ಸಂಸ್ಥಾಪನೋತ್ಸವ – ಹವ್ಯಕ ವಿಶೇಷ ಪ್ರಶಸ್ತಿ ಪ್ರದಾನ ಕಾರ್ಯಕ್ರಮ। ಬೇರೆಯವರನ್ನು ದ್ವೇಷಿಸುವ ಪ್ರವೃತ್ತಿ ನಮ್ಮದಲ್ಲ, ಮಲೆನಾಡು ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ; ಎಸ್ ಗುರುಮೂರ್ತಿ-ಕಹಳೆ ನ್ಯೂಸ್
ಬೇರೆಯವರನ್ನು ದ್ವೇಷಿಸುವ ಪ್ರವೃತ್ತಿ ನಮ್ಮದಲ್ಲ, ಬೇರೆಯವರಿಗೆ ಮಾರ್ಗದರ್ಶನ ಮಾಡಿಕೊಂಡು ಬಂದವರು ನಾವು. ನಮ್ಮತನವನ್ನು ಉಳಿಸಿಕೊಳ್ಳಲು ಬ್ರಾಹ್ಮಣರೆಲ್ಲರೂ ಒಗ್ಗಟ್ಟಾಗಿ ನಡೆಯಬೇಕಾಗಿದೆ ಎಂದು ಮಲೆನಾಡು ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಎಸ್ ಗುರುಮೂರ್ತಿ ಹೇಳಿದರು. ಹವ್ಯಕ ಮಹಾಸಭೆಯಲ್ಲಿ ನಡೆದ ಸಂಸ್ಥಾಪನೋತ್ಸವ - ವಿಶೇಷ ಪ್ರಶಸ್ತಿ ಪ್ರದಾನ ಹಾಗೂ ಪಲ್ಲವ ಪುರಸ್ಕಾರ ಕಾರ್ಯಕ್ರಮದಲ್ಲಿ ಅಭ್ಯಾಗತರಾಗಿ ಭಾಗವಹಿಸಿ ಮಾತನಾಡಿದ ಅವರು, ಸ್ವಾತಂತ್ರ್ಯ ಪೂರ್ವದಲ್ಕೇ ಹುಟ್ಟಿದ ಹವ್ಯಕ ಮಹಾಸಭೆಯು ಈ ಎತ್ತರಕ್ಕೆ ಬೆಳೆದಿದೆ. ವಿಶ್ವಮಟ್ಟದ ವಿವಿಧ ಕ್ಷೇತ್ರದ ಸಾಧಕರನ್ನು...







