Saturday, April 25, 2026

archiveKollur Mookambike

ಸುದ್ದಿ

ಭಕ್ತರೊಬ್ಬರ ಹರಕೆ ಫಲಿಸಿದ ಹಿನ್ನೆಲೆಯಲ್ಲಿ ಕೊಲ್ಲೂರು ಮೂಕಾಂಬಿಕೆಗೆ ಚಿನ್ನದ ಖಡ್ಗ ಅರ್ಪಣೆ – ಕಹಳೆ ನ್ಯೂಸ್

ಉಡುಪಿ: ತಮಿಳುನಾಡಿನ ಭಕ್ತರೊಬ್ಬರು ಕೊಲ್ಲೂರು ಶ್ರೀ ಮೂಕಾಂಬಿಕೆಗೆ ಚಿನ್ನಡ ಖಡ್ಗವನ್ನು ಹರಕೆ ರೂಪದಲ್ಲಿ ಅರ್ಪಿಸಿದ್ದಾರೆ. ತಮ್ಮ ಮನದ ಇಚ್ಛೆ ಪ್ರಾಪ್ತಿಯಾದ ಹಿನ್ನೆಲೆಯಲ್ಲಿ ಅವರು 1 ಕೆಜಿ ತೂಕದ ಚಿನ್ನಡ ಖಡ್ಗವನ್ನು ಮೂಕಾಂಬಿಕೆಗೆ ಸಮರ್ಪಿಸಿದ್ದಾರೆ. ತಮಿಳುನಾಡಿನ ಕೊಯಮತ್ತೂರು ಮೂಲದ ಡಾ.ನಳಿನ್ ವಿಮಲ್ ಕುಮಾರ್ ಎಂಬುವವರು ಶ್ರೀ ಮೂಕಾಂಬಿಕೆಯಲ್ಲಿ ಕೆಲದಿನಗಳ ಹಿಂದೆ ಹರಕೆ ಹೊತ್ತುಕೊಂಡಿದ್ದರು. ಹರಕೆ ಫಲಿಸಿದ ಹಿನ್ನೆಲೆಯಲ್ಲಿ ಡಾ.ನಳೀನ್ ವಿಮಲ್ ಕುಮಾರ್ 30 ಲಕ್ಷ ರೂಪಾಯಿ ಬೆಲೆಬಾಳುವ ಚಿನ್ನದ ಖಡ್ಗವನ್ನು ತಂದು ಶ್ರೀ...