Saturday, May 2, 2026

archivekahale news

ಸುದ್ದಿ

ಧರ್ಮಸಾಮ್ರಾಜ್ಯ ಸ್ಥಾಪನೆಗಾಗಿ ಸೆ.03ರಂದು ಶ್ರೀ ರಾಮ ಕ್ಷೇತ್ರ ಕನ್ಯಾಡಿಯಲ್ಲಿ ಮೇಳೈಸಲಿದೆ ಐತಿಹಾಸಿಕ ಧರ್ಮ ಸಂಸದ್‌ – ಕಹಳೆ ನ್ಯೂಸ್

ಬೆಳ್ತಂಗಡಿ, ಸೆ02 : ಧರ್ಮಸಾಮ್ರಾಜ್ಯ ಸ್ಥಾಪನೆಗಾಗಿ ದಕ್ಷಿಣದ ಅಯೋಧ್ಯೆ ಎಂದೇ ಖ್ಯಾತಿ ಪಡೆದಿರುವ ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರ ಶ್ರೀ ರಾಮ ಕ್ಷೇತ್ರದಲ್ಲಿ  ಸೆ03ರಂದು ಧರ್ಮ ಸಂಸದ್‌ ಮೇಳೈಸಲಿದೆ. ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದಲ್ಲಿ ನಡೆಯಲಿರುವ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕ ದಶಮಾನೋತ್ಸವ ಹಾಗೂ ರಾಷ್ಟ್ರೀಯ ಧರ್ಮಸಂಸದ್ ಕಾರ್ಯಕ್ರಮವನ್ನು ರಾಜ್ಯದ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಉದ್ಟಾಟಿಸಲಿದ್ದಾರೆ. ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸಲಿದ್ದಾರೆ. 2018 ರ ಧರ್ಮ ಸಂಸದ್‌ ಸಂತ ಅತಿಥಿಗಳ ಸ್ವಾಗತಕ್ಕೆ ಸಜ್ಜಾಗಿದ್ದು,...
ಸುದ್ದಿ

ಯುವತಿಯ ಪ್ರಾಣವನ್ನೇ ಬಲಿ ತೆಗೆದುಕೊಂಡ ಹೇರ್ ​ಸ್ಟ್ರೈಟ್ನಿಂಗ್‌ – ಕಹಳೆ ನ್ಯೂಸ್

ಕೊಡಗು, ಸೆ 02 : ಹೇರ್‌ ಸ್ಟ್ರೈಟ್ನಿಂಗ್‌ ಮಾಡಿಸಿಕೊಂಡು ಅದರ ಅಡ್ಡಪರಿಣಾಮವಾಗಿ ಕೂದಲು ಉದುರತೊಡಗಿದಾಗ ಆತಂಕಕ್ಕೆ ಒಳಗಾದ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಕೊಡಗು ಜಿಲ್ಲೆಯ ಕೊಟ್ಟಗೇರಿಯಲ್ಲಿ ನಡೆದಿದೆ. ೧೯ ವರ್ಷದ ನೇಹಾ ಗಂಗಮ್ಮ ಆತ್ಮಹತ್ಯೆಗೆ ಒಳಗಾದವಳು. ನೇಹಾ ಮೈಸೂರಿನ ಸೆಂಟ್ ಜೋಸೆಫ್ ಕಾಲೇಜಿನಲ್ಲಿ ಮೊದಲ ವರ್ಷದ ಬಿಬಿಎ ವ್ಯಾಸಂಗ ಮಾಡುತ್ತಿದ್ದಳು. ಈಕೆ ಕೆಲವು ದಿನಗಳ ಹಿಂದೆ ವಿ.ವಿ.ಮೊಹಲ್ಲಾದ ರೋಹಿಣಿ ಬ್ಯೂಟಿ ಪಾರ್ಲರ್‌ವೊಂದರಲ್ಲಿ ಹೇರ್‌ ಸ್ಟ್ರೈಟ್ನಿಂಗ್‌ ಮಾಡಿಸಿಕೊಂಡಿದ್ದಳು. ಹೇರ್‌...
ಸುದ್ದಿ

ಸನಾತನ ಸಂಸ್ಥೆಯ ನಿರ್ಬಂಧ ಖಂಡಿಸಿ ಮಂಗಳೂರಿನಲ್ಲಿ ಸೆಪ್ಟೆಂಬರ್ 4 ರಂದು (ಮಂಗಳವಾರ) ಬೃಹತ್ ಪ್ರತಿಭಟನಾ ಮೆರವಣಿಗೆ – ಕಹಳೆ ನ್ಯೂಸ್

ವಿಚಾರವಾದಿಗಳ ಹತ್ಯೆಯನ್ನು ಸನಾತನ ಸಂಸ್ಥೆಯ ಮೇಲೆ ಹೊರಿಸಿ ಅಪಪ್ರಚಾರ ಮಾಡುವ ಮೂಲಕ ಹಿಂದೂ ದ್ವೇಷವನ್ನು ಪ್ರಕಟಿಸುವ ವ್ಯವಸ್ಥಿತ ಷಡ್ಯಂತ್ರ್ಯವನ್ನು ಕೆಲವು ರಾಜಕೀಯ ಶಕ್ತಿಗಳು, ವಿಚಾರವಾದಿ ಸಂಘಟನೆಯವರು ಮಾಡುತ್ತಿದ್ದಾರೆ. ಸನಾತನ ಸಂಸ್ಥೆಯು ಆಧ್ಯಾತ್ಮ ಮತ್ತು ಹಿಂದುತ್ವದ ಕ್ಷೇತ್ರದಲ್ಲಿ ಶ್ರೇಷ್ಠವಾದ ಕಾರ್ಯವನ್ನು ಮಾಡುತ್ತಿರುವುದರಿಂದಲೇ ಹಿಂದೂ ವಿರೋಧಿ ಶಕ್ತಿಗಳ ಕೆಂಗಣ್ಣಿಗೆ ಸಂಸ್ಥೆಯ ಕಾರ್ಯವು ಗುರಿಯಾಗಿದೆ. ಸಂಸ್ಥೆಯ ಮಾನಹಾನಿಯನ್ನು ಮಾಡಲು ವ್ಯವಸ್ಥಿತವಾಗಿ ಸಂಚನ್ನು ಹಿಂದೂ ವಿರೋಧಿಗಳು ರೂಪಿಸುತ್ತಿದ್ದಾರೆ. ಯಾವುದೇ ಕಾನೂನುಬಾಹಿರ ಚಟುವಟಿಕೆಗಳಿಗೆ ಆಸ್ಪದ ನೀಡದ ಸನಾತನ...
ಸುದ್ದಿ

ಅಂಜನಾದ್ರಿಯಲ್ಲಿ ಸೋಣ ಶನಿವಾರ ಆಚರಣೆ ; ಭಜನಾಮೃತಂ – ಕಹಳೆ ನ್ಯೂಸ್

ಅಡ್ಕಾರು: ಇಲ್ಲಿನ ಶ್ರೀ ಪ್ರಸನ್ನಾಂಜನೇಯ ಸ್ವಾಮಿ ಹಾಗೂ ಗುಳಿಗರಾಜ ಕ್ಷೇತ್ರ ಅಂಜನಾದ್ರಿಯಲ್ಲಿ ಸಿಂಹ ಮಾಸ ಆಚರಣೆ ಪ್ರಯುಕ್ತ ಸೋಣ ಶನಿವಾರ ಆಚರಣೆ ಬಲಿವಾಡು ಕೂಟ ಶ್ರೀದೇವರಿಗೆ ಅಲಂಕಾರ ಪೂಜೆ ಕಾರ್ಯಕ್ರಮಗಳು ನಡೆಯಿತು. ಹಾಗೂ ಆಹ್ವಾನಿತ ಭಜನಾ ತಂಡಗಳ ಭಜನಾ ಸೇವೆಗಳು ಪ್ರತೀ ಶನಿವಾರ ನಡೆಯುತ್ತಿದ್ದು, ಸಿಂಹ ಮಾಸದ ಮೂರನೇ ಶನಿವಾರವಾಗಿರುವ ಈ ವಾರದ ಭಜನಾಮೃತಂ ಕಾರ್ಯಕ್ರಮವನ್ನು ಶ್ರೀ ಗುರುಗಣಪತಿ ಭಕ್ತ ಭಜನಾ ಮಂಡಳಿ, ಧರ್ಮಾರಣ್ಯ, ಸರಳಿಕುಂಜ, ಅರಂಬೂರು ಇದರ ಅಧ್ಯಕ್ಷ...
ಸುದ್ದಿ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನವನ್ನು ಸುಬ್ರಹ್ಮಣ್ಯ ಮಠಕ್ಕೆ ಒಪ್ಪಿಸಿ ಪ್ರಮೋದ್ ಮುತಾಲಿಕ್ ಆಗ್ರಹ – ಕಹಳೆ ನ್ಯೂಸ್

ಗೋಕರ್ಣ ಮಹಾಬಲೇಶ್ವರ ದೇವಸ್ಥಾನವನ್ನು ರಾಜ್ಯ ಸರ್ಕಾರ ಸುಪರ್ದಿಗೆ ತೆಗೆದುಕೊಳ್ಳುವ ಪ್ರಯತ್ನ ನಡೆಸುತ್ತಿದ್ದರೆ, ಇತ್ತ ಧಾರ್ಮಿಕ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನವನ್ನು ಸುಬ್ರಹ್ಮಣ್ಯ ಮಠಕ್ಕೆ ಒಪ್ಪಿಸಬೇಕು ಎಂಬ ಆಗ್ರಹ ಕೇಳಿಬಂದಿದೆ. ಪುರಾಣ ಪ್ರಸಿದ್ಧ ತೀರ್ಥಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಪುರಾತನ ದಾಖಲೆಗಳ ಪ್ರಕಾರ ಸುಬ್ರಹ್ಮಣ್ಯ ಸಂಪುಟ ನರಸಿಂಹ ಸ್ವಾಮಿ ಮಠಕ್ಕೆ ಸೇರಬೇಕು. ಆದ್ದರಿಂದ ಈ ದೇವಸ್ಥಾನವನ್ನು ಮಠದ ವಶಕ್ಕೆ ಒಪ್ಪಿಸಬೇಕು. ಈ ನಿಟ್ಟಿನಲ್ಲಿ ಸುಬ್ರಹ್ಮಣ್ಯ ಸ್ವಾಮೀಜಿ ಅವರೊಂದಿಗೆ ಸೆಪ್ಟೆಂಬರ್ ಮೊದಲ...
ಸುದ್ದಿ

ಪ್ರಖ್ಯಾತ ಜೈನ ಮುನಿಶ್ರೀ ತರುಣ ಸಾಗರ ವಿಧಿವಶ ; ಜೈನ ಮಂದಿರದಲ್ಲೇ ಕೊನೆಯುಸಿರು – ಕಹಳೆ ನ್ಯೂಸ್

ನವದೆಹಲಿ, ಸೆಪ್ಟೆಂಬರ್ 01: ಅನಾರೋಗ್ಯದಿಂದ ಬಳಲುತ್ತಿದ್ದ ಪ್ರಖ್ಯಾತ ಜೈನ ಮುನಿ ಶ್ರೀ ತರುಣ ಸಾಗರ ಅವರು ಇಂದು ಬೆಳಿಗ್ಗೆ ಇಹಲೋಕ ತ್ಯಜಿಸಿದರು. ಅವರಿಗೆ 51 ವರ್ಷ ವಯಸ್ಸಾಗಿತ್ತು. ದೆಹಲಿಯ ಕೃಷ್ಣ ನಗರದಲ್ಲಿರುವ ರಾಧಪುರಿ ಜೈನ್ ದೇವಾಲಯದಲ್ಲಿ ಬೆಳಗ್ಗಿನ ಜಾವ 3 ಗಂಟೆಯ ವೇಳೆಗೆ ಅವರು ಕೊನೆಯುಸಿರೆಳೆದರು. ಬಹಳ ದಿನಗಳಿಂದ ಜಾಂಡೀಸ್ ನಿಂದ ಬಳಲುತ್ತಿದ್ದ ಅವರನ್ನು 20 ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆರೋಗ್ಯ ತೀರಾ ಹದಗೆಟ್ಟಿದ್ದರೂ ಕಳೆದ ಎರಡು ದಿನಗಳಿಂದ ಔಷಧವನ್ನೂ...
ಸುದ್ದಿ

ವಿವೇಕಾನಂದ ಶಿಶುಮಂದಿರದಿಂದ ಶ್ರೀ ಕೃಷ್ಣ ಲೋಕ. ಸೆ.2ರಂದು ನಡೆಯಲಿರುವ ಕಾರ್ಯಕ್ರಮ ; 1300ಶ್ರೀ ಕೃಷ್ಣ ಯಶೋಧೆಯರ ನಿರೀಕ್ಷೆ – ಕಹಳೆ ನ್ಯೂಸ್

ಪುತ್ತೂರಿನ ವಿವೇಕಾನಂದ ಶಿಶು ಮಂದಿರದಲ್ಲಿ ಪ್ರತಿ ವರ್ಷ ನಡೆಯುವ ಶ್ರೀ ಕೃಷ್ಣ ಲೋಕ ಕಾರ್ಯಕ್ರಮವು ಸೆಪ್ಟಬಂರ್ 2ರಂದು ನಡೆಯಲಿದೆ ಎಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಅಧ್ಯಕ್ಷ ಡಾ.ಶೋಭಿತಾ ಸತೀಶ್ ರಾವ್ ತಿಳಿಸಿದ್ದಾರೆ. ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ವಿವೇಕಾನಂದ ವಿದ್ಯಾವರ್ಧಕ ಸಂಘದಅಡಿಯಲ್ಲಿ ಒಟ್ಟು 15 ಶಿಶು ಮಂದಿರಗಳು ನಡೆಯುತ್ತಿದ್ದು, ಅದರಲ್ಲಿ ಒಂದಾದವಿವೇಕಾನಂದ ಶಿಶು ಮಂದಿರ ಕಳೆದ29 ವರ್ಷಗಳಿಂದ ಶಿಶುಶಿಕ್ಷಣ ವಿಭಾಗಜೊತೆಗೂಡಿ ಶಿಶುಶಿಕ್ಷಣವನ್ನು ಬಾಲೋದ್ಯಾನ ಎನ್ನುವ ವಿಶಿಷ್ಟ ಶಿಕ್ಷಣ ಕ್ರಮದ ಮೂಲಕ ಮಾಡಿಕೊಂಡು ಬಂದಿದೆ....
ಸುದ್ದಿ

Breaking News : ಹಿಂದೂ ಭಾವನೆಗಳಿಗೆ ಧಕ್ಕೆ ; ಪ್ರಕಾಶ್ ರೈ ವಿರುದ್ಧ ಎಫ್‍ಐಆರ್ ದಾಖಲು – ಕಹಳೆ ನ್ಯೂಸ್

ಬೆಂಗಳೂರು: ಗೋವಿಗೆ ಅವಮಾನ ಮಾಡುವ ಮೂಲಕ ಹಿಂದೂ ಭಾವನೆಗಳಿಗೆ ಧಕ್ಕೆ ತಂದಿದ್ದಕ್ಕೆ ನಟ ಪ್ರಕಾಶ್ ರೈ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಮೇ 8 ರಂದು ವಕೀಲ ಕಿರಣ್ ಎಂಬವರು ಪ್ರಕಾಶ್ ರೈ ವಿರುದ್ಧ ಹನುಮಂತನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆದರೆ ಪೊಲೀಸರು ಎಫ್‍ಐಆರ್ ದಾಖಲಿಸಿಕೊಂಡಿರಲಿಲ್ಲ. ಪೊಲೀಸರ ಕ್ರಮವನ್ನು ಪ್ರಶ್ನಿಸಿ ಕಿರಣ್ ಅವರು 14ನೇ ಹೆಚ್ಚುವರಿ ಎಸಿಎಂಎಂ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಆದೇಶ ನೀಡಿದ ಹಿನ್ನೆಲೆಯಲ್ಲಿ...
1 1,383 1,384 1,385 1,386 1,387 1,459
Page 1385 of 1459