Saturday, June 20, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಗುಜಾರಾತ್‍ನ ಸೂರತ್ ನಗರದಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ; ಪಾದಚಾರಿ ಮಾರ್ಗದ ಮೇಲೆ ಮಲಗಿದ್ದ 14 ಮಂದಿ ಕಾರ್ಮಿಕರ ದುರ್ಮರಣ, ಇದಕ್ಕೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ-ಕಹಳೆ ನ್ಯೂಸ್

ಸೂರತ್: ಧಾರವಾಡದಲ್ಲಿ ನಡೆದ ಭೀಕರ ಅಪಘಾತದ ಬೆನ್ನಲ್ಲೇ ಗುಜಾರಾತ್‍ನ ಸೂರತ್ ನಗರದ ಕೊಸಂಬಾದಲ್ಲಿ ಭೀಕರ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿ ಚಲಿಸುತ್ತಿದ್ದ ಟ್ರಕ್‍ವೊಂದು ಚಾಲಕನ ನಿಯಂತ್ರಣ ತಪ್ಪಿ ಇದ್ದಕ್ಕಿದಂತೆ ಪಾದಚಾರಿ ಮಾರ್ಗಕ್ಕೆ ನುಗ್ಗಿದೆ. ಕಾರ್ಮಿಕರು ಪಾದಚಾರಿ ಮಾರ್ಗದಲ್ಲಿ ಮಲಗಿದ್ದರೆಂದು ಹೇಳಲಾಗುತ್ತಿದೆ. ಈ ಪರಿಣಾಮ ಘಟನೆಯಲ್ಲಿ 14 ಮಂದಿ ಕಾರ್ಮಿಕರು ದುರ್ಮರಣವನ್ನಪ್ಪಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ. ಸಾವನ್ನಪ್ಪಿದ್ದ ಎಲ್ಲ ಕಾರ್ಮಿಕರು ರಾಜಸ್ಥಾನ ಮೂಲದವರಾಗಿದ್ದಾರೆಂದು ಪೊಲೀಸರು ಹೇಳಿದ್ದಾರೆ....
ಹೆಚ್ಚಿನ ಸುದ್ದಿ

ಸುಭಾಷ್ ಚಂದ್ರ ಬೋಸ್ ಜನ್ಮದಿನ ಇನ್ನು “ಪರಾಕ್ರಮ ದಿವಸ್” ಆಗಿ ಬದಲು; ಕೇಂದ್ರ ಸರ್ಕಾರ -ಕಹಳೆ ನ್ಯೂಸ್

ನವದೆಹಲಿ: ಕೇಂದ್ರ ಸಂಸ್ಕ್ರತಿ ಸಚಿವಾಲಯ ಜನವರಿ 23 ರಂದು ಸುಭಾಷ್ ಚಂದ್ರ ಬೋಸ್ ಜನ್ಮದಿನವನ್ನು ಪರಾಕ್ರಮ ದಿವಸ್ ಆಗಿ ಅಚರಿಸಲು ನಿರ್ಧರಿಸಲಾಗಿದೆ. ಈ ಕಾರ್ಯಕ್ರಮ ವಿಶ್ವಾದಾದ್ಯಂತ ನಡೆಯಲಿದೆ. ಈ ಕಾರ್ಯಕ್ರಮವನ್ನು ಪ್ರಧಾನಿ ಮೋದಿ ಜನವರಿ 23 ರಂದು ಕೋಲ್ಕತ್ತಾ ಐತಿಹಾಸಿಕ ವಿಕ್ಟೋರಿಯಾ ಮೆಮೋರಿಯಲ್ ಹಾಲ್ ನಿಂದ ಆರಂಭಗೊಳ್ಳಲಿದೆ. ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಸಂಸ್ಕ್ರತಿ ಸಚಿವಾಲಯವು ಬೋಸ್ ರ 125 ನೇ ಜನ್ಮದಿನದ ಸವಿ ನೆನಪಿಗಾಗಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಿತ್ತು....
ಹೆಚ್ಚಿನ ಸುದ್ದಿ

ಜನತೆಗೆ ಕೋವ್ಯಾಕ್ಸಿನ್ ಬಗ್ಗೆ ಮಾಹಿತಿ ಕೊರತೆ: ಎರಡು ರಾಜ್ಯಗಳನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ – ಕಹಳೆ ನ್ಯೂಸ್

ನವದೆಹಲಿ: ಕೊರೊನಾ ಲಸಿಕಾ ಅಭಿಯಾನದ ನಿರ್ವಹಣೆಗೆ ಸಂಬಂಧಿಸಿದಂತೆ ಪರಿಶೀಲನಾ ಸಭೆಯಲ್ಲಿ ತಮಿಳುನಾಡು ಮತ್ತು ಕೇರಳವನ್ನು ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿದೆ. ಆರೋಗ್ಯ ಕಾರ್ಯಕರ್ತರಿಗೆ ಲಸಿಕಾ ಅಭಿಯಾನದಲ್ಲಿ ಮೊದಲ ಆದ್ಯತೆಯನ್ನು ನೀಡಿದ್ದುˌ ಈ ಎರಡು ರಾಜ್ಯದಲ್ಲಿ ಶೇ. 25 ಕ್ಕೂ ಕಡಿಮೆ ಸಂಖ್ಯೆಯಲ್ಲಿ ಆರೋಗ್ಯ ಕಾರ್ಯಕರ್ತರು ಭಾಗವಹಿಸಿದ್ದಾರೆ. ಪ್ರತಿದಿನವೂ ಲಸಿಕಾ ಅಭಿಯಾನದ ಬಗ್ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪರಿಶೀಲನಾ ಸಭೆ ನಡೆಸುತ್ತಿದ್ದು ಈ ಮೂಲಕ ತಮಿಳುನಾಡು ಹಾಗೂ ಕೇರಳದ ಆರೋಗ್ಯ ಕಾರ್ಯಕರ್ತರು ಲಸಿಕೆ...
ಹೆಚ್ಚಿನ ಸುದ್ದಿ

ಮಹಾಲಕ್ಷ್ಮೀ ದೇವಾಸ್ಧಾನಕ್ಕೆ ಭೇಟಿ ನೀಡಿದ ಬಿ.ಎಸ್. ವೈ — ಕಹಳೆ ನ್ಯೂಸ್

ಕಾಪು: ಮಂಗಳವಾರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ರಾಜ್ಯದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ದೇವಸ್ಥಾನ ಸುಮಾರು 35 ಕೋಟಿ ರೂಪಾಯಿ ವೆಚ್ಚದಲ್ಲಿ ಜೀರ್ಣೋದ್ಧಾರವಾಗಲಿದ್ದು ˌ ಈಗಾಗಲೇ ರೂ. 5 ಕೋಟಿ ಅನುದಾನ ಬಿಡುಗಡೆಗೊಳಿಸಿದ್ದುˌ ಹೆಚ್ಚುವರಿ ರೂ.10 ಕೋಟಿ ಅನುದಾನ ಬಿಡುಗಡೆಗೆ ಮನವಿ ಮಾಡಲಾಯಿತು. ದೇವಸ್ಥಾನದ ಜೀರ್ಣೋದ್ದಾರ ಸಮಿತಿಯ ಗೌರವಾಧ್ಯಕ್ಷ ಡಾ.ಜಿ. ಶಂಕರ್ˌ ದ.ಕ. ಮೋಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ....
ಹೆಚ್ಚಿನ ಸುದ್ದಿ

ತಿರುಪತಿ ತಿಮ್ಮಪ್ಪನ ಸನ್ನಿಧಾನದ ಬೆಟ್ಟವನ್ನೇರುವ ಸಂದರ್ಭದಲ್ಲಿ ಭಕ್ತರನ್ನು ಬೆದರಿಸಿ ದರೋಡೆಗೆ ಯತ್ನಿಸಿದ ದರೋಡೆಕೋರರು-ಕಹಳೆ ನ್ಯೂಸ್

ತಿರುಪತಿ : ಶ್ರೀಮಂತ ದೇಗುಲವೆಂಬ ಖ್ಯಾತಿಗೆ ಪಾತ್ರವಾಗಿರುವ ತಿರುಪತಿ ತಿರುಮಲ ದೇವಸ್ಥಾನದಲ್ಲೀಗ ಭಕ್ತರಿಗೆ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ ತಿರುಪತಿ ತಿಮ್ಮಪ್ಪನ ಸನ್ನಿಧಾನದ ಬೆಟ್ಟವನ್ನೇರುವ ಸಂದರ್ಭದಲ್ಲಿ ಭಕ್ತರನ್ನು ಬೆದರಿಸಿ ದರೋಡೆಗೆ ಯತ್ನಿಸಿರುವ ಘಟನೆ ನಡೆದಿದ್ದು, ಭಕ್ತರು ಬೆಚ್ಚಿಬಿದ್ದಿದ್ದಾರೆ. ಕರ್ನೂಲ್ ಮೂಲದ ಸುನಿಲ್ ಮತ್ತು ಅವರ ಪತ್ನಿ ತನ್ನಿಬ್ಬರು ಮಕ್ಕಳೊಂದಿಗೆ ತಡರಾತ್ರಿ ಅಲಿಪಿರಿಯಿಂದ ತಿರುಮಲ ಬೆಟ್ಟವನ್ನೇರುತ್ತಿದ್ದರು. ಈ ವೇಳೆಯಲ್ಲಿ ಕಳ್ಳರ ಗುಂಪೊಂದು ಕುಟುಂಬವನ್ನು ಅಡ್ಡಗಟ್ಟಿ ದರೋಡೆಗೆ ಯತ್ನಿಸಿದ್ದು, ಇನ್ನೂ ದೇವಸ್ಥಾನವನ್ನು ತಲುಪಲು...
ಹೆಚ್ಚಿನ ಸುದ್ದಿ

ಚಿಕ್ಕೋಡಿಯಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದವನಿಗೆ ಸಾರ್ವಜನಿಕರಿಂದ ಹಿಗ್ಗಾ ಮುಗ್ಗಾ ಥಳಿತ- ಕಹಳೆ ನ್ಯೂಸ್

ಬೆಳಗಾವಿ: ಹಾಡಹಗಲೇ ಬೈಕ್ ಕದಿಯಲು ಯತ್ನಿಸಿದ ವ್ಯಕ್ತಿಯನ್ನು ಕಂಬಕ್ಕೆ ಕಟ್ಟಿ ಥಳಿಸಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಮಾರುಕಟ್ಟೆಯಲ್ಲಿ ನಡೆದಿದೆ. ಶಿವಾಜಿ ಸಲಗರ ಎಂಬ ವ್ಯಕ್ತಿ ಹಾಡು ಹಗಲೇ ಮಾರುಕಟ್ಟೆ ಪ್ರದೇಶದಲ್ಲಿ ಬೈಕ್ ಕಳ್ಳತನ ಮಾಡಲು ಬಂದಿದ್ದನು. ಕಳ್ಳತನ ಮಾಡೊದನ್ನು ನೋಡಿದ ಸಾರ್ವಜನಿಕರು ಹಿಡಿದು ಕಂಬಕ್ಕೆ ಕಟ್ಟಿ ಥಳಿಸಿದ್ದು, ಬಳಿಕ ಪೊಲೀಸರಿಗೆ ಆರೋಪಿಯನ್ನು ಒಪ್ಪಿಸಿದ್ದಾರೆ. ಆರೋಪಿಯನ್ನು ವಶಕ್ಕೆ ತೆಗೆದುಕೊಂಡಿರುವ ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ....
ಹೆಚ್ಚಿನ ಸುದ್ದಿ

ರಾಮದುರ್ಗದಲ್ಲಿ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ-ಕಹಳೆ ನ್ಯೂಸ್

ರಾಮದುರ್ಗ : ರಾಮದುರ್ಗ ಪಟ್ಟಣದಲ್ಲಿ ಮಂಗಳವಾರ ಬೆಳಿಗ್ಗೆ ಒಂದೇ ಕುಟುಂಬದ ನಾಲ್ಕು ಜನರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತಪಟ್ಟವರನ್ನು 37 ಪ್ರಾಯದ ಪ್ರವೀಣ ರಮೇಶ ಶೆಟ್ಟರ್, ಮತ್ತು 27 ಪ್ರಾಯದ ಪತ್ನಿ ರಾಜೇಶ್ವರಿ, ಹಾಗೂ ಮಕ್ಕಳಾದ 8 ವರ್ಷದ ಅಮೃತಾ ಮತ್ತು 6 ವರ್ಷದ ಅದ್ವಿಕ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದು ಬಂದಿದೆ. ಸ್ಥಳಕ್ಕೆ ಶಾಸಕ ಮಹಾದೇವಪ್ಪ ಯಾದವಾಡ, ಸಿ.ಪಿ.ಐ ಶಶಿಕಾಂತ ಮರ್ಮಾ...
ಹೆಚ್ಚಿನ ಸುದ್ದಿ

ಗರ್ಡಾಡಿಯಲ್ಲಿ ಕುಡಿದ ಮತ್ತಿನಲ್ಲಿ ತಂದೆಯನ್ನು ಕೊಂದ ಮಗ-ಕಹಳೆ ನ್ಯೂಸ್

ಗರ್ಡಾಡಿ: ಗರ್ಡಾಡಿಯಲ್ಲಿ ತಂದೆಯನ್ನು ಕುಡಿದ ಮತ್ತಿನಲ್ಲಿ ಪಕ್ಕಾಸ್ ತುಂಡಿನಿಂದ ಹಲ್ಲೆ ಮಾಡಿ ಕೊಲೆ ಮಾಡಿದ ಘಟನೆ ನಡೆದಿದೆ. ಇಲ್ಲಿನ ಮುಂಡ್ಯೋಟ್ಟು ಮನೆಯ ನಿವಾಸಿ ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದ ಶ್ರೀಧರ ಪೂಜಾರಿಯನ್ನು ಸಣ್ಣ ವಿಚಾರಕ್ಕೆ ಪಾಪಿ ಪುತ್ರ ಹರೀಶ್ ಕೊಲೆ ಮಾಡಿದ್ದಾನೆ. ಸ್ಥಳಕ್ಕೆ ಆಗಮಿಸಿದ ಬೆಳ್ತಂಗಡಿ ಪೊಲೀಸರು ಆರೋಪಿಯನ್ನು ಬಂದಿಸಿದ್ದಾರೆ....
1 113 114 115 116 117 174
Page 115 of 174