ಧರ್ಮಸಾಮ್ರಾಜ್ಯ ಸ್ಥಾಪನೆಗಾಗಿ ಸೆ.03ರಂದು ಶ್ರೀ ರಾಮ ಕ್ಷೇತ್ರ ಕನ್ಯಾಡಿಯಲ್ಲಿ ಮೇಳೈಸಲಿದೆ ಐತಿಹಾಸಿಕ ಧರ್ಮ ಸಂಸದ್ – ಕಹಳೆ ನ್ಯೂಸ್
ಬೆಳ್ತಂಗಡಿ, ಸೆ02 : ಧರ್ಮಸಾಮ್ರಾಜ್ಯ ಸ್ಥಾಪನೆಗಾಗಿ ದಕ್ಷಿಣದ ಅಯೋಧ್ಯೆ ಎಂದೇ ಖ್ಯಾತಿ ಪಡೆದಿರುವ ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರ ಶ್ರೀ ರಾಮ ಕ್ಷೇತ್ರದಲ್ಲಿ ಸೆ03ರಂದು ಧರ್ಮ ಸಂಸದ್ ಮೇಳೈಸಲಿದೆ. ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದಲ್ಲಿ ನಡೆಯಲಿರುವ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕ ದಶಮಾನೋತ್ಸವ ಹಾಗೂ ರಾಷ್ಟ್ರೀಯ ಧರ್ಮಸಂಸದ್ ಕಾರ್ಯಕ್ರಮವನ್ನು ರಾಜ್ಯದ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಉದ್ಟಾಟಿಸಲಿದ್ದಾರೆ. ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸಲಿದ್ದಾರೆ. 2018 ರ ಧರ್ಮ ಸಂಸದ್ ಸಂತ ಅತಿಥಿಗಳ ಸ್ವಾಗತಕ್ಕೆ ಸಜ್ಜಾಗಿದ್ದು,...







