ಬಲಿಷ್ಠ ಭಾರತ ವಿಶ್ವ ಭೂಪಟದಲ್ಲಿ ಪ್ರಜ್ವಲಿಸುತ್ತಿದೆ ; ಐತಿಹಾಸಿಕ ಕೆಂಪು ಕೋಟೆ ಮೇಲೆ ಪ್ರಧಾನಿ ನರೇಂದ್ರ ಮೋದಿ – ಕಹಳೆ ನ್ಯೂಸ್
ಆ,15: ರಾಷ್ಟ್ರ ರಾಜಧಾನಿ ದೆಹಲಿಯ ಐತಿಹಾಸಿಕ ಕೆಂಪು ಕೋಟೆ ಮೇಲೆ ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣ ಮಾಡಿದರು. ಭಾಷಣದ ಪ್ರಾರಂಭದ ಮೊದಲು ತಮಿಳು ಕವಿ ಸುಬ್ರಹ್ಮಣ್ಯ ಭಾರತೀಯಾರ್ ಅವರ ಕವಿತೆಯ ಸಾಲುಗಳನ್ನು ತಮಿಳಿನಲ್ಲೇ ವಾಚಿಸಿದರು. ಬಳಿಕ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಅವರು ಭಾರತ ಭವ್ಯ ರಾಷ್ಟ್ರವಾಗಿ ಉದಯಿಸಿ ಇತರರಿಗೆ ಸ್ಫೂರ್ತಿಯಾಗಲಿದೆ. ಆ ದೆಸೆಯಲ್ಲಿ ನಾವು ಮುನ್ನಡೆಯಬೇಕು ಎಂದರು. ಭಾರತ ವಿಶ್ವದ ಭೂಪಟದಲ್ಲಿ ತನ್ನದೇ ರೀತಿಯಲ್ಲಿ ಛಾಪು ಮೂಡಿಸಿದೆ. ಇಂದು ಭಾರತ ಸಾಮಾನ್ಯ...







