Sunday, September 6, 2026

archivekahale news

ಸುದ್ದಿ

ಉಳ್ಳಾಲ: ನೇತ್ರಾವತಿ ನದಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ- ಕಹಳೆ ನ್ಯೂಸ್

ಉಳ್ಳಾಲ: ನೇತ್ರಾವತಿ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಶವ ತೇಲುತ್ತಿರುವುದು ಪತ್ತೆಯಾಗಿದೆ. ನದಿಯಲ್ಲಿ ತೇಲುತ್ತಿರುವ ಮೃತದೇಹವನ್ನು ಗಮನಿಸಿದ  ಉಳ್ಳಾಲದ ಕಿಂಗ್‍ಸ್ಟಾರ್ ಸೇವಾ ಸಮಿತಿಯ ಅಧ್ಯಕ್ಷ ಪ್ರೇಮ್ ಪ್ರಕಾಶ್ ಡಿಸೋಜ ಮತ್ತು ಸದಸ್ಯರಾದ ರಾಕೇಶ್ ಪ್ರಶಾಂತ್ ಡಿಸೋಜ, ಅನಿಲ್ ಮೊಂತೇರೊ ಮತ್ತು ನಿಶಾನ್ ಜಾಯ್ ಲೋಬೋ  ಉಳ್ಳಾಲ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತದೇಹವನ್ನು ಉಳ್ಳಾಲ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ....
ಪುತ್ತೂರುಸುದ್ದಿ

ಪುತ್ತೂರಿನ ಸರಕಾರಿ ಕಾಲೇಜಿನಲ್ಲಿ ಮಾತಿನ ಚಕಮಕಿ – ಕಾಲೇಜಿಗೆ ನುಗ್ಗಿದ ಮುಸ್ಲಿಂ ಸಂಘಟನೆಯ ಯುವಕರು – ಕಹಳೆ ನ್ಯೂಸ್

ಪುತ್ತೂರು : ಕಾಲೇಜು ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆದ ಘಟನೆ ಪುತ್ತೂರಿನ ಸರಕಾರಿ ಕಾಲೇಜಿನಲ್ಲಿ ನಡೆದಿದೆ. ಹಿಂದೂ ಹಾಗೂ ಮುಸ್ಲಿಂ ಯುವಕರ ನಡುವೆ ವೈಯಕ್ತಿಕ ವಿಚಾರಕ್ಕೆ ಮಾತಿಗೆ ಮಾತು ಬೆಳೆದಿತ್ತು. ಕಾಲೇಜಿನ ಹೊರಗಡೆ ನಡೆದಿದ್ದ ಜಗಳ ಇದೀಗ ಕಾಲೇಜ್ ಕ್ಯಾಂಪಸ್‍ವರೆಗೆ ಬಂದಿದ್ದು, ಇಂದು ಮುಸ್ಲಿಂ ಯುವಕರ ಪರವಾಗಿ ಮುಸ್ಲಿಂ ಸಂಘಟನೆಯ ಯುವಕರು ಕಾಲೇಜು ಕ್ಯಾಂಪಸ್ ಬಳಗೆ ನುಗ್ಗಿ ಹಿಂದೂ ಯುವಕರನ್ನ ಪ್ರಶ್ನಿಸಿದ್ದಾರೆ. ವಿದ್ಯಾರ್ಜನೆಗಾಗಿ ಬರುವ ವಿದ್ಯಾರ್ಥಿಗಳು ಈ ರೀತಿ...
ಸುದ್ದಿ

ಮಂಗಳೂರು ಜಿಲ್ಲಾಧಿಕಾರಿಯವರ ಕಚೇರಿಯ ಸಭಾಂಗಣದಲ್ಲಿ ಸರಳವಾಗಿ ಕನಕ ಜಯಂತಿ ಆಚರಣೆ- ಕಹಳೆ ನ್ಯೂಸ್

ಮಂಗಳೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಜಿಲ್ಲಾಧಿಕಾರಿಯವರ ಕಚೇರಿಯ ಸಭಾಂಗಣದಲ್ಲಿ ದಾಸ ಶ್ರೇಷ್ಠ ಭಕ್ತ ಕನಕದಾಸರ ಜಯಂತಿಯನ್ನು ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು. ರಾಜ್ಯ ವಿಧಾನ ಪರಿಷತ್‍ಗೆ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರಕ್ಕೆ ಚುನಾವಣೆ ನಿಗದಿಯಾಗಿರುವ ಕಾರಣ ಚುನಾವಣಾ ನೀತಿ ಸಂಹಿತೆ ಜಾರಿಗೊಂಡಿದ್ದರಿಂದ ಈ ಬಾರಿ ಕನಕ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಕನಕ ದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಬಳಿಕ...
ಸುದ್ದಿ

‘ರಾಜಕೀಯದಿಂದ ದೂರ ಉಳಿಯುತ್ತೇನೆ, ಸಹಕಾರ ಕ್ಷೇತ್ರದಲ್ಲಿ ಪಕ್ಷಾತೀತನಾಗಿ ದುಡಿಯುತ್ತೇನೆ’ ಡಾ. ಎಂ.ಎನ್.ರಾಜೆಂದ್ರ ಕುಮಾರ್ – ಕಹಳೆ ನ್ಯೂಸ್

ಪುತ್ತೂರು: ಡಿಸೆಂಬರ್ ನಲ್ಲಿ ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ನಾನು ಪಕ್ಷೇತರ ಅಭ್ಯರ್ಥಿ ಆಗಿ ಸ್ಪರ್ಧಿಸುವ ನಿರ್ಧಾರ ಮಾಡಿ ಉಭಯ ಜಿಲ್ಲೆಗಳ ರಾಜಕೀಯ ರಂಗದಲ್ಲಿ ಸಂಚಲನ ಮೂಡಿಸಿದ್ದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ.ಎನ್.ರಾಜೆಂದ್ರ ಕುಮಾರ್ ಇದೀಗ ಸ್ಪರ್ಧಾ ನಿರ್ಧಾರದಿಂದ ಹಿಂದೆ ಸರಿಯಲು ನಿರ್ಧರಿಸಿ ಅಚ್ಚರಿ ಮೂಡಿಸಿದ್ದಾರೆ. ಗ್ರಾಮೀಣ ಅಭಿವೃದ್ಧಿಯ ಹರಿಕಾರ ಸಹಕಾರಿ ರಂಗದ ಧುರಿಣ ಡಾಕ್ಟರ್ ಎಮ್ ಎನ್ ರಾಜೇಂದ್ರ ಕುಮಾರ್ ಅವರು,...
ಬಂಟ್ವಾಳ

ಅಂಗಡಿಗೆ ಹೋಗುವುದಾಗಿ ಹೇಳಿ ತೆರಳಿದ್ದ ಯುವತಿ ನಿಗೂಢ ನಾಪತ್ತೆ- ಕಹಳೆ ನ್ಯೂಸ್

ಬಂಟ್ವಾಳ: ಅಂಗಡಿಗೆ ಹೋಗುವುದಾಗಿ ಹೇಳಿ ತೆರಳಿದ್ದ ಯುವತಿ ನಿಗೂಢ ನಾಪತ್ತೆಯಾಗಿರುವ ಘಟನೆ ಬರಿಮಾರು ಗ್ರಾಮದ ಮಧುಗಿರಿಯಲ್ಲಿ ನಡೆದಿದೆ. ದಿವ್ಯಾ ಅವರ ಹಿರಿಯ ಮಗಳು ಜ್ಯೋತಿ (28) ಮನೆಗೆ ಸಾಮಾಗ್ರಿ ತರಲೆಂದು ತಾಯಿ ಬಳಿ 100ರೂ. ಪಡೆದುಕೊಂಡು ತೆರಳಿದಾಕೆ ಮನೆಗೆ ವಾಪಸ್ಸು ಬಾರದೇ ಕಾಣೆಯಾಗಿದ್ದಾಳೆ. ಮೊಬೈಲ್ ಸಂಪರ್ಕಕ್ಕೂ ಸಿಗದೇ ಇದ್ದಾಗ, ಮನೆಯ ಸುತ್ತ ಮುತ್ತ, ಬರಿಮಾರು ಸಮೀಪದಲ್ಲೆಲ್ಲಾ ಹುಡುಕಾಟ ನಡೆಸಿದ್ದಾರೆ. ಆದರೂ ಜ್ಯೋತಿ ಪತ್ತೆಯಾಗದ ಹಿನ್ನಲೆ ತಾಯಿ ದಿವ್ಯಾ ಬಂಟ್ವಾಳ ಗ್ರಾಮಾಂತರ...
ಕ್ರೈಮ್

ಮಡಿಕೇರಿಯ ಅನ್ಯಕೋಮಿನ ಯುವಕನೋರ್ವ ತಾನೂ ಹಿಂದೂ ಯುವಕನೆಂದು ಸುಳ್ಳು ಹೇಳಿ ವಂಚನೆ -ಯುವತಿಯಿಂದ ಸುಳ್ಯ ಠಾಣೆಯಲ್ಲಿ ದೂರು – ಕಹಳೆ ನ್ಯೂಸ್

ಮಡಿಕೇರಿಯ ಅನ್ಯಕೋಮಿನ ಯುವಕನೋರ್ವ ತಾನೂ ಹಿಂದೂ ಯುವಕನೆಂದು ಸುಳ್ಳು ಹೇಳಿ ಯುವತಿಯನ್ನು ನಂಬಿಸಿ ಆಕೆಯನ್ನು ಸುತ್ತಾಡಿಸಿ ಅನುಚಿತವಾಗಿ ವರ್ತಿಸಿರುವ ಕುರಿತು ಯುವತಿ ನೀಡಿದ ದೂರಿನ್ವಯ ಯುವಕನನು ಸುಳ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. 2 ತಿಂಗಳ ಹಿಂದೆ ಜಾಲತಾಣದಲ್ಲಿ ಪರಿಚಯವಾಗಿದ್ದ ಯುವಕ ತನ್ನ ಹೆಸರು ಕೌಶಲ್ ಎಂದು ಹೇಳಿಕೊಂಡಿದ್ದ. ನ 11ರಂದು ಆತ ನನ್ನನ್ನು ಸುಳ್ಯಕ್ಕೆ ಕರೆಯಿಸಿ ಅಲ್ಲಿಂದ ಬೈಕ್ ಮೂಲಕ ಮಡಿಕೇರಿಗೆ ಕರೆದುಕೊಂಡು ಹೋಗಿ ಅನುಚಿತವಾಗಿ ವರ್ತಿಸಿ ನಾನು ಹಿಂದೂ...
ಸುದ್ದಿ

ದತ್ತಮಾಲಾಧಾರಿಗಳ ಬಸ್ ಮೇಲೆ ಕಲ್ಲು ತೂರಾಟ ಪ್ರಕರಣ : 10 ಮಂದಿ ಬಂಧನ – ಕಹಳೆ ನ್ಯೂಸ್

ಕೋಲಾರ: ಚಿಕ್ಕಮಗಳೂರು ಜಿಲ್ಲೆಯ ದತ್ತ ಪೀಠಕ್ಕೆ ಹೊರಟಿದ್ದ ದತ್ತ ಮಾಲಾಧಾರಿಗಳ ಬಸ್ ಮೇಲೆ ಕ್ಲಾಕ್‍ಟವರ್ ಬಳಿ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 10ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದಾರೆ. ರೋಷನ್ ಜಮೀರ್ (29), ಅಕ್ಬರ್ ಖಾನ್ (32), ಮುಕ್ರಂ ಪಾಷಾ (28), ಅಬ್ಬಾಸ್ ಅಲಿ (26), ಮೊಹಮ್ಮದ್ ನೌಷೀರ್ (29), ಶೋಯಬ್ ಸಿದ್ದಿಕ್ (30) ಸೇರಿದಂತೆ 10ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದ್ದು, ಘಟನೆ ಸಂಬಂಧ 100ಕ್ಕೂ ಹೆಚ್ಚು ಆರೋಪಿಗಳನ್ನು...
ದಕ್ಷಿಣ ಕನ್ನಡಶಿಕ್ಷಣಸುದ್ದಿ

ಜನಸೇವೆ ಮಾಡುವ ಹುಮ್ಮಸ್ಸು ಹಾಗೂ ಸಂವಿಧಾನದ ರಕ್ಷಣೆಗೆ ಬದ್ಧರಾಗಿರುವ ವಿದ್ಯಾರ್ಥಿಗಳು ಮಾತ್ರ ಯುಪಿಎಸ್‌ಸಿ ಪರೀಕ್ಷೆ ಎದುರಿಸಿ ; ಮಂಗಳೂರಿನ ಯುವ ನಾಯಕ ವಿವೇಕ್ ರಾಜ್ ಪೂಜಾರಿ ಕಿವಿಮಾತು – ಕಹಳೆ ನ್ಯೂಸ್

ಮಂಗಳೂರು, ನ.14 : ಜನಸೇವೆ ಮಾಡುವ ಹುಮ್ಮಸ್ಸು ಹಾಗೂ ಸಂವಿಧಾನದ ರಕ್ಷಣೆಗೆ ಬದ್ಧರಾಗಿರುವ ವಿದ್ಯಾರ್ಥಿಗಳು ಮಾತ್ರ ಯುಪಿಎಸ್‌ಸಿ ಪರೀಕ್ಷೆಗೆ ಹಾಜರಾಗಬೇಕು ಎಂದು ಯುವ ಉದ್ಯಮಿ ಹಾಗೂ ಪನಾಮ ಕಾರ್ಪೊರೇಷನ್ ಲಿಮಿಟೆಡ್‌ನ ಅಧ್ಯಕ್ಷ ವಿವೇಕ್ ರಾಜ್ ಹೇಳಿದ್ದಾರೆ. ಸೈಂಟ್ ಅಲೋಶಿಯಸ್‌ ಕಾಲೇಜಿನಲ್ಲಿ ನಡೆದ ಯುಪಿಎಸ್‌ಸಿ ಪರೀಕ್ಷೆಯ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, "ಪ್ರಚಾರದ ಆಮಿಷಕ್ಕೆ ಒಳಗಾಗದೆ ರಾಜಕೀಯ ಒತ್ತಡಕ್ಕೆ ಮಣಿಯಬಾರದು ಎಂಬ ದೃಢ ಸಂಕಲ್ಪ ಹೊಂದಿರುವ ನಿಜವಾದ ಕಾಳಜಿಯುಳ್ಳವರು ಈ...
1 10 11 12 13 14 1,459
Page 12 of 1459