Sunday, April 26, 2026

archivebannanje

ಸುದ್ದಿ

ಬನ್ನಂಜೆ, ಡಾ.ಎನ್ನೆಸ್ಸೆಲ್‌ ಸೇರಿ ಐವರಿಗೆ ಗೌರವ ಪ್ರಶಸ್ತಿ

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯ 2017ನೇ ಸಾಲಿನ ಗೌರವ ಪ್ರಶಸ್ತಿ ಪ್ರಕಟವಾಗಿದ್ದು, ಹಿರಿಯ ಸಾಹಿತಿಗಳಾದ ಬನ್ನಂಜೆ ಗೋವಿಂದಾಚಾರ್ಯ, ಪ್ರೊ.ಎನ್‌.ಎಸ್‌.ಲಕ್ಷ್ಮೀನಾರಾಯಣ ಭಟ್ಟ, ಪ್ರೊ. ಸೋಮಶೇಖರ ಇಮ್ರಾಪುರ, ಪ್ರೊ.ಎಚ್‌.ಜೆ. ಲಕ್ಕಪ್ಪಗೌಡ ಹಾಗೂ ಕಸ್ತೂರಿ ಬಾಯರಿ ಅವರಿಗೆ ಪ್ರಶಸ್ತಿ ಲಭಿಸಿದೆ. 2016ರಲ್ಲಿ ಪ್ರಕಟವಾದ 18 ಪ್ರಕಾರದ ಕೃತಿಗಳಿಗೆ ವಿಮರ್ಶಕರ ಅಭಿಪ್ರಾಯ ಆಧರಿಸಿ ವರ್ಷದ ಅತ್ಯುತ್ತಮ ಕೃತಿಗಳನ್ನು ಆಯ್ಕೆ ಮಾಡಲಾಗಿದೆ. "ಉದಯವಾಣಿ'ಯ ಹಿರಿಯ ಮುಖ್ಯ ಉಪಸಂಪಾದಕ ಎ.ಆರ್‌.ಮಣಿಕಾಂತ್‌ ಹಾಗೂ ಪತ್ರಕರ್ತ ಹ.ಚ.ನಟೇಶಬಾಬು ಅವರ "ಗಿಫೆrಡ್‌' (ಕಥೆಗಳು) ಅನುವಾದ- 1 (ಸೃಜನಶೀಲ ವಿಭಾಗ) ಕೃತಿಯು ಅತ್ಯುತ್ತಮ ಕೃತಿ ಪ್ರಶಸ್ತಿಗೆ ಭಾಜನವಾಗಿದೆ. ಅಕಾಡೆಮಿಯು ಇದೇ ಮೊದಲ ಬಾರಿಗೆ ನೀಡುತ್ತಿರುವ "ಸಾಹಿತ್ಯಶ್ರೀ'...