Thursday, March 12, 2026

archivekahale news

ಪುತ್ತೂರು

ಪುತ್ತೂರು : ತಾ| ಖಾಝಿ ನೇಮಕ ವಿಚಾರದಲ್ಲಿ ತಕರಾರು: ಸಾಮಾಜಿಕ ಜಾಲತಾಣದಲ್ಲಿ ಹೊಯಿಕೈ ವಿಡಿಯೋ ವೈರಲ್– ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ತಾಲೂಕಿನ ಸಂಯುಕ್ತ ಖಾಝಿ ನೇಮಕದ ಕುರಿತು ಚರ್ಚಿಸುವ ಉದ್ದೇಶದಿಂದ ಅ.15ರಂದು ಇಲ್ಲಿನ ಅನ್ಸಾರುದ್ದೀನ್ ಜಮಾಅತ್ ಕಮಿಟಿಯ ಅಧ್ಯಕ್ಷ ಎಲ್.ಟಿ. ಅಬ್ದುಲ್ ರಝಾಕ್ ಹಾಜಿ ಅವರ ಅಧ್ಯಕ್ಷತೆಯಲ್ಲಿ ಸಭೆ ಕರೆಯಲಾಗಿತ್ತು. ಸಂಯುಕ್ತ ಖಾಝಿ ನೇಮಕ ವಿಚಾರದಲ್ಲಿ ಮಸೀದಿಯಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ಚರ್ಚೆ ನಡೆದ ಬಳಿಕ ಹೊಯಿಕೈ ನೂಕುನುಗ್ಗಲು ನಡೆದಿರುವ ಘಟನೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪುತ್ತೂರು ಬದ್ರಿಯಾ ಜುಮಾ ಮಸೀದಿಯ ಮದ್ರಸ ಸಭಾಂಗಣದಲ್ಲಿ ನಡೆದ ಸಭೆ...
ಬಂಟ್ವಾಳ

ಶ್ರೀರಾಮ ಶಿಶುಮಂದಿರದ ವತಿಯಿಂದ ವೇದವ್ಯಾಸ ಧ್ಯಾನಮಂದಿರದಲ್ಲಿ ವಿದ್ಯಾರಂಭ ಕಾರ್ಯಕ್ರಮ- ಕಹಳೆ ನ್ಯೂಸ್

ಕಲ್ಲಡ್ಕ : ನವರಾತ್ರಿಯ ವಿಜಯದಶಮಿ ದಿನದಂದು ಶ್ರೀರಾಮ ಶಿಶುಮಂದಿರದ ವತಿಯಿಂದ ವೇದವ್ಯಾಸ ಧ್ಯಾನಮಂದಿರದಲ್ಲಿ ವಿದ್ಯಾರಂಭ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಸರಸ್ವತಿ ಹೋಮದೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಒಡಿಯೂರು ಕ್ಷೇತ್ರದ ಪರಮ ಪೂಜನೀಯ ಸಾಧ್ವಿ ಮಾತನಂದಮಯಿಯವರು ಶ್ರೀರಾಮ ವಿದ್ಯಾಕೇಂದ್ರದ ಆಶ್ರಯದಲ್ಲಿ ನಡೆಯುವಂತಹ 5 ಶಿಶುಮಂದಿರಗಳ ಒಟ್ಟು 52 ಮಕ್ಕಳಿಗೆ ಮಗುವಿನ ಕೈಯಲ್ಲಿ ಅರಶಿನ ಕೊಂಬನ್ನು ಹಿಡಿದು ಹರಿವಾಣದಲ್ಲಿ ಅಕ್ಕಿಯ ಮೇಲೆ ಅಕ್ಷರಗಳನ್ನು ಬರೆಸುವುದರ ಮೂಲಕ ಅಕ್ಷರಾಭ್ಯಾಸ ಮಾಡಿಸಿ ಶುಭ ಹಾರೈಸಿ ಆಶೀರ್ವಚನ ಮಾಡಿದರು. ಕಾರ್ಯಕ್ರಮದಲ್ಲಿ...
ಸುಬ್ರಹ್ಮಣ್ಯ

ಚಲಿಸುತ್ತಿದ್ದ ಬೈಕ್‌ ಮೇಲೆ ಜಿಗಿದ ಕಡವೆ : ಬೈಕ್ ಸವಾರ ಸ್ಥಳದಲ್ಲೇ ಸಾವು – ಕಹಳೆ ನ್ಯೂಸ್

ಸುಬ್ರಹ್ಮಣ್ಯ: ರಸ್ತೆ ದಾಟುತ್ತಿದ್ದ ಕಡವೆಗೆ ಢಿಕ್ಕಿಯಾಗಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದದಲ್ಲಿ ನಡೆದಿದೆ. ಕುಮಾರಸ್ವಾಮಿ ಶಾಲೆಯ ಹೆಡ್ ಕ್ಲರ್ಕ್ ರಾಮಚಂದ್ರ ಅರ್ಬಿತಾಯ ಅವರು ರಾಜ್ಯಮಟ್ಟದ ಶಟಲ್ ಆಟಗಾರರಾಗಿದ್ದ, ಗಾಂಗೇಯ ಕ್ರಿಕೆಟ್ ತಂಡ ಸುಬ್ರಹ್ಮಣ್ಯದ ಆಟಗಾರರಾಗಿದ್ದ  ಅವರು ಪ್ರತಿನಿತ್ಯದಂತೆ ಕುಲ್ಕುಂದದ ಸೋಮಶೇಖರ್ ಅವರ ಮನೆಗೆ ಶಟಲ್ ಆಡಲು ಬೆಳಿಗ್ಗೆ 5:45ರ ಸಮಯ ತನ್ನ ತಮ್ಮನೊಂದಿಗೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ , ರಸ್ತೆ ದಾಟುತ್ತಿದ್ದ ಕಡವೆಗೆ ಢಿಕ್ಕಿಯಾಗಿ ಸ್ಥಳದಲ್ಲೇ...
ಸುದ್ದಿ

ಮಂಗಳೂರು: ಪತ್ರಕರ್ತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಮುಖ್ಯಮಂತ್ರಿಗಳಿಗೆ ಮನವಿ- ಕಹಳೆ ನ್ಯೂಸ್

ಮಂಗಳೂರು : ಪತ್ರಕರ್ತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಯಿತು. ಇದೇ ವೇಳೆ ಕೊರೊನಾ ಸೋಂಕಿನಿಂದ ಮೃತಪಟ್ಟ ಪತ್ರಕರ್ತ ಯಶವಂತ ಐಕಳ ಅವರ ಕುಟುಂಬಕ್ಕೆ ಆರ್ಥಿಕ ನೆರವು ನೀಡುವಂತೆ ಮನವಿ ಸಲ್ಲಿಸಲಾಯಿತು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ...
ಸುದ್ದಿ

ಕಲ್ಲೇರಿ ಮೆಸ್ಕಾಂ ಶಾಖಾ ಕಚೇರಿಯಲ್ಲಿ ಆಯುಧ ಪೂಜೆ ಹಾಗೂ ವಾಹನ ಪೂಜೆ – ಕಹಳೆ ನ್ಯೂಸ್

ಕಲ್ಲೇರಿ: ಮೆಸ್ಕಾಂ ಶಾಖಾ ಕಚೇರಿಯಲ್ಲಿ ಇಂದು ಆಯುಧ ಪೂಜೆ ಹಾಗೂ ವಾಹನ ಪೂಜೆ ಕಾರ್ಯಕ್ರಮ ಜರಗಿತು. ಪೂಜಾ ಕಾರ್ಯದಲ್ಲಿ ಬೆಳ್ತಂಗಡಿ ಉಪವಿಭಾಗ. ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸಿ.ಎಚ್, ಶಿವಶಂಕರ್,KPTCL ಕರಾಯ ಉಪಕೇಂದ್ರದ ಸಹಾಯಕ ಇಂಜಿನಿಯರ್ ಅವಿನಾಶ್, ಸ್ಥಳಿಯ ಗುತ್ತಿಗೆದಾರರು, ರೈತಬಂಧು ಮಾರುತಿಪುರ ಸಂಸ್ಥೆಯ ಮಾಲಕ ಶಿವಶಂಕರ್ ನಾಯಕ್, ಸ್ಥಳಿಯ ಬಳಕೆದಾರರು, ಲೈನ್ ಮ್ಯಾನ್ ಗಳು ಹಾಗೂ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು....
ಸುದ್ದಿ

ಜಿಲ್ಲಾಧಿಕಾರಿ ಕಚೇರಿಯಲ್ಲಿ ಗ್ರಾಹಕರ ಸಮಾವೇಶ ನಡೆಸುವ ಕುರಿತು ಬ್ಯಾಂಕ್ ಅಧಿಕಾರಿಗಳ ಪೂರ್ವಭಾವಿ ಸಭೆ – ಕಹಳೆ ನ್ಯೂಸ್

ಮಾನ್ಯ ಸಂಸದರಾದ, ಭಾಜಪಾ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಇವರ ಅಧ್ಯಕ್ಷತೆಯಲ್ಲಿ 30-10-2021ರಂದು ಗ್ರಾಹಕರ ಸಮಾವೇಶ ನಡೆಸುವ ಕುರಿತು ಬ್ಯಾಂಕ್ ಅಧಿಕಾರಿಗಳ ಪೂರ್ವಭಾವಿ ಸಭೆ ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು. ಈ ಸಭೆಯಲ್ಲಿ ಶಾಸಕರಾದ ಡಾ.ವೈ ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ಪ್ರವೀಣ್, ಎಜಿಎಂ ರೋಬರ್ಟ್ ಡಿಸಿಲ್ವಾ, ನಬಾರ್ಡ್ ಜಿಲ್ಲಾ ಅಭಿವೃದ್ಧಿ ಅಧಿಕಾರಿ ಹಾಗೂ ಇತರ ಸರಕಾರಿ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ...
ಬಂಟ್ವಾಳ

ಬೊಳ್ಳಿಮಾರು ಶ್ರೀ ಕೊರಗಜ್ಜ ಕ್ಷೇತ್ರದ ಧಮದರ್ಶಿಯವರನ್ನು ಭಕ್ತಾಧಿಗಳು ನೇರವಾಗಿ ಸಂಪರ್ಕಿಸಬಹುದು- ಕಹಳೆ ನ್ಯೂಸ್

ಕಾವಳಮೂಡೂರು: ಶ್ರೀ ಆದಿಶಕ್ತಿ ಬೊಳ್ಳಿಮಾರ್ ಶ್ರೀ ಕೊರಗಜ್ಜ ಕ್ಷೇತ್ರ ಬೊಳ್ಳಿಮಾರಿನಲ್ಲಿ ದಿನಂಪ್ರತಿ ಭಕ್ತಾಧಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಭಕ್ತಾಧಿಗಳು ಧರ್ಮದರ್ಶಿಯವರೊಂದಿಗೆ ಮಾತನಾಡಲು ಸಾಧ್ಯವಾಗದೇ ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನು ಮುಂದೆ ಕ್ಷೇತ್ರದ ಧರ್ಮದರ್ಶಿ ವಿಜಯ್ ಸಾಲ್ಯನ್‍ರವರ ಜೊತೆ ಭಕ್ತಾಧಿಗಳು ಮಾತನಾಡಲು ಕ್ಷೇತ್ರದಲ್ಲಿ ಸಮಯ ನಿಗದಿಪಡಿಸಲಾಗಿದೆ. ಸೋಮವಾರ, ಬುಧವಾರ ಗುರುವಾರ ಹಾಗೂ ಶನಿವಾರ ಮಧ್ಯಾಹ್ನ 3 ಗಂಟೆಯಿಂದ ಸಂಜೆ 5:30ರ ತನಕ ಧರ್ಮದರ್ಶಿ ವಿಜಯ್ ಸಾಲ್ಯನ್‍ರವರಿಗೆ ಕರೆ ಮಾಡಿ ಮಾತನಾಡಬಹುದು. ಸಂಪರ್ಕಿಸಲು ಮೊಬೈಲ್...
ಸುದ್ದಿ

ಮಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿಗಳು – ಸಚಿವರು ಶಾಸಕರಿಂದ ಅದ್ದೂರಿ ಸ್ವಾಗತ – ಕಹಳೆ ನ್ಯೂಸ್

ಮಂಗಳೂರು : ಉಡುಪಿ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳು ಹಾಗೂ ಮಂಗಳೂರಿನ ಕುದ್ರೋಳಿ ದೇವಸ್ಥಾನದ ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರು ಅಕ್ಟೋಬರ್ ೧೩ರ ಬುಧವಾರ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಈ ಸಂದರ್ಭದಲ್ಲಿ ಜಿಲ್ಲಾಡಳಿತದ ವತಿಯಿಂದ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.   ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಸುನೀಲ್ ಕುಮಾರ್, ಶಾಸಕರಾದ ಭರತ್ ಶೆಟ್ಟಿ, ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ,...
1 16 17 18 19 20 1,459
Page 18 of 1459