Saturday, April 25, 2026

archivearise awake

ಸುದ್ದಿ

ರಾಮಕೃಷ್ಣ ಮಿಷನ್‌ ಸ್ವಚ್ಛತಾ ಅಭಿಯಾನ ನಾಲ್ಕನೇ ವರ್ಷಕ್ಕೆ ಪಾದಾರ್ಪಣೆ ; ‘ಅರೈಸ್‌ ಅವೇಕ್‌’ ಪಾರ್ಕ್‌ ಲೋಕಾರ್ಪಣೆ – ಕಹಳೆ ನ್ಯೂಸ್

ಮಹಾನಗರ: ರಾಮಕೃಷ್ಣ ಮಿಷನ್‌ ಸ್ವಚ್ಛತಾ ಅಭಿಯಾನ ನಾಲ್ಕನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಶುಭ ಘಳಿಗೆಯಲ್ಲಿ ಕರಂಗಲ್ಪಾಡಿಯಲ್ಲಿ ನವೀಕೃತಗೊಳಿಸಿರುವ ಅಕ್ಯುಪ್ರಶರ್‌ ವಾಕಿಂಗ್‌ ಟ್ರ್ಯಾಕ್ 'ಅರೈಸ್‌ ಅವೇಕ್‌' ಪಾರ್ಕನ್ನು ರವಿವಾರ ಉದ್ಘಾಟಿಸಲಾಯಿತು. ಶಾಸಕ ಜೆ.ಆರ್‌. ಲೋಬೋ ಅವರು ಪಾರ್ಕ್‌ ಉದ್ಘಾಟಿಸಿದರು. ಮನಸ್ಸಿನ ಸ್ವಚ್ಛತೆಯಿಂದ ಎಲ್ಲವೂ ಸಾಧ್ಯವಾಗುತ್ತದೆ. ರಾಮಕೃಷ್ಣ ಮಠದವರು ಮಾಡುತ್ತಿರುವ ಸ್ವಚ್ಛತಾ ಅಭಿಯಾನ ಸಾಕಷ್ಟು ಮಂದಿಯ ಮನಸ್ಸು ಪರಿವರ್ತನೆಯ ಜತೆಯಲ್ಲಿ ಜಾಗೃತಿಯನ್ನು ಹುಟ್ಟುಹಾಕಿದೆ ಎಂದು ಅವರು ಹೇಳಿದರು. ರಾಮಕೃಷ್ಣ ಮಠದ ಅಧ್ಯಕ್ಷ ಶ್ರೀ ಜಿತಕಾಮಾನಂದ ಸ್ವಾಮೀಜಿ ಮಾತನಾಡಿ,...