Tuesday, April 28, 2026

archivekahale news

ಸುದ್ದಿ

ಹರಿಪಾದ ಸೇರಿದ ಶಿರೂರು ಶ್ರೀ ; ವಿಷಪ್ರಾಶನ ಶಂಕೆ – ಕಹಳೆ ನ್ಯೂಸ್

ಉಡುಪಿ: ಅಷ್ಟಮಠಗಳಲ್ಲೊಂದಾದ ಶಿರೂರು ಮಠದ ಯತಿ ಪರಂಪರೆಯಲ್ಲಿ 30ನೆಯವರಾದ ಶ್ರೀ ಲಕ್ಷ್ಮೀವರ ತೀರ್ಥ ಶ್ರೀಪಾದರು (55) ಹರಿಪಾದ ಸೇರಿದ್ದಾರೆ. ತೀವ್ರ ಅಸ್ವಸ್ಥಗೊಂಡು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಗುರುವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದು, ವಿಷಪ್ರಾಶನ ಶಂಕೆ ವ್ಯಕ್ತವಾಗಿದೆ. ಚುನಾವಣೆ ಸ್ಪರ್ಧೆ, ವಿವಾದಾತ್ಮಕ ಹೇಳಿಕೆ, ಅಷ್ಟಮಠದ ಇತರ ಸ್ವಾಮೀಜಿಗಳ ಜತೆಗಿನ ಭಿನ್ನಾಭಿಪ್ರಾಯದಿಂದ ಇತ್ತೀಚಿನ ದಿನಗಳಲ್ಲಿ ವಿವಾದ ಸೃಷ್ಟಿಸಿದ್ದ ಶ್ರೀಗಳ ಆರೋಗ್ಯ ಕೆಲ ಸಮಯದಿಂದ ಆಗಾಗ ಕೈಕೊಡುತ್ತಿತ್ತು. ಹೀಗಿದ್ದರೂ ಜುಲೈ 17ರಂದು ಆರೋಗ್ಯವಾಗಿ ಉತ್ಸಾಹದಿಂದಲೇ...
ಸುದ್ದಿ

ಬಿಜೆಪಿಗೆ ಬೆಂಬಲ ಕುರಿತ ಗೊಂದಲಗಳಿಗೆ ತೆರೆ ಎಳೆದ ಶಿವಸೇನೆ – ಕಹಳೆ ನ್ಯೂಸ್

ತೆಲುಗು ದೇಶಂ ಪಾರ್ಟಿ, ಎನ್.ಡಿ.ಎ. ಸರ್ಕಾರದ ವಿರುದ್ಧ ಮಂಡಿಸಿರುವ ಅವಿಶ್ವಾಸ ನಿರ್ಣಯದ ಚರ್ಚೆ ನಾಳೆ ನಡೆಯಲಿದ್ದು, ಬಿಜೆಪಿಯಿಂದ ಅಂತರ ಕಾಯ್ದುಕೊಳ್ಳುತ್ತಿರುವ ಮಿತ್ರ ಪಕ್ಷ ಶಿವಸೇನೆ, ಯಾವ ತೀರ್ಮಾನ ಕೈಗೊಳ್ಳಲಿದೆ ಎಂಬ ಗೊಂದಲಕ್ಕೆ ಈಗ ತೆರೆ ಬಿದ್ದಿದೆ. ಶಿವಸೇನೆ ತನ್ನ ಪಕ್ಷದ ಸಂಸದರಿಗೆ ನಾಳಿನ ಕಲಾಪದಲ್ಲಿ ಕಡ್ಡಾಯವಾಗಿ ಹಾಜರಿರುವಂತೆ ಸೂಚಿಸಿದೆಯಲ್ಲದೆ ಅವಿಶ್ವಾಸ ನಿರ್ಣಯದ ಸಂದರ್ಭದಲ್ಲಿ ಸರ್ಕಾರದ ಪರ ಮತ ಚಲಾಯಿಸುವಂತೆ ವಿಪ್ ಜಾರಿ ಮಾಡಿದೆ. ಇದರಿಂದಾಗಿ ಎನ್.ಡಿ.ಎ. ಸರ್ಕಾರ, ಅವಿಶ್ವಾಸ ನಿರ್ಣಯದಲ್ಲಿ...
ಸುದ್ದಿ

Breaking News : ಶಿರೂರು ಶ್ರೀ ಅನುಮಾನಾಸ್ಪದ ಸಾವು ; ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲು – ಕಹಳೆ ನ್ಯೂಸ್

ಉಡುಪಿ, ಜು 19: ಉಡುಪಿಯ ಅಷ್ಟಮಠಗಳಲ್ಲಿ ಒಂದಾದ ಶಿರೂರು ಮಠಾಧೀಶ ಶ್ರೀಲಕ್ಷ್ಮೀವರ ತೀರ್ಥ ಸ್ವಾಮೀಜಿಗಳ ಅನುಮಾನಸ್ಪಾದ ಸಾವಿನ ಹಿನ್ನಲೆಯಲ್ಲಿ, ಹಿರಿಯಡ್ಕ ಠಾಣೆಯಲ್ಲಿ ದೂರು ದಾಖಲಾಗಿದೆ. ಸ್ವಾಮೀಜಿಗಳನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಿ ಶ್ರೀಗಳ ಪೂರ್ವಶ್ರಮದ ಸಹೋದರ ಲಾತವ್ಯ ಆಚಾರ್ಯ ಅವರು ಹಿರಿಯಡ್ಕ ಪೊಲೀಸ್ ಠಾಣೆಗೆ ಜು .19 ರ ಗುರುವಾರ ದೂರು ನೀಡಿದ್ದಾರೆ. ಶಿರೂರು ಶ್ರೀಗಳು ವಿಷ ಪ್ರಾಶನದಿಂದ ಮೃತಪಟ್ಟಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸಿ, ಕಾನೂನು ಕ್ರಮಕೈಗೊಳ್ಳುವಂತೆ ಲಾತವ್ಯ...
ಸುದ್ದಿ

Big Breaking News : ಉಡುಪಿಯ ಶಿರೂರು ಮಠಾಧೀಶ ಲಕ್ಷ್ಮೀವರತೀರ್ಥ ಶ್ರೀಗಳು ಇನ್ನಿಲ್ಲ – ಕಹಳೆ ನ್ಯೂಸ್

ಉಡುಪಿ : ಅಷ್ಟ ಮಠಗಳಲ್ಲಿ ಒಂದಾದ ಶೀರೂರು ಮಠದ ಲಕ್ಷ್ಮೀವರ ತೀರ್ಥ ಶ್ರೀಗಳು ಉಡುಪಿಯ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯ ಉಸಿರೆಳೆದಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಶ್ರೀಗಳು ಕೊನೆಯ ಉಸಿರೆಳೆದಿದ್ದಾರೆ....
ಸುದ್ದಿ

ಉಡುಪಿಯಲ್ಲಿ ಚಿನ್ನಾಭರಣ‌ ತಯಾರಿಕಾ ಘಟಕದ ಮೇಲೆ ದಾಳಿ ; ಬಾಲ ಕಾರ್ಮಿಕರ ರಕ್ಷಣೆ – ಕಹಳೆ ನ್ಯೂಸ್

ಉಡುಪಿ‌ : ಮಕ್ಕಳನ್ನು‌ ಕೆಲಸಕ್ಕೆ ಬಳಸುತ್ತಿದ್ದ ಚಿನ್ನಾಭರಣ‌ ತಯಾರಕಾ ಘಟಕಗಳ ಮೇಲೆ ಕಾರ್ಮಿಕ‌ ಅಧಿಕಾರಿಗಳು ದಾಳಿ ನಡೆಸಿ ನಾಲ್ಕು ಬಾಲಕಾರ್ಮಿಕರನ್ನು ರಕ್ಷಣೆ ಮಾಡಿದ್ದಾರೆ. ಉಡುಪಿ ನಗರದ‌‌‌ ಚಿತ್ತರಂಜನ್ ಸರ್ಕಲ್ ಬಳಿಯಿರುವ ಚಿನ್ನಾಭರಣ‌ ತಯಾರಕಾ ಘಟಕದ ಮೇಲೆ ಧಿಡೀರ್ ದಾಳಿ ನಡೆಸಿದ ಕಾರ್ಮಿಕ‌ ಇಲಾಖಾಧಿಕಾರಿಗಳು ನಾಲ್ಕು ಮಂದಿ ಕೊಲ್ಕತ್ತ ಮೂಲದ ಮಕ್ಕಳನ್ನು ರಕ್ಷಿಸಿದ್ದಾರೆ. ಒಂದೇ ಕಟ್ಟದಲ್ಲಿ ನೂರಕ್ಕೂ ಹೆಚ್ಚು ಕಾರ್ಮಿಕರಿಂದ ಚಿನ್ನಾಭರಣ ತಯಾರಿಕೆ ಕೆಲಸ ನಡೆಯುತ್ತಿತ್ತು. ಬಾಲ ಕಾರ್ಮಿಕರು ಇರುವ ಬಗ್ಗೆ ಖಚಿತ...
ಸುದ್ದಿ

ಉಪ್ಪಿನಂಗಡಿ-ಕಡಬ ಪ್ರತೀ ೧೫ ನಿಮಿಷಗಳಿಗೊಮ್ಮೆ ‘ಇಂಟರ್ಸಿಟಿ’ ಬಸ್ಸುಗಳ ಓಡಾಟ ಆರಂಭಿಸಿ ; ಅಧಿಕಾರಿಗಳಿಗೆ ಆದೇಶ ಹೊರಡಿಸಿದ ಶಾಸಕ ಸಂಜೀವ ಮಠಂದೂರು – ಕಹಳೆ ನ್ಯೂಸ್

ಪುತ್ತೂರು : ಪ್ರಯಾಣಿಕರ ಗರಿಷ್ಠ ಪ್ರಮಾಣದ ಒತ್ತಡವಿರುವ ಉಪ್ಪಿನಂಗಡಿ-ಕಡಬ ನಡುವೆ ಕೆಎಸ್ಸಾರ್ಟಿಸಿಯಿಂದ ಪ್ರತೀ ೧೫ ನಿಮಿಷಗಳಿಗೊಮ್ಮೆ ‘ಇಂಟರ್ಸಿಟಿ’ ಬಸ್ಸುಗಳ ಓಡಾಟ ಆರಂಭಿಸುವಂತೆ ಶಾಸಕ ಸಂಜೀವ ಮಠಂದೂರು ಅವರು ಕೆಎಸ್ಸಾರ್ಟಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಪುತ್ತೂರು ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಸಂಜೆ ಶಾಸಕ ಸಂಜೀವ ಮಠಂದೂರು ಅವರ ಅಧ್ಯಕ್ಷತೆಯಲ್ಲಿ ಕೆಎಸ್ಸಾರ್ಟಿಸಿ ಪುತ್ತೂರು ವಿಭಾಗ ಮಟ್ಟದ ಅಧಿಕಾರಿಗಳ ಸಭೆ ನಡೆಯಿತು. ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು ಈ ಭಾಗದಲ್ಲಿ ಕೆಎಸ್ಸಾರ್ಟಿಸಿ ಬಸ್ಸುಗಳ...
ಸುದ್ದಿ

ಜುಲೈ 19 ರಂದು ಗ್ರಾಮೀಣ ವಿದ್ಯಾರ್ಥಿಗಳ ಉತ್ತಮ ಭವಿಷ್ಯ ರೂಪಿಸುವ ದೃಷ್ಟಿಯಿಂದ “ವಿವೇಕ ಉದ್ಯೋಗ ಮೇಳ” – ಕಹಳೆ ನ್ಯೂಸ್

ಪುತ್ತೂರು:ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಏರ್ಪಡಿಸಲಾಗಿರುವ “ವಿವೇಕ ಉದ್ಯೋಗ ಮೇಳ”. ವಿವೇಕಾನಂದ ವಿದ್ಯಾವರ್ಧಕ ಸಂಘದ ಪ್ರವರ್ತನೆಯಲ್ಲಿ ಜು. 19ರಂದು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಏರ್ಪಡಿಸಲಾಗಿರುವ ವಿವೇಕ ಉದ್ಯೋಗ ಮೇಳವನ್ನು ಸ್ಥಳೀಯ ಉದ್ಯೋಗಾಕಾಂಕ್ಷಿಗಳ ಅನುಕೂಲತೆಯನ್ನು ಗಮನದಲ್ಲಿಟ್ಟುಕೊಂಡು ಆಯೋಜಿಸಲಾಗಿದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ.ಎಂ. ಕೃಷ್ಣ ಭಟ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪುತ್ತೂರು ಆಸುಪಾಸಿನ ಯುವಕ ಯುವತಿಯರನ್ನು ಗಮನದಲ್ಲಿಟ್ಟುಕೊಂಡು ಈ ಬಾರಿಯ ಉದ್ಯೋಗ ಮೇಳವನ್ನು ಸ್ಥಳೀಯ ಆದ್ಯತೆಯೊಂದಿಗೆ ಆಯೋಜಿಸಲಾಗಿದೆ....
ಸುದ್ದಿ

Big Breaking News : ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಹತ್ಯೆ ಪ್ರಕರಣ ಮತ್ತೋರ್ವ ಆರೋಪಿ ಕೃಷ್ಣಪುರದ ಮುಸ್ಲಿಂ ಯುವಕ ಸಫ್ವಾನ್ ಅಂದರ್ – ಕಹಳೆ ನ್ಯೂಸ್

ಮಂಗಳೂರು, ಜು 17: ಸುರತ್ಕಲ್ ಕಾಟಿಪಳ್ಳದಲ್ಲಿ ನಡೆದ ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಮತ್ತೋರ್ವ ಆರೋಪಿಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸುರತ್ಕಲ್ ಕೃಷ್ಣಾಪುರದ ಸಫ್ವಾನ್ ಯಾನೆ ಚಪ್ಪು(23) ಬಂಧಿತ ಆರೋಪಿ. ಈತನನ್ನು ಸುರತ್ಕಲ್ ಸಮೀಪದ ಮುಕ್ಕದಿಂದ ವಶಕ್ಕೆ ಪಡೆಯಲಾಗಿದೆ. ಆರೋಪಿಯನ್ನು ಮುಂದಿನ ಕ್ರಮಕ್ಕಾಗಿ ಪ್ರಕರಣದ ತನಿಖಾಧಿಕಾರಿಯವರಾದ ಸಂಚಾರ ಉಪವಿಭಾಗದ ಎಸಿಪಿ ಮಂಜುನಾಥ ಶೆಟ್ಟಿಯವರಿಗೆ ಹಸ್ತಾಂತರಿಸಲಾಗಿದೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ೧೨ ಮಂದಿ...
1 1,399 1,400 1,401 1,402 1,403 1,459
Page 1401 of 1459