ಕೊರೊನಾವನ್ನು ನಿಭಾಯಿಸಲು ಭಾರತ ಸಶಕ್ತ; ಡಾ. ಭರತ್ ಶೆಟ್ಟಿ ವೈ-ಕಹಳೆ ನ್ಯೂಸ್
ಸುರತ್ಕಲ್: ಕೊರೊನಾ ಹೊಡೆತದಿಂದ ದೇಶ ಸಾಕಷ್ಟು ಕಷ್ಟ ನಷ್ಟ ಅನುಭವಿಸಿದರೂ ಇದೀಗ ದೇಶದಲ್ಲಿ ವ್ಯಾಕ್ಸಿನ್ ಬಳಕೆ ಆರಂಭವಾಗಿರುವುದರಿಂದ 2ನೇ ಕೊರೊನಾ ಅಲೆಯನ್ನು ನಿಭಾಯಿಸಲು ದೇಶ ಸಶಕ್ತವಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಹೇಳಿದರು. ಅವರು ಸುರತ್ಕಲ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೊರೊನಾ ವಿರುದ್ದ ಆರಂಭವಾದ ವ್ಯಾಕ್ಸಿನ್ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಜನರ ಸೇವೆಗೈಯುವ ಕೊರೊನಾ ವಾರಿಯರ್ಸ್ ಗೆ ಪ್ರಥಮ ಆದ್ಯತೆ ನೀಡುವ ದೇಶದ ಪ್ರಧಾನಿಗಳು ಹಂತ ಹಂತವಾಗಿ...







