Monday, April 27, 2026

archiveOmini collapsed

ಸುದ್ದಿ

ಓಮಿನಿ ಡಿಕ್ಕಿ: ಸ್ಥಳದಲ್ಲೇ ಚಾಲಕ ಸಾವು – ಕಹಳೆ ನ್ಯೂಸ್

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಓಮಿನಿಯೊಂದು ಮರಕ್ಕೆ ಡಿಕ್ಕಿಯಾದ ಪರಿಣಾಮ ಚಾಲಕ ಸ್ಥಳದಲ್ಲೆ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಕುಪ್ಪಾಳು ಗ್ರಾಮದಲ್ಲಿ ನಡೆದಿದೆ. ಮೃತನನ್ನು ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಬೆಳಗೆರೆ ಗ್ರಾಮದ ನಿವಾಸಿ ವಿಜಯ್ ಕುಮಾರ್ ಎಂದು ಶಂಕಿಸಲಾಗಿದೆ. ಹಾಗೆ ವಾಹನದಲ್ಲಿದ್ದ ಮಂಜುನಾಥ ಎಂಬುವವರಿಗೆ ಗಂಭೀರ ಗಾಯವಾಗಿದ್ದು ಕಡೂರು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಕುರಿತಂತೆ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ...