ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ: ಆರೋಪಿ ಬಂಧನ – ಕಹಳೆ ನ್ಯೂಸ್
ಮಂಗಳೂರು: ಬಜಪೆಯ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿದ್ದ ಆರೋಪಿಯನ್ನು ಇಲ್ಲಿನ ಪೊಲೀಸರು ತಮಿಳುನಾಡಿನ ವೆಲ್ಲೂರಿನಲ್ಲಿ ಬಂಧಿಸಿದ್ದಾರೆ. ತಮಿಳುನಾಡಿನ ವೆಲ್ಲೂರು ಜಿಲ್ಲೆಯ ನಿವಾಸಿ ಶಶಿಕುಮಾರ್ (38) ಬಂಧಿತ ಆರೋಪಿ. ಈತ ಆ.29ರಂದು ರಾತ್ರಿ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕರೆ ಮಾಡಿ, 'ಟರ್ಮಿನಲ್ ಬಿಲ್ಡಿಂಗ್ ಅನ್ನು ಖಾಲಿ ಮಾಡಬೇಕು. ಇಲ್ಲವಾದರೆ ಧ್ವಂಸ ಮಾಡುತ್ತೇನೆ' ಎಂದು ಬೆದರಿಕೆ ಹಾಕಿದ್ದ. ಕರ್ತವ್ಯ ನಿರತ ಟರ್ಮಿನಲ್ ವ್ಯವಸ್ಥಾಪಕರು, ಬಜಪೆ ಪೊಲೀಸ್ ಠಾಣೆಗೆ...







