Tuesday, March 10, 2026

archivekahale news

ಸುದ್ದಿ

ಹೊಸ ಸಾಲ ನಿರೀಕ್ಷೆಯಲ್ಲಿದ್ದ ರೈತರಿಗೆ ಶಾಕಿಂಗ್ ನ್ಯೂಸ್! – ಕಹಳೆ ನ್ಯೂಸ್

ರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿದೆ. ಇನ್ನು ಸುಲಭವಾಗಿ ಸಾಲ ಸಿಗುತ್ತೆ ಎಂದುಕೊಂಡಿದ್ದ ರೈತರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ರಾಜ್ಯ ಸರ್ಕಾರ ಸಾಲವನ್ನು ಮನ್ನಾ ಮಾಡಿದ್ದರೂ, ಪೂರ್ಣ ಪ್ರಮಾಣದಲ್ಲಿ ಸಾಲದ ಹಣವನ್ನು ಬಿಡುಗಡೆ ಮಾಡಿಲ್ಲ. ಇದರಿಂದಾಗಿ ಸಹಕಾರ ಸಂಘಗಳಲ್ಲಿ ಹಣವಿಲ್ಲದೇ, ಹೊಸ ಸಾಲ ಪಡೆಯುವ ರೈತರಿಗೆ ಸಮಸ್ಯೆಯಾಗಿದೆ. 8165 ಕೋಟಿ ರೂ. ಸಾಲವನ್ನು ಮನ್ನಾ ಮಾಡಲಾಗಿದ್ದು, 2878 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. 5287 ಕೋಟಿ ರೂ. ಬಾಕಿ ಹಣ...
ಸುದ್ದಿ

421 ಕೋಟಿ ರೂ. ಮೊತ್ತದ ಸೌಲಭ್ಯಗಳನ್ನು ಸುರಕ್ಷಾ ; ಧರ್ಮಸ್ಥಳ 15ನೇ ವರ್ಷಕ್ಕೆ ಸಂಪೂರ್ಣ ಸುರಕ್ಷಾ – ಡಾ| ಹೆಗ್ಗಡೆಯ

ಬೆಳ್ತಂಗಡಿ: ಸಂಪೂರ್ಣ ಸುರಕ್ಷಾ ಯೋಜನೆಯು ಜನರಲ್ಲಿ ವಿಶೇಷ ಚೈತನ್ಯ ಉಂಟು ಮಾಡಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಅವರು ಗುರುವಾರ ಸ್ವಸಹಾಯ ಸಂಘಗಳ ಸದಸ್ಯರ ಆರೋಗ್ಯ ರಕ್ಷಣೆಗಾಗಿ ಸದಸ್ಯರ ಸಹಭಾಗಿತ್ವದಲ್ಲಿ ಮಾಡಿಕೊಳ್ಳಲಾದ ಸಂಪೂರ್ಣ ಸುರಕ್ಷಾ ಆರೋಗ್ಯ ವಿಮಾ ಯೋಜನೆ 2018-19ರ ಸಾಲಿನ ವಿಮಾ ಪ್ರೀಮಿಯಂ ಮೊತ್ತವನ್ನು ವಿವಿಧ ವಿಮಾ ಕಂಪೆನಿಗಳಿಗೆ ಹಸ್ತಾಂತರಿಸಿ ಮಾತನಾಡಿದರು. ಧರ್ಮಸ್ಥಳ ಯೋಜನೆಯ ಅನುದಾನದೊಂದಿಗೆ ಅನುಷ್ಠಾನಗೊಳ್ಳುತ್ತಿರುವ ಈ ವಿಮಾ ಯೋಜನೆಯ...
ಸುದ್ದಿ

ನಕಲಿ ಅಕೌಂಟ್ ಸೃಷ್ಟಿಸಿ ವಂಚನೆ ; ಕಿರುತೆರೆ ನಟಿಯಿಂದ ನಾಲ್ವರ ವಿರುದ್ಧ ದೂರು – ಕಹಳೆ ನ್ಯೂಸ್

ಬೆಂಗಳೂರು: ನಕಲಿ ಅಕೌಂಟ್ ಸೃಷ್ಟಿಸಿ ಕಿರುತೆರೆ ನಟಿ ಅಶ್ವಿನಿ ಗೌಡ ಅವರಿಗೆ ವಿಜಯನಗರದ ಆರ್ ಪಿಸಿ ಲೇಔಟ್‍ನಲ್ಲಿರುವ ಜನತಾ ಸೇವಾ ಕೋ ಅಪರೇಟಿವ್ ಬ್ಯಾಂಕಿನಿಂದ ವಂಚನೆಯಾಗಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಆರೋಪಿಗಳು ಅಶ್ವಿನಿಗೌಡ ಹೆಸರಲ್ಲಿ ನಕಲಿ ಖಾತೆ ತೆರೆದು ನಕಲಿ ವಹಿವಾಟು ನಡೆಸುತ್ತಿದ್ದು, ಜನತಾ ಸೇವಾ ಕೋ ಅಪರೇಟಿವ್ ಬ್ಯಾಂಕ್ ಅಧ್ಯಕ್ಷ ಸೇರಿದಂತೆ ನಾಲ್ವರ ವಿರುದ್ಧ ಈಗ ನಟಿ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ....
ಸುದ್ದಿ

ಕೊನೆಗೂ ಪುತ್ತೂರಿಗೆ ಲಭಿಸಲಿಲ್ಲ ಇಂದಿರಾ ಕ್ಯಾಂಟಿನ್ ಭಾಗ್ಯ..! ನನಸಾಗದ ಶಕ್ಕು ಅಕ್ಕನ ಕನಸು – ಕಹಳೆ ನ್ಯೂಸ್

ನಗರ: ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಇಂದಿರಾ ಕ್ಯಾಂಟೀನ್‌ ನಿರ್ಮಿಸುವ ರಾಜ್ಯ ಸರಕಾರದ ಯೋಜನೆಯ ಭಾಗವಾಗಿ ಪುತ್ತೂರಿನಲ್ಲಿ ಇಂದಿರಾ ಕ್ಯಾಂಟೀನ್‌ಗೆ ಜಾಗ ಗೊತ್ತುಪಡಿಸಿ, ನೆಲ ಸಮತಟ್ಟು ಮಾಡಲಾಗಿತ್ತು. ಮಂಗಳವಾರದಿಂದ ನೀತಿ ಸಂಹಿತೆ ಜಾರಿಯಾಗಿದ್ದರಿಂದ ಇಂದಿರಾ ಕ್ಯಾಂಟೀನ್‌ ಆರಂಭಿಸುವ ಪ್ರಕ್ರಿಯೆ ಸ್ಥಗಿತಗೊಂಡಿದೆ. ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ದ್ವಾರದ ಬಳಿಯಲ್ಲೇ ಇಂದಿರಾ ಕ್ಯಾಂಟೀನ್‌ ಗೆ ಜಾಗ ಗೊತ್ತುಪಡಿಸಲಾಗಿ, ಸಮತಟ್ಟು ಮಾಡುವ ಸಂದರ್ಭ, ಅತೀ ಶೀಘ್ರ ಇಂದಿರಾ ಕ್ಯಾಂಟೀನ್‌ ಕೆಲಸ ಆರಂಭಗೊಳ್ಳಲಿದೆ ಎಂದು ಶಾಸಕಿ ಭರವಸೆ...
ಸುದ್ದಿ

ಯಕ್ಷಗಾನ ಕಲಾವಿದನಿಗೆ ‘ನೆಲೆ’ ಕಲ್ಪಿಸಿದ ತೆಂಕ ಮಿಜಾರು ಗ್ರಾ.ಪಂ. – ಕಹಳೆ ನ್ಯೂಸ್

ಬಜಪೆ: ಸಮ್ಮಾನಿಸುವುದು, ಗೌರವಿಸುವುದು ಒಳ್ಳೆಯ ಕೆಲಸ. ಕಷ್ಟದಲ್ಲಿನ ಬದುಕಿಗೆ ಒಂದು ಸಮ್ಮಾನ, ಗೌರವ ಒಂದಷ್ಟು ಸಮಾಧಾನ- ಸುಖ ತಂದುಕೊಡುವುದಾದರೆ ಎಷ್ಟು ಖುಷಿಯಾಗದು. ಅದೇ ಕೆಲಸವನ್ನು ತೆಂಕ ಮಿಜಾರು ಗ್ರಾಮ ಪಂಚಾಯತ್‌ ಯಕ್ಷಗಾನ ಕಲಾವಿದ ಮಿಜಾರು ತಿಮ್ಮಪ್ಪರಿಗೆ ವಸತಿ ಸೌಲಭ್ಯ ಕಲ್ಪಿಸುವ ಮೂಲಕ ಪೂರೈಸಿದೆ. ಮಿಜಾರು ತಿಮ್ಮಪ್ಪ ಅವರಿಗೆ ಮಿಜಾರು ಅಣ್ಣಪ್ಪ ನಗರದಲ್ಲಿ ನಿವೇಶನವಲ್ಲದೇ, ಮನೆಯನ್ನೂ ಕಟ್ಟಿಕೊಡುವ ಮೂಲಕ ಗ್ರಾಮ ಪಂಚಾಯತ್‌ ತನ್ನನ್ನು ತಾನು ಗೌರವಿಸಿಕೊಂಡಿದೆ. ಯಕ್ಷಗಾನದಲ್ಲಿ 36 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಮಿಜಾರು ತಿಮ್ಮಪ್ಪ...
ಸುದ್ದಿ

ಸುಖಾನಂದ ಶೆಟ್ಟಿ ಕೊಲೆ ಪ್ರಕರಣ: 17 ಮಂದಿ ಆರೋಪಿಗಳು ಖುಲಾಸೆ – ಕಹಳೆ ನ್ಯೂಸ್

ಮಂಗಳೂರು: ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ಹಿಂದೂ ಸಂಘಟನೆಯ ಕಾರ್ಯಕರ್ತ ಸುಖಾನಂದ ಶೆಟ್ಟಿ ಕೊಲೆ ಪ್ರಕರಣದ 17 ಮಂದಿ ಆರೋಪಿಗಳನ್ನು ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಖುಲಾಸೆಗೊಳಿಸಿ ಬುಧವಾರ ತೀರ್ಪು ನೀಡಿದೆ. ನವಾಜ್‌, ನೌಷಾದ್‌, ಶಾಕಿರ್‌, ಮೊಹಮ್ಮದ್‌ ಅಜೀಜ್‌, ಮೊಹಮ್ಮದ್‌ ರಫೀಕ್‌, ಅಬ್ದುಲ್‌ ಖಾದರ್‌ ಅಲಿ, ಪಿ.ಕೆ.ಅಯ್ಯೂಬ್‌, ಮೊಹಮ್ಮದ್‌ ಅಶ್ರಫ್, ಫಾತಿಮಾ ಝೊಹರಾ, ಸಲೀಂ, ಖಲಂದರ್‌ ಬಜಪೆ, ರೆಹಮತ್‌ ಖಲಂದರ್‌, ಅಜೀಜ್‌ ಯಾನೆ ಯುರೋಪಿಯನ್‌ ಅಜೀಜ್‌, ನಿಜಾಮುದ್ದೀನ್‌, ಮೊಹಮ್ಮದ್‌...
ಸುದ್ದಿ

ಎಪ್ರಿಲ್‌ ಬಳಿಕ ಅಡಿಕೆ ಧಾರಣೆ ಏರಿಕೆ ಸಂಭವ – ಕ್ಯಾಂಪ್ಕೋ

ಸುಳ್ಯ: ಆರ್ಥಿಕ ವರ್ಷಾಂತ್ಯದಲ್ಲಿ ಅಡಿಕೆ ಧಾರಣೆ ಕುಸಿತ ಕಂಡಿದ್ದರೂ ಎಪ್ರಿಲ್‌ ತಿಂಗಳ ಅನಂತರ ಹಳೆ ಮತ್ತು ಹೊಸ ಅಡಿಕೆ ಧಾರಣೆ ಏರಿಕೆ ಕಾಣಲಿದೆ ಎಂದು ಮಾರುಕಟ್ಟೆ ಮೂಲ ಗಳು ಖಚಿತಪಡಿಸಿವೆ. ಹೀಗಾಗಿ ಮಾರುಕಟ್ಟೆಯ ಧಾರಣೆ ಇಳಿಕೆ ತಂತ್ರಗಾರಿಕೆಗೆ ಬೆಳೆಗಾರರು ಪ್ರತಿತಂತ್ರ ರೂಪಿಸಿದ್ದು, ಇತಿ-ಮಿತಿಯಲ್ಲಷ್ಟೇ ಅಡಿಕೆಯನ್ನು ಮಾರುಕಟ್ಟೆಗೆ ಪೂರೈಸುತ್ತಿದ್ದಾರೆ. ಹೊಸ ವರ್ಷದ ಆರಂಭದಲ್ಲಿ ಹೊಸ ಮತ್ತು ಹಳೆ ಅಡಿಕೆ ಧಾರಣೆಯಲ್ಲಿ ಕೊಂಚ ಪ್ರಗತಿ ಕಂಡು, ಧಾರಣೆ ಮತ್ತಷ್ಟು ಏರುವ ನಿರೀಕ್ಷೆ ಮೂಡಿಸಿತ್ತು. ಮಾರ್ಚ್‌ನಲ್ಲಿ...
ಸುದ್ದಿ

ವಿಶ್ವರಂಗಭೂಮಿ ದಿನಾಚರಣೆ ; ಯಕ್ಚಗಾನ ರಂದ ಅಪೂರ್ವ ಭಾಗವತ ರಾಮಕೃಷ್ಣ ಮಯ್ಯ ಸಿರಿಬಾಗಿಲು ಅವರಿಗೆ ಪ್ರಶಸ್ತಿ – ಕಹಳೆ ನ್ಯೂಸ್

ಕಾಸರಗೋಡು: ಕಾಸರಗೋಡು ಕನ್ನಡ ಗ್ರಾಮದಲ್ಲಿ ವಿಶ್ವರಂಗಭೂಮಿ ದಿನಾಚರಣೆ ಮಾ. 27ರಂದು ನಡೆಯಿತು. ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಮತ್ತು ಬೆಂಗಳೂರಿನ ವಿ.ಕೆ.ಎಂ. ಕಲಾವಿದರು ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು ಇದೇ ಸಂದರ್ಭದಲ್ಲಿ ಸಾಹಿತ್ಯಿಕ, ಸಾಂಸ್ಕೃತಿಕ ಸಮಾರಂಭದೊಂದಿಗೆ ಕಾಸರಗೋಡು ಕರ್ನಾಟಕ ಉತ್ಸವ ನಡೆಯಿತು. ವಿಶ್ವರಂಗಭೂಮಿ ದಿನಾಚರಣೆಯನ್ನು ಮಾ. 27ರಂದು ಶಾಸಕ ಎನ್‌.ಎ. ನೆಲ್ಲಿಕುನ್ನು ಉದ್ಘಾಟಿಸಿದರು. ಶಿವರಾಮ ಕಾಸರಗೋಡು ಅಧ್ಯಕ್ಷತೆ ವಹಿಸಿದ್ದರು. ಸಾಹಿತ್ಯ, ರಂಗಭೂಮಿ, ಯಕ್ಷಗಾನ, ಸಾಂಸ್ಕೃತಿಕ ಸಂಘಟನೆಗಳಲ್ಲಿ ಸುದೀರ್ಘ‌ ಕಾಲದಿಂದ ಸೇವೆ ಸಲ್ಲಿಸುತ್ತಾ ಬಂದಿರುವ...
1 1,448 1,449 1,450 1,451 1,452 1,459
Page 1450 of 1459