Recent Posts

Saturday, May 9, 2026

archivekahale news

ಸುದ್ದಿ

ಶಬರಿಮಲೆ ದೇವಾಲಯಕ್ಕೆ ಮಹಿಳೆಯರಿಗೆ ಪ್ರವೇಶ ಕಲ್ಪಿಸಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ವಿರೋಧಿಸಿ ಶಿವಸೇನೆ ಸೋಮವಾರ ಕೇರಳ ಬಂದ್‌ಗೆ ಕರೆ..! ಮೌನ ವಹಿಸಿದ ಸಂಪ್ರದಾಯವಾದಿ ಬಿಜೆಪಿ – ಕಹಳೆ ನ್ಯೂಸ್

ತಿರುವನಂತಪುರಂ, ಸೆ29 : ಕೇರಳದ ಶಬರಿಮಲೆ ದೇವಸ್ಥಾನದ ಒಳಗೆ ಎಲ್ಲ ವಯೋಮಾನದ ಮಹಿಳೆಯರಿಗೂ ಮುಕ್ತ ಪ್ರವೇಶಕ್ಕೆ ಅನುಮತಿ ನೀಡುವಂತೆ ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಇದೀಗ ಕೇರಳದ ಶಬರಿಮಲೆಯ ಅಯ್ಯಪ್ಪ ದೇವಾಲಯಕ್ಕೆ ಮಹಿಳೆಯರಿಗೆ ಪ್ರವೇಶ ಕಲ್ಪಿಸಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ವಿರೋಧಿಸಿ ಶಿವಸೇನೆಯು ಕೇರಳ ಬಂದ್ ಗೆ ಕರೆನೀಡಿದೆ. ತಾನು ಸಂಪ್ರದಾಯ ವಾದಿ ಎಂದು ಹೇಳಿಕೊಳ್ಳುವ ಬಿಜೆಪಿ ಮಾತ್ರ ಮೌನ ವಹಿಸಿರುವುದು ಕೇದಕರ. ಶಬರಿಮಲೆ  ಅಯ್ಯಪ್ಪ ದೇವಾಲಯಕ್ಕೆ ಮಹಿಳೆಯರಿಗೆ ಪ್ರವೇಶ ಅವಕಾಶ ನೀಡಿರುವ ಸುಪ್ರೀಂಕೋರ್ಟ್‌ ತೀರ್ಪು...
ಸುದ್ದಿ

ಪಶ್ಚಿಮ ಬಂಗಾಳದಲ್ಲಿ ವಿದ್ಯಾರ್ಥಿಗಳ ಮೇಲಿನ ಆಕ್ರಮ ಖಂಡಿಸಿ ಪುತ್ತೂರಿನಲ್ಲಿ‌ ಎಬಿವಿಪಿ ಪ್ರತಿಭಟನೆ ; ಅಗಲಿದ ವಿದ್ಯಾರ್ಥಿಗಳಿಗೆ ಶೃದ್ಧಾಂಜಲಿ – ಕಹಳೆ ನ್ಯೂಸ್

ಪುತ್ತೂರು : ಪ್ರತಿಭಟನೆನಿರತ ವಿಧ್ಯಾರ್ಥಿ ಪರಿಷತ್ ಕಾರ್ಯಕರ್ತರ ಮೇಲೆ ಗುಂಡು ಹಾರಿಸಿ ಕೊಂದ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಸರಕಾರದ ಧೋರಣೆಯನ್ನ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪುತ್ತೂರು ವತಿಯಿಂದ ನಡೆದ ಪ್ರತಿಭಟನೆ ಹಾಗೂ ಅಗಲಿದ ಜೀವಕ್ಕೆ ಶ್ರಧ್ಧಾಂಜಲಿ ಸಭೆ ನಡೆಯಿತು. ಈ ಸಂದರ್ಭದಲ್ಲಿ ನಗರ ಕಾರ್ಯದರ್ಶಿ ಶಿವಪ್ರಸಾದ್, ಘಟಕಾಧ್ಯಕ್ಷ ರಕ್ಷಿತ್ ಕೆದಿಲಾಯ, ಕಾರ್ಯದರ್ಶಿ ಕಿರಣ್, ಮನೀಷಾ, ಪ್ರಕೃತಿ ಮೊದಲಾದವರು ನೇತೃತ್ವ ನೀಡಿದರು....
ಸುದ್ದಿ

ಸಂಶೋಧನೆ ಎಲ್ಲ ರಂಗಗಳಿಗೂ ಅನಿವಾರ್ಯ: ಡಾ.ಅಬೂಬಕ್ಕರ್ ಸಿದ್ದಿಕ್ – ಕಹಳೆ ನ್ಯೂಸ್

ಪುತ್ತೂರು: ಸಂಶೋಧನೆ ಅನ್ನುವುದು ಕೇವಲ ಶಿಕ್ಷಣ ಕ್ಷೇತ್ರಕ್ಕಷ್ಟೇ ಸೀಮಿತವಾದ ವಿಷಯವಲ್ಲ. ಎಲ್ಲಾ ರಂಗಗಳಲ್ಲಿಯೂ, ಕ್ಷೇತ್ರಗಳಲ್ಲಿಯೂ ಸಂಶೋಧನೆಗಳ ಅಗತ್ಯತೆ ಇದೆ. ಅದರಲ್ಲೂ ವಾಣಿಜ್ಯೋದ್ಯಮಕ್ಕೆ ಸಂಬಂಧಪಟ್ಟಂತೆ ಸಂಶೋಧನೆಗಳಿಗೆ ಅನಂತ ಅವಕಾಶಗಳಿವೆ ಎಂದು ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಸಂಯೋಜಕ ಡಾ.ಅಬೂಬಕ್ಕರ್ ಸಿದ್ದಿಕ್ ಹೇಳಿದರು. ಅವರು ಇಲ್ಲಿನ ವಿವೇಕಾನಂದ ಕಾಲೇಜಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಬುಧವಾರ ಆಯೋಜಿಸಲಾದ ವಿಶೇಷ ಉಪನ್ಯಾಸ ಕಾರ್ಯಕ್ರಮ ಸಂಶೋಧನಾ ಪ್ರಕ್ರಿಯೆ ಎಂಬ ವಿಷಯದ ಬಗೆಗೆ ಮಾತನಾಡಿದರು. ಇಂದು...
ಸುದ್ದಿ

ಎಡೆಬಿಡದೆ ಸುರಿದ ಮಳೆ, ಸಂತ್ರಸ್ತರನ್ನು ಭೇಟಿ ಮಾಡಿದ ಸಚಿವರು – ಕಹಳೆ ನ್ಯೂಸ್

ಸುಳ್ಯ: ಎಡೆಬಿಡದೆ ಸುರಿದ ಮಳೆಯಿಂದ ಜನಜೀವನ ತತ್ತರಿಸಿದ್ದು ಮಾತ್ರವಲ್ಲದೆ ಗುಡ್ಡ ಕುಸಿತದಿಂದಾಗಿ ಜೋಡುಪಾಲ ಅಕ್ಷರಸಃ ನಲುಗಿ ಹೋಗಿತ್ತು. ಈ ದುರಂತದಲ್ಲಿ ನಿರಾಶ್ರಿತರಾದ ಸಂತ್ರಸ್ತರನ್ನು ಜಿಲ್ಲಾ ಉಸ್ತುವಾರಿ ಸಚಿವರು ಸುಳ್ಯ ಸಂಪಾಜೆ , ಕಲ್ಲುಗುಂಡಿ ಶಾಲೆಯಲ್ಲಿ ಭೇಟಿ ನೀಡಿದರು....
ಸುದ್ದಿ

ಪುತ್ತೂರಿನಲ್ಲಿ 24×7 ಐಟಿ ಸಂಸ್ಥೆ ‘ದ ವೆಬ್ ಪೀಪಲ್’ನ ಕಾರ್ಯಾಲಯ ಉದ್ಘಾಟನೆ – ಕಹಳೆ ನ್ಯೂಸ್

ಪುತ್ತೂರು: ತಂತ್ರಜ್ಞಾನದ ಜೊತೆಗೆ ಬೆಳೆಯಬೇಕಾಗಿರುವುದು ಇಂದಿನ ಅವಶ್ಯಕತೆಯಾಗಿದೆ, ಎಂದು ಪುತ್ತೂರು ವಿದ್ಯಾವರ್ಸಂಘದ ಅಧ್ಯಕ್ಷರಾದ ಡಾ. ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು. ಅವರು ನಗರದ ಬೊಳುವಾರಿನಲ್ಲಿ ಪುತ್ತೂರಿನ ಮೊದಲ 24x7 ಐಟಿ ಕಂಪನಿ ‘ದ ವೆಬ್ ಪೀಪಲ್’ನ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಇಂದು ತಂತ್ರಜ್ಞಾನದ ಬೆಳವಣಿಗೆಯಲ್ಲಿ ಇಡೀ ವಿಶ್ವವೇ ಭಾರತದತ್ತ ನೋಡುವ ಹಾಗಾಗಿರುವುದಕ್ಕೆ ಇಲ್ಲಿನ ತಂತ್ರಜ್ಞಾನ ಶಿಕ್ಷಣ ಮತ್ತು ಯುವಜನತೆಯ ತೊಡಗಿಸಿಕೊಳ್ಳುವುದರಿಂದಾಗಿದೆ. ತಂತ್ರಜ್ಞಾನದ ಶಿಕ್ಷಣ ಪಡೆದವರು ಇಂದು ಉದ್ಯೋಗಿಗಳಾಗುವುದು ಮಾತ್ರವಲ್ಲದೇ...
ಸುದ್ದಿ

ಭಾರತೀಯ ಸೇನೆ ಹಾಗೂ ರಾಜತಾಂತ್ರಿಕತೆ ಸಮರ್ಥವಾಗಿದೆ: ಕ್ಯಾ.ಬ್ರಿಜೇಶ್ ಚೌಟ

ಪುತ್ತೂರು: ಭಯೋತ್ಪಾದನಾ ನೆಲೆಗಳ ಮೇಲಿನ ಭಾರತದ ಸರ್ಜಿಕಲ್ ಸ್ಟ್ರೈಕ್ ಅನ್ನುವುದು ಪ್ರಪಂಚದ ಸೇನಾ ಇತಿಹಾಸದಲ್ಲೇ ಅತ್ಯದ್ಭುತವಾದ ಸಂಗತಿ. ತದನಂತರದಲ್ಲಿ ಪ್ರಪಂಚದ ಸಮ್ಮುಖದಲ್ಲಿ ನಾವು ಇಂತಹ ದಾಳಿ ನಡೆಸಿದ್ದೇವೆ ಎಂದು ಘೋಷಿಸಿದ್ದು ಭಾರತದ ಧೈರ್ಯಕ್ಕೆ ಹಿಡಿದ ಕೈಗನ್ನಡಿ. ಹಾಗಾಗಿ ಸರ್ಜಿಕಲ್ ದಾಳಿಯ ಮುಖೇನ ಭಾರತ ತಾನು ಸೇನಾ ನೆಲೆಯಿಂದಲೂ, ರಾಜತಾಂತ್ರಿಕವಾಗಿಯೂ ಅತ್ಯಂತ ಸಮರ್ಥ ರಾಷ್ಟ್ರ ಎಂಬುದನ್ನು ವಿಶ್ವದ ಮುಂದೆ ಸಾಕ್ಷೀಕರಿಸಿ ತೋರಿದೆ ಎಂದು ನಿವೃತ್ತ ಸೇನಾಧಿಕಾರಿ ಕ್ಯಾ.ಬ್ರಿಜೇಶ್ ಚೌಟ ಹೇಳಿದರು. ಅವರು...
ಸುದ್ದಿ

ಐತಿಹಾಸಿಕ ಸರ್ಜಿಕಲ್ ದಾಳಿಗೆ 2 ವರ್ಷ ; ಮಂಗಳೂರಿನಲ್ಲಿ ವೀರ ಯೋಧರ ರೋಚಕ ಸಾಹಸವನ್ನು ಸ್ಮರಿಸಿದ ಕ್ಯಾ. ಗಣೇಶ್ ಕಾರ್ಣೀಕ್ – ಕಹಳೆ ನ್ಯೂಸ್

ಮಂಗಳೂರು, ಸೆ29 : ಪಾಕಿಸ್ತಾನದ ಉಗ್ರರು ನಡೆಸಿದ್ದ ಭಯೋತ್ಪಾದನಾ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ನಡೆಸಿದ್ದ ಸರ್ಜಿಕಲ್ ದಾಳಿಗೆ ಇಂದು ಎರಡು ವರ್ಷ ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ, ಕದ್ರಿ ಬಳಿಯಿರುವ ಹುತಾತ್ಮ ಯೋಧರ ಸ್ಮಾರಕದಲ್ಲಿ 2 ವರ್ಷದ ವರ್ಷಾಚರಣೆಯನ್ನು ಭಾರತೀಯ ಜನತಾ ಪಾರ್ಟಿ ನೆರವೇರಿಸಿದೆ. ಮಾತ್ರವಲ್ಲ, ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದೆ. ಜಮ್ಮು ಮತ್ತು ಕಾಶ್ಮೀರದ ಉರಿ ಸೇನಾ ನೆಲೆ ಮೇಲೆ 2016ರ ಸೆಪ್ಟೆಂಬರ್ 18 ರಂದು ಪಾಕಿಸ್ತಾನದ ಉಗ್ರರು ದಾಳಿ...
ಸುದ್ದಿ

Big News : ಅಯ್ಯಪ್ಪ ಸ್ವಾಮಿಯನ್ನು ನೋಡಲು ಪುರುಷರಂತೆ ಮಹಿಳೆಯರಿಗೂ ಸಮಾನ ಹಕ್ಕಿದೆ ; ತೀರ್ಪು ಸ್ವಾಗತಾರ್ಹ ಎಂದ ಪ್ರತಿಭಾ ಕುಳಾಯಿ – ಕಹಳೆ ನ್ಯೂಸ್

ಮಂಗಳೂರು, ಸೆ29 : ಕೇರಳದ ಶಬರಿಮಲೆ ದೇವಸ್ಥಾನದ ಒಳಗೆ ಎಲ್ಲ ವಯೋಮಾನದ ಮಹಿಳೆಯರಿಗೂ ಮುಕ್ತ ಪ್ರವೇಶಕ್ಕೆ ಅನುಮತಿ ನೀಡುವಂತೆ ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಆಧುನಿಕತೆಗೆ ಅಗತ್ಯವಾದ ತೀರ್ಪು ಹೊರಬಂದಿದೆ. ಈ ತೀರ್ಪು ಸ್ವಾಗತಾರ್ಹ ಎಂದು ಕಾರ್ಪೊರೇಟರ್ ಪ್ರತಿಭಾ ಕುಳಾಯಿ ಹೇಳಿದ್ದಾರೆ. ಪುರುಷರಂತೆ ಮಹಿಳೆಯರಿಗೂ ಪೂಜೆಯ ಸಮಾನ ಅವಕಾಶವಿದೆ. ಸಂಪ್ರದಾಯದ ಕಾರಣಕ್ಕೆ ಮಹಿಳೆಯರು ದೇವಾಲಯ ಪ್ರವೇಶಿಸುವುದನ್ನು ನಿಷೇಧಿಸುವುದು ಸರಿಯಲ್ಲ. ಮಹಿಳೆಯರಿಗೆ ಎಲ್ಲಾ ದೇವಾಲಯಕ್ಕೂ ಮುಕ್ತ ಪ್ರವೇಶ ಇರಬೇಕು. ದೇವಾಲಯಕ್ಕೆ ಮಹಿಳೆಯರಿಗೆ ಪ್ರವೇಶ ನಿರಾಕರಿಸುವುದು ಲಿಂಗ ಅಸಮಾನತೆಯಾಗುತ್ತದೆ. ಅಲ್ಲದೆ ಇಂತಹ...
1 1,365 1,366 1,367 1,368 1,369 1,459
Page 1367 of 1459