Exclusive : ಪೂಂಜ, ಮಠಂದೂರು, ಅಂಗಾರಗೆ ಭಾರಿ ಬೆಂಬಲ ; ರಮಾನಾಥ ರೈ, ಜೈನ್, ಕಾದರ್, ಬಾವ ಸೋಲಿಸಲು ಮತದಾರರ ಹಂಬಲ – ಕಹಳೆ ನ್ಯೂಸ್
ದಕ್ಷಿಣ ಕನ್ನಡ : ಜಿಲ್ಲೆಯಾದ್ಯಂತ ಚುನಾವಣಾ ಕಣ ರಂಗೇರಿದ್ದು ನಿನ್ನೆ ಬಹಿರಂಗ ಪ್ರಚಾರಕ್ಕೆ ತೆರೆಬಿದ್ದಿದೆ. ಈ ಹಿನ್ನಲೆಯಲ್ಲಿ ಇಂದು ಅಭ್ಯರ್ಥಿಗಳು ಮನೆ ಮನೆಗೆ ತೆರಳಿ ಮತಯಾಚನೆಯಲ್ಲಿ ತೊಡಗಿದ್ದಾರೆ. ಕೊನೆಯ ಕ್ಷಣದ ಸಮೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಹುತೇಕ ಏಳು ಕ್ಷೇತ್ರದಲ್ಲಿ ಬಿಜೆಪಿ, ಒಂದು ಕ್ಷೇತ್ರದಲ್ಲಿ ಕಾಂಗ್ರೆಸ್ / ಪಕ್ಷೇತರ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದ್ದು, ನಾಳೆ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ನ ಅಭ್ಯರ್ಥಿ ವಸಂತ ಬಂಗೇರ ಎದುರು ಬಿಜೆಪಿ...







