Friday, June 19, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಹಿರಿಯ ಯಕ್ಷಗಾನ ಭಾಗವತ ತೆಂಕಬೈಲು ತಿರುಮಲೇಶ್ವರ ಶಾಸ್ತ್ರಿ ಇನ್ನಿಲ್ಲ- ಕಹಳೆ ನ್ಯೂಸ್

ವಿಟ್ಲ: ಕರೋಪಾಡಿ ಗ್ರಾಮದ ತೆಂಕಬೈಲು ನಿವಾಸಿ, ಹಿರಿಯ ಯಕ್ಷಗಾನ ಭಾಗವತ, ಯಕ್ಷಗುರು ತೆಂಕಬೈಲು ತಿರುಮಲೇಶ್ವರ ಶಾಸ್ತ್ರಿ (76) ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೆ.27ರಂದು ನಿಧನ ಹೊಂದಿದರು. ಅವರು ಪುತ್ರ-ಹವ್ಯಾಸಿ ಭಾಗವತ-ಶಿಕ್ಷಕ ಮುರಳೀಕೃಷ್ಣ ಶಾಸ್ತ್ರಿ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ತನ್ನದೇ ಶೈಲಿಯ ಹಾಡುಗಾರಿಕೆಯಿಂದ ಕಲಾಭಿಮಾನಿಗಳ ಮನಗೆದ್ದಿದ್ದ ಅವರು ಉಡುಪಿ ಯಕ್ಷಗಾನ ಕಲಾರಂಗ, ದ.ಕ.ಜಿಲ್ಲಾ ರಾಜ್ಯೋತ್ಸವ, ಕುರಿಯ ವಿಟ್ಠಲ ಶಾಸ್ತ್ರಿ, ಸಂಪಾಜೆ ಡಾ.ಕೀಲಾರು ಗೋಪಾಲಕೃಷ್ಣಯ್ಯ ಪ್ರತಿಷ್ಠಾನ, ಪದ್ಯಾಣ, ಪಟ್ಟಾಜೆ, ದಿವಾಣ...
ಹೆಚ್ಚಿನ ಸುದ್ದಿ

ನಾಳೆ ಕರ್ನಾಟಕ ಬಂದ್ : ಏನಿರುತ್ತೆ? ಏನಿರಲ್ಲ? ಇಲ್ಲಿದೆ ನೋಡಿ ಫುಲ್ ಡಿಟೇಲ್ಸ್- ಕಹಳೆ ನ್ಯೂಸ್

ಬೆಂಗಳೂರು : ಕೇಂದ್ರ ಸರ್ಕಾರದ ನಡೆ ವಿರೋಧಿಸಿ ರೈತಪರ ಸಂಘಟನೆಯಿಂದ ಸೆ . 28 ರ ಸೋಮವಾರ ಅಂದರೆ ನಾಳೆ ರೈತ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿವೆ. ಎಪಿಎಂಸಿ ಹಾಗೂ ಭೂಸುಧಾರಣಾ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತಪರ ಸಂಘಟನೆಗಳು ಹಾಗೂ ಕಾರ್ಮಿಕ ಸಂಘಟನೆಗಳಿಂದ ನಾಳೆ ರಾಜ್ಯ ಬಂದ್ ಗೆ ಕರೆ ನೀಡಲಾಗಿದೆ. ನಾಳೆಯ ಕರ್ನಾಟಕ ಬಂದ್ ಗೆ 40 ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ನೀಡಿದ್ದು, ಓಲಾ,...
ಹೆಚ್ಚಿನ ಸುದ್ದಿ

ದ್ವಿತೀಯ ಪಿಯುಸಿ ಪಠ್ಯ ಕಡಿತ? ಸಚಿವ ಸುರೇಶ್ ಕುಮಾರ್ ಹೇಳಿದ್ದೇನು?-ಕಹಳೆ ನ್ಯೂಸ್

ಬೆಂಗಳೂರು : ದ್ವಿತೀಯ ಪಿಯುಸಿ ಪಠ್ಯದಲ್ಲಿ ಶೇ. 40 ರಷ್ಟು ಕಡಿತ ಮಾಡಲಾಗುತ್ತದೆ ಎಂಬ ಸುದ್ದಿಗಳು ಬಂದ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು. ದ್ವಿತೀಯ ಪಿಯುಸಿ ಪಠ್ಯದಲ್ಲಿ ಶೇ. 40 ರಷ್ಟು ಕಡಿತ ಮಾಡಲಾಗುತ್ತದೆ ಎಂಬ ವಿಚಾರ ಮಾಧ್ಯಮಗಳಲ್ಲಿ ಬಂದಿದೆ. ಆದರೆ ಈ ವಿಚಾರ ನನ್ನ ಬಳಿ ಚರ್ಚೆಗೆ ಬಂದಿಲ್ಲ. ಈ ಬಗ್ಗೆ ನಾನು ಇಂದು ಶಿಕ್ಷಣ...
ಹೆಚ್ಚಿನ ಸುದ್ದಿ

ಗ್ರಾ.ಪಂ ಚುನಾವಣೆ : ಸೂಕ್ತ ಬಂದೋಬಸ್ತ್‌ಗೆ ಪೊಲೀಸರಿಗೆ ಆಯೋಗ ಪತ್ರ-ಕಹಳೆ ನ್ಯೂಸ್

ಬೆಂಗಳೂರು, ಸೆ.25- ಅಕ್ಟೋಬರ್- ನವೆಂಬರ್‍ನಲ್ಲಿ ನಡೆಯಲಿರುವ ಗ್ರಾಮ ಪಂಚಾಯತಿ ಚುನಾವಣೆಗೆ ಸೂಕ್ತ ಬಂದೋಬಸ್ತ್ ಏರ್ಪಡಿಸುವಂತೆ ರಾಜ್ಯ ಚುನವಣಾ ಆಯೋಗ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ಕೊರೊನಾ ವೈರಾಣು ಸಂಕಷ್ಟದ ಕಾಲದಲ್ಲಿ ಪಂಚಾಯತ್ ಚುನಾವಣೆಯನ್ನು ಮುಂದೂಡಲು ರಾಜ್ಯ ಬಿಜೆಪಿ ಸರ್ಕಾರ ಕೋರಿರುವ ಮಧ್ಯೆಯೇ ಚುನಾವಣೆ ನಡೆಸಲು ಆಯೋಗ ಕಾರ್ಯೋನ್ಮುಖವಾಗಿರುವುದು ಮಹತ್ವ ಪಡೆದುಕೊಂಡಿದೆ. ರಾಜ್ಯಾದ್ಯಂತ 5800 ಗ್ರಾಮ ಪಂಚಾಯತಿಗಳಿಗೆ 2020ರ ಅಕ್ಟೋಬರ್ - ನವೆಂಬರ್‍ನಲ್ಲಿ ಸಾರ್ವತ್ರಿಕ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ. ಈ ಚುನಾವಣೆಗೆ...
ಹೆಚ್ಚಿನ ಸುದ್ದಿ

BIG NEWS : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ : ಸಿಸಿಬಿಯಿಂದ ‘ನಿರೂಪಕಿ ಅನುಶ್ರೀ’ಗೂ ನೋಟಿಸ್-ಕಹಳೆ ನ್ಯೂಸ್

ಮಂಗಳೂರು : ಡ್ಯಾನ್ಸರ್ ಕಿಶೋರ್ ಶೆಟ್ಟಿ ಆಪ್ತ ತರುಣ್ ನೀಡಿದಂತ ಮಾಹಿತಿಯನ್ನು ಆಧರಿಸಿ, ಮಂಗಳೂರಿನ ಸಿಸಿಬಿ ಪೊಲೀಸರು ಖ್ಯಾತ ನಿರೂಪಕಿ ಅನುಶ್ರೀಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ. ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಮಂಗಳೂರಿನಲ್ಲಿ ಸಿಸಿಬಿ ಪೊಲೀಸರು ಡ್ಯಾನ್ಸರ್ ಕಿಶೋರ್ ಶೆಟ್ಟಿ ಆಪ್ತ ತರುಣ್ ಅವರನ್ನು ಬಂಧಿಸಿದ್ದರು. ಇಂತಹ ತರುಣ್ ಅನ್ನು ತೀವ್ರ ವಿಚಾರಣೆ ನಡೆಸಿದ್ದಂತ ಸಿಸಿಬಿ ಪೊಲೀಸರಿಗೆ ನಿರೂಪಕಿ ಅನುಶ್ರೀ ಅವರ ಹೆಸರನ್ನು ಬಾಯ್ಬಿಟ್ಟಿದ್ದ ಎನ್ನಲಾಗಿದೆ. ತರುಣ್...
ಹೆಚ್ಚಿನ ಸುದ್ದಿ

BIG BREAKING : ರೈತ ಸಂಘಟನೆಗಳಿಂದ ಸೆ. 28 ರಂದು ಕರ್ನಾಟಕ ಬಂದ್ ಗೆ ಕರೆ-ಕಹಳೆ ನ್ಯೂಸ್

ಬೆಂಗಳೂರು : ಕೇಂದ್ರ ಸರ್ಕಾರದ ನಡೆ ವಿರೋಧಿಸಿ ರೈತಪರ ಸಂಘಟನೆಗಳು ಶುಕ್ರವಾರದ ಬದಲಾಗಿ ಸೋಮವಾರ ಕರ್ನಾಟಕ ಬಂದ್ ಗೆ ಮುಂದಾಗಿವೆ ಎನ್ನಲಾಗುತ್ತಿದೆ. ಸೆ. 25 ರ ಶುಕ್ರವಾರ ಕರ್ನಾಟಕ ಬಂದ್ ಇಲ್ಲ, ಹೆದ್ದಾರಿಗಳನ್ನು ಮಾತ್ರ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತೇವೆ ಎಂದು ರೈತ ಮುಖಂಡ ಕುರಬೂರು ಶಾಂತಕುಮಾರ್ ಹೇಳಿದ್ದರು. ಆದರೆ ಇದೀಗ ಮತ್ತೊಂದು ಬಣ ಸೆ. 28 ರ ಸೋಮವಾರ ಕರ್ನಾಟಕ ಬಂದ್ ಮಾಡಲು ಮುಂದಾಗಿವೆ ಎನ್ನಲಾಗಿದೆ. ಈಗಾಗಲೇ ಸೆಪ್ಟೆಂಬರ್...
ಹೆಚ್ಚಿನ ಸುದ್ದಿ

ಕೊರೊನಾ ಲಸಿಕೆ ನಿರೀಕ್ಷೆಯಲ್ಲಿದ್ದವರಿಗೆ ‘ಬಿಗ್ ಶಾಕ್’- ಕಹಳೆ ನ್ಯೂಸ್

ಕೊರೊನಾ ವೈರಸ್ ಲಸಿಕೆ ಕಂಡು ಹಿಡಿಯುವ ಪ್ರಯತ್ನ ಜಗತ್ತಿನಾದ್ಯಂತ ನಡೆಯುತ್ತಿದೆ. ಆದ್ರೆ ಡಬ್ಲ್ಯು ಎಚ್ ಒ ಮುಖ್ಯಸ್ಥರು ನಿರಾಶೆ ವಿಷ್ಯವನ್ನು ಹೇಳಿದ್ದಾರೆ. ಕೊರೊನಾ ಲಸಿಕೆ ಕಂಡು ಹಿಡಿದ್ರೂ ಅದು ಕೊರೊನಾ ನಿರ್ಮೂಲನೆ ಮಾಡಲು ಯಶಸ್ವಿಯಾಗುತ್ತೆ ಎಂದು ಸ್ವಷ್ಟವಾಗಿ ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ. ಸುದ್ದಿಗೋಷ್ಠಿ ನಡೆಸಿದ ಅವರು ಪ್ರಪಂಚದಾದ್ಯಂತ ಲಸಿಕೆಗಳ ತಯಾರಿ ನಡೆಯುತ್ತಿದೆ. ಆದ್ರೆ ಎಲ್ಲ ಲಸಿಕೆಗಳು ಕೊರೊನಾ ಹೊಡೆದೋಡಿಸುವಲ್ಲಿ ಯಶಸ್ವಿಯಾಗುತ್ತೆ ಎಂಬುದು ಕಷ್ಟ. ಸುರಕ್ಷಿತ ಹಾಗೂ ಪರಿಣಾಮಕಾರಿ ಲಸಿಕೆ ಸಿಗಬೇಕೆಂದು...
ಹೆಚ್ಚಿನ ಸುದ್ದಿ

ಬಿ ಎಸ್ ಯಡಿಯೂರಪ್ಪ ಸೇರಿ 7 ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್-ಕಹಳೆ ನ್ಯೂಸ್

ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅತೀ ಹೆಚ್ಚು ಕೇಸು ದಾಖಲಾಗಿರುವ ಕರ್ನಾಟಕ ಸೇರಿದಂತೆ 7 ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರ ಜೊತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ಆನ್'ಲೈನ್ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಆರೋಗ್ಯ ಸಚಿವ ಶ್ರೀರಾಮುಲು ಅವರು ಪಾಲ್ಗೊಳ್ಳಲಿದ್ದಾರೆಂದು ತಿಳಿದುಬಂದಿದೆ. ಬುಧವಾರದ ಸಭೆಯಲ್ಲಿ ಭಾಗಿಯಾಗಲಿರುವ ಇತರೆ ರಾಜ್ಯಗಳೆಂದರೆ ಮಹಾರಾಷ್ಟ್ರ, ಆಂಧ್ರಪ್ರದೇಶ, ಉತ್ತರಪ್ರದೇಶ, ತಮಿಳುನಾಡು, ದೆಹಲಿ...
1 167 168 169 170 171 174
Page 169 of 174