Saturday, May 9, 2026

archivekahale news

ಸುದ್ದಿ

Breaking News : ಕರಾವಳಿ ಜಿಲ್ಲೆಗಳಲ್ಲಿ ಚಂಡಮಾರುತದ ಸಾಧ್ಯತೆ ; ಬಂದರ್ ನಲ್ಲಿ ಮೈಕ್ ನಲ್ಲಿ ಎಚ್ಚರಿಕೆ – ಕಹಳೆ ನ್ಯೂಸ್

ಮಂಗಳೂರು, 04 ಅ : ಕರಾವಳಿ ಜಿಲ್ಲೆಗಳಲ್ಲಿ ಹಿಂಗಾರು ಮಳೆ ಬುಧವಾರದಿಂದ ಮತ್ತಷ್ಟು ಚುರುಕಾಗಿದ್ದು, ಅ.5 ರಿಂದ ಮಳೆಯಬ್ಬರ ಹೆಚ್ಚಾಗುವ ಎಚ್ಚರಿಕೆಯನ್ನು ಹವಮಾನ ಇಲಾಖೆ ನೀಡಿದೆ. ಇದಲ್ಲದೆ ಅರಬ್ಬಿ ಸಮುದ್ರಲ್ಲಿ ಅ.5 ರ ನಂತರ ತೀವ್ರ ವಾಯುಭಾರ ಕುಸಿತ ಉಂಟಾಗಿ ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆ ಹೆಚ್ಚಾಗಿದ್ದು, ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗಲಿದೆ. ಸಮುದ್ರ ಪ್ರಕ್ಷುಬ್ಧಗೊಳ್ಳುವ ಸಾಧ್ಯತೆ ಇರುವುದರಿಂದ ಸಮುದ್ರಕ್ಕಿಳಿದಿರುವ ಮೀನುಗಾರರು, ಅ.5 ರೊಳಗೆ ಮರಳಿಬರಬೇಕು ಎಂದು ಹವಾಮಾನ...
ಸುದ್ದಿ

12 ಕೋಟಿ ವೆಚ್ಚದಲ್ಲಿ ಮಂಗಳೂರು ರಸ್ತೆ ಅಭಿವೃದ್ಧಿ ಮಾಡಲಾಗುವುದು: ಯುಟಿ ಖಾದರ್

ಮಂಗಳೂರು: ಸ್ಮಾರ್ಟ್ ಸಿಟಿ ಅಭಿವೃದ್ಧಿಗೆ ನಾವು ಬದ್ದ ಕಾಮಗಾರಿಗೆ ಚಾಲನೆ ನೀಡಲು ನಾವು ತೀರ್ಮಾನಿಸಿದ್ದೇವೆ, ಮಂಗಳೂರು ಪ್ರವಾಸೋದ್ಯಮ ತಾಣವಾಗುತ್ತಿದೆ 12 ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಮಾಡಲಾಗುವುದು, ಝೀರೋ ಟ್ರಾಫಿಕ್ ಝೋನ್ ನಿರ್ಮಾಣ ಅಲ್ಲದೆ ಇನ್ನಿತರ ಅಭಿವ್ರಿದ್ಧಿ ಕಾಮಗಾರಿ ಶೀಘ್ರದಲ್ಲೇ ಮಾಡಲಿದ್ದೇವೆ. ಮಂಗಳಾ ಸ್ಟೇಡಿಯಂನ ಒಳಾಂಗಣ ಕ್ರೀಡಾಂಗಣದ ಅಭಿವೃದ್ಧಿಗೆ 10 ಕೋಟಿ ಶೀಘ್ರವೇ ಕೂಳೂರು ಸೇತುವೆ ದುರಸ್ತಿ ಕಾರ್ಯ ಪ್ರಯಾಣಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸುತ್ತೇವೆ ಎಂದು ಮಂಗಳೂರಲ್ಲಿ ವಸತಿ ಸಚಿವ...
ಸುದ್ದಿ

ಅಕ್ರಮ ಮರಳು ಅಡ್ಡೆ ಮೇಲೆ ಪೊಲೀಸರ ದಾಳಿ – ಕಹಳೆ ನ್ಯೂಸ್

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಬೈರಗದ್ದೆ ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಮರಳು ಸಾಗಟ ಮಾಡುತ್ತಿದ್ದ ಮೂರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೂಡಿಗೆರೆ ತಾಲೂಕಿನ ಬೈರಗದ್ದೆ ಹಾಗೂ ಕುಂದೂರು ಗ್ರಾಮದಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಸಾಗಟಕ್ಕೆ ಪೊಲೀಸರು ಸ್ಟಾಪ್ ಎಂದಿದ್ದಾರೆ. ಗ್ರಾಮಸ್ಥರ ಖಚಿತ ಮಾಹಿತಿ ಮೇರೆಗೆ ಸರ್ಕಲ್ ಇನ್ಸ್ಪೆಕ್ಟರ್ ಜಗದೀಶ್ ನೇತೃತ್ವದಲ್ಲಿ ದಾಳಿಯನ್ನು ನಡೆಸಿ ಟ್ರ್ಯಾಕ್ಟರ್ ಸೇರಿದಂತೆ ಮೂರು ಮಮದಿಯನ್ನು ಬಂಧಿಸಿದ್ದು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ...
ಸುದ್ದಿ

ಅ.6ರಿಂದ 8ರವರೆಗೆ ಅರಬ್ಬಿ ಸಮುದ್ರ ಪ್ರಕ್ಷುಬ್ಧವಾಗುವ ಸಂಭವ – ಕಹಳೆ ನ್ಯೂಸ್

ಅಕ್ಟೋಬರ್ 6ರಿಂದ 8ರವರೆಗೆ ಅರಬ್ಬಿ ಸಮುದ್ರ ಪ್ರಕುಬ್ಧವಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಮೀನುಗಾರರು ಮೀನುಗಾರಿಕೆಗೆ ಸಮುದ್ರ ತೆರಳದಂತೆ ಸೂಚಿಸಿದ್ದು, ಎಲ್ಲಾ ಮೀನುಗಾರಿಕೆ ದೋಣಿಗಳು ಅಕ್ಟೋಬರ್ 5ರೊಳಗೆ ದಡ ಸೇರಬೇಕು ಎಂದು ದಕ್ಷಿಣ ಕನ್ನಡ ಮೀನುಗಾರಿಕೆ ಉಪನಿರ್ದೇಶಕರ ಪ್ರಕಟನೆ ತಿಳಿಸಿದೆ....
ಸುದ್ದಿ

ಅಕ್ರಮ ಮಾರಾಟ: ಲಕ್ಷಾಂತರ ಮೌಲ್ಯದ ಬೀಟೆ ಮರ ವಶ – ಕಹಳೆ ನ್ಯೂಸ್

ಚಿಕ್ಕಮಗಳೂರು: ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಬೀಟೆ ಮರವನ್ನು ಗ್ರಾಮಾಂತರ ಸಿಪಿಐ ಸಲೀಂ ನೇತೃತ್ವದಲ್ಲಿ ದಾಳಿ ನಡೆಸಿ ವಶಪಡಿಸಿಕೊಂಡ ಘಟನೆ ಚಿಕ್ಕಮಗಳೂರು ತಾಲೂಕಿನ ಕಳಸಾಪುರ ಸಮೀಪ ನಡೆದಿದೆ. ಹಿರಿಯಣ್ಣ ರಾಜೇ ಅರಸ್ ಬಂಧಿತ ಆರೋಪಿಯಾಗಿದ್ದು, ಅವನಿಂದ ಲಕ್ಷಾಂತರ ಮೌಲ್ಯದ ಬೀಟೆ ಮರವನ್ನು ವಶಪಡಿಸಿಕೊಳ್ಳಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಸುದ್ದಿ

ವಿಶ್ವಸಂಸ್ಥೆಯ ಚಾಂಪಿಯನ್ಸ್ ಆಫ್ ದ ಅರ್ಥ್ ಪ್ರಶಸ್ತಿ ಸ್ವೀಕರಿಸಿದ ಮೋದಿ – ಕಹಳೆ ನ್ಯೂಸ್

ನವದೆಹಲಿ: ವಿಶ್ವಸಂಸ್ಥೆಯ ಪರಿಸರ ವಿಭಾಗ ನೀಡುವ ಚಾಂಪಿಯನ್ಸ್ ಆಫ್ ದ ಅರ್ಥ್ ಪ್ರಶಸ್ತಿಯನ್ನು ಪ್ರಧಾನಿ ನರೇಂದ್ರ ಮೋದಿ ಬುಧವಾರ ಸ್ವೀಕರಿಸಿದರು. ದೆಹಲಿಯಲ್ಲಿ ಆಯೋಜನೆಗೊಂಡಿದ್ದ ವಿಶೇಷ ಸಮಾರಂಭದಲ್ಲಿ ವಿಶ್ವಸಂಸ್ಥೆ ಮಹಾಪ್ರಧಾನ ಕಾರ್ಯದರ್ಶಿ ಅಂಟೋನಿಯೋ ಗುಟೆರೆಸ್ ಈ ಪ್ರಶಸ್ತಿ ಪ್ರದಾನ ಮಾಡಿದರು. ಸ್ಥಿರ ಅಭಿವೃದ್ಧಿ ಮತ್ತು ಹವಾಮಾನ ಬದಲಾವಣೆ ಪರಿಣಾಮಗಳನ್ನು ತಡೆಗಟ್ಟಲು ದೂರದೃಷ್ಟಿ ನಿಲುವು ತಳೆದಿರುವ ಕಾರಣ ಪ್ರಧಾನಿ ಮೋದಿ ಅವರಿಗೆ ವಿಶ್ವಸಂಸ್ಥೆಯ ಈ ಪ್ರಶಸ್ತಿ ಲಭಿಸಿದೆ. ಅಂತಾರಾಷ್ಟ್ರೀಯ ಸೌರ ಮಹಾಒಕ್ಕೂಟ (ಐಎಸ್​ಎ) ರಚನೆಯಲ್ಲಿ...
ಸುದ್ದಿ

ಲೈಂಗಿಕ ದೌರ್ಜನ್ಯ ಪ್ರಕರಣ: ಜಾಮೀನು ಅರ್ಜಿ ಹೈಕೋರ್ಟ್ ತಿರಸ್ಕಾರ – ಕಹಳೆ ನ್ಯೂಸ್

ಕಾಸರಗೋಡು: ಅಪ್ರಾಪ್ತ ಬಾಲಕಿಯ ಮೇಲೆ ಮಹಿಳೆ ಹಾಗೂ ಆಕೆಯ ಪತಿ ಲೈಂಗಿಕ ದೌರ್ಜನ್ಯವೆಸಗಿರುವ ಪ್ರಕರಣವೊಂದು ಬದಿಯಡ್ಕ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಮಹಿಳೆ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದ್ದರಿಂದ ಕಾಸರಗೋಡು ಡಿವೈಎಸ್ ಪಿ ಕಚೇರಿಯಲ್ಲಿ ಶರಣಾಗಿದ್ದಾಳೆ. ಪೋಕ್ಸೋ ಕಾಯ್ದೆಯಂತೆ ಈಕೆ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಳು. ಬದಿಯಡ್ಕದ ಝುಹರಾಬಿ (38) ಆರೋಪಿಯಾಗಿದ್ದಾಳೆ. ಈಕೆಯನ್ನು ಬಂಧಿಸಿ ಬುಧವಾರ ಸಂಜೆ ಕಾಸರಗೋಡು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈಕೆಯ...
ಸುದ್ದಿ

ಬೆಳಗಾವಿಯ ಸವಿತಾ ಮತ್ತು ಬಾಗಲಕೋಟೆಯ ಚೈತ್ರಾ ನ್ಯಾಯಾಧೀಶರಾಗಿ ಆಯ್ಕೆ – ಕಹಳೆ ನ್ಯೂಸ್

ಬೆಳಗಾವಿ: ಬೆಳಗಾವಿಯ ಸವಿತಾ ಮತ್ತು ಬಾಗಲಕೋಟೆಯ ಚೈತ್ರಾ ಕುಲಕರ್ಣಿ ಎಂಬ ಇಬ್ಬರು ಹೆಣ್ಣುಮಕ್ಕಳು 26-27ರ ಕಿರು ವಯಸ್ಸಿನಲ್ಲೇ ನ್ಯಾಯಾಧೀಶರಾಗಿ ಆಯ್ಕೆಯಾಗಿ ಹೆಮ್ಮೆ ಪಡಬೇಕಾದ ಸಾಧನೆ ಮಾಡಿದ್ದಾರೆ. ಇಷ್ಟು ಚಿಕ್ಕ ವಯಸ್ಸಿನಲ್ಲೇ ನ್ಯಾಯಾಂಗ ಇಲಾಖೆಯ ಸೇವೆಗೆ ಸೇರುತ್ತಿರುವ ಈ ಹೆಣ್ಣುಮಕ್ಕಳು ತಮ್ಮ ವೃತ್ತಿ ಜೀವನದಲ್ಲಿ ಯಶಸ್ವಿಯಾಗಿ, ಹಂತ-ಹಂತವಾಗಿ ಎತ್ತರಕ್ಕೇರುತ್ತ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಮಟ್ಟದವರೆಗೂ ತಲುಪಲಿ ಎಂದು ಹಾರೈಸೋಣ. ನ್ಯಾಯಾಂಗ ಇಲಾಖೆಯಲ್ಲಿ ಕಾನೂನು ಸೇವಾ ವೃತ್ತಿಯ ಎರಡು ಕವಲುಗಳು 'ಬಾರ್'...
1 1,359 1,360 1,361 1,362 1,363 1,459
Page 1361 of 1459