ತಲಪಾಡಿ – ಕಾಸರಗೋಡು ಹೆದ್ದಾರಿ ಗುಂಡಿ ; ಸಂಚಾರ ಸಮಸ್ಯೆ – ಕಹಳೆ ನ್ಯೂಸ್
ಕುಂಬಳೆ: ಮಳೆಗೆ ಹೆದ್ದಾರಿಯಲ್ಲಿ ಹೊಂಡಗಳಾಗಿ ವಾಹನಗಳಿಗೆ ಸಂಚರಿಸಲು ಅಸಾಧ್ಯವಾಗಿದೆ. ಆದರೆ ಇದು ತಮಗೆ ಸಂಬಂಧ ಪಟ್ಟದಲ್ಲವೆಂದು ಇಲಾಖೆ ಅಧಿಕಾರಿಗಳು ಬೆಚ್ಚಗೆ ಹೊದ್ದು ಮಲಗಿದ್ದಾರೆ. ಮಂಗಳೂರು ಕಾಸರಗೋಡು ರಾಷ್ಟ್ರೀಯ ಹೆದ್ದಾರಿಯಲ್ಲಿ ತಲಪ್ಪಾಡಿಯಿಂದ ಕಾಸರಗೋಡು ತನಕ ರಸ್ತೆಯುದ್ದಕ್ಕೂ ಇಂಗು ಗುಂಡಿಗಳಾಗಿವೆ.ಕೆಲ ಕಡೆಗಳಲ್ಲಿ ರಸ್ತೆ ಮಧ್ಯೆ ದೊಡ್ಡ ಹಳ್ಳ ಸೃಷ್ಟಿಯಾಗಿದೆ.ತಲಪ್ಪಾಡಿ,ಮಂಜೇಶ್ವರ,ಉಪ್ಪಳ,ಕುಂಬಳೆ,ಪೆರ್ವಾಡು, ಮೊಗ್ರಾಲ್,ಚೌಕಿ,ಕೊಪ್ಪರಬಜಾರ್,ಅಡ್ಕತ್ತಬೈಲು,ತಾಳಿಪ್ಪಡು,ಕರಂದಕ್ಕಾಡು ಮೊದಲಾದೆಡೆಗಳಲ್ಲಿ ರಸ್ತೆ ಮಧ್ಯೆ ದೊಡ್ಡ ಹೊಂಡಗಳು ಸೃಷ್ಟಿಯಾಗಿ ವಾಹನಗಳಿಗೆ ಸಂಚರಿಸಲು ತೊಡಕಾಗಿದೆ.ಇದರಿಂದ ರಸ್ತೆಯಲ್ಲಿ ವಾಹನಗಳು ಜೋಕಾಲಿಯಾಡುತ್ತಿದೆ.ಬಸ್ನಲ್ಲಿ ಪ್ರಯಾಣಿಕರು ಭಯದಿಂದ ಪ್ರಯಾಣಿಸಬೇಕಾಗಿದೆ. ಭಾರೀ ಹೊಂಡ...







