ಕಹಳೆ Exclusive : ವರುಣನ ಅರ್ಭಟಕ್ಕೆ ಕರಾವಳಿಯ ಅವಳಿ ಜಿಲ್ಲೆಗಳು ತತ್ತರ ; ಎಲೆಲ್ಲಿ ಏನಾಗಿದೆ ? ಸಂಪೂರ್ಣ ಮಾಹಿತಿ – ಕಹಳೆ ನ್ಯೂಸ್
ಮಂಗಳೂರು, ಜುಲೈ.08: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕಳೆದ ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಧಾರಕಾರ ಮಳೆಗೆ ಕರಾವಳಿ ಜಿಲ್ಲೆಗಳ ಜನರ ಜನಜೀವನ ಅಸ್ತವ್ಯಸ್ತವಾಗಿದೆ. ಪುನರ್ವಸು ಮಳೆ ಆರಂಭವಾದಂದಿನಿಂದ ಕರ್ನಾಟಕ ಕರಾವಳಿಯುದ್ದಕ್ಕೂ ಮಳೆಯ ಹೊಡೆತ ಹೆಚ್ಚಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು, ಎಲ್ಲೆಡೆ ಪ್ರವಾಹದ ವಾತಾವರಣ ಸೃಷ್ಟಿಯಾಗಿದೆ. ಸ್ವಲ ದಿನ ವಿರಾಮ ಪಡೆದಿದ್ದ ಮಳೆ ಕಳೆದ ಮೂರು ದಿನಗಳಿಂದ ಚುರುಕುಗೊಂಡಿದೆ. ಶುಕ್ರವಾರದಿಂದ ಸುರಿಯಲು ಪ್ರಾರಂಭಿಸಿದ...







