Recent Posts

Monday, June 8, 2026

archiveAmith Shaa

ಸುದ್ದಿ

ನಾಳೆ ದಕ್ಷಿಣ ಕನ್ನಡ ಜಿಲ್ಲೆಗೆ ಶಾ ಆಗಮನ | ಎರಡು ದಿನದಲ್ಲಿ ಎಲ್ಲಿಗ್ಗೆಲ್ಲಾ ಹೋಗ್ತಾರೆ ‘ ಶಾ ‘ ಕಾರ್ಯಕ್ರಮಗಳ ಪಟ್ಟಿ ಇಲ್ಲಿದೆ – ಕಹಳೆ ನ್ಯೂಸ್

ಮಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ತಯಾರಿ ನಡೆಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕರಾವಳಿಯಿಂದಲೇ ಆರಂಭಿಕ ಪ್ರವಾಸ ಹಮ್ಮಿಕೊಂಡಿದ್ದಾರೆ. ಸೋಮವಾರ ಸಂಜೆ 5.30ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಬಿಜೆಪಿ ಅಧ್ಯಕ್ಷರನ್ನು ಸಾವಿರಾರು ಕಾರ್ಯಕರ್ತರು ಅದ್ಧೂರಿಯಾಗಿ ಬರಮಾಡಿಕೊಳ್ಳಲಿದ್ದಾರೆ. ಬಳಿಕ ಸುಳ್ಯ ತಾಲೂಕಿನ ಇತಿಹಾಸ ಪ್ರಸಿದ್ದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳಿ ಅಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಫೆಬ್ರವರಿ 20ರ ಪಂಚಮಿಯ ದಿನದಂದು ಬೆಳಗ್ಗೆ ಏಳು ಗಂಟೆಗೆ ವಿಶೇಷ ಪೂಜೆಯಲ್ಲಿ ಪಾಲ್ಗೊಳ್ಳುವರು....
ಸುದ್ದಿ

‘ಶಾ’ ಬರೀ ಹಿಂದುಗಳ ಮನೆಗೆ ಯಾಕೆ ಹೋಗಬೇಕು, ಕರಾವಳಿಯ ಚರ್ಚ್ ಮತ್ತು ಮಸೀದಿಗೂ ಹೋಗಲಿ – ಗುಂಡೂರಾವ್

ಉಡುಪಿ, ಫೆ 17: ಕರಾವಳಿ ಪ್ರವಾಸದ ವೇಳೆ ಅಮಿತ್ ಶಾ ಬರೀ ಹಿಂದೂಗಳ ಮನೆಗೆ ಯಾಕೆ ಹೋಗಬೇಕು. ಚರ್ಚ್, ಮಸೀದಿಗೂ ಶಾ ಹೋಗಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಮಿತ್ ಶಾ ಮಸೀದಿಗೂ ಭೇಟಿ ಕೊಡಲಿ. ಚರ್ಚ್, ದರ್ಗಾಕ್ಕೂ ಶಾ ಹೋಗಲಿ. ಬರೀ ಹಿಂದೂಗಳ ಮನೆಗೆ ಯಾಕೆ ಹೋಗಬೇಕು. ಮೃತ ಮುಸಲ್ಮಾನರ ಮನೆಗೂ ಶಾ ಹೋಗಲಿ. ಸತ್ತವರ ವಿಚಾರದಲ್ಲಿ ಜಾತಿ-ಧರ್ಮ ನೋಡಬೇಡಿ...