Sunday, July 26, 2026

archiveYashas

ಸುದ್ದಿ

ನಾಗರಿಕ ಸೇವಾ ಪರೀಕ್ಷೆಗಳ ತರಬೇತಿ ಕೇಂದ್ರ ಯಶಸ್‌ಗೆ ಅರ್ಜಿ ಆಹ್ವಾನ – ಕಹಳೆ ನ್ಯೂಸ್

ಪುತ್ತೂರು: ಇಲ್ಲಿನ ವಿವೇಕಾನಂದ ವಿದ್ಯಾವರ್ಧಕ ಸಂಘ ನಡೆಸುತ್ತಿರುವ ನಾಗರಿಕ ಸೇವಾ ಪರೀಕ್ಷೆಗಳ ಬಗೆಗಿನ ಉಚಿತ ತರಬೇತಿ ಕೇಂದ್ರ ಯಶಸ್ ಇದರ ಈ ಬಾರಿಯ ಆಯ್ಕೆ ಪ್ರಕ್ರಿಯೆಯ ಮೊದಲ ಹಂತದ ಪರೀಕ್ಷೆ ಡಿ.25 ರಂದು ನಡೆಯಲಿದೆ. ಅದಕ್ಕೆ ಸಂಬಂಧಿಸಿದಂತೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಂಬತ್ತನೆಯ ತರಗತಿಯಲ್ಲಿ ಕನಿಷ್ಟ ಅರವತ್ತು ಶೇಕಡಾ ಗಳಿಸಿ ಪ್ರಸ್ತುತ ಹತ್ತನೆಯ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಪರೀಕ್ಷೆಗಳು ನಾಗರಿಕ ಸೇವಾ ಪರೀಕ್ಷಾ ಮಾದರಿಯಲ್ಲೇ ನಡೆಯಲಿದ್ದು...