ತಲಪಾಡಿ: ಫಾರ್ಮ್ನೊಳಗಿನ ಮರದಲ್ಲಿ ಪತ್ತೆಯಾಗಿರುವ ಅಸ್ಥಿಪಂಜರ ಯಾರದ್ದು ಎನ್ನುವುದನ್ನು ಪತ್ತೆಹಚ್ಚಿದ ಪೊಲೀಸರು – ಕಹಳೆ ನ್ಯೂಸ್
ಉಳ್ಳಾಲ: ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ದೇವಿಪುರದ ಅಕ್ಷಯ ಫಾರ್ಮ್ನಲ್ಲಿ ಮಂಗಳವಾರ (ಅ.8) ಬೆಳಿಗ್ಗೆ ಬೆಳಕಿಗೆ ಮರದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಮಾನವನ ಅಸ್ಥಿಪಂಜರ ಬಿಹಾರ ಮೂಲದಿಂದ ಬಂದು ಮಂಜೇಶ್ವರದಲ್ಲಿ ನೆಲೆಸಿದ್ದ ವ್ಯಕ್ತಿಯದ್ದಿರಬಹುದೆಂದು ಪೊಲೀಸರು ಸಿಕ್ಕ ದಾಖಲೆಗಳ ಆಧಾರದಲ್ಲಿ ಶಂಕಿಸಿದ್ದಾರೆ. ಬಿಹಾರ ಮೂಲದ ರಾಹುಲ್ ಕುಮಾರ್ ಎಂಬಾತ ಎರಡು ತಿಂಗಳ ಹಿಂದೆ ಕೇರಳದಲ್ಲಿ ನಾಪತ್ತೆಯಾದ ಕುರಿತು ಮಂಜೇಶ್ವರ ಠಾಣೆಯಲ್ಲಿ ಆಗಸ್ಟ್ 7ರಂದು ಪ್ರಕರಣ ದಾಖಲಾಗಿತ್ತು. ಆದರೆ ಈತ ಎಲ್ಲಿಗೆ ಹೋಗಿದ್ದಾನೆ...







