಜಾತ್ರ ಮಹೋತ್ಸವ 14-1-2026 ನೇ ಬುಧವಾರ ಪರಮಪೂಜ್ಯ ಜಗದ್ಗುರು ಸ್ವಸ್ತೀಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮಿಜೀಗಳವರ ನೇತೃತ್ವದಲ್ಲಿ, ಪಾವನ ಸಾನಿಧ್ಯದಲ್ಲಿ ಜರುಗಲಿದೆ . ಕಲಿಕುಂಡ ಯಂತ್ರಾರಾಧನೆ, ಬ್ರಹ್ಮ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಶ್ರೀ ದರ್ಶನ್ ಎಚ್. ವಿ ರವರನ್ನು ಸೇವಾಭಾರತಿ ತಂಡ ಜನವರಿ 06 ರಂದು ಭೇಟಿ ನೀಡಲಾಯಿತು. ಸೇವಾಭಾರತಿಯ ಸೇವಾಕಾರ್ಯಗಳ ಬಗ್ಗೆ ಮಾಹಿತಿ ನೀಡಿ ವಿಕಲಚೇತನರ ಸಬಲೀಕರಣದ ಕುರಿತು ಕುಂದು ಕೊರತೆ ಸಭೆಯನ್ನು ಆಯೋಜಿಸುವ ಬಗ್ಗೆ ಹಾಗೂ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡದ ಕುರಿತು ಪ್ರಸ್ತಾಪಿಸಿ ಸಹಕರಿಸುವಂತೆ ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ ಸೇವಾಧಾಮದ ಸಂಸ್ಥಾಪಕರಾದ...
ಕುಕ್ಕಳ ಮತ್ತು ಮಾಲಾಡಿ ಗ್ರಾಮದ ಗ್ರಾಮಸ್ಥರ ಬಹುಬೇಡಿಕೆಯ ಸಂಪರ್ಕ ರಸ್ತೆಯಾದ ಪುಂಜಾಲಕಟ್ಟೆ - ಪುರಿಯ ರಸ್ತೆ ನಿರ್ಮಾಣಕ್ಕೆ ಈ ಹಿಂದೆ ಸೂಕ್ತ ಪ್ರಸ್ತಾವನೆಯನ್ನು ಸಿದ್ದಪಡಿಸಿ ಸರಕಾರಕ್ಕೆ ಸಲ್ಲಿಸಲಾಗಿತ್ತು. ಅದರಂತೆ, ಸರಕಾರದಿಂದ ರೂ.50.00 ಲಕ್ಷ ಮೊತ್ತಕ್ಕೆ ಅನುಮೋದನೆ ದೊರಕಿದ್ದು ಸದ್ರಿ ಕಾಮಗಾರಿಯನ್ನು ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯಿಂದ ಮುಂದಿನ ದಿನಗಳಲ್ಲಿ ಟೆಂಡರ್ ಪ್ರಕ್ರಿಯೆಗಳನ್ನು ನಡೆಸಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಆದೇಶವಾಗಿರುತ್ತದೆ. ಹಾಗಾಗಿ, ಆ ಭಾಗದ ಸಾರ್ವಜನಿಕರ ಉಪಯೋಗಕ್ಕೆ ಆದ್ಯತೆಯ ಈ ಕಾಮಗಾರಿಗೆ ರೂ.50.00ಲಕ್ಷ...
ಬಂಟ್ವಾಳ : ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ (ರಿ.) ಶುಭಾಷ್ ನಗರ ಸಜೀಪಮೂಡ ವತಿಯಿಂದ4 ನೇ ವರ್ಷದ ಶ್ರೀ ಆದಿ ಧೂಮಾವತಿ ಶ್ರೀ ದೇಯಿ ಬೈದೆದಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಮೂಲಸ್ಥಾನ ಗೆಜ್ಜೆಗಿರಿ ರವರಿಂದ ಕಲ್ಕುಡ ಕಲ್ಲುರ್ಟಿ ದೈವದ ಕಾರ್ನಿಕ ಕಥೆಯನ್ನ ಆಧಾರಿತ ನಾಗರತಿ ಯಕ್ಷಗಾನದ ಆಮಂತ್ರಣ ಪತ್ರವನ್ನು ಮಂಗಳವಾರ ಸಜೀಪ ಸುಭಾಷ್ ನಗರ ನಾರಾಯಣ ಗುರು ಮಂದಿರದಲ್ಲಿ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಗೌರವಾಧ್ಯಕ್ಷರು ಸಂಜೀವ ಪೂಜಾರಿ...
ಸುಳ್ಯ ಶಾಸಕ ಭಾಗೀರಥಿ ಮುರುಳ್ಯ ಅವರ ಪೋಟೋವನ್ನು ಬಳಸಿ ಶೃದ್ದಾಂಜಲಿ ಎಂಬ ಪೋಸ್ಟ್ ಹಾಕಲಾಗಿದ್ದು, ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಬಿಲ್ಲವ ಸಂದೇಶ್ ಎಂಬ ಫೇಸ್ಬುಕ್ ಖಾತೆಯಿಂದ ಪೋಸ್ಟ್ ಮಾಡಲಾಗಿದೆ. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಭಾವಚಿತ್ರ ಬಳಸಿ ಅವರನ್ನು ನಿಂಧಿಸಿ, ಅವಹೇಳನ ಮಾಡುವ ರೀತಿಯಲ್ಲಿ ಪೋಸ್ಟ್ ಮಾಡಲಾಗಿದೆ. ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವ್ಯಾಪಕವಾಗಿ ಖಂಡನೆ ವ್ಯಕ್ತವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಪೋಸ್ಟ್ ನಲ್ಲಿ ” ದಲಿತ...
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಹತ್ಯೆ ಯತ್ನ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೃಣಾಲ್ ಹೆಬ್ಬಾಳ್ಕರ್ ಅವರ ಕಾರು ಚಾಲಕ ಬಸವಂತ ಕಡೋಲ್ಕರ್ಗೆ ನಿನ್ನೆ ಚೂರಿ ಇರಿದು ಹತ್ಯೆಗೆ ಯತ್ನ ನಡೆದಿತ್ತು. ಪ್ರಕರಣ ಸಂಬಂಧ ಶಿವಯ್ಯ ಪೂಜಾರಿ, ನಿತೇಶ್ ಬಡಿಗೇರ, ಮೌನಪ್ಪ, ಸಂಪತ್ ಎಂಬವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಚಾಕು ಇರಿತಕ್ಕೊಳಗಾದ ಬಸವಂತ ಸ್ನೇಹಿತ ಮದನ ಕ್ಯಾಂಪ್ ಠಾಣೆಯಲ್ಲಿ ದೂರು ನೀಡಿದ್ದರು. ದೂರನ್ನು ಆಧರಿಸಿ,...