Friday, March 13, 2026

ಹೆಚ್ಚಿನ ಸುದ್ದಿ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ಕಲ್ಲಡ್ಕ ನೇತಾಜಿ ಸ್ಮೃತಿ ಭವನದಲ್ಲಿ ಜನಾಗ್ರಹ ಸಭೆಯ ಯಶಸ್ವಿಗೆ ಪೂರ್ವಭಾವಿ ಸಭೆ -ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀ ಧರ್ಮಸ್ಥಳ ಧರ್ಮ ರಕ್ಷಣಾ ವೇದಿಕೆ ಬಂಟ್ವಾಳ ವತಿಯಿಂದ ಆಗಸ್ಟ್ 20 ರಂದು ಬಂಟ್ವಾಳ ಸ್ಪರ್ಶ ಕಲಾ ಮಂದಿರದಲ್ಲಿ ಜರಗುವ ಜನಾಗೃಹ ಸಭೆಯ ಯಶಸ್ವಿಗೆ ಕಲ್ಲಡ್ಕ ನೇತಾಜಿ ಸ್ಮೃತಿ ಭವನದಲ್ಲಿ ಪೂರ್ವಭಾವಿ ಸಭೆ ಸೋಮವಾರ ಜರಗಿತು. ಧರ್ಮಸ್ಥಳ ಕ್ಷೇತ್ರದ ಕುರಿತು ಮಾಡುವ ಅಪಪ್ರಚಾರ ಹಾಗೂ ಧರ್ಮಾಧಿಕಾರಿ ವೀರೇಂದ್ರ ಹೆಗ್ಡೆಯವರ ತೇಜೋವದೇಯ ವಿರುದ್ಧ ಪ್ರತಿಭಟಿಸಲು ಆಯೋಜಿತ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಕಾರ್ಯಕ್ರಮದಲ್ಲಿ ಭಾಗವಹಿಸಿದ...
ಜಿಲ್ಲೆಬೆಳ್ತಂಗಡಿಸುದ್ದಿಹೆಚ್ಚಿನ ಸುದ್ದಿ

ನಾಳೆ ಶ್ರೀ ಧರ್ಮಸ್ಥಳದಲ್ಲಿ 31ನೇ ವರ್ಷದ ಜ್ಞಾನ ಪಥ ಮತ್ತು ಜ್ಞಾನ ರಥ 2025ನೇ ಸಾಲಿನ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ ಸಮಾರಂಭ ಹಾಗೂ 22ನೇ ವರ್ಷದ ರಾಜ್ಯ ಮಟ್ಟದ ಅಂಚೆ – ಕುಂಚ ವಿಜೇತರಿಗೆ ಪುರಸ್ಕಾರ ಸಮಾರಂಭ – ಕಹಳೆ ನ್ಯೂಸ್

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಶಾಲಾ ಶಿಕ್ಷಣ ಮತ್ತು ಇಲಾಖೆ, ಕರ್ನಾಟಕ ಸರ್ಕಾರ ಇವರ ಸಹಯೋಗದಲ್ಲಿ 31ನೇ ವರ್ಷದ ಜ್ಞಾನ ಪಥ ಮತ್ತು ಜ್ಞಾನ ರಥ 2025ನೇ ಸಾಲಿನ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ ಸಮಾರಂಭ ಹಾಗೂ 22ನೇ ವರ್ಷದ ರಾಜ್ಯ ಮಟ್ಟದ ಅಂಚೆ - ಕುಂಚ ವಿಜೇತರಿಗೆ ಪುರಸ್ಕಾರ ಸಮಾರಂಭವು ಆ.19 ರಂದು ಮಹೋತ್ಸವ ಸಭಾಭವನ, ಶ್ರೀ...
ಜಿಲ್ಲೆಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ರಾಜ್ಯದಲ್ಲಿ ಪರಿಷ್ಕರಣೆ ಪೂರ್ಣಗೊಂಡ ತಕ್ಷಣ `ಹೊಸ `BPL’ ಕಾರ್ಡ್ ವಿತರಣೆ : ಸಚಿವ ಕೆ.ಹೆಚ್.ಮುನಿಯಪ್ಪ

ಬೆಂಗಳೂರು : ಹೊಸ `BPL' ರೇಷನ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಪರಿಷ್ಕರಣೆ ಬಳಿಕ ಹೊಸ ಕಾರ್ಡ್ ವಿತರಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಪ್ರತಾಪ್ ಸಿಂಹ ನಾಯಕ್ ಕೆ. ಮತ್ತು ಡಾ. ಯತೀಂದ್ರ ಎಸ್. ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪರಿಷ್ಕರಣೆ ಕಾರ್ಯ ಪೂರ್ಣಗೊಂಡ ತಕ್ಷಣ ಅರ್ಹ ಫಲಾನುಭವಿಗಳಿಗೆ ಹೊಸ ಬಿಪಿಎಲ್ ಪಡಿತರ ಕಾರ್ಡ್ಗಳನ್ನು...
ಜಿಲ್ಲೆಬೆಂಗಳೂರುರಾಜ್ಯರಾಷ್ಟ್ರೀಯಸಿನಿಮಾಸುದ್ದಿಹೆಚ್ಚಿನ ಸುದ್ದಿ

ಅಶ್ಲೀಲ ಕಮೆಂಟ್ ಮಾಡಿದ 7 ಮಂದಿ ಅರೆಸ್ಟ್ : ನಟಿ ರಮ್ಯಾ ಹೇಳಿಕೆ -ಕಹಳೆ ನ್ಯೂಸ್

ಬೆಂಗಳೂರು : ಅಶ್ಲೀಲ ಕಮೆಂಟ್ ಮಾಡಿದ 7 ಜನರನ್ನು ಪೊಲೀಸರು ಬಂಧಿಸಿದ್ದಾರೆ, ಇನ್ನೂ ಬಹಳಷ್ಟು ಜನ ಅರೆಸ್ಟ್ ಆಗೋದು ಬಾಕಿಯಿದೆಎಂದು ನಟಿ ರಮ್ಯಾ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್ ಮಾಡಿದ 7 ಜನರು ಅರೆಸ್ಟ್ ಆಗಿದ್ದಾರೆ. ಇನ್ನೂ ಬಹಳಷ್ಟು ಜನರು ಅರೆಸ್ಟ್ ಆಗೋದು ಬಾಕಿ ಇದೆ. ಈ ಅಶ್ಲೀಲ ಕಮೆಂಟ್ ಬರೋದು ಕಡಿಮೆಯಾಗಿದೆ. ಕೆಟ್ಟದಾಗಿರೋ ಮೆಸೇಜ್ ಗಳು ನನಗೆ ಬರುತ್ತಿಲ್ಲ ಎಂದು ಹೇಳಿದ್ದಾರೆ. ಯಾವ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಅಕ್ಷಯ ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಅಭಿಯಾನ ಜಾಗೃತಿ ಕಾರ್ಯಕ್ರಮ -ಕಹಳೆ ನ್ಯೂಸ್

ಪುತ್ತೂರು: ಅಕ್ಷಯ ಕಾಲೇಜು, ಪುತ್ತೂರಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕ ಮತ್ತು ಐಕ್ಯೂಎಸಿ ಸಹಯೋಗದಲ್ಲಿ ‘ನಶಾ ಮುಕ್ತ ಭಾರತ ಅಭಿಯಾನ’ ಜಾಗೃತಿ ಕಾರ್ಯಕ್ರಮವನ್ನು ಆಗಸ್ಟ್ 13, 2025 ರಂದು ಕಾಲೇಜು ಸಭಾಂಗಣದಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಗ್ರಾಮಾಂತರ ಪೊಲೀಸ್ ಠಾಣೆ, ಪುತ್ತೂರಿನ ಉಪನಿರೀಕ್ಷಕರಾದ ಜಂಬುರಾಜ್ ಬಿ. ಮಹಾಜನ್ ಉದ್ಘಾಟಿಸಿದರು. ಅವರು ಮಾತನಾಡಿ, “ಮಾದಕ ವ್ಯಸನವು ವ್ಯಕ್ತಿಯ ಜೀವನವನ್ನಷ್ಟೇ ಅಲ್ಲ, ಕುಟುಂಬ ಮತ್ತು ಸಮಾಜದ ಶಾಂತಿಯನ್ನೂ ಹಾಳುಮಾಡುತ್ತದೆ. ವಿದ್ಯಾರ್ಥಿಗಳು ಇಂತಹ ವ್ಯಸನದ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ವಿಟ್ಲದ ನಾಡ ಕಚೇರಿಗೆ ನೂತನ ಕಟ್ಟಡ: ವ್ಯವಸ್ಥೆಯೇ ಇಲ್ಲ – ಕಹಳೆ ನ್ಯೂಸ್

ವಿಟ್ಲ: ವಿಟ್ಲ ಹೋಬಳಿಗೆ ಸಂಬಂಧಿಸಿದ ನಾಡಕಚೇರಿಯ ನೂತನ ಕಟ್ಟಡ ಉದ್ಘಾಟನೆಗೊಂಡರೂ ಮೂಲ ಸವಲತ್ತಿನ ಕೊರತೆಯಿಂದ ಸಾರ್ವಜನಿಕರು, ಇಸಬ್ಬಂದಿ ತೊಂದರೆ ಅನುಭವಿಸುತ್ತಿದ್ದಾರೆ. ಹೋಬಳಿಗೆ ಸಂಬಂಧಿಸಿ ನಾಡಕಚೇರಿಗೆ ನೂತನ ಕಟ್ಟಡ ನಿರ್ಮಿಸಿ ಕಚೇರಿ ಸ್ಥಳಾಂತರಿಸಲಾಗಿದೆ. ಆದರೆ, ಇಲ್ಲಿ ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ, ಪ್ರಿಂಟರ್, ಇನ್ವರ್ಟರ್ ಇಲ್ಲದೆ ಜನರ ಕೆಲಸಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಈ ಹಿಂದೆ ವಿಟ್ಲ ನಾಡಕಚೇರಿ ಕಟ್ಟಡ ಐ.ಬಿ (ಅತಿಥಿಗೃಹ)ದ ಪಕ್ಕದ ಹಳೆಯ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿತ್ತು. ಇಲ್ಲಿ ದಾಖಲೆ ಪತ್ರ...
ಜಿಲ್ಲೆದೆಹಲಿರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಆಗಸ್ಟ್ 18ರಂದು ಚೀನಾದ ‘ವಿದೇಶಾಂಗ ಸಚಿವ ವಾಂಗ್ ಯಿ’ ಭಾರತಕ್ಕೆ ಆಗಮನ -ಕಹಳೆ ನ್ಯೂಸ್

ನವದೆಹಲಿ : ಹಿಮಾಲಯದಲ್ಲಿನ ವಿವಾದಿತ ಗಡಿ ಕುರಿತು ಮಾತುಕತೆ ನಡೆಸಲು ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಆಗಸ್ಟ್ 18-20 ರವರೆಗೆ ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ಚೀನಾದ ವಿದೇಶಾಂಗ ಸಚಿವಾಲಯ ಆಗಸ್ಟ್ 16 ರಂದು ಹೇಳಿಕೆಯಲ್ಲಿ ತಿಳಿಸಿದೆ. ನವದೆಹಲಿಯ ಆಹ್ವಾನದ ಮೇರೆಗೆ ವಾಂಗ್ ಚೀನಾ ಮತ್ತು ಭಾರತದ ವಿಶೇಷ ಪ್ರತಿನಿಧಿಗಳ ನಡುವೆ ಗಡಿ ಪ್ರಶ್ನೆಯ ಕುರಿತು 24 ನೇ ಸುತ್ತಿನ ಮಾತುಕತೆ ನಡೆಸಲಿದ್ದಾರೆ. 2020 ರಲ್ಲಿ ಗಡಿಯಲ್ಲಿ ಭಾರತ...
ಉತ್ತರಕನ್ನಡಜಿಲ್ಲೆಸಂತಾಪಸುದ್ದಿಹೆಚ್ಚಿನ ಸುದ್ದಿ

ನಿಂತಿದ್ದ ಲಾರಿಗೆ ಕೆಎಸ್​​ಆರ್​​ಟಿಸಿ ಬಸ್ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು -ಕಹಳೆ ನ್ಯೂಸ್

ಕಾರವಾರ : ನಿಂತಿದ್ದ ಲಾರಿಗೆ ಕೆಎಸ್​​ಆರ್​​ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು 7 ಜನರ ಸ್ಥಿತಿ ಗಂಭೀರವಾಗಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಳ್ಳಿ ಕ್ರಾಸ್​ನಲ್ಲಿ ನಡೆದಿದೆ. ಓವರ್​ಟೇಕ್​ ಮಾಡುವ ಸಂದರ್ಭದಲ್ಲಿ ಬಸ್ ಲಾರಿಗೆ ಡಿಕ್ಕಿ ಹೊಡೆದು ಭೀಕರ ಅಫಘಾತ ಸಂಭವಿಸಿದೆ. ಮೃತ ಮೂವರು ಬಾಗಲಕೋಟೆ ಮೂಲದವರು. ಗಾಯಾಳುಗಳಿಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಬಸ್ ಚಾಲಕನ ಮೇಲೆ ಪ್ರಕರಣ ದಾಖಲು...
1 33 34 35 36 37 174
Page 35 of 174