Saturday, June 20, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಗೋವಾಕ್ಕೆ ಪ್ರವಾಸ ಹೊರಟ 10 ಜನ ಮಷಾಣಕ್ಕೆ- ಕಹಳೆ ನ್ಯೂಸ್

ಧಾರವಾಡ: ಧಾರವಾಡ ಸಮೀಪದ ಇಟ್ಟಿಗಟ್ಟಿ ಬಳಿ ಬೆಳಗಿನ ಜಾವ ಟೆಂಪೋ ಮತ್ತು ಟಿಪ್ಪರ್ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು, ಈ ಘಟನೆಯಲ್ಲಿ 10 ಜನರು ಸಾವನ್ನಪ್ಪಿದ್ದಾರೆ. ದಾವಣಗೆರೆಯಿಂದ 17 ಮಹಿಳೆಯರು ಗೋವಾಕ್ಕೆ ಪ್ರವಾಸಕ್ಕೆ ಹೊರಟಿದ್ದರು. ಇದರಲ್ಲಿ ಜನರು ಸಾವಿಗೀಡಾಗಿದ್ದು, ಇನ್ನೂ ಕೆಲವರ ಸ್ಥಿತಿ ಗಂಭೀರವಾಗಿದೆ. ಈ ಘಟನೆಯ ಬಗ್ಗೆ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಗಾಯಾಳುಗಳನ್ನು ಆಸ್ವತ್ರೆಗೆ ದಾಖಲಿಸಿದ್ದಾರೆ....
ಹೆಚ್ಚಿನ ಸುದ್ದಿ

ಅಳದಂಗಡಿಯ ಸಮೀಪ ಭೀಕರ ರಸ್ತೆ ಅಪಘಾತ ;ಓರ್ವ ಮೃತ್ಯು-ಕಹಳೆ ನ್ಯೂಸ್

ಅಳದಂಗಡಿಯ ಸಮೀಪ ಭೀಕರ ರಸ್ತೆ ಅಪಘಾತ ,ಈ ಘಟನೆಯಲ್ಲಿ  ಓರ್ವ ಮೃತ್ಯಪಟ್ಟಿದ್ದು,  ರಿಕ್ಷಾ ಸಂಪೂರ್ಣ ನುಜ್ಜುಗುಜ್ಜು ಆಗಿದೆ. ಈ ಘಟನೆಯು ಬೆಳ್ತಂಗಡಿ ತಾಲೂಕಿನ ಅಳದಂಗಡಿ ಸಮೀಪದ ಪಿಲ್ಯ ಎಂಬಲ್ಲಿ ಬಸ್ ಮತ್ತು ರಿಕ್ಷಾದ ನಡುವೆ ಸುಮಾರು ಗಂಟೆ 8:30 ಸಮಯಕ್ಕೆ ರಸ್ತೆ ಅಪಘಾತವಾಗಿದೆ. ಆಟೋ ಚಾಲಕನ ಸ್ಥಿತಿ ಗಂಭೀರವಾಗಿದ್ದುದರಿಂದ ತಕ್ಷಣ ಆಸ್ಪತ್ರೆಗೆ ಸೇರಿಸಿದರಾದರೂ ಬಲವಾದ ಹೊಡೆತ ಬಿದ್ದಿದ್ದರಿಂದ ಚಾಲಕ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿಸಾವನ್ನಪ್ಪಿದ್ದಾರೆ. ಅಪಘಾತದ ತೀವ್ರತೆಗೆ ಆಟೋ ರಿಕ್ಷಾ ಜಖಂ...
ಹೆಚ್ಚಿನ ಸುದ್ದಿ

ಸುಳ್ಯ ತಾಲೂಕು ಪಂಚಾಯತಿಯಲ್ಲಿ ಜಲಜೀವನ್ ಮಿಷನ್ ಕಾರ್ಯಾಗಾರ-ಕಹಳೆ ನ್ಯೂಸ್

ದ.ಕ ಜಿಲ್ಲಾ ಪಂಚಾಯತ್ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ,ಸ್ವಚ್ಛ ಭಾರತ್ ಮಿಷನ್ ಮತ್ತು ತಾಲೂಕು ಪಂಚಾಯತ್ ಸುಳ್ಯ ಇದರ ಸಹಭಾಗಿತ್ವದಲ್ಲಿ ಜಲಜೀವನ್ ಮಿಷನ್ ಯೋಜನೆಯ ಅನುಷ್ಠಾನ ಬೆಂಬಲಿತ ಸಂಸ್ಥೆ ಸಮುದಾಯ ತುಮಕೂರು (ರಿ) ಇದರ ವತಿಯಿಂದ ಸುಳ್ಯ ತಾಲೂಕು ಪಂಚಾಯತಿಯ ಪಯಸ್ವಿನಿ ಸಭಾಂಗಣದಲ್ಲಿ ತಾಲೂಕಿನ ವಿವಿಧ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಜಲಜೀವನ್ ಮಿಷನ್ ಕಾರ್ಯಾನುಷ್ಠಾನದ ಕುರಿತು ಕಾರ್ಯಾಗಾರವನ್ನು ಬುಧವಾರ ಹಮ್ಮಿಕೊಳ್ಳಲಾಗಿತ್ತು. ತಾಲೂಕು ಪಂಚಾಯತ್ ಲೆಕ್ಕಾಧಿಕಾರಿ...
ಹೆಚ್ಚಿನ ಸುದ್ದಿ

ಅಯೋಧ್ಯೆ ಶ್ರೀ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟಿನ ವಿಶ್ವಸ್ಥರಾದ ಉಡುಪಿ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು ಜ.13ರಂದು ಪುತ್ತೂರಿಗೆ ಭೇಟಿ-ಕಹಳೆ ನ್ಯೂಸ್

ಅಯೋಧ್ಯೆ ಶ್ರೀ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟಿನ ವಿಶ್ವಸ್ಥರಾದ ಉಡುಪಿ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಜನವರಿ 13ರಂದು ಪುತ್ತೂರು ಒಕ್ಕಲಿಗ ಗೌಡ ಸಮುದಾಯ ಭವನ ತೆಂಕಿಲದಲ್ಲಿ ನಡೆಯಲಿರುವ ಮಾತೃ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಗಣ್ಯರ ಸಭೆಯಲ್ಲೂ ಪಾಲ್ಗೊಳ್ಳಲಿದ್ದು,  ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಪ್ರಾಂತ ಸಂಘಟನಾ ಕಾರ್ಯದರ್ಶಿ, ಬಸವರಾಜು, ವಿಶ್ವ ಹಿಂದೂ ಪರಿಷತ್ ಪ್ರಾಂತ, ಕಾರ್ಯಾಧ್ಯಕ್ಷ ಎಂ ಬಿ ಪುರಾಣಿಕ್, ಶ್ರೀ ರಾಮ ಜನ್ಮಭೂಮಿ, ನಿಧಿ...
ಹೆಚ್ಚಿನ ಸುದ್ದಿ

ಮಹಾರಾಷ್ಟ್ರದಲ್ಲಿ ಕೂಡ ಪತ್ತೆಯಾಗಿದೆ ಹಕ್ಕಿಜ್ವರ-ಕಹಳೆ ನ್ಯೂಸ್

ನವದೆಹಲಿ: ದೇಶದಲ್ಲಿ ಕೊರೋನಾಕ್ಕಿಂತ ಹೆಚ್ಚಿನ ವೇಗದಲ್ಲಿ ಹಕ್ಕಿ ಜ್ವರ ಹರಡುತ್ತಿದೆ. ಮಹಾರಾಷ್ಟ್ರದ ಬಳಿಕ ಇದೀಗ ದೆಹಲಿಯಲ್ಲಿ ಕೂಡ ಹಕ್ಕಿ ಜ್ವರ ಕಾಣಿಸಿಕೊಂಡಿರುವ ಕಾರಣದಿಂದ ದೆಹಲಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. 800ಕ್ಕೂ ಹೆಚ್ಚು ಕೋಳಿಗಳು ಮಹಾರಾಷ್ಟ್ರದ ಪ್ರಭಾನಿ ಜಿಲ್ಲೆಯ ಮುರುಂಬಾ ಗ್ರಾಮದಲ್ಲಿ ಹಕ್ಕಿ ಜ್ವರದಿಂದ ಸಾವನ್ನಪ್ಪಿದ್ದು, ಇವುಗಳ ಸ್ಯಾಂಪಲ್‍ಗಳನ್ನು ಹೆಚ್ಚಿನ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದೆ ಎಂದು ಜಿಲ್ಲಾಧಿಕಾರಿ ದೀಪಕ್ ಮುಗ್ಲೀಕರ್ ತಿಳಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿರುವ ಕಾರಣದಿಂದ ಕರ್ನಾಟಕ ಗಡಿ ಪ್ರದೇಶದಲ್ಲಿ...
ಹೆಚ್ಚಿನ ಸುದ್ದಿ

ವಿಟ್ಲದಲ್ಲಿ 4 ವರ್ಷದ ಮಗು ಕಾಲು ಜಾರಿ ಕೆರೆಗೆ ಬಿದ್ದು ಸಾವು-ಕಹಳೆ ನ್ಯೂಸ್

ವಿಟ್ಲ: ಕೊಳ್ನಾಡು ಗ್ರಾಮದ ಸೆರ್ಕಳ ಎಂಬಲ್ಲಿ ತೋಟದಲ್ಲಿ ಇತರೆ ಮಕ್ಕಳೊಂದಿಗೆ ಆಟವಾಡುತ್ತಿದ್ದಾಗ ತೋಟದ ಮಧ್ಯದಲ್ಲಿರುವ ಕೆರೆಗೆ ಬಿದ್ದು ನಾಲ್ಕು ವರ್ಷದ ಹೆಣ್ಣು ಮಗುವೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ಬಾಲಕಿಯನ್ನು ಕೊಳ್ನಾಡು ಗ್ರಾಮದ ಸೆರ್ಕಳ ನಿವಾಸಿ ಹಂಝ ಎ ಅವರ ಪುತ್ರಿ ಸರಪುನ್ನಿಸಾ ಎಂದು ಗುರುತಿಸಲಾಗಿದೆ. ಈಕೆ ಇಬ್ಬರು ಮಕ್ಕಳ ಜೊತೆ ಅಬ್ಬಾಸ್ ಬಾಕಿಮಾರು ಎಂಬವರ ತೋಟಕ್ಕೆ ಆಟ ಆಡಲು ಹೋಗಿದ್ದಾಳೆ. ಈ ವೇಳೆಯಲ್ಲಿ ಸರಪುನ್ನಿಸಾ ತೋಟದ ಮಧ್ಯದಲ್ಲಿದ್ದ ಕೆರೆಗೆ...
ಹೆಚ್ಚಿನ ಸುದ್ದಿ

ಭಾರತೀಯ ಜನತಾ ಪಾರ್ಟಿ ಅಳದಂಗಡಿ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಗಳಿಗೆ ಮತ್ತು ಕಾರ್ಯಕರ್ತರಿಗೆ ನಡೆಸಿದ ಅಭಿನಂದನಾ ಸಭೆಯಲ್ಲಿ ಭಾಗಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ-ಕಹಳೆ ನ್ಯೂಸ್

ಭಾರತೀಯ ಜನತಾ ಪಾರ್ಟಿ ಅಳದಂಗಡಿ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಗಳಿಗೆ ಮತ್ತು ಕಾರ್ಯಕರ್ತರಿಗೆ ಅಭಿನಂದನಾ ಸಭೆಯನ್ನು ನಡೆಸಲಾಯಿತು.   ಈ ಸಭೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್‍ಪೂಂಜ ಅವರು ಭಾಗವಹಿಸಿದರು....
ಹೆಚ್ಚಿನ ಸುದ್ದಿ

ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ಗುತ್ತಿಗಾರು ಗ್ರಾಮದ ಮೊಗ್ರದಲ್ಲಿ ಶ್ರೀ ಶೂಲಿನೀದುರ್ಗಾ ಮತ್ತು ಶ್ರೀ ವನದುರ್ಗಾ ದೇವಸ್ಥಾನ ನಿರ್ಮಾಣ ಕಾರ್ಯದ ಭೂಪರಿಗ್ರಹ ಕಾರ್ಯಕ್ರಮ-ಕಹಳೆ ನ್ಯೂಸ್

ಗುತ್ತಿಗಾರು: ಗುತ್ತಿಗಾರು ಗ್ರಾಮದ ಮೊಗ್ರದಲ್ಲಿ ಶ್ರೀ ಶೂಲಿನೀದುರ್ಗಾ ಹಾಗೂ ಶ್ರೀ ವನದುರ್ಗಾ ದೇವಸ್ಥಾನ ನಿರ್ಮಾಣ ಕಾರ್ಯಕ್ಕೆ ಭೂಪರಿಗ್ರಹ ಕಾರ್ಯಕ್ರಮ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ಭಾನುವಾರ ಮೊಗ್ರದಲ್ಲಿ ನಡೆಯಿತು. ಮೊಗ್ರದಲ್ಲಿ ನೂತನವಾಗಿ ಶೂಲಿನೀದುರ್ಗಾ ಹಾಗೂ ಶ್ರೀ ವನದುರ್ಗಾ ದೇವಸ್ಥಾನ ನಿರ್ಮಾಣ ಕಾರ್ಯಕ್ಕೆ ಭೂ ಸಮತಟ್ಟು ಕಾರ್ಯ ನಡೆದು ಶನಿವಾರ ಸುದರ್ಶನ ಹವನ ಸಹಿತ ವಿವಿಧ ಧಾರ್ಮಿಕ ಕಾಯಕ್ರಮ ನಡೆದು ಭಾನುವಾರ ಭೂಪರಿಗ್ರಹ ಕಾರ್ಯಕ್ರಮ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು....
1 117 118 119 120 121 174
Page 119 of 174