Recent Posts

Saturday, April 25, 2026

archiveDistrict Hospital

ಸುದ್ದಿ

ರಸ್ತೆ ಅಪಘಾತ ಮಾಡಿದ್ದಕ್ಕೆ ನ್ಯಾಯಾಲಯದಿಂದ ನೋಟಿಸ್, ಆಟೋ ಚಾಲಕ ಆತ್ಮಹತ್ಯೆ – ಕಹಳೆ ನ್ಯೂಸ್

ಚಾಮರಾಜನಗರ: ರಸ್ತೆ ಅಪಘಾತ ಮಾಡಿದ್ದಕ್ಕೆ ನ್ಯಾಯಾಲಯದಿಂದ ನೋಟಿಸ್ ಬಂದಿದ್ದರಿಂದ ಭಯಗೊಂಡ ಆಟೋ ಚಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರ ತಾಲೂಕಿನ ಗೂಳಿಪುರ ಗ್ರಾಮದಲ್ಲಿ ನಡೆದಿದೆ. ಗೂಳಿಪುರ ಗ್ರಾಮದ ನಿವಾಸಿ, ಆಟೋ ಚಾಲಕ ಮಹೇಶ್ ಅಲಿಯಾಸ್ ಬೆಳ್ಳಪ್ಪ(26) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವನು. ಈತ ಕಳೆದ ಒಂದೂವರೆ ವರ್ಷಗಳ ಹಿಂದೆ ಹುರಳಿನಂಜನಪುರ ಬಳಿ ಮಾಡಿದ್ದ ಅಪಘಾತಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗವಂತೆ ನೋಟಿಸ್ ಬಂದಿತ್ತು ಎನ್ನಲಾಗಿದೆ. ಭಾನುವಾರ ರಾತ್ರಿ ಊಟ ಮಾಡಿದ...
ಸುದ್ದಿ

ಆತ್ಮಹತ್ಯೆಗೆ ಯತ್ನ: ಮಗುವಿನ ಸಮೇತ ಬಾವಿಗೆ ಹಾರಿದ ತಾಯಿ – ಕಹಳೆ ನ್ಯೂಸ್

ಕಾರವಾರ ಅಂಗಡಿ ಗ್ರಾಮದ ಕಳಸವಾಡದ ಮಹಿಳೆಯೊಬ್ಬಳು ತನ್ನ ಒಂದೂವರೆ ವರ್ಷದ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಈ ಘಟನೆಯಲ್ಲಿ ಮಗು ಸ್ಥಳದಲ್ಲಿಯೇ ಮೃತಪಟ್ಟರೆ, ತಾಯಿಯನ್ನು ಸ್ಥಳೀಯರು ರಕ್ಷಿಸಿದ್ದಾರೆ. ಇಲ್ಲಿನ ನಿವಾಸಿ ಅಲ್ಫಾನ್ಸೊ ಕುಟಿನ್ಹೊ ತನ್ನ ಮಗುವಿನೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ಅವರ ಪುತ್ರಿ ಸಲೂನ ಕುಟಿನ್ಹೊ ಮೃತಪಟ್ಟಿದ್ದಾಳೆ. ಅಲ್ಫಾನ್ಸೊ ಪತಿ ವಿದೇಶದಲ್ಲಿದ್ದು, ತಾಯಿ ಮತ್ತು ಮಗು ಕಳಸವಾಡದ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಮಹಿಳೆಯು ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದಾಳೆ ಎನ್ನಲಾಗಿದ್ದು,...