Saturday, April 25, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಖ್ಯಾತ ಸಂಗೀತ ನಿರ್ದೇಶಕ ರಾಜನ್ ಇನ್ನಿಲ್ಲ-ಕಹಳೆ ನ್ಯೂಸ್

ಬೆಂಗಳೂರಿನ ಆರ್.ಟಿ. ನಗರದ ನಿವಾಸದಲ್ಲಿ ಖ್ಯಾತ ಸಂಗೀತ ನಿರ್ದೇಶಕ ರಾಜನ್(87) ಹೃದಯಾಘಾತದಿಂದ ನಿಧನರಾಗಿದ್ದಾರೆ. ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ ಸೇರಿ ಹಲವು ಭಾಷೆಗಳಿಗೆ ಅವರು ಸಂಗೀತ ನಿರ್ದೇಶನ ನೀಡಿದ್ದರು. 'ಗಂಧದ ಗುಡಿ', 'ಪರಸಂಗದ ಗೆಂಡೆತಿಮ್ಮ', 'ಬಯಲುದಾರಿ', 'ನಾ ನಿನ್ನ ಮರೆಯಲಾರೆ', 'ಹೊಂಬಿಸಿಲು', 'ಗಾಳಿಮಾತು', 'ಶ್ರೀನಿವಾಸ ಕಲ್ಯಾಣ', 'ಚಲಿಸುವ ಮೋಡಗಳು' ಸೇರಿದಂತೆ ಹಲವು ಚಿತ್ರಗಳಿಗೆ ಸಂಗೀತ ನಿರ್ದೇಶಿಸಿದ್ದರು. 375 ಹೆಚ್ಚು ಚಿತ್ರಗಳಿಗೆ ಸಂಗೀತ ನಿರ್ದೇಶನ ಮಾಡಿದ್ದರು ರಾಜನ್-ನಾಗೇಂದ್ರ ಎಂದೇ ಖ್ಯಾತವಾಗಿದ್ದ...
ಹೆಚ್ಚಿನ ಸುದ್ದಿ

ಆಸ್ತಿ ಕಾರ್ಡ್ ವಿತರಿಸುವ ಸ್ವಾಮಿತ್ವ ಯೋಜನೆಗೆ ಪ್ರಧಾನಿ ಮೋದಿ ಚಾಲನೆ- ಕಹಳೆ ನ್ಯೂಸ್

ನವದೆಹಲಿ : ಗ್ರಾಮ ಪ್ರದೇಶಗಳಲ್ಲಿ ಸುಧಾರಿತ ತಂತ್ರಜ್ಞಾನ (SVAMITVA) ಯೋಜನೆಯಡಿ ಪ್ರಾಪರ್ಟಿ ಕಾರ್ಡ್ ವಿತರಣೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. ಗ್ರಾಮೀಣ ಪರಿವರ್ತನೆಗೆ ಇದೊಂದು ಐತಿಹಾಸಿಕ ಪ್ರಯತ್ನ ಎಂದು ಪಿಎಂ ನರೇಂದ್ರ ಮೋದಿ ಮೋದಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಸುಧಾರಿತ ತಂತ್ರಜ್ಞಾನ ಯೋಜನೆಯಡಿ ಪ್ರಾಪರ್ಟಿ ಕಾರ್ಡ್ ಬಿಡುಗಡೆ ಬಳಿಕ, ಪಿಎಂ ಮೋದಿ ಅವರು ಯೋಜನೆಯ ಕೆಲವು ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಈ ಸುಧಾರಿತ ತಂತ್ರಜ್ಞಾನ ಯೋಜನೆಯಡಿಯ...
ಹೆಚ್ಚಿನ ಸುದ್ದಿ

ಗರಿಷ್ಠ ಅಂಕ ನೀಡಿ ಪಾಸ್ ಮಾಡಲು ಆದೇಶ: ಫೇಲಾದವರಿಗೂ ಗುಡ್ ನ್ಯೂಸ್-ಕಹಳೆ ನ್ಯೂಸ್

ಬೆಂಗಳೂರು : ಪ್ರಥಮ ಪಿಯುಸಿ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಪದವಿ ಪೂರ್ವಶಿಕ್ಷಣ ಇಲಾಖೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅನುತ್ತೀರ್ಣವಾದ ವಿದ್ಯಾರ್ಥಿಗಳಿಗೆ ಪಾಸ್ ಮಾಡುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಅನುತ್ತೀರ್ಣ ವಿದ್ಯಾರ್ಥಿಗಳು ಅ.20ರೊಳಗೆ ಕಾಲೇಜು ಹಂತದಲ್ಲೇ ಪೂರಕ ಪರೀಕ್ಷೆ ನಡೆಸಬೇಕು. ಪರೀಕ್ಷೆಯಲ್ಲಿ ಉತ್ತೀರ್ಣಕ್ಕೆ ಬೇಕಾದ ಗರಿಷ್ಠ ಅಂಕ ನೀಡಿ ಮುಂದಿನ ಶಿಕ್ಷಣಕ್ಕೆ ಅವಕಾಶ ಕಲ್ಪಿಸುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸೂಚನೆ ನೀಡಿದೆ....
ಹೆಚ್ಚಿನ ಸುದ್ದಿ

ಇನ್ಮುಂದೆ ‘ಮೂಗರ್ಜಿ’ಗಳಿಗೆ ಮಾನ್ಯತೆ ಇಲ್ಲ : ರಾಜ್ಯಸರ್ಕಾರದಿಂದ ‘ಅನಾಮಧೇಯ ಪತ್ರ’ಗಳನ್ನು ಪರಿಗಣಿಸದಂತೆ ಆದೇಶ-ಕಹಳೆ ನ್ಯೂಸ್

ಬೆಂಗಳೂರು : ಸರ್ಕಾರಿ ಅಧಿಕಾರಿಗಳ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡಿ, ಅನಾಮಧೇಯ ಪತ್ರಗಳ ಮೂಲಕ ಆರೋಪ ಮಾಡುತ್ತಿದ್ದಂತ ಪತ್ರಗಳಿಗೆ, ಇದೀಗ ಸರ್ಕಾರ ಬ್ರೇಕ್ ಹಾಕಿದೆ. ಇನ್ಮುಂದೆ ಮೂಗರ್ಜಿಗಳಿಗೆ ಮಾನ್ಯತೆ ಇಲ್ಲ ಎಂಬುದಾಗಿ ಖಡಕ್ ಆದೇಶದಲ್ಲಿ ಸೂಚಿಸಿದೆ. ಈ ಮೂಲಕ ಅಧಿಕಾರಿ, ನೌಕರರ ವಿರುದ್ಧದ ಅನಾಮಧೇಯ ದೂರುಗಳನ್ನು ಪರಿಗಣಿಸದಂತೆ ಸುತ್ತೋಲೆಯಲ್ಲಿ ಸೂಚಿಸಿದೆ. ಈ ಕುರಿತಂತೆ ರಾಜ್ಯದ ಎಲ್ಲಾ ಇಲಾಖೆಗಳ ಮುಖ್ಯಸ್ಥರಿಗೆ ಸುತ್ತೋಲೆಯಲ್ಲಿ ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಟಿಎಂ ವಿಜಯ್...
ಹೆಚ್ಚಿನ ಸುದ್ದಿ

ಜನರಿಂದ ಐಡಿಯಾ ಕೇಳಿದ ಪ್ರಧಾನಿ ನರೇಂದ್ರ ಮೋದಿ- ಕಹಳೆ ನ್ಯೂಸ್

ನವದೆಹಲಿ: ಪ್ರಧಾನಿ ಮೋದಿಯವರು ಈ ರೀತಿ ಕೆಲ್ಸ ಮಾಡ್ಬೋದು, ಆ ರೀತಿಯಲ್ಲಿಯೂ ಶ್ರಮಿಸ್ಬೋದು ಅಂತಾ ಅದೆಷ್ಟೊ ಮಂದಿ ಹೇಳ್ತಾ ಇರ್ತಾರೆ. ಅಂತಹವರಿಗೆ ಪ್ರಧಾನಿ ಮೋದಿಯವರೇ ಒಂದು ವೇದಿಕೆ ಕಲ್ಪಿಸಿದ್ದು, ನಿಮ್ಮ ಐಡಿಯಾಗಳನ್ನ ನೇರವಾಗಿ ನನಗೆ ತಿಳಿಸಿ ಎಂದಿದ್ದಾರೆ. ಹೌದು,ಪ್ರಧಾನಿ ನರೇಂದ್ರ ಮೋದಿ ಇದೀಗ ಜನರಿಂದ ಐಡಿಯಾ ಕೇಳಿದ್ದಾರೆ. 'ಮನ್​ ಕಿ ಬಾತ್​' ಮೂಲಕ ಆಗಾಗ ತಮ್ಮ ಮನದ ಅನಿಸಿಕೆಗಳನ್ನ ಹಂಚಿಕೊಳ್ಳುವ ಮೋದಿ, ಆ ಮೂಲಕ ಸಾಮಾಜಿಕ ಪರಿವರ್ತನೆಗಾಗಿ ಸಮಾಜದಲ್ಲಿ ಸಾಧನೆ...
ಹೆಚ್ಚಿನ ಸುದ್ದಿ

ವಿದ್ಯಾಗಮ ತಾತ್ಕಾಲಿಕ ಸ್ಥಗಿತ! : ಶಿಕ್ಷಣ ಸಚಿವ ಸುರೇಶ್ ಕುಮಾರ್-ಕಹಳೆ ನ್ಯೂಸ್

ಬೆಂಗಳೂರು:ಕೊರೊನಾ ಕಾರಣದಿಂದಾಗಿ ಮಕ್ಕಳು ಕಲಿಕೆಯಿಂದ ವಂಚಿತರಾಗ ಬಾರದೆಂದು ರಾಜ್ಯ ಸರ್ಕಾರ ರೂಪಿಸಿದ್ದ 'ವಿದ್ಯಾಗಮ' ಯೋಜನೆ ಮೇಲೂ ಕೋವಿಡ್-19 ಕರಿಛಾಯೆ ಆವರಿಸಿದೆ. ಈ ಯೋಜನೆಯಿಂದಾಗಿ ಶಿಕ್ಷಕರಲ್ಲಿ ಕರೊನಾಂತಕ ಹೆಚ್ಚುತ್ತಿದೆ. ಕೂಡಲೇ ಇದನ್ನು ಸ್ಥಗಿತಗೊಳಿಸಿ ಶಿಕ್ಷಕರ ಹಾಗೂ ಮಕ್ಕಳ ಜೀವ ಉಳಿಸಬೇಕು ಎಂಬ ಒತ್ತಾಯ ರಾಜ್ಯಾದ್ಯಂತ ದಟ್ಟವಾಗಿ ಕೇಳಿಬಂದಿತ್ತು. ಈ ಕುರಿತು ಕೊನೆಗೂ ನಿರ್ಧಾರ ಕೈಗೊಂಡ ಶಿಕ್ಷಣ ಸಚಿವ ಸುರೇಶ್​ ಕುಮಾರ್​, ವಿದ್ಯಾಗಮ‌ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ...
ಹೆಚ್ಚಿನ ಸುದ್ದಿ

ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಈಗ ಬಿಜೆಪಿ ಮಿತ್ರಪಕ್ಷಗಳ ಏಕೈಕ ಪ್ರತಿನಿಧಿ-ಕಹಳೆ ನ್ಯೂಸ್

ಹೊಸದಿಲ್ಲಿ, ಅ.10: ಎಲ್‌ಜೆಪಿ ಮುಖಂಡ ರಾಮ್‌ವಿಲಾಸ್ ಪಾಸ್ವಾನ್ ಅವರ ನಿಧನದೊಂದಿಗೆ, ಕೇಂದ್ರದ ಅಧಿಕಾರಾರೂಢ ಎನ್‌ಡಿಎ ಮೈತ್ರಿಕೂಟ ಸಂಪುಟದಲ್ಲಿ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ರಾಮದಾಸ್ ಅಠಾವಳೆ ಅವರನ್ನು ಹೊರತುಪಡಿಸಿ, ಎಲ್ಲ ಬಿಜೆಪಿಯೇತರ ಮುಖ ಮಾಯವಾದಂತಾಗಿದೆ. ಬಿಜೆಪಿ ಮಿತ್ರಪಕ್ಷಗಳು ಹಲವು ಸಂಸದರನ್ನು ಹೊಂದಿದ್ದರೂ, ಸಂಪುಟ ಮಾತ್ರ ಇದೀಗ ಬಹುತೇಕ ಬಿಜೆಪಿಗೆ ಸೀಮಿತವಾಗಿದೆ. ಕಳೆದ ವರ್ಷ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಬಳಿಕ ಅಧಿಕಾರ ಹಂಚಿಕೆ ಸಂಘರ್ಷದ ಹಿನ್ನೆಲೆಯಲ್ಲಿ ತನ್ನ ಪ್ರತಿನಿಧಿ ಅರವಿಂದ್ ಸಾವಂತ್...
ಹೆಚ್ಚಿನ ಸುದ್ದಿ

ಜೈಲುಹಕ್ಕಿ ಸಂಜನಾಗೆ ಜನ್ಮ ದಿನದ ಸಂಭ್ರಮ-ಕಹಳೆ ನ್ಯೂಸ್

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ಸಂಜನಾಗೆ ಇವತ್ತು ಹುಟ್ಟುಹಬ್ಬದ ದಿನ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಸಂಜನಾ ಗರ್ಲಾನಿ ಕಳೆದ ವರ್ಷ ಅಭಿಮಾನಿಗಳು, ಕುಟುಂಬದವರು ಹಾಗೂ ಆತ್ಮೀಯರೊಂದಿಗೆ ಅದ್ದೂರಿಯಾಗಿ ಜನ್ಮದಿನ ಆಚರಿಸಿಕೊಂಡಿದ್ದರು. ಹೈಫೈ ಪಾರ್ಟಿಗಳ ಮೂಲಕ ಜನ್ಮದಿನವನ್ನು ಸಂಭ್ರಮದಿಂದ ಆಚರಿಸಿಕೊಂಡಿದ್ದ ಸಂಜನಾ ಈ ಬಾರಿ ಜೈಲಿನಲ್ಲಿಯೇ ಹುಟ್ಟುಹಬ್ಬದ ದಿನ ಕಳೆಯುವಂತಾಗಿದೆ. ನಟಿ ರಾಗಿಣಿಯೊಂದಿಗೆ ಜೈಲಲ್ಲಿ ಜಗಳವಾಡಿಕೊಂಡಿದ್ದ ಸಂಜನಾರನ್ನು ಬೇರೆ ಕೊಠಡಿಗೆ ಸ್ಥಳಾಂತರ ಮಾಡಲಾಗಿದೆ ಎಂದು ಹೇಳಲಾಗಿದೆ....
1 163 164 165 166 167 174
Page 165 of 174