ಶೋಪಿಯಾನ್ ಎನ್ಕೌಂಟರ್ ; ಏಳು ಉಗ್ರರನ್ನು ಸದೆಬಡಿದ ಭಾರತೀಯ ಭದ್ರತಾ ಸೇನೆ-ಕಹಳೆ ನ್ಯೂಸ್
ಜಮ್ಮು-ಕಾಶ್ಮೀರ : ಅಲ್ ಖೈದಾ ಉಗ್ರ ಸಂಘಟನೆಯ ಅಂಗಸಂಸ್ಥೆ ಅನ್ಸಾರ್ ಗಜ್ವತ್ ಉಲ್ ಹಿಂದ್ ಮುಖ್ಯಸ್ಥ ಸೇರಿದಂತೆ ಏಳು ಉಗ್ರರನ್ನು ದಕ್ಷಿಣ ಕಾಶ್ಮೀರದಲ್ಲಿ ಶುಕ್ರವಾರ ನಡೆದ ಎರಡು ಪ್ರತ್ಯೇಕ ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ ಎಂದು ಜಮ್ಮು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ. ಪುಲ್ವಾಮಾದ ಟ್ರಾಲ್ ಪ್ರದೇಶದಲ್ಲಿರುವ ತೋಟದೊಳಗಿನ ಅಡಗುತಾಣವೊಂದರಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಎಜಿಹೆಚ್ ಮುಖ್ಯಸ್ಥ ಇಮ್ತಿಯಾಜ್ ಷಾ ಮತ್ತು ಮತ್ತೊಬ್ಬ ಉಗ್ರನನ್ನು ಹಾಗೂ ಶೋಪಿಯಾನ್ ಜಿಲ್ಲೆಯಲ್ಲಿ...







